Breaking News

Uncategorized

ರೈತರ ತಲೆ ಒಡೆಯಿರಿ ಎಂದ ಅಧಿಕಾರಿ ವರ್ಗಾವಣೆ

ಪ್ರತಿಭಟನಾನಿರತ ರೈತರ ಮೇಲೆ ದಾಳಿ ಮಾಡಲು ಆದೇಶಿಸುತ್ತಾ ಕ್ಯಾಮೆರಾದಲ್ಲಿ ಸಿಕ್ಕಿಹಾಕಿಕೊಂಡ ಹರಿಯಾಣಾ ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ‘ರೈತರ ತಲೆಗಳನ್ನು ಒಡೆಯಿರಿ’ ಎಂದು ಪೊಲೀಸ್ ಸಿಬ್ಬಂದಿಗೆ ಆದೇಶ ಕೊಟ್ಟ ಕರ್ನಲ್ ಜಿಲ್ಲೆಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಯುಶ್ ಸಿನ್ಹಾರನ್ನು ಹರಿಯಾಣಾ ಸರ್ಕಾರದ ನಾಗರಿಕ ಸಂಪನ್ಮೂಲ ಮಾಹಿತಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. “ಅದೇನೇ ಆಗಲಿ, ಯಾರೊಬ್ಬರೂ ಈ ಬ್ಯಾರಿಕೇಡ್‌ಗಳನ್ನು ದಾಟಕೂಡದು. ಸ್ಪಷ್ಟವಾಗಿ ಹೇಳುತ್ತೇನೆ, ಈ ಗೆರೆ ದಾಟಲು …

Read More »

ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ ಚುನಾವಣೆ; ಎಲ್ಲೆಲ್ಲಿ ರಜೆ?

ಬೆಂಗಳೂರು, ಆಗಸ್ಟ್ 31; ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆ ಹಾಗೂ ಪಟ್ಟಣ ಪಂಚಾಯಿತಿಗಳ ಚುನಾವಣೆ ಘೋಷಣೆ ಮಾಡಿದೆ. ಸೆಪ್ಟೆಂಬರ್ 3ರ ಶುಕ್ರವಾರ ಮತದಾನ ನಡೆಯಲಿದೆ. ಮತದಾನ ನಡೆಯುವ ಪ್ರದೇಶಗಳಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೆಪ್ಟೆಂಬರ್ 3ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.   ಚುನಾವಣೆ ನಡೆಯುವ ವಾರ್ಡ್‌ನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ …

Read More »

ಮಹಿಳೆಗೆ ಚುಡಾಯಿಸಿದ ಆರೋಪ.. ಸ್ಥಳೀಯರಿಂದ ಪರಿಸರವಾದಿ ಡಿ.ವಿ.ಗಿರೀಶ್ ಮೇಲೆ ಹಲ್ಲೆ

ಚಿಕ್ಕಮಗಳೂರು: ಮಹಿಳೆಗೆ ಚುಡಾಯಿಸಿದರೆಂದು ಆರೋಪಿಸಿ ಪರಿಸರವಾದಿ ವೈಲ್ಡ್ ಕ್ಯಾಟ್ – ಸಿ ಸಂಸ್ಥೆಯ ಡಿ.ವಿ.ಗಿರೀಶ್ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಕಂಬಿಹಳ್ಳಿ ಗ್ರಾಮದ ಮಹಿಳೆಯೊಬ್ಬರಿಗೆ ಚುಡಾಯಿಸಿದ್ದಾರೆ ಎಂದು ಆರೋಪಿಸಿ ಕೆಲ ಸ್ಥಳೀಯರು ಡಿ.ವಿ.ಗಿರೀಶ್ ಹಾಗೂ ಅವರ ಸ್ನೇಹಿತರು ತೆರಳುತ್ತಿದ್ದ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಅವರ ಜೊತೆಯಲ್ಲಿದ್ದವರಿಗೂ ಥಳಿಸಿದ್ದಾರೆ ಎಂದು ಕೆಲ ಸ್ಥಳೀಯರು ಹೇಳುತ್ತಿದ್ದಾರೆ. ಇನ್ನೂ ಕೆಲ …

Read More »

ಮಹಾಮಾರಿ ಕೋವಿಡ್‌ಗೆ ಕುಖ್ಯಾತ ರೌಡಿಶೀಟರ್‌ ಬಾಂಬೆ ರವಿ ಬಲಿ

ಬೆಂಗಳೂರು: ಕೊಲೆ, ಕೊಲೆ ಯತ್ನ ಹಾಗೂ ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ವರ್ಷಗಳಿಂದ ಭೂಗತನಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಕೊರೊನಾಗೆ ಬಲಿಯಾಗಿದ್ದಾನೆ‌. ಹಲವು ವರ್ಷಗಳಿಂದ ದಕ್ಷಿಣ ಆಫ್ರಿಕಾದಲ್ಲಿ ತಲೆಮರೆಸಿಕೊಂಡಿದ್ದ ಬಾಂಬೆ ರವಿಗೆ ಕೋವಿಡ್‌ ಸೋಂಕು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ‌. ಮೃತ ರೌಡಿಶೀಟರ್‌ ಹಲವು ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ತಲೆನೋವಾಗಿದ್ದ. ಭೂಗತನಾಗಿದ್ದುಕೊಂಡೇ ನಗರದಲ್ಲಿ ರೌಡಿ ಚಟುವಟಿಕೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದ. ಕಳೆದ …

Read More »

ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿಗೆ ಭಾಗವಹಿಸಬೇಕು, ಶಿಕ್ಷಣ ಹಾಗೂ ಕ್ರೀಡೆಗೆ ಒತ್ತು ನೀಡಿ ನಮ್ಮ ನಾಡಿಗೆ ಕೀರ್ತಿ ತರಬೇಕು ಎಂದು ರಾಹುಲ್ ಜಾರಕಿಹೊಳಿ.ಹೇಳಿದರು

ಗೋಕಾಕ: ಅಗಸ್ಟ್ 28 ರಿಂದ 30 ರವರೆಗೆ ನವದೆಹಲಿಯಲ್ಲಿ ನಡೆದಂತಯ ಯೂತ್ ಗೇಮ್ಸ್ ಫಡೇರೆಷಣ ಆಫ್ ಇಂಡಿಯಾ ದ ಯುತ್ ಗೇಮ್ಸ್ ಆಲ್ ಇಂಡಿಯಾ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಗೋಕಾಕದ ಯುವಕರು ವಿಜೇತರಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಇಲ್ಲಿನ ಹಿಲ್ ಗಾರ್ಡನ್ ಕಛೇರಿಯಲ್ಲಿ ಬುಡೊಬಾಸ್ ಇಂಟರ್ ನ್ಯಾಶನಲ್ ಕರಾಟೆ ಡು ಅಕಾಡೆಮಿ ಗೋಕಾಕದ ತರಬೇತಿಗಾರರಾದ ದುರ್ಯೋಧನ ಕಡಕೋಳ ಹಾಗೂ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಮಹೇಶ್ …

Read More »

ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.   ಮತದಾನ ದಿನದಂದು ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅರೆ …

Read More »

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಬೆಂಗಳೂರು (ಸೆ.01): ರಾಜ್ಯ ಕಾಂಗ್ರೆಸ್‌ಗೆ ಪ್ರತ್ಯೇಕ ಸಂವಿಧಾನ ರಚಿಸಲು ಮುಂದಾಗಿದ್ದು, ಇದರ ಹೊಣೆಯನ್ನು ಹಿರಿಯ ಮುಖಂಡ ವಿ.ಎಸ್‌. ಉಗ್ರಪ್ಪ ಅವರಿಗೆ ನೀಡಲಾಗಿದೆ. ಅದು ಸಿದ್ಧವಾದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ಅದರಂತೆ ನಡೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮಂಗಳವಾರ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಲಾಗಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ರಾಜ್ಯ ಕಾಂಗ್ರೆಸ್‌ ಸಂವಿಧಾನ ಯಾವ ರೀತಿ ಇರಬೇಕೆಂದು …

Read More »

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಏಳು ದಿನಗಳ ಬಳಿಕ ಅಂತೂ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ.

ಈಗಾಗಲೇ ಗರಿಷ್ಟ ಪ್ರಮಾಣದಲ್ಲಿರುವ ಪೆಟ್ರೋಲ್ ದರವು ಈ ಹಿಂದೆ ಎರಡು ಬಾರಿ ಕಡಿತಗೊಂಡ ಬಳಿಕ ಬುಧವಾರ (ಸೆ. 01) ಇಳಿಕೆಯಾಗಿದೆ.   ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 15 ಪೈಸೆ ಇಳಿಕೆಗೊಂಡು 101.34 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 15 ಪೈಸೆ ಕುಸಿದು 88.77 ರೂಪಾಯಿಗೆ ಮುಟ್ಟಿದೆ.   ಪ್ರಪಂಚದಾದ್ಯಂತದ ಡೆಲ್ಟಾ ರೂಪಾಂತರ ಪ್ರಕರಣಗಳ ತೀವ್ರತೆಯ ಕಾರಣದಿಂದಾಗಿ ಬೇಡಿಕೆಯ ಕಾಳಜಿ ಹೆಚ್ಚಾಗಿದ್ದು, ತೈಲ ಉತ್ಪಾದನಾ ಸಂಸ್ಥೆಗಳು ಕಚ್ಚಾ ತೈಲ …

Read More »

ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಡಾ ಎಂಆರ್ ರವಿ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ …

Read More »

ಮಂದಿ ಶಂಕಿತ ಡೆಂಗ್ಯೂಗೆ ಬಲಿಯಾಗಿರುವ ಕಾರಣ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಕಾರಣವಾಗಿ ಹೊರಹೊಮ್ಮಿದೆ

ಲಕ್ನೋ, ಸೆಪ್ಟೆಂಬರ್‌ 01: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂನಿಂದ ಕಳೆದ ಹತ್ತು ದಿನದಲ್ಲೇ 53 ಮಂದಿ ಸಾವನ್ನಪ್ಪಿದ್ದು ಈ ಪೈಕಿ 45 ಮಂದಿ ಮಕ್ಕಳಾಗಿದ್ದಾರೆ. ನಗರ ಒಂದರಲ್ಲೇ 53 ಮಂದಿ ಶಂಕಿತ ಡೆಂಗ್ಯೂಗೆ ಬಲಿಯಾಗಿರುವ ಕಾರಣ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಕಾರಣವಾಗಿ ಹೊರಹೊಮ್ಮಿದೆ.   ಫಿರೋಜಾಬಾದ್‌ನ ಮೆಡಿಕಲ್‌ ಕಾಲೇಜಿನಲ್ಲಿ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಫಿರೋಜಾಬಾದ್‌ನ ಮೆಡಿಕಲ್‌ ಕಾಲೇಜಿನಲ್ಲಿ ಹಲವಾರು ಮಕ್ಕಳು ಜ್ವರದಿಂದ ಬಳಲುತ್ತಿದ್ದು ಪೋಷಕರು …

Read More »