Breaking News

Uncategorized

ಧರ್ಮಸ್ಥಳ ಮೇಳ: ಬಯಲಾಟ ಪ್ರದರ್ಶನ ಪ್ರಾರಂಭ

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಪ್ರದರ್ಶನಗಳು ಭಾನುವಾರ ಮಂಗಳೂರಿನಲ್ಲಿ ಸೇವಾ ಪ್ರದರ್ಶನದೊಂದಿಗೆ ಪ್ರಸ್ತುತ ವರ್ಷದ ತಿರುಗಾಟ ಆರಂಭಗೊಂಡಿದೆ. ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾ ಹರಿಕೆ ಬಯಲಾಟ ಪ್ರದರ್ಶನಗಳು ನಡೆದಿವೆ. ಕಳೆದ ಆರು ವರ್ಷಗಳಿಂದ ಕಾಲಮಿತಿಯ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ ಗಂಟೆ 7 ರಿಂದ 12 ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯುತ್ತದೆ. ಪ್ರೇಕ್ಷಕರಿಂದ, ಸೇವಾಕರ್ತರಿಂದ ಹಾಗೂ ಕಲಾವಿದರಿಂದಲೂ ಇದಕ್ಕೆ ಉತ್ತಮ …

Read More »

ಖಾನಾಪುರ ಅಭಿವೃದ್ಧಿಗೆ ಸ್ಪಂದಿಸದ ರಾಜ್ಯ ಸರಕಾರದ ವಿರುದ್ದ ಸುವರ್ಣಸೌಧವರೆಗೂ ಪಾದಯಾತ್ರೆಗೆ ಮುಂದಾದ ಅಂಜಲಿ ನಿಂಬಾಳ್ಕರ್

ಖಾನಾಪುರ ಅಭಿವೃದ್ಧಿಗೆ ಸ್ಪಂದಿಸದ ರಾಜ್ಯ ಸರಕಾರದ ವಿರುದ್ದ ಸುವರ್ಣ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಳಗಾವಿಯ ಅಧಿವೇಶನ ಹಿನ್ನೆಲೆ ಈ ಭಾಗದ ರೈತರು, ಸಾರ್ವಜನಿಕರು ಸೇರಿ ಹೆಸರಲ್ಲಿ ಡಿ. 12ರಂದು ಖಾನಾಪುರ ಸಂಘರ್ಷ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ. ಖಾನಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 13ರಿಂದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಮಗ್ರ …

Read More »

ಬೆಳಗಾವಿಯಲ್ಲಿ ಅಂಬೇಡ್ಕರ್‍ರವರ 65ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋಧಿ ದಿನಾಚರಣೆ

ಮಾನವ ಬಂಧುತ್ವ ವೇದಿಕೆ ಬೆಳಗಾವಿಯ ವತಿಯಿಂದ ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್‍ರ 65ನೇ ಮಹಾಪರಿನಿರ್ವಾಣ ದಿನವನ್ನು ಆಚರಣಾ ಮಾಡಲಾಯಿತು. ಬೆಳಗಾವಿಯ ಸದಾಶಿವ ನಗರದ ಬೌದ್ಧವಿಹಾರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್‍ರವರ 65ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋದಿ,ü ಪರಿವರ್ತನಾ ದಿನ ಆಚರಿಸಲಾಯಿತು. ಈ ವೇಳೆ ಮಾತನಾಡಿದ ರವೀಂದ್ರ ನಾಯ್ಕರ್, ಸಮಾಜಿಕ, ಧಾರ್ಮಿಕ, ಮೂಢನಂಬಿಕೆಗಳ ಆಚರಣೆ ಮತ್ತು ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಈ …

Read More »

ದುಷ್ಕರ್ಮಿಗಳ‌ ತಂಡವೊಂದು ಐದು ಮಂದಿ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಉಪ್ಪಿನಂಗಡಿ:ದುಷ್ಕರ್ಮಿಗಳ‌ ತಂಡವೊಂದು ಐದು ಮಂದಿ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಲಂತಿಲ ಗ್ರಾಮದ ಅಂಡೆತಡ್ಕದಲ್ಲಿ ನಡೆದಿದೆ. ಮೂವರು ಯುವಕರಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲಾಗಿದ್ದಾರೆ.   ಫಯಾಝ್ (26), ಹಫೀಝ್ (19) ಎಂಬುವವರು ರಾತ್ರಿ ಅಂಗಡಿಯೊಂದರ ಬಳಿ ಇದ್ದರು. ಇದೇ ವೇಳೆ ಅಲ್ಲಿಗೆ ಬಂದ 4ರಿಂದ 5 ಮಂದಿಯ ತಂಡ ಅವರ ಮೇಲೆ ಏಕಾಏಕಿ ತಲ್ವಾರು …

Read More »

ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ಶಾಲೆ ಬಂದ್ – ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಕಾಲಿಟ್ಟ ನಂತರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸೋದಕ್ಕೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚೋ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಕೊರೋನಾ ಸೋಂಕಿನ ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ …

Read More »

ಕಾಮಸೂತ್ರ – ವಾತ್ಸ್ಯಾಯನ ಮಹರ್ಷಿಗಳು ಬರೆದ ಒಂದು ಶಾಸ್ತ್ರಗ್ರಂಥ. ಇದರ ಯಥಾರೂಪ ಅನುವಾದ ಇದೀಗ ಕನ್ನಡಕ್ಕೆ

ಬೆಂಗಳೂರು – ಕಾಮಸೂತ್ರ – ವಾತ್ಸ್ಯಾಯನ ಮಹರ್ಷಿಗಳು ಬರೆದ ಒಂದು ಶಾಸ್ತ್ರಗ್ರಂಥ. ಇದರ ಯಥಾರೂಪ ಅನುವಾದ ಇದೀಗ ಕನ್ನಡಕ್ಕೆ ಬರುತ್ತಿದೆ. ವಿಶೇಷವೆಂದರೆ ಇದು ವಾತ್ಸ್ಯಾಯನ ಕೃತಿಯಿಂದ ಏನನ್ನೂ ಕೈಬಿಡದ, ಹಾಗೆಯೇ ಏನನ್ನೂ ಹೊಸದಾಗಿ ಸೇರಿಸದ, “ಇದ್ದದ್ದು ಇದ್ದ ಹಾಗೆ” ಎಂದು ಹೇಳಬಹುದಾದ ಪ್ರಥಮ ಕನ್ನಡ ಅನುವಾದ! ಈ ಕೃತಿಯು ಇದೇ ಸೋಮವಾರ, ಡಿಸೆಂಬರ್ 6ರಂದು ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ್‍ನಲ್ಲಿ ಸಂಜೆ 5:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಯಾಗಲಿದೆ. ಕಾರ್ಯಕ್ರಮದ …

Read More »

ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ

ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …

Read More »

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ

ಬೆಳಗಾವಿ : ಕರ್ನಾಟಕ ವಿಧಾನಪರಿಷತ್ ಚುನಾವಣೆ-2021 ಅಂಗವಾಗಿ ಡಿಸೆಂಬರ್ 10, 2021ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಣಾವಲು ಸಮಿತಿಯ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆರ್.ವೆಂಕಟೇಶಕುಮಾರ್ ಅವರು ತಿಳಿಸಿದ್ದಾರೆ. ಡಿಸೆಂಬರ್ …

Read More »

ಈ 2 ರೂ. ನಾಣ್ಯ ನಿಮ್ಮಲ್ಲಿದ್ದರೆ ಸಾವಿರಾರು ರೂಪಾಯಿ ಜೇಬಿಗಿಳಿಸಬಹುದು

ಮನೆಯಲ್ಲೇ ಕುಳಿತು ಆದಾಯ ಗಳಿಸುವ ವಿಧವೊಂದನ್ನು ಹುಡುಕುವ ಮಂದಿಗೆ ನಾಣ್ಯ ಸಂಗ್ರಹವೂ ದುಡ್ಡು ಮಾಡುವ ಒಳ್ಳೆಯ ಮೂಲ. ಯಾವುದೇ ಪರಿಶ್ರಮ ಇಲ್ಲದೇ ತ್ವರಿತವಾಗಿ ದುಡ್ಡು ಮಾಡಲು ಇದೊಂದು ಒಳ್ಳೆಯ ಮಾರ್ಗ. ಮನೆಯಲ್ಲೇ ಕುಳಿತು ಸಾವಿರಾರು ರೂಪಾಯಿಗಳನ್ನು ಸಂಪಾದಿಸಬಲ್ಲ ಆಯ್ಕೆಯೊಂದರ ಕುರಿತು ನಿಮಗೆ ನಾವು ತಿಳಿಸುತ್ತಿದ್ದೇವೆ. ನಿಮ್ಮ ಬಳಿ 2 ರೂಪಾಯಿ ಮುಖಬೆಲೆಯ ನಾಣ್ಯವಿದ್ದರೆ, ಆನ್ಲೈನ್ ಮೂಲಕ ಸಾವಿರಾರು ರೂಪಾಯಿಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ನಾಣ್ಯವು 1994, 1995, 1997 ಅಥವಾ 2000ನೇ …

Read More »

ಸ್ಮಾರ್ಟ್ ಸಿಟೀಸ್ ಮಿಷನ್ ಅನುಷ್ಠಾನದ ಸಮಯವನ್ನು ಜೂನ್ 2023 ಕ್ಕೆ ವಿಸ್ತರಿಸಲಾಗಿದೆ.

ನವದೆಹಲಿ:Covid -19 ಸಾಂಕ್ರಾಮಿಕ ರೋಗದಿಂದಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್ ಸಿಟಿ ಮಿಷನ್ (smart city mission) ಅನುಷ್ಠಾನದ ಸಮಯವನ್ನು ಜೂನ್ 2023 ಕ್ಕೆ ವಿಸ್ತರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.   ಹಿಂದಿನ ಗಡುವಿನ ಪ್ರಕಾರ, ನಗರಗಳು ಸ್ಮಾರ್ಟ್ ಸಿಟೀಸ್ ಮಿಷನ್ (smart cities mission) ಅಡಿಯಲ್ಲಿ ಆಯ್ಕೆಯಾದ ಐದು ವರ್ಷಗಳಲ್ಲಿ ತಮ್ಮ ಯೋಜನೆಗಳನ್ನು ಪೂರ್ಣಗೊಳಿಸಲು ನಿರೀಕ್ಷಿಸಲಾಗಿತ್ತು. ಮಿಷನ್ ಅಡಿಯಲ್ಲಿ ಆಯ್ಕೆಯಾದ ಎಲ್ಲಾ …

Read More »