Breaking News

Uncategorized

ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿನೀಡದ ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ

ಸಾಗರ: ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿ ನೀಡದಿರುವುದು ಮತ್ತು ವಿಚಾರಣೆಗೆ ಖುದ್ದು ಹಾಜರಾಗಲು ನೀಡಿದ ಸೂಚನೆಯನ್ನೂ ಉಲ್ಲಂಘಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಎಸ್.ಎಲ್.ಪಾಟೀಲ್ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕೆಳದಿ ರಸ್ತೆಯ ರಾಜಕುಮಾರ ಎಂಬುವವರು 2020ರ ಮಾರ್ಚ್‌ನಲ್ಲಿ ಮಾಹಿತಿ ಹಕ್ಕು ಅರ್ಜಿ ಹಾಕಿ, ಆನಂದಪುರ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್ ಒಂದಕ್ಕೆ …

Read More »

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು. ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ …

Read More »

ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್‍ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಗೋಪಾಲ ಹಾದಿಮನಿ 46, ಸೌಮ್ಯಾ ಹಾದಿಮನಿ 19, ಶ್ವೇತಾ ಹಾದಿಮನಿ 16, ಸಾಕ್ಷಿ ಹಾದಿಮನಿ 11, ಸೃಜನ‌ ಹಾದಿಮನಿ 8 ಮೃತ ದುರ್ದೈವಿಗಳು. ಜುಲೈ 6 ರಂದು ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು …

Read More »

ಮಟ್ಕಾ ದಂಧೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸ್​ ಮೇಲೇ ಹಲ್ಲೆ

ಬೀದರ್: ಮಟ್ಕಾ ದಂಧೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೀದರ್​ ಜಿಲ್ಲೆಯ ಔರಾದ್ ಪೊಲೀಸ್ ಠಾಣೆಯ ಹೆಡ್​​ಕಾನ್ಸ್​ಟೆಬಲ್ ಸಂಗಮೇಶ್ ನಿಟ್ಟೂರೆ ಮೇಲೆ ಹಲ್ಲೆ ನಡೆದಿದೆ. ಔರಾದ್ ತಾಲೂಕಿನ ಹಲವೆಡೆ ಮಟಕಾ ದಂಧೆ ನಡೆಯುತ್ತಿದ್ದು, ಈ ಅಕ್ರಮದ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಗಮೇಶ್​ರನ್ನು ಶಿವಶಂಕರ್​ ಮಳಗೆಮನೆ ಎಂಬಾತ ಕರೆಸಿಕೊಂಡು, ಇತರ ನಾಲ್ವರೊಂದಿಗೆ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ …

Read More »

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹುಬ್ಬಳ್ಳಿ: ಜೆಡಿಎಸ್ ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಬಿಜೆಪಿ ಬಿ ಟೀಂ ಅಥವಾ ಒಳ ಒಪ್ಪಂದ ಎನ್ನುವ ಸುಳ್ಳು ಆರೋಪಗಳನ್ನು ಬಿಟ್ಟರೆ ನಮ್ಮ ಹಾಗೂ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶನಿವಾರ ಇಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ಯಾವುದೇ ವಿಚಾರಗಳು ಇಲ್ಲ. ಹೀಗಾಗಿ …

Read More »

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ:ಬೊಮ್ಮಾಯಿ

ಹುಬ್ಬಳ್ಳಿ –  ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ  ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು.  ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ  …

Read More »

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

ಪಣಜಿ: ಗೋವಾಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿದ್ದು ತಪಾಸಣೆಗಾಗಿ 3200 ರೂ ಶುಲ್ಕ ವಿಧಿಸಲಾಗುತ್ತಿದ್ದು ,ಇದಕ್ಕಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಸರಕಾರ ಗುತ್ತಿಗೆ ನೀಡಿದೆ. ಗೋವಾದಲ್ಲಿ ಪ್ರವಾಸಿ ಸೀಜನ್ ಆರಂಭಗೊಂಡಿದ್ದು ವಿದೇಶಗಳಿಂದ ಪ್ರವಾಸಿಗರ ಆಗಮನ ಆರಂಭವಾಗಿದೆ . ಈಗಾಗಲೇ ಬೋಟ್‍ಗಳ ಮೂಲಕ ಮತ್ತು ಚಾರ್ಟರ್ ವಿಮಾನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ತಪಾಸಣೆ ಅಥವಾ ಕೋವಿಡ್ …

Read More »

ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು : ಸಚಿವ ಜಗದೀಶ ಶೆಟ್ಟರ್

ವಿಜಯಪುರ: ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು, ಒಂದೆರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಅಲ್ಲಿ ಕೂಡ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಜಾಬ್ ನಲ್ಲಿ ಒಬ್ಬ ಸಿಧು ಹಾಗೂ ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ರಾಜ್ಯದ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯದ ಫೈಟ್ ನಿಂದಾಗಿ ರಾಜ್ಯದಲ್ಲಿ ಸಹಿತ ಕಾಂಗ್ರೆಸ್ ಸಂಪೂರ್ಣವಾಗಿ ಮುಳುಗಿ ಹೋಗುತ್ತದೆ ಎಂದರು. ಐದು ವರ್ಷ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ತಾವೇ ಸೋಲನ್ನು ಅನುಭವಿಸಿದರು. …

Read More »