Breaking News

Uncategorized

ಸತ್ತವರ ಪಟ್ಟಿಯಲ್ಲೆ ಹೆಸರು ದಾಖಲಿಸದೆ ಶವ ನೀಡಿದ ಚಾಮರಾಜನಗರ ಆಸ್ಪತ್ರೆ

ಚಾಮರಾಜನಗರ: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದ ಘಟನೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಆದರೆ ಈ ದುರಂತ ಮತ್ತೆ ಮರುಕಳಿಸಿದೆ. ಆಕ್ಸಿಜನ್‌ ಕೊರತೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ತಪ್ಪನ್ನು ಮುಚ್ಚಿಹಾಕಲು ರಾತ್ರೋರಾತ್ರಿ ಸಂಬಂಧಿಕರಿಗೆ ಶವ ಕೊಟ್ಟು ಕೈ ತೊಳೆದುಕೊಂಡಿದ್ದಾರೆ ಆಸ್ಪತ್ರೆ ಅಧಿಕಾರಿಗಳು. 36 ವರ್ಷ ವಯಸ್ಸಿನ ಕೊಳ್ಳೇಗಾಲ ತಾಲೋಕು ಮುಡಿಗುಂಡಂ ಗ್ರಾಮದ ಜಯಶಂಕರ್ ಮೃತಪಟ್ಟಿದ್ದು, ಅಚ್ಚರಿಯ ಸಂಗತಿ ಎಂದರೆ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಪಟ್ಟಿಯಲ್ಲಿ ಇವರ ಹೆಸರನ್ನು ಸೇರಿಸಿಲ್ಲ. ಮಧ್ಯರಾತ್ರಿಯೇ ಶವ ತೆಗೆದುಕೊಂಡು …

Read More »

ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕ್ ನಲ್ಲಿ ನಾಳೆ ಪ್ರತಿಭಟನೆ: ಸತೀಶ ಜಾರಕಿಹೊಳಿ

ಗೋಕಾಕ: ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕ್ ನಲ್ಲಿ ನಾಳೆ ಪ್ರತಿಭಟನೆ ನಡೆಯಲಿದ್ದು, ನಾನು ಕೂಡ ಭಾಗವಹಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ದಿನ ತೈಲ ಬೆಲೆಯನ್ನು ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ, ಪಕ್ಷದಿಂದ ದೇಶಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ. …

Read More »

ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?

ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ       ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …

Read More »

ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ.   ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.   14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, …

Read More »

: ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ ‘ ಉಚಿತ ಲಸಿಕೆ ನೀಡಿ..ಇಲ್ಲವೇ ಅಧಿಕಾರ ಬಿಡಿ’

ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ #ಉಚಿತ_ಲಸಿಕೆ_ಕೊಡಿ_ಇಲವೇ_ ಅಧಿಕಾರ ಬಿಡಿ ಎಂದು ಕೇಂದ್ರ ಸರಕಾರದ ವಿರುದ್ಧ ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು.   *ಹಕ್ಕೊತ್ತಾಯಗಳು*   *1. ಉಚಿತ ಲಸಿಕೆ*   ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ …

Read More »

ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ನವದೆಹಲಿ: ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಆರೋಗ್ಯ ಸೇತು ಆಯಪ್‌ನ ಅಧಿಕೃತ ಟ್ವೀಟರ್‌ ಖಾತೆಯಿಂದ ಮಾಹಿತಿ ನೀಡಲಾಗಿದೆ. ಈ ಅವಕಾಶದ ಅನ್ವಯ ಪ್ರಮಾಣಪತ್ರದಲ್ಲಿ ಹೆಸರು, ಜನ್ಮವರ್ಷ, ಲಿಂಗದಲ್ಲಿ ಆಗಿರುವ ಯಾವುದೇ ತಪ್ಪು ಮಾಹಿತಿಯನ್ನು ಸ್ವತಃ, ಲಸಿಕೆ ಪಡೆದವರು ಬದಲಾವಣೆ ಮಾಡಿಕೊಳ್ಳಬಹುದು. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣ ಸೇರಿದಂತೆ ನಾನಾ ವಿಷಯಗಳಿಗೆ ಕೋವಿಡ್‌ ಪ್ರಮಾಣ …

Read More »

ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ

  ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …

Read More »

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.   ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?   ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.   ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:   ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …

Read More »

ಮುಂಬೈ ಮಳೆಗೆ ಕಟ್ಟಡ: ಕುಸಿತ ಹನ್ನೊಂದು ಸಾವು

ಮುಂಬೈ : ಮುಂಬೈನಲ್ಲಿ ಸುರಿಯುತ್ತಿರುವ ಸತತ ಮಾನ್ಸೂನ್ ಮಳೆಯಿಂದ ಮುಂಬೈ ನಗರದ ಕಟ್ಟಡವೊಂದು ಕುಸಿದು ಬಿದ್ದಿದೆ. ಮಲಾಡ್ West ನ ಈ ಕಟ್ಟಡ ಕುಸಿತಕ್ಕೆ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 15 ಹೆಚ್ಚು ಜನರನ್ನು ಇದುವರೆಗೆ ರಕ್ಷಿಸಲಾಗಿದೆ. ಕಟ್ಟಡ ಕುಸಿಯುತ್ತಿದ್ದಂತೆ ಬದಿಗೆ ಇರುವ 3 ಕಟ್ಟಡಗಳಲ್ಲಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಕ್ಷಿಪ್ರಗತಿಯಲ್ಲಿ ಸಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮುಂಬೈ, ಥಾಣೆ, ಪಾಲ್ಘರ್ …

Read More »