Breaking News

Uncategorized

ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ

ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ‌ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …

Read More »

ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿ ಕೊರೋನಾ ಭಾರಿ ಏರಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1875 ಜನರಿಗೆ ಸೋಂಕು ತಗುಲಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.20 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 29,06,999 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,46,244 ಜನ ಗುಣಮುಖರಾಗಿದ್ದು, 36,587 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 409 ಜನರಿಗೆ ಸೋಂಕು ತಗುಲಿದೆ. 377 ಮಂದಿ ಬಿಡುಗಡೆಯಾಗಿದ್ದು, 8553 ಸಕ್ರಿಯ ಪ್ರಕರಣಗಳಿದ್ದು, …

Read More »

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ‌ ವನಮಹೋತ್ಸವ

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದೆಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ …

Read More »

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …

Read More »

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ

  ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …

Read More »

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.  

*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.   *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ.   *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …

Read More »

ಯಾವುದೇ ಸಂಘದ ಅಭಿವೃದ್ಧಿಯಲ್ಲಿ ಅಧ್ಯಕ್ಷರು, ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ: ಸತೀಶ ಜಾರಕಿಹೊಳಿ

        ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು.   ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು.   ಯಾವುದೇ ಸಂಘ …

Read More »

ತನ್ನ ವಿರುದ್ಧವೇ ತನಿಖೆ ನಡೆಸಲು ಲೋಕಾಯುಕ್ತರಿಗೆ ಪತ್ರ ಬರೆದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, : ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದು, ಇದು ಸಾಮಾನ್ಯ ರಾಜಕಾರಣಿಯ ಲಕ್ಷಣ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಟಾ ಶ್ರೀನಿವಾಸ ಪೂಜಾರಿಯವರ ಅರು ಕೋಟಿಯ ಮನೆ ಅಂತಾ ಸುದ್ದಿ …

Read More »

`ತೆನೆ’ ಇಳಿಸಿ `ಕೈ’ ಹಿಡಿದ ಮಧು ಬಂಗಾರಪ್ಪ..

ಹುಬ್ಬಳ್ಳಿ : ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಬಾವುಟ ಹಿಡಿದರು. ಅಲ್ಲದೆ ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ …

Read More »

ಸಂಪುಟ ರಚನೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ, ಸಲಹೆಯನ್ನು ನೀಡಲ್ಲ -ಬಿಎಸ್​ವೈ

ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ರವಿ ಮನೆಗೆ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಬಿಎಸ್​​​ವೈ ಅವರು ಮೃತ ಅಭಿಮಾನಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಗಣೇಶ ಚತುರ್ಥಿಯ ನಂತರ ರಾಜ್ಯದ ತುಂಬ ಪ್ರವಾಸ ಮಾಡಲಿದ್ದೇನೆ ಎಂದಿದ್ದಾರೆ. ಪಕ್ಷವನ್ನು ಬಲ …

Read More »