Breaking News

Uncategorized

ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ ಸಿಎಂ

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್‌ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು.   ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು …

Read More »

ಬಸ್‌ ಮೇಲಿನ ಪುನೀತ್‌ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ

ನಟ ಪುನೀತ್‌ರಾಜ್‌ಕುಮಾರ್‌ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್​ ನಿಲ್ದಾಣದಲ್ಲಿ ಬಸ್‌ವೊಂದರ ಮೇಲಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್‌ ಆಗಿದೆ.

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …

Read More »

ಬೆಳಗಾವಿ: ಓಡಿ ಹೋಗಿ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದ ಬಾಲಕ ಅಸ್ವಸ್ಥ

ಓಡಿ ಹೋಗಿ ಬಸ್ ಹತ್ತಲು ಹೋಗಿದ್ದ ವೇಳೆ ಬಾಲಕನೊರ್ವ ಬಸ್‍ನಿಂದ ಬಿದ್ದು ಗಾಯಗೊಂಡಿರುವ ಘಟನೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೌದು ಪಂತ್ ಬಾಳೇಕುಂದ್ರಿಗೆ ಹೋಗುವ ಕೆಎಸ್‍ಆರ್‍ಟಿಸಿ ಬಸ್ ಹತ್ತುವ ವೇಳೆ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಓಡಿ ಹೋಗಿ ಬಸ್ ಹತ್ತಲು ಹೋದ ಬಾಲಕ ಕೆಳಗೆ ಬಿದ್ದು ಅಸ್ವಸ್ಥನಾಗಿದ್ದಾನೆ. ನಂತರ ಆತನನ್ನು ಅಲ್ಲಿದ್ದ ಸ್ಥಳೀಯರು ಎತ್ತಿಕೊಂಡು ಪ್ಲಾಟ್‍ಫಾರ್ಮನ ಕಟ್ಟೆಯ ಮೇಲೆ ಮಲಗಿಸಿ ನೀರು ಕುಡಿಸಿ, ಪ್ರಾಥಮಿಕ …

Read More »

ಪಾಕ್​ ವಿರುದ್ಧ ಭರ್ಜರಿ ಜಯ; T20 ವಿಶ್ವಕಪ್​​ ಫೈನಲ್​​ಗೆ ಆಸ್ಟ್ರೇಲಿಯಾ​​

ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​​​​​​ ಸೆಮಿಫೈನಲ್-​​​2 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಪಾಕ್​​ ನೀಡಿದ ರನ್​​ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ನಿಗದಿತ 19 ಓವರ್​​ನಲ್ಲಿ 5 ವಿಕೆಟ್​​ ನಷ್ಟಕ್ಕೆ 177 ರನ್​​​​ ಗಳಿಸಿ ಗೆದ್ದು ಬೀಗಿದೆ.   ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ಪಾಕ್​​​ 4 ವಿಕೆಟ್​​ ನಷ್ಟಕ್ಕೆ 176 ರನ್​​ ಗಳಿಸಿತ್ತು. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್​​ಗಳ …

Read More »

ಪ್ರಮಾಣವಚನಕ್ಕೆ ಪ್ರತಿಷ್ಠೆ ಅಡ್ಡಿ.? ಶಾಸಕ ಶ್ರೀನಿವಾಸ್ ಮಾನೆ ಪ್ರತಿಜ್ಞಾವಿಧಿ ಮುಂದೂಡಿದ ಸ್ಪೀಕರ್

ಬೆಂಗಳೂರು: ನೂತನ ಶಾಸಕರ ಪ್ರಮಾಣವಚನ ವಿಚಾರದಲ್ಲಿಯೂ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಆರಂಭವಾದಂತಿದೆ. ಪ್ರಮಾಣವಚನ ಸ್ವೀಕಾರಕ್ಕೆಂದು ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ನಿರಾಸೆಯಿಂದ ಹಿಂತಿರುಗಿದ ಪ್ರಸಂಗ ನಡೆದಿದೆ.   ಹಾನಗಲ್ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಪ್ರಮಾಣವಚನ ಸ್ವೀಕಾರಕ್ಕೆಂದು ವಿಧಾನಸೌಧದ ಸ್ಪೀಕರ್ ಚೇಂಬರ್ ಗೆ ಆಗಮಿಸಿದ್ದಾರೆ. ಮಾನೆ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಇನ್ನಿತರ …

Read More »

ಮದುವೆ ಆದಮೇಲೆ ಫಸ್ಟ್‌ನೈಟ್‌ನಲ್ಲಿ ಏನು ಮಾಡ್ತಾರೆ?ರಚಿತಾ ರಾಮ್

ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಚಿತಾ ಕೈಯಲ್ಲೀಗ ಕಮ್ಮಿ ಅಂದರೂ 10 ರಿಂದ 12 ಸಿನಿಮಾಗಳಿವೆ. ಇಷ್ಟೊಂದು ಬ್ಯುಸಿಯಾಗಿದ್ದರೂ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡುವುದಿಲ್ಲ. ಎಷ್ಟೇ ಆಯಾಸ ಆಗಿದ್ದರೂ ಅದನ್ನು ತೋರಿಸಿಕೊಳ್ಳುವುದಿಲ್ಲ. ಮುಖ ಗಂಟು ಮಾಡಿಕೊಂಡು ಮಾತಾಡಿದ್ದು ತೀರಾ ವಿರಳ. ಆದರೆ, ಆಗಾಗ ಆಡಿದ ಕೆಲವು ಮಾತು ವಿವಾದಕ್ಕೀಡಾಗಿದ್ದು ಇದೆ. ಸದಾ ಸ್ಮೈಲಿಂಗ್ ಫೇಸ್ ಇಟ್ಟುಕೊಂಡು ಓಡಾಡುವ ರಚಿತಾ …

Read More »

ಬಸ್ಸಲ್ಲಿ ಜೋರಾಗಿ ಹಾಡು ಹಾಕಿದ್ರೆ ಬೀಳುತ್ತೆ ಕೇಸ್: KKRTC ಹೊಸ ಸುತ್ತೋಲೆಯಲ್ಲಿ ಏನಿದೆ?

ಬಸ್ ಪ್ರಯಾಣ ಅಂದ್ರೆ ಒಂದು ನಿರ್ಧಿಷ್ಟ ಸ್ಥಳದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಕುಳಿತಿರುತ್ತಾರೆ, ಮಕ್ಜಳು, ಹಿರಿಯರು, ವೃದ್ಧರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಪ್ರಯಾಣಿಕರು ಇರುತ್ತಾರೆ, ಆದ್ರೆ ಯಾರೋ ಓರ್ವ ಪ್ರಯಾಣಿಕ ಮೊಬೈಲ್ ಜೋರಾಗಿ ಶಬ್ಧ ಮಾಡಿಕೊಂಡು ಹಾಡು ಕೇಳೋದು ಮತ್ತೊಬ್ಬರಿಗೆ ಅಹಿತಕರವಾಗಿರುತ್ತದೆ.         ಈ ಹಿನ್ನೆಲೆ ಪ್ರಯಾಣಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸ ಸುತ್ತೋಲೆ ಹೊರಡಿಸಿದೆ. …

Read More »

ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

  ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …

Read More »

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು : ಮಹೇಂದ್ರ ಕೌತಾಳ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ಉಪಚುನಾವಣೆ ಸಮಯದಲ್ಲಿ ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಆಗ್ರಹಿಸಿದರು.   ಇದನ್ನು ಖಂಡಿಸಲು ಬಿಜೆಪಿ ನ. 12ರಂದು ನಗರದ ಅಂಬೇಡ್ಕರ್‌ ವೃತ್ತದಿಂದ ತಹಶೀಲ್ದಾರ್‌ ಕಚೇರಿ ತನಕ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು …

Read More »