ಬೆಂಗಳೂರು: ಕೊರೊನಾ ಎರಡನೇ ಅಲೆ ಭಾರತದಲ್ಲಿ ಬಹಳ ವೇಗದಲ್ಲಿ ಮತ್ತು ಬಹಳ ಅಪಾಯಕಾರಿಯಾಗಿ ಹರಡುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಕೊವಿಡ್ ಕಾರಣ ಸಾವು-ನೋವುಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಕಳೆದ ಹಲವು ದಿನಗಳಿಂದ ಕರ್ನಾಟಕವನ್ನು ಲಾಕ್ಡೌನ್ ಮಾಡಲಾಗಿದೆ. ಇದರಿಂದಾಗಿ ದಿನಗೂಲಿ ಜನರು ಮತ್ತು ನಿರ್ಗದಿಕರು ಸೇರಿ ಹಲವು ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಕೆಲವರಿಗೆ ಒಂದೊತ್ತಿನ ಊಟಕ್ಕೆ ಸಹ ಇಲ್ಲದ ಪರಿಸ್ಥಿತಿ ಇದ್ದು, ಇಂತಹರವರ ನೆರವಿಗೆ ಈಗ ದುಬೈನ ಕನ್ನಡಿಗರು ನಿಂತಿದ್ದಾರೆ. ದುಬೈನಲ್ಲಿ ಕಾರ್ಯಾಚರಿಸುತ್ತಿರುವ …
Read More »ಮಾಸ್ಕ್ ಹಾಕದೆ ರೋಗಿಗಳಿಗೆ ಚಿಕಿತ್ಸೆ! ಧೈರ್ಯ ತುಂಬುವ ಯತ್ನ ಎಂದ ಡಾ. ರಾಜು
ಬೆಂಗಳೂರು: ನಗರದ ಮೂಡಲಪಾಳ್ಯ ವೃತ್ತದಲ್ಲಿರುವ ಸಾಗರ್ ಕ್ಲಿನಿಕ್ನಲ್ಲಿ ವೈದ್ಯರು, ಶುಶ್ರೂಷಕರು ಸೇರಿದಂತೆ ಯಾವುದೇ ವೈದ್ಯಕೀಯ ಸಿಬ್ಬಂದಿ ಮಾಸ್ಕ್ ಹಾಕದೆ, ಸ್ಯಾನಿಟೈಸರ್ ಬಳಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ನಾಗರಿಕರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ‘ರೋಗಿಗಳಿಗೆ ಧೈರ್ಯ ತುಂಬಬೇಕು ಎಂದು ಸಾಗರ್ ಕ್ಲಿನಿಕ್ನ ಡಾ. ರಾಜು ಕೃಷ್ಣಮೂರ್ತಿ ಮತ್ತು ಅವರ ಸಿಬ್ಬಂದಿ ಮಾಸ್ಕ್ ಹಾಕದೆ, ಪಿಪಿಇ ಕಿಟ್ ಧರಿಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. …
Read More »ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ
ಚಿತ್ರನಟ ಉಪೇಂದ್ರ ಅವರು ಕೋವಿಡ್ ಸೋಂಕಿನಿಂದ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ್ದಾರೆ. ಈ ಬಗ್ಗೆ ಟ್ವಿಟರಿನಲ್ಲಿ ಬರೆದುಕೊಂಡಿರುವ ‘ ನಿಮ್ಮೆಲ್ಲರರೈತರ ಗಮನಕ್ಕೆ, ನಿಮ್ಮೆಲ್ಲರ ಅದ್ಭುತ ಪ್ರತಿಕ್ರಿಯೆಗೆ ಧನ್ಯವಾದಗಳು. ಬೆಳೆದ ಬೆಳೆ ವ್ಯಾಪಾರವಾಗದೇ ನಾಶವಾಗುವ ಬೆಳೆಯನ್ನು ನಾವು ಕೊಂಡು ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಹಂಚುತ್ತಿದ್ದೇವೆ. ಇದು ವ್ಯಾಪಾರ ಎಂದು ದಯವಿಟ್ಟು ತಿಳಿಯಬೇಡಿ. ಅಂತಹ ಸಂಕಷ್ಟದಲ್ಲಿರುವ ರೈತರು ಮಾತ್ರ ಈ …
Read More »ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ
ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ …
Read More »ಬೆಳಗಾವಿ ಜಿಲ್ಲೆಯಲ್ಲಿ 36 ಪೊಲೀಸರಿಗೆ ಕೊರೋನಾ ಬಂದಿದೆ. ಎಲ್ಲರೂ 2ನೇ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದು, ಯಾರಿಗೂ ಜೀವಾಪಾಯವಿಲ್ಲ
ಜೀವದ ಹಂಗು ತೊರೆದು ಜನರ ರಕ್ಷಣೆಗಾಗಿ ಬೀದಿಯಲ್ಲಿ ನಿಂತು ಹೋರಾಡುತ್ತಿರುವ ಕೊರೋನಾ ಫ್ರಂಟೈ ಲೈನ್ ವಾರಿಯರ್ಸ್ ಪೊಲೀಸರು ಎಷ್ಟು ಸುರಕ್ಷಿತರಾಗಿದ್ದಾರೆ? ಬೆಳಗಾವಿ ನಗರ ಒಂದರಲ್ಲೇ 66 ಪೊಲೀಸರು ಕೊರೋನಾದಿಂದಾಗಿ ಬಳಲುತ್ತಿದ್ದಾರೆ. ಆದರೆ ಅವರೆಲ್ಲ ಜೀವಾಪಾಯದಿಂದ ಪಾರಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ 2 ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೇ ಆಗಿದ್ದಾರೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 36 ಪೊಲೀಸರಿಗೆ ಕೊರೋನಾ ಬಂದಿದೆ. ಎಲ್ಲರೂ 2ನೇ ಡೋಸ್ ವ್ಯಾಕ್ಸಿನ್ …
Read More »ಒಳಿತು ಮಾಡು ಮನುಷ್ಯಾ.. ನೀ ಇರೋದು ಮೂರು ದಿವಸಾ: ಹಿಂಗೆ ನಡೆದುಕೊಳ್ಳುತ್ತಿದ್ದಾರೆ ಹುಬ್ಬಳ್ಳಿ ಪೊಲೀಸರು…!
ಹುಬ್ಬಳ್ಳಿ: ಕೊರೋನಾ ಎಂಬ ಮಹಾಮಾರಿ ಪ್ರತಿಯೊಬ್ಬರ ನೆಮ್ಮದಿಯನ್ನ ಹಾಳು ಮಾಡುವುದಲ್ಲದೇ, ಬದುಕನ್ನ ನಿರ್ಜೀವಿಯನ್ನಾಗಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತೆಯಿದೆ. ತಾನೂ ಇರುವುದೆಷ್ಟು ದಿನ ಎಂಬುದು ಗೊತ್ತೆಯಿಲ್ಲದಿದ್ದರೂ, ಮನುಷ್ಯ ಮಾತ್ರ ಮಾನವೀಯ ಇನ್ನೂ ಮೈಗೂಡಿಸಿಕೊಳ್ಳುತ್ತಿಲ್ಲ. ಆದರೆ, ಸದಾಕಾಲ ಸಾರ್ವಜನಿಕರಿಂದ ವಿನಾಕಾರಣ ಬೈಸಿಕೊಳ್ಳುವ ಪೊಲೀಸರು ಮಾತ್ರ, ತಾವೂ ಎಷ್ಟು ಮಾನವೀಯತೆ ಹೊಂದಿದ್ದೇವ ಎಂಬುದನ್ನ ಸದ್ದಿಲ್ಲದೇ ತೋರಿಸಿಕೊಂಡು ಹೋಗುತ್ತಿದ್ದಾರೆ.. ಹುಬ್ಬಳ್ಳಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಬಂದ ನಂತರ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆಗಳು …
Read More »ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!
ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ. ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ. ಜ್ವರ, ಕೆಮ್ಮು …
Read More »ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು
ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …
Read More »ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …
Read More »ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್ನ ಪೋರಬಂದರ್ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …
Read More »