ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …
Read More »ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರ ದಾಖಲೆ
2020ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆಗಳು, 77 ಅತ್ಯಾಚಾರಗಳು ನಡೆದಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ನೀಡಿದೆ. 2020ಯಲ್ಲಿ ಒಟ್ಟು 29,193 ಕೊಲೆಯಾಗಿದ್ದು, ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಕೊಲೆಯಾಗಿದೆ. ಉತ್ತರ ಪ್ರದೇಶದಲ್ಲಿ 3,779 ಹತ್ಯೆಗಳು, ಬಿಹಾರದಲ್ಲಿ 3,150, ಮಹಾರಾಷ್ಟ್ರದಲ್ಲಿ 2,163 , ಮಧ್ಯಪ್ರದೇಶ 2,101 ಮತ್ತು ಪಶ್ಚಿಮ ಬಂಗಾಳದಲ್ಲಿ 1,948 ಕೊಲೆಗಳು ನಡೆದಿವೆ. 2020ರಲ್ಲಿ ಒಟ್ಟು 28,246 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ರಾಜಸ್ಥಾನದಲ್ಲಿ ಅತಿ ಹೆಚ್ಚು …
Read More »ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್.: ಸಿದ್ದು
ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಸರ್ಕಾರದ ಉಳಿದ ಅವಧಿ ಪೂರೈಸಲಿ ಎಂಬುದು ನನ್ನ ಆಶಯವೆಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನ್ನ ಪರವಾರಿಗೆ ಶಾಸಕರು ಹಾಗೂ ಇನ್ನಿತರರಿದ್ದಾರೆ. ಆದರೆ ತಮ್ಮನ್ನು ದೆಹಲಿಗೆ ಕಳುಹಿಸಲು ಹುನ್ನಾರ ನಡೆದಿದೆ. ಅದು ತಮಗೂ ತಿಳಿದಿದೆ. ಹೀಗಾಗಿ ಹುಶಾರಾಗಿರಿ. ನೀವು ವಿಧಾನಸಭೆಯಲ್ಲಿ ಇರುವುದು ನಿಮ್ಮಲ್ಲೇ ಕೆಲವರಿಗೆ …
Read More »ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೋಗುವ ವಿಚಾರದಲ್ಲಿ ಸ್ವಾರಸ್ಯಕರ ಚರ್ಚೆಯೊಂದು ನಡೆಯಿತು. ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗಬೇಕು. ಅಲ್ಲಿ ಕರ್ನಾಟಕದ ಕಹಳೆ ಮೊಳಗಿಸಬೇಕು ಎಂದು ಸಚಿವ ಮಾಧುಸ್ವಾಮಿ ಚರ್ಚೆ ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಆರ್ ಅಶೋಕ್ ಇಲ್ಲ, ಇಲ್ಲ ಸಿದ್ದರಾಮಯ್ಯ ನಮಗೆ ಇಲ್ಲಿಯೇ ಇರಬೇಕು. ನಮಗೆ ಮಾರ್ಗದರ್ಶನ ಕೊಡಬೇಕು. ಹೀಗಾಗಿ ನಾವು ಅವರನ್ನು ದೆಹಲಿಗೆ ಕಳುಹಿಸಲು ಇಷ್ಟಪಡುವುದಿಲ್ಲ ಅಂದರು. ಇದನ್ನು ಕೇಳಿಸಿಕೊಂಡ ಸಿದ್ದರಾಮಯ್ಯ …
Read More »ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಕ್ಷೇತ್ರ: ಪುನರ್ ವಿಂಗಡನೆ ಖಚಿತ
ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡನೆ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ ಹೆಜ್ಜೆಯಿರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2021ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಮೂಲಕ ಪ್ರಸ್ತುತ ಇರುವ ತಾಲೂಕು ಮತ್ತು ಜಿ.ಪಂ. ಕ್ಷೇತ್ರ ಪುನರ್ ವಿಂಗಡನೆಯನ್ನು ರದ್ದುಪಡಿಸಿ ಮತ್ತೆ ಪುನರ್ ವಿಂಗಡಣೆ ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಸಚಿವ …
Read More »ಬೆಳಗಾವಿಯ 46 ಅನಧಿಕೃತ ಧಾರ್ಮಿಕ ಕಟ್ಟಡಗಳ ಗುರುತು, ಶೀಘ್ರವೇ ತೆರವು ಎಂದ ಬೆಳಗಾವಿ ಡಿಸಿ….!
ಬೆಳಗಾವಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಶೀಘ್ರವೇ ಈ ಎಲ್ಲವನ್ನೂ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಎಲ್ಲ 46 ಧಾರ್ಮಿಕ ಕೇಂದ್ರ ಕಟ್ಟಡಗಳು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿವೆ. ಈಗಾಗಲೇ ಒಟ್ಟು 17 ಅನಧಿಕೃತ ಧಾರ್ಮಿಕ ಕೇಂದ್ರದ ಕಟ್ಟಡಗಳ ತೆರವು ಮಾಡಲಾಗಿದೆ. ಇನ್ನುಳಿದ 29 ಅನಧಿಕೃತ ಧಾರ್ಮಿಕ ಕೇಂದ್ರ …
Read More »ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ
ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್ಐ ಅಮ್ಮಿನಭಾವಿ ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …
Read More »ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ’ : ಹೆಚ್. ಡಿ. ಕುಮಾರಸ್ವಾಮಿ :
ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ. ಹಿಂದಿ …
Read More »ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ಯುವತಿ ದೇಶಕ್ಕೆ ಟಾಪರ್
ಮಂಗಳೂರು: ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಇನ್ ಸ್ಟಿಟ್ಯೂಟ್ ವತಿಯಿಂದ 2021ರ ಸಾಲಿನ ಸಿಎ ಅಂತಿಮ ಪರೀಕ್ಷೆಯನ್ನು ನಡೆಸಲಾಗಿತ್ತು. ರಾಷ್ಟ್ರ ಮಟ್ಟದ ಈ ಸಿಎ ಪರೀಕ್ಷೆಯಲ್ಲಿ ರೂತ್ ಕ್ಲಾರಾ ಡಿಸಿಲ್ವಾ ಮೊದಲ ರ್ಯಾಂಕ್ ಪಡೆದಿದ್ದಾರೆ. ಪದವಿ ಶಿಕ್ಷಣದ ಜೊತೆಯಲ್ಲೇ ಸಿಎ ವ್ಯಾಸಂಗ ನಡೆಸಿದ್ದ ರೂತ್, ಗ್ರೂಪ್ ಒನ್ ಹಾಗೂ ಗ್ರೂಪ್ ಟು ಹೆಸರಿನ ಎರಡು ಪರೀಕ್ಷೆಗಳನ್ನೂ ಏಕಕಾಲದಲ್ಲಿ …
Read More »ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ
ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …
Read More »