ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
Read More »ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ
ಬಾಗಲಕೋಟೆ : ಜಿಲ್ಲೆಯ ವಿವಿಧೆಡೆ ಕಲ್ಲು ಗಣಿಗಾರಿಕೆಗೆ ಪೂರೈಸಲು ಬಳಸುವ ಭಾರಿ ಸ್ಪೋಟಕ ವಸ್ತುಗಳನ್ನು ತಾಲೂಕಿನ ಹೊನ್ನಾಕಟ್ಟಿಯ ತೋಟದ ಮನೆಯ ಶೆಡ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದು, ಗುರುವಾರ ಪೊಲೀಸರು ಹಠಾತ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಸಂಗಮ ಕ್ರಾಸ್ ಬಳಿಯ ಹೊನ್ನಾಕಟ್ಟಿ ಗ್ರಾಮದ ಗುರುನಾಥ ಹಾದಿಮನಿ ಎಂಬುವವರ ತೋಟದ ಮನೆಯ ಶೆಡ್ನಲ್ಲಿ ಈ ಭಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಮಂಜುನಾಥ ಕಂಕಣಮೇಲಿ, ವಿಜಯ ನಾರಾ ಎಂಬುವವರು ಈ ಅಕ್ರಮ ಸ್ಟೋಟಕ ವಸ್ತುಗಳನ್ನು …
Read More »ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆ, ಶಾಲೆ ಸೀಲ್ಡೌನ್
ಕೊರೊನಾ ಮಹಾಮಾರಿ ಸೋಂಕು ಶಾಲೆಗೆ ಲಗ್ಗೆ ಇಟ್ಟಿದ್ದು, ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್ಡೌನ್ ಮಾಡಲಾಯಿತು. ಹೈಸ್ಕೂಲ್ನ ಕೆಲವು ವಿದ್ಯಾರ್ಥಿಗಳಿಗೆ, ಸೋಂಕು ಒಕ್ಕರಿಸಿದ್ದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಶಾಲೆಯನ್ನು ಮುಂದಿನ ಆದೇಶ ಬರುವವರೆಗೂ ಸೀಲ್ಡೌನ್ ಮಾಡಲಾಗಿದೆ. ಸ್ಥಳಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಶಾಲೆಯನ್ನು ಸೀಲ್ಡೌನ್ ಮಾಡಿದರು.
Read More »ಯತ್ನಾಳ್ ಭೇಟಿಯಾದ ರೇಣುಕಾಚಾರ್ಯ: ಕಾಲ ಬಂದರೆ ವರಿಷ್ಠರ ಭೇಟಿ
ಬೆಂಗಳೂರು : ಸಚಿವ ಸಂಪುಟ ಕುರಿತಾದ ಕೂಗು ಜೋರಾಗಿರುವ ವೇಳೆಯಲ್ಲಿ ಬಿಜೆಪಿ ಶಾಸಕರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಮತ್ತು ಎಂ.ಪಿ. ರೇಣುಕಾಚಾರ್ಯ ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿರುವುದು ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು, ಕೇಂದ್ರ ಸಚಿವರಾಗಿದ್ದರು, ಹಿರಿಯರು. ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು, ಕೇಂದ್ರ ಸಚಿವರಾಗಿದ್ದರು, ಹಿರಿಯರು. ನಮ್ಮದು …
Read More »ಕೊರೊನಾ ಮಹಾಸ್ಫೋಟ: ವಿಜಯಪುರದಲ್ಲಿ 121 ಜನ್ರಿಗೆ ಕೊರೊನಾ ಸೋಂಕು
ವಿಜಯಪುರ ಜಿಲ್ಲೆಯಲ್ಲಿಂದು 121 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 730 ಕ್ಕೇರಿಕೆಯಾಗಿದೆ. ಆಸ್ಪತ್ರೆಯಲ್ಲಿ 37 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿ 730 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 43 ರೋಗಿಗಳು ಬಿಡುಗಡೆಯಾಗಿದ್ದಾರೆ. ಇಂದು 2,534 ಜನರ ಗಂಟಲು ದ್ರವ ಸಂಗ್ರಹಿಲಾಗಿದ್ದು 2,225 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ …
Read More »ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ
ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …
Read More »ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ; ಯುವಕನನ್ನು ಗ್ರಾಮಕ್ಕೆ ಕರೆಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು
ಮೈಸೂರು: ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ ಹೊಂದಿರುವ ಆರೋಪ ಹಿನ್ನೆಲೆ ಗ್ರಾಮಸ್ಥರು ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಹಲ್ಲೆಗೆ ಒಳಗಾದ ಯುವಕ. ವಿವಾಹಿತ ಮಹಿಳೆ ಜತೆ ಸ್ನೇಹ ಬೆಳೆಸಿದ ಹಿನ್ನೆಲೆ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ಯುವಕನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಸದ್ಯ ಗಾಯಾಳು ಮಹೇಶ್ ಕುಮಾರ್ಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಿಯತಮೆಯ ಮೂಲಕ ಪ್ರಿಯತಮನನ್ನ ಗ್ರಾಮಕ್ಕೆ ಕರೆಸಿಕೊಂಡ …
Read More »ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್
ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು …
Read More »ಕೊರೊನಾ ಪೀಕ್ಗೆ ಹೋಗುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸುತ್ತೇವೆ: ಸಚಿವ ಬಿ.ಸಿ.ನಾಗೇಶ್
ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ …
Read More »ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ
ಬೆಳಗಾವಿ: ಕಾಂಗ್ರೆಸ್ ಪ್ರತಿಭಟನೆಗೂ ಮೊದಲೇ ಸರ್ಕಾರ ಬೆದರಿತಾ ಎಂಬ ಪ್ರಶ್ನೆಯೊಂದು ಎದ್ದಿದೆ. ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕರೋನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಿಸಿದೆ. ವೀಕೆಂಡ್ ಕರ್ಫ್ಯೂ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಹಾಕದೇ …
Read More »
Laxmi News 24×7