Breaking News

Uncategorized

ಸ್ನೇಹಿತರ ಜೊತೆಗೂಡಿ ಎಣ್ಣೆ ಪಾರ್ಟಿ.. ಮತ್ತೇರಿದ ಮೇಲೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..

ಹೊಸಕೋಟೆ (ಬೆಂ.ಗ್ರಾ) : ಅವಾಚ್ಯ ಪದಗಳಿಂದ ನಿಂದಿಸಿದ ಎಂದು ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆ.ಸತ್ಯವಾರ ಗ್ರಾಮದಲ್ಲಿ ನಡೆದಿದೆ. ಎಣ್ಣೆ ಪಾರ್ಟಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಸ್ನೇಹಿತರೇ ಸೇರಿ ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ. ದಾವಣಗೆರೆ ಮೂಲದ ಸುಧಾಕರ್ (43) ಎಂಬುವರು ಕೊಲೆಯಾಗಿರುವ ದುರ್ದೈವಿ. ಕೆ.ಸತ್ಯವಾರ ಗ್ರಾಮದ ನಾಗಭೂಷಣ್ ಅಲಿಯಾಸ್ ನಾಗ, ಚಂದ್ರಶೇಖರ್ ಅಲಿಯಾಸ್ …

Read More »

#omicron ಆತಂಕದ ಮಧ್ಯೆಯೂ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ ಮುಕ್ತ..!

ಬೆಂಗಳೂರು: ಸಿಲಿಕಾನ್ ಸಿಟಿಗೆ ಕೂಗಳತೆ ದೂರದಲ್ಲಿರುವ ಪ್ರವಾಸಿಗರ ಫೆವರೇಟ್ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಪ್ರಿಯರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಿಹಿ‌ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲಾಡಳಿತ …

Read More »

‘ಲಕ ಲಕ ಲಂಬರ್ಗಿನಿ’ ಎನ್ನುತ್ತಾ ಚಂದನ್​ ಶೆಟ್ಟಿ ಜೊತೆ ಸೊಂಟ ಬಳುಕಿಸಿದ ಡಿಂಪಲ್​ ಕ್ವೀನ್

ರಾಜಾ-ರಾಣಿ ಶೋನಲ್ಲಿ ಬ್ಯುಸಿಯಾಗಿದ್ದ ಚಂದನ್​ ಯಾವುದೇ ಆಲ್ಬಂ ಸಾಂಗ್​ಗಳನ್ನ ಘೋಷಣೆ ಮಾಡಿರಲಿಲ್ಲ. ಇತ್ತೀಚಿಗೆ ಶೋ ಗ್ರ್ಯಾಂಡ್​ ಆಗಿ ಎಂಡ್​ ಆಗಿದ್ದು, ಚಂದನ್​-ನಿವೇದಿತಾ ಮೂರನೇ ಸ್ಥಾನ ಪಡೆಯುವುದರ ಮೂಲಕ ಜನರ ಮನಸ್ಸನ್ನ ಗೆದ್ದಿದ್ದರು. ಈಗ ಚಂದನ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಒಂದನ್ನ ನೀಡಿದ್ದಾರೆ. ರಾಪರ್​ ಚಂದನ್​ ಶೆಟ್ಟಿ ಅವರು ಏನೇ ಮಾಡಿದ್ರು ಸಖತ್​ ಡಿಫರೆಂಟ್​ ಆಗಿ ಮಾಡ್ತಾರೆ. ಕ್ಯಾಚಿ ಸಾಹಿತ್ಯ, ಅದ್ಧೂರಿ ಸೆಟ್​, ಕಾಸ್ಟೂಮ್​ಗಳು ಅವರ ಆಲ್ಬಂ ಸಾಂಗ್ಸ್​ಗಳಲ್ಲಿ ನೀವು ನೋಡಿರ್ತಿರಾ. ಇನ್ನು …

Read More »

ದೂರು ದಾಖಲಿಸುವಲ್ಲಿ ಲೋಪ : 12 ಮಂದಿ ವಿರುದ್ಧದ ಗ್ಯಾಂಬ್ಲಿಂಗ್ ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಪ್ರಕರಣ ದಾಖಲಿಸುವ ವೇಳೆ ಪೊಲೀಸರು ನಿಯಮಗಳನ್ನು ಪಾಲಿಸಿಲ್ಲ ಎಂಬ ಹಿನ್ನೆಲೆ ಹೈಕೋರ್ಟ್ 12 ಮಂದಿ ವಿರುದ್ಧ ದಾಖಲಿಸಿದ್ದ ಗ್ಯಾಂಬ್ಲಿಂಗ್ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. ನಗರದ ಶೇಷಾದ್ರಿಪುರಂ ಠಾಣೆ ಪೊಲೀಸರು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 79, 80ರ ಅಡಿಯಲ್ಲಿ ದಾಖಲಿಸಿರುವ ಪ್ರಕರಣವನ್ನು ರದ್ದಪಡಿಸುವಂತೆ ಕೋರಿ ಸ್ಟ್ರೈಕರ್ ಅಸೋಸಿಯೇಷನ್ ರಿಕ್ರಿಯೇಷನ್ ಕ್ಲಬ್​ನ ಸಿಬ್ಬಂದಿ ಹಾಗೂ ಇತರೆ 7 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ಧ …

Read More »

ಅಭಿಮಾನಿಗಳಿಗೆ ಇಲ್ಲಿ ‘ಕಿಚ್ಚ’ನೇ ದೇವರು.. ಸುದೀಪ್​ಗೆ ಗುಡಿ ನಿರ್ಮಿಸುತ್ತಿರುವ ರಾಯಚೂರು ಫ್ಯಾನ್ಸ್​

ರಾಯಚೂರು: ಚಲನಚಿತ್ರ ನಟರನ್ನು ಆರಾಧಿಸಿ ಅವರ ಹೆಸರಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಶ್ರೇಯೋಭಿವೃದ್ಧಿ ಪ್ರಾರ್ಥಿಸುವುದು ಅಭಿಮಾನಿಗಳು ನಡೆಸಿಕೊಂಡು ಬಂದಿರುವ ಕಾರ್ಯವಾಗಿದೆ. ಆದರೆ ರಾಯಚೂರಲ್ಲಿ ತಮ್ಮ ನೆಚ್ಚಿನ ನಟನ ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳು ಮುಂದಾಗಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ಥಳಿ ಕೆತ್ತಿಸಿರುವ ಅಭಿಮಾನಿಗಳು ಅವರಿಗಾಗಿ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಮೊದಲು ಮಾನವನಾಗು ಎಂಬ …

Read More »

ಹಮ್ ದೋ ಹಮಾರೆ ದೋ’ ಅಂದುಕೊಂಡು ದೇಶದ ಆಸ್ತಿಯನ್ನ ಅಂಬಾನಿ, ಅದಾನಿಗೆ ಮಾರೊದೊಂದೆ ಬಿಜೆಪಿಯ ಉದ್ಯೋಗ: ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕೋಡಿ: ಬಿಜೆಪಿ ಪಕ್ಷ ಏಳು ವರ್ಷದಲ್ಲಿ ಎಷ್ಟು ಕಡಿದುಕಟ್ಟೆ ಹಾಕಿದ್ದಾರೆ ಅನ್ನೋದನ್ನ ನೋಡಿದ್ದೇವೆ. ಕಾಂಗ್ರೆಸ್ ಪಕ್ಷ ಮಾಡಿಟ್ಟ ಆಸ್ತಿ ಮಾರೋದೇ ಬಿಜೆಪಿ ಅಭಿವೃದ್ಧಿ ಕಾರ್ಯವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಯಕ್ಸಂಬಾದಲ್ಲಿ ಆಯೋಜಿಸಲಾಗಿದ್ದ ವಿಧಾನ ಪರಿಷತ್​​ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಯದ ಕೊರತೆ, ಅಭಾವದಿಂದಾಗಿ ಮನೆ‌ಮನೆಗೆ ಬಂದುಪ್ರಚಾರ ಮಾಡಲು ಆಗುತ್ತಿಲ್ಲ. ಹೀಗಾಗಿ ನಿಮ್ಮ ವಿನಂತಿಗೆ ಚಿಕ್ಕೋಡಿಗೆ ಬಂದಿದ್ದೇನೆ. ಚುನಾಯಿತ ಎಲ್ಲ ಪ್ರತಿನಿಧಿಗಳು ನಮಗೆ ಬೆಂಬಲಿಸಬೇಕು. ಕಳೆದ ಇಪ್ಪತ್ತು …

Read More »

ಶವದ ಹೆಬ್ಬೆಟ್ಟು ಒತ್ತಿಸಿಕೊಂಡವರಿಗೆ ಅಟಕಾಯಿಸಿಕೊಂಡ ದುರಾದೃಷ್ಟ; ಪೊಲೀಸರಿಂದ FIR​ ದಾಖಲು

ಮೈಸೂರು: ಆಸ್ತಿ ಕಬಳಿಕೆಗಾಗಿ ಮೃತ ವೃದ್ದೆಯ ಹೆಬ್ಬೆಟ್ಟು ಗುರುತು ಪಡೆದ ಪ್ರಕರಣ ಸಂಬಂಧಿಸಿ ಹೆಬ್ಬೆಟ್ಟು ಸಹಿ ಪಡೆದದವರ ಮೇಲೆ ವಿದ್ಯಾರಣ್ಯಪುರಂನಲ್ಲಿ ಠಾಣೆಯಲ್ಲಿ FIR ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಜಯಮ್ಮ ನವೆಂಬರ್ 16 ರಂದು ಮೃತಪಟ್ಟಿದ್ದರು. ಅಂತಿಮ ದರ್ಶನ ಪಡೆಯಲು ಸಂಬಂಧಿಕರಾದ ಕಾವ್ಯ ತೆರಳಿದ್ದಾಗ ಮೃತ ಜಯಮ್ಮರ ಅಕ್ಕನ ಮಗ ಸುರೇಶ ಎಂಬುವರು 6-7 ಬೆಲೆಯುಳ್ಳ ಭದ್ರತಾ ಪತ್ರಗಳಿಗೆ ಶವದ ಹೆಬ್ಬೆಟ್ಟಿನ ಗುರುತು ಒತ್ತಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಿನಗೆ …

Read More »

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯಲ್ಲೂ ವಿವಾದಿತ 3 ಕೃಷಿ ಕಾಯ್ದೆ ವಾಪಸ್ -​ಸಂಭ್ರಮದಲ್ಲಿ ಮುಳುಗಿದ ರೈತರು 

ನವದೆಹಲಿ: ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಇಂದಿನ ರಾಜ್ಯಸಭೆ ಸಂಸತ್ ಕಲಾಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದಂತೆ ಈಗ ಕಲಾಪದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವ ಸಂಬಂಧ ಬಿಲ್ ಮಂಡಿಸಿದರು. ರೈತರ ಉತ್ಪಾದನೆ ವ್ಯಾಪಾರ …

Read More »

ಸಿದ್ದುಗೆ ಸಿಎಂ ಕುರ್ಚಿ ಬಿಟ್ಟು ಬೇರೆ ಕಡೆ ಕೂತರೆ ಮುಳ್ಳು ಚುಚ್ಚಿದಂಗೆ : ಸಚಿವ ಈಶ್ವರಪ್ಪ ವ್ಯಂಗ್ಯ

ಬಾಗಲಕೋಟೆ : ಸಿದ್ದರಾಮಯ್ಯಗೆ ಸಿಎಂ ಖುರ್ಚಿ ಕಳೆದುಕೊಂಡ ಬಳಿಕ ಯಾವುದೇ ಖುರ್ಚಿ ಮೇಲೆ ಕುಳಿತರೂ ಮುಳ್ಳು ಚುಚ್ಚಿದ ಹಾಗೇ ಆಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನನೇ ಬೇಕು ಅಂತಾರೆ. ಅದೊಂದೇ ಅವರಿಗೆ ಮೆತ್ತಗೆ ಇರೋ ಖುರ್ಚಿ ಅನಿಸುತ್ತದೆ. ಆದಷ್ಟು ಬೇಗ ಮತ್ತೆ ಮುಖ್ಯಮಂತ್ರಿ ಆಗಬೇಕು ಅನ್ನೋ ಭ್ರಮೆಯಲ್ಲಿದ್ದಾರೆ. ನಾನೇ ಸಿಎಂ ಅಂತಾ ಹೇಳಿಕೊಳ್ಳುತ್ತಾರೆ. ನೀವು ಹೇಳ ಕೂಡದು …

Read More »

ಅಂತರರಾಷ್ಟ್ರೀಯ ವಿಮಾನಯಾನ ನಿಲ್ಲಿಸುವಂತೆ ಪ್ರಧಾನಿಗೆ ಪತ್ರ ಬರೆದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕೋವಿಡ್-19 ಪ್ರಕರಣಗಳ ಹೆಚ್ಚಳವನ್ನು ತಡೆಯಲು ಅಂತರರಾಷ್ಟ್ರೀಯ ವಿಮಾನಯಾನವನ್ನು ನಿಲ್ಲಿಸುವಂತೆ ವಿನಂತಿಸಿದ್ದಾರೆ. WHO ಇತ್ತೀಚೆಗೆ ಗುರುತಿಸಿರುವ ಕಾಳಜಿಯ ಹೊಸ ರೂಪಾಂತರವನ್ನು ಭಾರತಕ್ಕೆ ಪ್ರವೇಶಿಸದಂತೆ ತಡೆಯಲು ನಾವು ಎಲ್ಲವನ್ನೂ ಮಾಡಬೇಕು. ನಮ್ಮ ದೇಶ ಕಳೆದ ಒಂದೂವರೆ ವರ್ಷಗಳಿಂದ ಕರೋನಾ ವಿರುದ್ಧ ಕಠಿಣ ಹೋರಾಟ ನಡೆಸಿದೆ. ಬಹಳ ಕಷ್ಟದಿಂದ ಮತ್ತು ನಮ್ಮ ಲಕ್ಷಾಂತರ ಕೋವಿಡ್ ಯೋಧರ ನಿಸ್ವಾರ್ಥ …

Read More »