ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …
Read More »ಮಹಿಳೆಯರು ಇನ್ನೂ 6 ತಿಂಗಳು ಗರ್ಭ ಧರಿಸ ಬಾರದಂತೆ; ಇದು ಜಿಕಾ ಎಫೆಕ್ಟ್..!
ರಾಯಚೂರು: ರಾಜ್ಯದ ರಾಯಚೂರು ಜಿಲ್ಲೆಯಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ನಿನ್ನೆ ವರದಿಯಾಗಿದ್ದು, ಎಲ್ಲರಲ್ಲೂ ಆಂತಕ ಸೃಷ್ಟಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು ಎನ್ನುತ್ತಾರೆ ಮಕ್ಕಳ ತಜ್ಞರು. ಈ ನಡುವೆ ಆರೋಗ್ಯ ಇಲಾಖೆ, ಮುಂದಿನ ಆರು ತಿಂಗಳ ಕಾಲ ಯಾರೂ ಗರ್ಭ ಧರಿಸದಂತೆ, ಸೂಚನೆ ಪ್ರಕಟಿಸಿದೆ. ಜಿಕಾ ವೈರಸ್ ಒಂದೇ ಮಾದರಿಯ ಆರ್ಎನ್ಎ ವೈರಸ್ ಗುಂಪಿಗೆ (ಫ್ಲೇಮಿ ವೈರಸ್ ಗುಂಪು) ಸೇರಿದ್ದಾಗಿದೆ. ಈಡಿಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ …
Read More »ಸಿದ್ಧಾರೂಢರ ದರ್ಶನ ಪಡೆದ ಶಿವಣ್ಣ ದಂಪತಿ
ಹುಬ್ಬಳ್ಳಿ (ಡಿ.14) : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಅವರು ವೇದ ಚಿತ್ರದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇಂದು ಪತ್ನಿ ಗೀತಾ (Geetha) ಜೊತೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ (Siddharoodha Mutt) ಭೇಟಿ ನೀಡಿದ್ರು. ಗುರು ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ (Pooja) ಸಲ್ಲಿಸಿದ್ದಾರೆ. 10 ನಿಮಿಷಗಳ ಸಿದ್ಧಾರೂಡರ ಗದ್ದುಗೆಯ ಬಳಿ ಶಿವಣ್ಣ ದಂಪತಿ (Couple) ಧ್ಯಾನ ಮಾಡಿದ್ರು. ವೇದ ಸಿನಿಮಾ ಪ್ರೀ ರಿಲೀಸ್ …
Read More »ಕರ್ನಾಟಕದ ವಾಹನ ಮೇಲೆ ಕಲ್ಲು ತೂರಾಟ
ನಿನ್ನೆ ತಾನೆ ಮಹಾರಾಷ್ಟ್ರ ಕರ್ನಾಟಕ ಗಡಿ ಸಂಬಂಧ ಕೇಂದ್ರ ಗೃಹ ಸಚಿವ ಅಮೀತ ಷಾ ನೇತೃತ್ವದಲ್ಲಿ ಉಭಯ ರಾಜ್ಯಗಳ ಮೀಟಿಂಗ್ ಮಾಡಿ ಗಡಿ ಖ್ಯಾತೆ ಯಾರು ತೆಗೆಯುವಂತಿಲ್ಲ ಎಂದು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಇಂದು ಮತ್ತೇ ಪುಂಡರು ಪುಂಡಾಟಾ ಮೆರೆದಿದ್ದಾರೆ. ಬುಧವಾರ ರಾತ್ರಿ ಪುಂಡರು ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗೆ ಸೇರಿದ ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಚಳಿಗಾಲ ಅಧಿವೇಶನಕ್ಕಾಗಿ ವಾಹನವೊಂದು ಬಂದಿದೆ. …
Read More »ಮಹದಾಯಿ ವಿಷಯದಲ್ಲಿ ಮಾತನಾಡು ನೈತಿಕತೆ ಕಾಂಗ್ರೆಸ್ ನವರಿಗೆ ಯಿಲ್ಲ:C.M. ಬೊಮ್ಮಾಯಿ
ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದರು. ನಂತರ ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕೆನಾಲ್ ಗೆ ಗೋಡೆ ಕಟ್ಟಿದ್ದೆ ಕಾಂಗ್ರೆಸ್. ಇದು ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ. ಹೋರಾಟದ ವೇಳೆ ರಕ್ತದಲ್ಲಿ ಪತ್ರ ಬರೆದಿದ್ದರಿಂದ ಐದು ಕಿ.ಮೀ ಕೆನಾಲ್ ಅನ್ನು ನಾನು …
Read More »ಎಂ.ಬಿ. ಪಾಟೀಲ್ ಸಿಎಂ ಆಗಲಿ ಅಂತ ಶಬರಿಮಲೆವರೆಗೆ ಪಾದಯಾತ್ರೆ ಹೊರಟ ‘ರಾಜಕುಮಾರ’.!
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ಮುಖ್ಯಮಂತ್ರಿಯಾಗಲಿ ಎಂದು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ರೈತನೋರ್ವ ಶಬರಿಮಲೆಗೆ ಏಕಾಂಗಿಯಾಗಿ ಪಾದಾಯಾತ್ರೆ ಬೆಳೆಸಿದ್ದಾರೆ. ತಿಕೋಟಾ ತಾಲೂಕಿನ ಬಾಬಾನಗರದ ರೈತ ರಾಜಕುಮಾರ ರವೀಂದ್ರ ಹೊನವಾಡ ಪಾದಯಾತ್ರೆ ಕೈಗೊಂಡಿದ್ದಾರೆ. ಕೊರಳಲ್ಲಿ ಎಂ.ಬಿ. ಪಾಟೀಲರ ಭಾವಚಿತ್ರ ಕಟ್ಟಿಕೊಂಡು ತಲೆ ಮೇಲೆ ಇರುಮುಡಿ ಹೊತ್ತು ರಾಜಕುಮಾರ ಪಾದಯಾತ್ರೆ ಕೈಗೊಂಡಿದ್ದಾರೆ. ಒಟ್ಟು 5.5 ಎಕರೆ ಹೊಲ ಹೊಂದಿರುವ ಈ ರೈತ ದ್ರಾಕ್ಷಿ ಬೆಳೆಗಾರರಾಗಿದ್ದಾರೆ. ತಮ್ಮ ಭಾಗ …
Read More »ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಡಿ.ಕೆ.ಶಿ.ಅಖಾಡಕ್ಕೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಮೂಡಿಸುವುದಕ್ಕಾಗಿ ಮಹತ್ವದ ಬಸ್ ಯಾತ್ರೆ ಆಯೋಜನೆ ಮಾಡಲಾಗಿದ್ದು, ಜನವರಿ 3 ರಿಂದ ಕೈ ಕಲಿಗಳು ಅಖಾಡಕ್ಕೆ ಇಳಿಯಲಿದ್ದಾರೆ. ಜನವರಿ 3ರಂದು ಬಸವ ಕಲ್ಯಾಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ಮೂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ ಉಭಯ ನಾಯಕರೂ ಈ ಮಾತನ್ನು ನಿರಾಕರಿಸಿದ್ದು, ಇಬ್ಬರೂ ಒಟ್ಟಾಗಿ ಬಸ್ ಯಾತ್ರೆ …
Read More »ರಾಜ್ಯಕ್ಕೆ ಬಿಜೆಪಿ ವರಿಷ್ಠರ ದಂಡು: ಡಿಸೆಂಬರ್, ಜನವರಿ ಪೂರ್ಣ ಕಾರ್ಯಕ್ರಮಗಳು
ಬೆಂಗಳೂರು: ಗುಜರಾತ್ ಗೆಲುವಿನ ಬಳಿಕ ಬಿಜೆಪಿಯ ದಿಲ್ಲಿ ವರಿಷ್ಠರು ಕರುನಾಡಿನತ್ತ ದಂಡಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದೇ ತಿಂಗಳಿನಿಂದ ಸರಣಿ ಸಮಾವೇಶ, ಯೋಜನೆಗಳ ಉದ್ಘಾಟನೆಗಳ ಮೂಲಕ ರಾಜ್ಯ ಮತದಾರರ ಮನಸೆಳೆಯಲು ಮುಂದಾಗಿರುವ ಬಿಜೆಪಿ ರಾಜ್ಯ ಘಟಕ, ಪಕ್ಷದ ಘಟಾನುಘಟಿ ನಾಯಕರನ್ನು ಆಹ್ವಾನಿಸಿದೆ. ಮುಂದಿನ ಎಪ್ರಿಲ್, ಮೇ ವೇಳೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಎಲ್ಲ ಸಾಧ್ಯತೆಗಳಿವೆ. ಜನವರಿಯಲ್ಲಿ ಮೋದಿ ಜನವರಿ ಮೊದಲ ವಾರದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರಲಿದ್ದಾರೆ. ಆರೋಗ್ಯ ಇಲಾಖೆಯ ಆಯುಷ್ಮಾನ್ …
Read More »ಕೇಂದ್ರ ಸರ್ಕಾರದ ಅಂಗಳಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ
ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಸಿಎಂಗೆ ಸೂಚಿಸಬೇಕು ಎಂದು ಹೇಳಿದೆ. …
Read More »86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್
ಹಾವೇರಿ: 86ನೇ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪ್ರತಿಕೆ ಇದೀಗ ಎಲ್ಲೆಡೆ ವೈರಲ್ ಆಗಿದೆ. ಜನವರಿ 6, 7, 8ರಂದು ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಸುಮ್ಮನೆ ಇದ್ದಾರೆ. ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ …
Read More »
Laxmi News 24×7