Breaking News

Uncategorized

ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಬ್ಯಾನ್ ಮಾಡಿದ್ದರೆ ಓಕೆ. ಆದರೆ ಈ ಬ್ಯಾನ್ ಕೇವಲ ಗಣೇಶ ಚತುರ್ಥಿಗಷ್ಟೇ ಸೀಮಿತವಾದ್ರೆ ಸರಿಯಲ್ಲ. ಅದನ್ನ ನಾನು ವಿರೋಧ ಮಾಡ್ತೇನೆ ಎಂದು  ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ 3 ನೇ ಅಲೆ ಪಕ್ಕಾ ಇದೆ ಅಂತಾ ವರದಿ ಇದೆ. ನಾವು …

Read More »

ಮದುವೆಯಾದ ಬಳಿಕ ಬಲವಂತದ ಸೆಕ್ಸ್ : ಇದನ್ನು ಕಾನೂನು ಬಾಹಿರ ಎನ್ನಲಾಗುವುದಿಲ್ಲ ಎಂದ ಮುಂಬೈ ಕೋರ್ಟ್

ಮುಂಬೈ : ಮುಂಬೈ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಸಂಜಾಶ್ರೀ ಜೆ ಘರಾತ್ ಅವರು ‘ ಪತಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಭೋಗ ಮಾಡಿದ್ದಾರೆ ಎಂದು ಆರೋಪಿಸಿದ ಮಹಿಳೆಯ ದೂರು ಕಾನೂನು ಪರಿಶೀಲನೆಗೆ ನಿಲ್ಲುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಧೀಶರು ಆರೋಪಿಯು ‘ಪತಿಯಾಗಿರುವುದರಿಂದ ಅವನು ಯಾವುದೇ ಕಾನೂನುಬಾಹಿರ ಕೆಲಸವನ್ನು ಮಾಡಿದ್ದಾನೆ ಎಂದು ಹೇಳಲಾಗುವುದಿಲ್ಲ’ ಎಂದು ಹೇಳಿದರು. ಪ್ರಾಸಿಕ್ಯೂಷನ್ ಪ್ರಕಾರ, ಮಹಿಳೆ ಕಳೆದ ವರ್ಷ ನವೆಂಬರ್ ೨೨ ರಂದು ವಿವಾಹವಾದರು. ಮದುವೆಯ ನಂತರ, ತನ್ನ …

Read More »

2ಎ ಮೀಸಲಾತಿ ನೀಡದಿದ್ದರೆ ಅ. 1ರಿಂದ ವಿವಿಧ ಹಂತದ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೆ.15 ರೊಳಗೆ 2ಎ ಮೀಸಲಾತಿ ನೀಡದಿದ್ದರೆ, ಅ 1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸೇರಿದಂತೆ ವಿವಿಧ ಹಂತದ ಹೋರಾಟ ಕೈಗೊಳ್ಳಲು, ಪಂಚಮಸಾಲಿ ಮೀಸಲಾತಿ ಚಳವಳಿಗಾರರ ದುಂಡು ಮೇಜಿನ ಸಭೆ ನಿರ್ಣಯಿಸಿದೆ. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮದಿಂದ ಬೇಂಗಳೂರುವರೆಗೆ ನಡೆಸಿದ ಪಾದಯಾತ್ರೆ ಹಾಗೂ ಹೋರಾಟದ ವೇಳೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ …

Read More »

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಕೋಟಿ ರೂಪಾಯಿಗಳ ಚೆಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದು ಎಂದು ಸಿಎಂ ಬಸವರಾಜ …

Read More »

ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …

Read More »

ಪ್ರೇಮ ವೈಫಲ್ಯ- ವಾಟ್ಸಪ್ ಸ್ಟೇಟಸ್ ಹಾಕಿ, ಪ್ರೇಮಿ ಆತ್ಮಹತ್ಯೆ

ದಾವಣಗೆರೆ: ಪ್ರೀತಿಸಿದ ಯುವತಿ ತನ್ನ ಜೊತೆ ಮದುವೆಯಾಗುವುದನ್ನು ನಿರಾಕರಿಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ನಗರದ ಎಚ್‍ಕೆಆರ್ ವೃತ್ತದ ಲೆನಿನ್‍ನಗರದ ಹೊಸ ಬಡಾವಣೆ ನಿವಾಸಿ ಮಹಾಂತೇಶ್ (24) ಅತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಹಲವು ವರ್ಷಗಳಿಂದ ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್, ಕುಟುಂಬಕ್ಕೆ ಆಧಾರವಾಗಿದ್ದ. ಇದೇ ಗಾರ್ಮೆಂಟ್ಸ್ ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ, …

Read More »

ಕೊಲೆ ಪ್ರಕರಣ : ಎಂಟು ಜನರಿಗೆ ಜೀವಾವಧಿ ಶಿಕ್ಷೆ.

ಗೋಕಾಕ : ಎರಡು ಕುಟುಂಬಗಳ ನಡುವಿನ ಭೂ ವಿವಾದದ ವೈಷಮ್ಯದ ಹಿನ್ನೆಲೆಯಲ್ಲಿ ಗೋಕಾಕ ತಾಲ್ಲೂಕಿನ ಕುಂದರಗಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂಪಾಯಿ ದಂಡ ವಿಧಿಸಿ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಆರೋಪಿಗಳೆಲ್ಲರೂ ಕುಂದರಗಿ ಗ್ರಾಮದವರಾಗಿದ್ದಾರೆ. ಮಹಮ್ಮದಹನೀಪ ದೇಸಾಯಿ(50) ಸಹೋದರರಾದ ಮೆಹಬೂಬ ದೇಸಾಯಿ(47) ಹಾಗೂ ಹಸನಸಾಬ ದೇಸಾಯಿ(57), ಪುತ್ರ ಸೋಹೆಲ್ ದೇಸಾಯಿ(21), …

Read More »

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್​ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್​ ಸಿಂಗ್​ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …

Read More »

ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು.   ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …

Read More »

ಪಿಯುಸಿ ಪಾಸಾದರೂ ಕೇದನೂರ ಯುವಕ ಆತ್ಮಹತ್ಯೆ ..! ಆತ್ಮಹತ್ಯೆಗೆ ಬೇರೊಂದು ಕಾರಣದ ವಾಸನೆ..?

ಬೆಳಗಾವಿ: ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ಹೊರವಲಯದಲ್ಲಿರುವ ರಾಜಾಯಿ ಗಲ್ಲಿಯ 19 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಶಾಲ ಮುರಾರಿ ರಾಜಾಯಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಒಬ್ಬನೇ ಗಂಡು ಮಗನಾಗಿದ್ದ ವಿಶಾಲ ಇತ್ತೀಚಿಗೆ ಪಿಯುಸಿ ಪಾಸಾಗಿದ್ದನು. ಮುಂದಿನ ವಿದ್ಯಾಭ್ಯಾಸಕ್ಕಾಗಿ ತಯಾರಿ ನಡೆಸಿದ್ದನು. ಆದರೆ ಈ ಮದ್ಯೆ ಹಲವು ದಿನಗಳಿಂದ ಏಕಾಂಗಿಯಾಗಿ ಇರುತ್ತಿದ್ದ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೇಂದು ಮೃತರ ತಂದೆ ಕಾಕತಿ ಪೋಲೀಸರಿಗೆ ನೀಡಿರುವ ದೂರದಲ್ಲಿ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಬೇರಾವುದೋ …

Read More »