Breaking News

Uncategorized

ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು

ರಾಯಚೂರು, ಏ.28- ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ …

Read More »

ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ,

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್​ವೊಂದನ್ನು ಗಿಫ್ಟ್​ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಮ್ಮ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು. ಬೆಳಗಾವಿ, (ಏಪ್ರಿಲ್ 28): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ಮುಗಿದಿದ್ದು, ಇನ್ನುಳಿದ 14 ಕ್ಷೇತ್ರಗಳಿಗೆ …

Read More »

ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್​ಪೋರ್ಟ್​​ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ. ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ …

Read More »

ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

ಕಲಬುರಗಿ: ಅಫಜಲಪುರ ಶಾಸಕ (Congress MLA) ಎಂ.ವೈ ಪಾಟೀಲ್ ಅವರು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದ ವೇಳೆ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ ಘಟನೆ ನಡೆದಿದೆ ಈ ವೇಳೆ ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕೈ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬಡದಾಳ ಗ್ರಾಮಕ್ಕೆ ತೆರಳಿದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ …

Read More »

ರಾಸಲೀಲೆ ವಿಡಿಯೋ ಬಹಿರಂಗ ಬೆನ್ನಲ್ಲೇ ದೇಶ ಬಿಟ್ಟು ಹೋದ ಪ್ರಜ್ವಲ್ ರೇವಣ್ಣ.?

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಇನ್ನೂ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಆಗಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳಾ ಆಯೋಗದ ಪತ್ರ ಹಿನ್ನೆಲೆಯಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ.ಪ್ರಜ್ವಲ್ ದೇಶ ಬಿಟ್ಟು ಹೋದ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.   ಸಂತ್ರಸ್ತರನ್ನು ಮಹಿಳಾ ಆಯೋಗ ಸಂಪರ್ಕಿಸುವ …

Read More »

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ ವರನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.ಶಿವಪ್ರಸಾದ್ ಎಂಬುವವರ ಮದುವೆ ಏಪ್ರಿಲ್ 18ರಂದು ನೆರವೇರಿದೆ. ಮಾರ್ಚ್ 1ರಂದು ಮದುವೆಯ ಆಮಂತ್ರಣ ಪತ್ರ ಮುದ್ರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ …

Read More »

ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಗಡಿ ಜಿಲ್ಲೆ ಬೆಳಗಾವಿಗೆ ಎ.27ರಂದು ರಾತ್ರಿ ಆಗಮಿಸಿ ವಾಸ್ತವ್ಯ ಮಾಡುತ್ತಿರುವುದರಿಂದ ಬೆಳಗಾವಿ ನಗರದೆಲ್ಲೆಡೆ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಮೋದಿ ಗೋವಾದಲ್ಲಿ ಚುನಾವಣ ಪ್ರಚಾರ ಮುಗಿಸಿ ನೇರವಾಗಿ ವಿಮಾನ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ ಬೆಳಗಾವಿಯ ಹೊಟೇಲ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈಗಾಗಲೇ ಭದ್ರತಾ ಪಡೆ ಬೆಳಗಾವಿಗೆ ಬಂದಿಳಿದಿದ್ದು, ಮೋದಿ ವಾಸ್ತವ್ಯ ಮಾಡುತ್ತಿರುವ ಸ್ಥಳದ ಸುತ್ತಲೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸುಮಾರು 50ರಿಂದ 60 ಮಂದಿ ಎಸ್‌ಪಿಜಿಯವರು ಜೊಲ್ಲೆ …

Read More »

ಬಿಜೆಪಿ ಸರ್ಕಾರ ಶ್ರೀಮಂತರ ’16 ಲಕ್ಷ ಕೋಟಿ’ ಸಾಲ ಮನ್ನಾ ಮಾಡಿದೆ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ:ಅಸ್ಸಾಂನ ಬಾರ್ಪೇಟಾದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸರ್ಕಾರವು ಶ್ರೀಮಂತರ 16 ಲಕ್ಷ ಕೋಟಿ ರೂ.ಗಳನ್ನು ಮನ್ನಾ ಮಾಡಿದೆ.ಆದರೆ ಬಡವರಿಗೆ ಅಥವಾ ರೈತರಿಗೆ ಏನನ್ನೂ ನೀಡಿಲ್ಲ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. “ಅವರು ಸರ್ಕಾರಿ ಸ್ವಾಮ್ಯದ ಉದ್ಯಮಗಳಾದ ರೈಲ್ವೆ, ರಸ್ತೆಗಳು, …

Read More »

ಚಾಮರಾಜನಗರದ ಈ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಮರು ಮತದಾನ

ಬೆಂಗಳೂರು: ಚಾಮರಾಜನಗರ ಲೋಕಸಭಾ (Chamarajanagara Loksabha Constituency) ಕ್ಷೇತ್ರದ ಹನೂರು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಏಪ್ರಿಲ್ 29 ಸೋಮವಾರ ಮರು ಮತದಾನ ನಡೆಯಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ (Indiganatta Village) ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು. ಇಷ್ಟು ಅಲ್ಲದೇ ಮತಗಟ್ಟೆಗೆ ನುಗ್ಗಿ ಇವಿಎಂ ಧ್ವಂಸಗೊಳಿಸಿದ್ದರು. ಈ ಹಿನ್ನೆಲೆ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟನೆ ಹೊರಡಿಸಿದೆ. ಚಾಮರಾಜನಗರ: ಮಹದೇಶ್ವರ …

Read More »