ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದು ಒಂದು ವರ್ಷವಾದರೂ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಕಿತ್ತೂರು ರಾಣಿ ಚನ್ನಮ್ಮ 1824ರ ಅಕ್ಟೋಬರ್ 23ರಂದು ಬ್ರಿಟಿಷರ ವಿರುದ್ಧ ಹೋರಾಡಿ ಜಯಗಳಿಸಿದ್ದರು. ಈ ವಿಜಯದ ಸವಿನೆನಪಿಗಾಗಿ ಪ್ರತೀ ವರ್ಷ …
Read More »ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕ ಶಿವರಾಮ್ ಹೆಬ್ಬಾರ್ ಬಣಕ್ಕೆ ಮುನ್ನಡೆ
ಶಿರಸಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಯಲ್ಲಿ ಪ್ರಕಟಗೊಂಡ ಹಾಗೂ ಮುಂಚೂಣಿಯ ಫಲಿತಾಂಶಗಳ ಪ್ರಕಾರ ಹಾಲಿ ಅಧ್ಯಕ್ಷ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ನೇತೃತ್ವದ ಬಣ ಮುನ್ನಡೆ ಸಾಧಿಸಿದೆ. ಸದ್ಯ 16 ಕ್ಷೇತ್ರಗಳಲ್ಲಿ ಕೇವಲ 7 ಕ್ಷೇತ್ರಗಳ ಫಲಿತಾಂಶ ಅಧಿಕೃತವಾಗಿ ಪ್ರಕಟಗೊಂಡಿದೆ. ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ಚುನಾವಣೆಗೆ ಶನಿವಾರ 13 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಕಳೆದ ಎರಡು ತಿಂಗಳಿನಿಂದ ನಡೆದ ಚುನಾವಣಾ …
Read More »1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.
1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ. ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ …
Read More »ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ
ಧಾರವಾಡ, ಅಕ್ಟೋಬರ್ 25: ಡಿಸೆಂಬರ್ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ . ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ವಾರ ಬೆಳಗಾವಿ ಡಿಸಿಯೊಂದಿಗೆ ಸಭೆ ಮಾಡುತ್ತೇನೆ. ಯಾವೊಬ್ಬ ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಲ್ಲ. ಇರೋವರೆಗೂ ಪ್ರಜಾಪ್ರಭುತ್ವದಲ್ಲಿ ಕೇಳೋದು ತಪ್ಪು ಅನಿಸುತ್ತೆ. ಕಾಲ ಸುಧಾರಣೆ ಮಾಡಬೇಕಿದೆ, ನಮ್ಮಿಂದ ಸುಧಾರಣೆ ಆಗಲ್ಲ. ಪ್ರಶ್ನೆ ಕೇಳಿದ …
Read More »ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ
ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಸ್ಎಂ ಪಾಟೀಲ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿ ಸುರೇಶ್ ಕದ್ದು ಭೇಟಿ ನೀಡಿ ಆಸ್ಪತ್ರೆ ಪರಿಶೀಲನೆ ನಡೆಸಿದರು ಸರ್ಕಾರಿ ಆಸ್ಪತ್ರೆ ಕತ್ತಲೆ ಭಾಗ್ಯ ಎಂಬ ಸುದ್ದಿ ಪ್ರಸಾರ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿ ವೇಳೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಶೋಕಾಸ್ ನೋಟಿಸ್ ನೀಡಿದ್ದಾರೆ ಎರಡು ಜನರೇಟರ್ ಇದ್ದರು ಬೆಳಕಿನ ವ್ಯವಸ್ಥೆ …
Read More »ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು
ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು ಶಿವಮೊಗ್ಗ: ” ಹೈಕಮಾಂಡ್ ತೀರ್ಮಾನದಂತೆ ಪಕ್ಷದಲ್ಲಿ ಸಿಎಂ ಆಯ್ಕೆ ನಡೆಯುತ್ತದೆ” ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಡಾ. ಯತೀಂದ್ರ ಅವರು ಸಿದ್ದರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿದ್ದಾರೆಂದು ಹೇಳಿಕೆ ಯಾಕೆ ಕೊಟ್ಟರು ಅಂತಾ ಗೊತ್ತಿಲ್ಲ. ಆದರೆ, ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು …
Read More »ಕನ್ನಡ ಭವನವನ್ನು ಅಕ್ರಮವಾಗಿ, ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದೆ. ೧೫ ರಿಂದ ೨೦ ಸಾವಿರವರಗೆ ಬಾಡಿಗೆ ಪಡೆಯುತ್ತಿದೆ.
ಬೆಳಗಾವಿ–ಬೆಳಗಾವಿ ಸುವರ್ಣ ಸೌಧದಲ್ಲಿ ಗಡಿ ಸಂರಕ್ಷಣಾ ಆಯೋಗ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಸ್ಥಾಪನೆ ಹಾಗೂ ಸರಕಾರದ ೭ ಕೋಟಿ ರೂ.ಗಳ ಅನುದಾನದಲ್ಲಿ ಬೆಳಗಾವಿಯ ನೆಹರೂ ನಗರದಲ್ಲಿ ನಿರ್ಮಿಸಿದ ಕನ್ನಡ ಭವನವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ನಿರ್ವಹಣಾ ಸಮಿತಿಯ ವಶಕ್ಕೆ ಒಪ್ಪಿಸುವ ಸಂಬAಧ ಗಡಿನಾಡು ಕನ್ನಡಿಗರ ಸೇನೆಯು ತೀವ್ರವಾದ ಹೋರಾಟ ನಡೆಸಲಿದೆಯೆಂದು ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನೆಟ್ಟಿ ಅವರು ಇಂದು ಘೋಷಿಸಿದರು . ಕನ್ನಡ ಸಾಹಿತ್ಯ ಭವನದಲ್ಲಿ …
Read More »ಸ್ವಲ್ಪ ಮಾತನಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತಾಡಿ,:H.D.K.
ಬೆಂಗಳೂರು: ಸ್ವಲ ಮಾತಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತನಾಡಿ. ನನ್ನ ಬಗ್ಗೆ ನನ್ನ ಪಕ್ಷದ ಬಗ್ಗೆ ಚರ್ಚೆ ಮಾಡುವುದಕ್ಕೆ ನೀವು ಯಾರೂ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ನ ಟೀಕೆ ಮಾಡಿ ಅಧಿಕಾರಕ್ಕಾಗಿ ಬಿಜೆಪಿಗೆ ಬೆಂಬಲ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಹೌದು ಟೀಕೆ ಮಾಡಿದ್ದೇನೆ. ಆರ್ಎಸ್ಎಸ್ ಅವರ ಕೆಲವು ವಿಷಯಗಳು, ಅವರ ನಡುವಳಿಕೆ ಬಗ್ಗೆ ಟೀಕೆ ಮಾಡಿದ್ದೇನೆ. …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ
ವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಕಾಕತಿಯು ರಾಣಿ ಚೆನ್ನಮ್ಮನ ಇತಿಹಾಸದ ಪಾವನ ನೆಲವಾಗಿರುವ ಹಿನ್ನಲೆಯಲ್ಲಿ, ಪ್ರತಿವರ್ಷದಂತೆ ಕಿತ್ತೂರು ಉತ್ಸವದ ಸಾಂಕೇತಿಕ ಆರಂಭ ಇಲ್ಲಿ ನಡೆಯುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಾರಿ ಉತ್ಸವವನ್ನು ರಾಣಿ ಚನ್ನಮ್ಮಳ ಶೌರ್ಯ, …
Read More »ಕರಾವಳಿಯಲ್ಲಿ ಜನಪದ ದೀಪಾವಳಿ: ನರಕಾಸುರ ವಧೆ ನೆನಪಿಸುವ ಮುಳ್ಳಮುಟ್ಟೆ ಆಚರಣೆ
ಕಾಪು: ತುಳುನಾಡು ಹಲವಾರು ಆಚರಣೆ, ಸಂಸ್ಕೃತಿ ಮತ್ತು ಸಂಸ್ಕಾರಗಳ ತವರೂರು. ಇಲ್ಲಿ ನಡೆಯುವ ಪ್ರತಿಯೊಂದು ಹಬ್ಬ, ಆಚರಣೆಗಳಿಗೂ ಅದರದ್ದೇ ಆದ ಮಹತ್ವವಿದೆ. ತುಳುವರ ಹಲವಾರು ಜಾನಪದ ಆಚರಣೆಗಳಲ್ಲಿ ದೀಪಾವಳಿ ಪ್ರಯುಕ್ತ ನರಕ ಚತುರ್ದಶಿಯಂದು ನಡೆಸುವ ಮುಳ್ಳಮುಟ್ಟೆ ಆಚರಣೆಯೂ ಒಂದು. ಕಾಪು ತಾಲೂಕಿನ ವಿವಿಧೆಡೆ ದೀಪಾವಳಿ ಪ್ರಯುಕ್ತ ಮುಂಜಾನೆ ಮುಳ್ಳಮುಟ್ಟೆ ಸಂಭ್ರಮಾಚರಣೆ ನಡೆಯುತ್ತದೆ. ವಿಶೇಷವಾಗಿ ಕೊಪ್ಪಲಂಗಡಿ, ಮಲ್ಲಾರು, ಮಜೂರು, ಉಳಿಯಾರು, ಕರಂದಾಡಿ, ಇನ್ನಂಜೆ, ಕಲ್ಯಾಲು, ಪಾಂಗಾಳ, ಕಟಪಾಡಿ, ಮಣಿಪುರ, ಪಡುಬೆಳ್ಳೆ, ಬೆಳಪು ಪರಿಸರದಲ್ಲಿ …
Read More »
Laxmi News 24×7