Breaking News

Uncategorized

ಬೊಮ್ಮಾಯಿಯವರೇ, ಖಾಲಿ ಡಬ್ಬ ಅಲ್ಲಾಡಿಸಿ ಸದ್ದು ಮಾಡಿದಿರಲ್ಲವೇ? -ಕಾಂಗ್ರೆಸ್ ಟೀಕೆ

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.   ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ …

Read More »

ವಿಧಾನ ಪರಿಷತ್‌ ಚುನಾವಣೆ: ಹಿಂದೆ ಸರಿದ ಜೆಡಿಎಸ್‌

ಶಿವಮೊಗ್ಗ: ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಿದ್ದ ಜೆಡಿಎಸ್‌ ವಿಧಾನಪರಿಷತ್ ಚುನಾವಣೆಯಿಂದ ಹಿಂದೆ ಸರಿದಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದು ಅಚ್ಚರಿ ಮೂಡಿಸಿದ್ದ ಪಕ್ಷ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಅನಿರೀಕ್ಷಿತ ಬೆಳವಣಿಗೆ ಯಲ್ಲಿ ಜೆಡಿಯು ಭದ್ರಾವತಿಯ ಬಿ.ಕೆ. ಶಶಿಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ. ಈ ಬಾರಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಸ್ಪರ್ಧೆ …

Read More »

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆ

ಬೆಳಗಾವಿ : ಡಿಸೆಂಬರ್  13ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಸೂಚನೆ ನೀಡಿದರು.   ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Read More »

ಎಲ್ಲಿ ಹೋಯಿತು ಕಾಲುವೆಗೆ ಸುರಿದ ಕೋಟಿ ಕೋಟಿ ಹಣ

ಬೆಂಗಳೂರು: ‘ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದಡೆಂತಯ್ಯಾ’ ಎಂಬ ಅಕ್ಕಮಹಾದೇವಿಯ ಸಾಲುಗಳಂತೆ ‘ರಾಜಕಾಲುವೆ, ಕೆರೆಗಳ ಒಡಲಿನಲ್ಲೇ ಮನೆಗಳನ್ನು ಕಟ್ಟಿ ಪ್ರವಾಹಕ್ಕೆ ಅಂಜಿದಡೆಂತಯ್ಯಾ’ ಎಂಬಂತಾಗಿದೆ ಬೆಂಗಳೂರಿನ ಕೆಲ ಬಡಾವಣೆಗಳ ಜನರ ಸ್ಥಿತಿ…’ ಮಳೆ ನೀರು ಸರಾಗವಾಗಿ ಹರಿದು ಹೋಗುವುದಕ್ಕೆ ರೂಪಿಸಿರುವ ನಾಲೆಗಳೇ ರಾಜಕಾಲುವೆಗಳು. ಇವುಗಳನ್ನು ಅಭಿವೃದ್ಧಿಪಡಿಸಲು ಹಾಗೂ ನಿರ್ವಹಣೆ ಮಾಡಲು ಬಿಬಿಎಂಪಿ ಪ್ರತಿವರ್ಷ ನೂರಾರು ಕೋಟಿ ಹಣವನ್ನು ವ್ಯಯಿಸುತ್ತಿದೆ. ಆದರೂ, ಮಳೆ ನೀರು ಮನೆಗಳಿಗೆ ನುಗ್ಗುವುದು ತಪ್ಪಿಲ್ಲ. ಕಣಿವೆಗಳು ಮತ್ತು ಪರಿಸರ …

Read More »

ರೈತರ ವಿಭಜಿಸಿದ ಮೋದಿ: ಟಿಕಾಯತ್‌ ಟೀಕೆ

ಲಖನೌ: ಕೇಂದ್ರ ಸರ್ಕಾರವು ರೈತರನ್ನು‍ ವಿಭಜಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್‌ ಟಿಕಾಯತ್‌ ಆರೋಪಿಸಿದ್ದಾರೆ. ‘ರೈತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸರ್ಕಾರವು ರೈತರ ಜತೆ ಮಾತುಕತೆ ನಡೆಸಬೇಕು. ಇಲ್ಲವಾದರೆ ನಾವು ಹೋಗುವುದಿಲ್ಲ’ ಎಂದು ಅವರು ಹೇಳಿದ್ದಾರೆ. ‘ಅವರಿಗೆ ಅರ್ಥ ಮಾಡಿಸಲು ನಮಗೆ ಒಂದು ವರ್ಷ ಬೇಕಾಯಿತು. ನಮಗೆ ಏನು ಬೇಕು ಎಂಬುದನ್ನು …

Read More »

ಪತ್ನಿಯನ್ನು ಕೊಲೆ ಮಾಡಿ ಅನುಮಾನ ಬಾರದರಿಲಿ ಎಂದು ವಿಷ ಸೇವಿಸಿ ಡ್ರಾಮಾ ಮಾಡಿದ್ದ ಗಂಡ

ಪತ್ನಿಯನ್ನು ಕೊಲೆ ಮಾಡಿ ಅನುಮಾನ ಬಾರದರಿಲಿ ಎಂದು ವಿಷ ಸೇವಿಸಿ ಡ್ರಾಮಾ ಮಾಡಿದ್ದ ಗಂಡನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಹೊರ ಬಂದ ಪತಿಯನ್ನು ಪೊಲೀಸರು ಬಲೆ ಹಾಕಿದ್ದಾರೆ.   ಸಂಧ್ಯಾ ಪತಿಯಿಂದಲೇ ಕೊಲೆಯಾದ ಮಹಿಳೆ. ಒಂದೂವರೆ ವರ್ಷದ ಹಿಂದೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಷಡಕ್ಷರಿ ಎಂಬಾತನ ಜೊತೆ ಮದುವೆ ಮಾಡಿಕೊಡಲಾಗಿತ್ತು. ಆದ್ರೆ ಕೆಲವೇ ದಿನಗಳಲ್ಲಿ ಸಂಸಾರದಲ್ಲಿ ಬಿರುಕು ಕಾಣಿಸಿಕೊಂಡಿತ್ತು.   …

Read More »

ಡಾ.ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಯ: ಶೋಕಸಾಗರದಲ್ಲಿ ಭಕ್ತರು

ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಕೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನ ಸ್ವಾಮೀಜಿ (85) ಸೋಮವಾರ ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ, ನರೇಗಲ್, ಜಕ್ಕಲಿ, ಇಟಗಿ, ರೋಣ, ಗಜೇಂದ್ರಗಡ, ನಿಡಗುಂದಿ, ಮಾರನಬಸರಿ, ಬೂದಿಹಾಳ, ಅಬ್ಬಿಗೇರಿ, ನಿಡಗುಂದಿಕೊಪ್ಪ, ಸೂಡಿ, ಕಳಕಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.   ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ …

Read More »

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …

Read More »

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ

K.P.CC ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ, ಅಲ್ಲಿನ ಜನರ ಅಹವಾಲು ಆಲಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ದಕ್ಷಿಣ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಆಲಿಸಿದ್ದ ಅವರು, ಭಾನುವಾರ ಪುನಃ ಕ್ಷೇತ್ರದಲ್ಲಿ ಸಂಚರಿಸಿ ಅಹವಾಲು ಆಲಿಸಿದರು. ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ  ದಕ್ಷಿಣ ಮತಕ್ಷೇತ್ರದ ವಡಗಾಂವ …

Read More »

ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕನ್ನಡ ಸಾಹಿತ್ಯ ಚುನಾವಣೆ ಗೋಕಾಕದಲ್ಲಿ ರಂಗೇರಿದೆ..   ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.   ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ …

Read More »