Breaking News

Uncategorized

ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಚೌಕಾಸಿ.. ಸಿಎಂ ಬೊಮ್ಮಾಯಿಗೆ ವಲಸಿಗರದ್ದೇ ತಲೆನೋವು

ಬೆಂಗಳೂರು: ಸಂಕ್ರಾಂತಿ ಬಳಿಕ ಬೊಮ್ಮಾಯಿ ಕ್ಯಾಬಿನೆಟ್​ಗೆ ಸರ್ಜರಿ ನಡೆಯುತ್ತೆ ಅನ್ನೋ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗೇ ನಡೀತಿದೆ. ಇದ್ರ ಬೆನ್ನಲ್ಲೇ ಬೆಳಗಾವಿಯ ವಲಸಿಗ ಶಾಸಕರು ಸಚಿವ ಸ್ಥಾನಕ್ಕಾಗಿ ಈ ಬಾರಿ ಜೋರಾಗೇ ಲಾಬಿ ನಡೆಸ್ತಿದ್ದಾರೆ. ಬಿಜೆಪಿ ವರಿಷ್ಠರು ಮಾತ್ರವಲ್ಲದೆ ಸಂಘದ ನಾಯಕರ ಬಳಿಯೂ ಮಂತ್ರಿಗಿರಿಗಾಗಿ ಚೌಕಾಸಿ ನಡೆಸ್ತಿದ್ದಾರೆ.   ಸಂಕ್ರಾಂತಿ ಮುಗೀತು.. ಇನ್ನೇನಿದ್ರೂ ಬೊಮ್ಮಾಯಿ ಸರ್ಕಾರದಲ್ಲಿ ಬದಲಾವಣೆಯ ಸಂಕ್ರಮಣ ಶುರುವಾಗಬೇಕಷ್ಟೇ. ಸದ್ಯ ಸರ್ಕಾರದಲ್ಲಿ ನಡೀತಿರೋದು ಎಲೆಕ್ಷನ್ ಕ್ಯಾಬಿನೆಟ್ ರಚನೆಯ ತಯಾರಿ. …

Read More »

ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

ಇತ್ತೀಚೆಗೆ ಕಾಣೆಯಾಗಿದ್ದ ಖ್ಯಾತ ನಟಿಯೊಬ್ಬರ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದು, ದಿಗ್ಭ್ರಮೆ ಮೂಡಿಸಿದೆ. ಇತ್ತೀಚಿಗೆ ಕಾಣೆಯಾಗಿದ್ದ ಬಾಂಗ್ಲಾದ ಖ್ಯಾತ ನಟಿ ರೈಮಾ ಇಸ್ಲಾಂ ಶಿಮಿ ಢಾಕಾ ಬಳಿಯ ಖೈರಾನಿಗಂಜ್​ ವ್ಯಾಪ್ತಿಯ ಸೇತುವೆಯ ತಟದಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ.ಕಳೆದ ಮೂರು ದಿನಗಳಿಂದ ನಟಿ ನಾಪತ್ತೆಯಾಗಿದ್ದಾರೆಂದು ಪತಿ ಶೆಕಾವತ್​ ಅಲಿ ನೋಬಲ್​ ಕಾಳಬಂಗನ್​ ಠಾಣೆಯಲ್ಲಿ ಕೇಸ್​ ದಾಖಲಸಿದ್ದರು. ಕೇಸ್​ ದಾಖಲಾದ 3 ದಿನದಲ್ಲಿ ನಟಿ ಹೆಣವಾಗಿ ಪತ್ತೆಯಾಗಿದ್ದಾರೆ. ಈ ವೇಳೆ ಅವರ ದೇಹದ ಮೇಲೆ …

Read More »

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

ಬೆಳಗಾವಿ: ದಿನದಿಂದ ದಿನಕ್ಕೆ ಬೆಳಗಾವಿಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್‌ಆರ್‌ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ. ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ.ಬೆಂಗಳೂರಿನಲ್ಲಿ ಅತಿ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿದ್ದರಿಂದ ಬೆಳಗಾವಿಯಲ್ಲಿಯೂ ಮುಂಜಾಗ್ರತ ಕ್ರಮವಾಗಿ ಕೋವಿಡ್ ತಪಾಸಣೆ ನಡೆಸಲಾಗಿತ್ತು. ಈ ವೇಳೆ ನಗರದ ಎಪಿಎಂಸಿ ಇನ್ಸಪೆಕ್ಟರ್, ಇಬ್ಬರು …

Read More »

ಬೆಳಗಾವಿ ಮಹಾನಗರ ಚುನಾವಣೆ ಸೇಡು ಇವಾಗ ಮುತ್ತ್ಯಾ ನಟ್ಟಿ ಗ್ರಾಮದಲ್ಲಿ ಮಾರಾ ಮಾರಿ, ಹಾಫ್ ಮರ್ಡರ್ ಆಗಿದೆ ಎಂದು ಸ್ಥಳೀಯರ ಆರೋಪ

ಬೆಳಗಾವಿ ಮಹಾನಗರ ಚುನಾವಣೆ ಸೇಡು ಇವಾಗ ಮುತ್ತ್ಯಾ ನಟ್ಟಿ ಗ್ರಾಮದಲ್ಲಿ ಮಾರಾ ಮಾರಿ, ಹಾಫ್ ಮರ್ಡರ್ ಆಗಿದೆ ಎಂದು ಸ್ಥಳೀಯರ ಆರೋಪ..? ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ನಡೆದು ನಾಲ್ಕೈದು ತಿಂಗಳು ಆದರೂ ಅದರ ದ್ವೇಷ ಮಾತ್ರ ಇನ್ನು ಕಮ್ಮಿ ಆಗಿಲ್ಲ ಹೌದು ಇಂದು ಬೆಳಗಾವಿಯ ಹತ್ತಿರದ ಮುತ್ಯಾನಟ್ಟಿ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಮರಾ ಮಾರಿ ಆಗಿದೆ ಲಕ್ಷ್ಮಣ್ ದಡ್ಡಿ ಹಾಗೂ ಅವರ್ ಸಂಗಡಿಗರು ಕಟಾಂಬಳಿ ಬೆಳಗಾವಿ ಮಹಾನಗರ …

Read More »

ಬೆಳಗಾವಿ ಇಂದಿನ ಕೊರೋನಾ

ಬೆಳಗಾವಿ- ಇಂದು ಜಿಲ್ಲೆಯಲ್ಲಿ 418 ಪ್ರಕರಣಗಳು ಕಂಡು ಬಂದಿವೆ. ಅಥಣಿ 33, ಚಿಕ್ಕೋಡಿ 29, ಸವದತ್ತಿ 33 ಪ್ರಕರಣಗಳು ಕಂಡು ಬಂದಿವೆ.

Read More »

ಸುಭಾಷ್ ಚಂದ್ರ ಭೋಸ್ ಜನ್ಮ ದಿನ ಆಚರಣೆ ಸಿಎಂ ಬಸವರಾಜ ಬೊಮ್ಮಾಯಿ ವರ್ಚವಲ್ ಸಭೆ

ಜನೇವರಿ ೨೩ರಂದು ಜರುಗಲಿರುವ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳವಾರ ತಮ್ಮ ನಿವಾಸದಿಂದ ವೆಬ್ ನೆರ್ ಮೂಲಕ ಹಿರಿಯ ಅಧಿಕಾರ ಸಭೆ ಜರುಗಿಸಿದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಅಧಿಕಾರಿ ಎ.ಆರ್ ಕಮಾಂಡರ ಬಿ.ಎಸ್. ಕನ್ವರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಗೋಯೆಲ್, ಜಿ.ಕುಮಾರ ನಾಯ್ಕ್, …

Read More »

ಮಹದಾಯಿ ಹೋರಾಟ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಪಾಲಿಕೆಯಲ್ಲಿ ಅಭಯ ಪಾಟೀಲ ಮೇಯರ್, ಅನೀಲ ಬೆನಕೆ ಡೆಪ್ಯುಟಿ ಮೇಯರ್ ಸತೀಶ್ ಜಾರಕಿಹೊಳಿ ಲೇವಡಿ….   ಬೆಳಗಾವಿ: ಕೋವಿಡ್‌ ಕಡಿಮೆಯಾದ ಮೇಲೆ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುವುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪರೇಷೆ ತಯಾರಿಸಿ ನಂತರ ನಿರ್ಧಾರ …

Read More »

ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವ, ಇಂದು ನಡೆಯುತ್ತಾ?! ಕೆರಳಿದೆ ಭಾರಿ ಕುತೂಹಲ..

ಬಾಗಲಕೋಟೆ: ಈ ದೇವಸ್ಥಾನದಲ್ಲಿನ ರಥೋತ್ಸವ ಇತಿಹಾಸದಲ್ಲಿ ಎಂದೂ ರದ್ದಾದ ಉದಾಹರಣೆಯೇ ಇಲ್ಲ. ಆದರೆ ಇಂದು ರಥೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಭಾರಿ ಕುತೂಹಲ ಕೆರಳಿಸಿದೆ. ಏಕೆಂದರೆ ಭಕ್ತರು ರಥೋತ್ಸವ ನೆರವೇರಿಸಲು ಕಂಕಣ ತೊಟ್ಟಿದ್ದರೆ, ಅತ್ತ ಪೊಲೀಸರು ಉತ್ಸವ ತಡೆಯಲು ರಣೋತ್ಸಾಹದಿಂದ ಕಾಯುತ್ತಿದ್ದಾರೆ. ಹೌದು.. ಇಂಥದ್ದೊಂದು ಸನ್ನಿವೇಶ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ಸೃಷ್ಟಿಯಾಗಿದೆ. ಇಲ್ಲಿನ ಐತಿಹಾಸಿಕ ಬನಶಂಕರಿ ದೇವಸ್ಥಾನದ ರಥೋತ್ಸವ ನಡೆಯಬೇಕಿದೆ. ಆದರೆ ರಥೋತ್ಸವ ಜಾಗದ ಎಲ್ಲ ರಸ್ತೆಗಳಲ್ಲೂ …

Read More »

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು .   ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.

Read More »

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ ಸಾರ್ವಜನಿಕ ಪ್ರವೇಶ ಇಲ್ಲ.

ಸವದತ್ತಿ (ಬೆಳಗಾವಿ): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ’ ಅಂಗವಾಗಿ ಸೋಮವಾರ (ಜ.17) ನಡೆಯಬೇಕಿದ್ದ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಪಡಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಸರಳವಾಗಿ ನಡೆಯಲಿವೆ. ಬೆಳಿಗ್ಗೆ ಮತ್ತು ಸಂಜೆ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಜರುಗಲಿದೆ. ಆದರೆ, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.   ದೇವಸ್ಥಾನಕ್ಕೆ ಸೀಮಿತವಾಗಿ ಅಧಿಕಾರಿಗಳು, ಅರ್ಚಕರು ಹಾಗೂ ಕೆಲವೇ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಆಚರಣೆ ಕೈಗೊಳ್ಳಲಾಗುವುದು ಎಂದು ಯಲ್ಲಮ್ಮ ದೇವಸ್ಥಾನ ಅಧಿಕಾರಿಗಳು ತಿಳಿಸಿದ್ದಾರೆ.   ನಿಷೇಧದ …

Read More »