Breaking News

Uncategorized

ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ: ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಚರ್ಚೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಮನಸ್ಸಿಗೆ ಬೇಸರವಾಗಿದೆ. ಅಲ್ಲದೇ ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಯುವುದರಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಯಡಿಯೂರಪ್ಪರಿಗೆ ವಯಸ್ಸಾದ್ರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಕ್ಕೆ ವಯಸ್ಸು ಅಡ್ಡಿ ಬಂದಿಲ್ಲ. ಹೈಕಮಾಂಡ್ ಮಟ್ಟದಲ್ಲೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ. …

Read More »

ಮಗಳ ಜೊತೆ ಅಕ್ರಮ ಸಂಬಂಧ ಶಂಕೆ – ಯುವಕನ ಕೊಲೆಗೆ ಯತ್ನ

ಚಿಕ್ಕಬಳ್ಳಾಪುರ: ತನ್ನ ಮಗಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತ ತಂದೆಯೋರ್ವ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರ ಗೌರಿಬಿದನೂರು ತಾಲೂಕಿನ ಕಲ್ಲಿನಾಯಜನಹಳ್ಳಿ ಬಳಿ ನಡೆದಿದೆ. ಬಸವಾಪುರ ಗ್ರಾಮದ ಫೀರೋಜ್ ಖಾನ್(26) ಹಲ್ಲೆಗೊಳಗಾದವ. ಕಲ್ಲಿನಾಯಕನಹಳ್ಳಿಯ ಗಂಗಾಧರ್ ಎಂಬಾತ ಹಲ್ಲೆ ಮಾಡಿದವ. ಅಂದಹಾಗೆ ತನ್ನ ಮಗಳ ಜೊತೆ ಫಿರೋಜ್ ಖಾನ್ ಅಕ್ರಮ ಸಂಬಂಧ ಇಟ್ಟುಕೊಂಟಿದ್ದಾನೆ ಅಂತ ಅರಿತು ಗಂಗಾಧರ ದೊಡ್ಡಬಳ್ಳಾಪುರಕ್ಕೆ ಹೋಗಬೇಕು ಬಾ ಅಂತ ಫಿರೋಜ್ ಖಾನ್ ನನ್ನ ಕರೆಸಿಕೊಂಡಿದ್ದಾನೆ. …

Read More »

ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದೆ ಎನ್ನುವುದು ಕೇವಲ ಮಾಧ್ಯಮ‌ಗಳ ಸೃಷ್ಟಿ: ಯತ್ನಾಳ

ವಿಜಯಪುರ: ಬಿ.ವೈ. ವಿಜಯೇಂದ್ರ ದೆಹಲಿಗೆ ಹೋಗಿದ್ದು ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆ ಎದುರಿಸಲೇ ಹೊರತು, ಪಕ್ಷದ ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಲು ಹೋಗಿದ್ದರು ಎಂಬುದು ಸುಳ್ಳು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರಿಷಸ್‌ನಲ್ಲಿ ಅಕ್ರಮವಾಗಿ ಇಟ್ಟಿರುವ ಹಣ ಎಲ್ಲಿಂದ ಬಂತು? ‘ಕಿಯಾ’ ಕಂಪನಿಗೆ ವರ್ಗಾವಣೆ ಆಗಿದ್ದು ಹೇಗೆ? ಎನ್ನುವ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಜಯೇಂದ್ರ …

Read More »

12 ಬಾರಿ ಕೊಚ್ಚಿ ಕೊಂದವನ ಸುಳಿವು ನೀಡಿದ ಚಪ್ಪಲಿ!

ಪಾರ್ಕ್ ನಲ್ಲಿ ಮಲಗುವ ವಿಷಯದಲ್ಲಿ ಉಂಟಾದ ಮನಸ್ತಾಪದಿಂದ ಚಿಂದಿ ಆಯುವ ವ್ಯಕ್ತಿಯನ್ನು 12 ಬಾರಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ವ್ಯಕ್ತಿಯನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಬಾಬುಸಪಾಳ್ಯ ಬಿಡಿಎ ಪಾರ್ಕ್ ನಲ್ಲಿ ಗುಲ್ಬರ್ಗಾ ಮೂಲದ ವ್ಯಕ್ತಿ ಅಶೋಕ್ (43) ಹತ್ಯೆಯಾಗಿದ್ದು, ಮಾಲೂರು ಮೂಲದ ಸತೀಶ್ (30) ಬಂಧಿತ ಆರೋಪಿ. ಅಶೋಕ್ ಮತ್ತು ಸತೀಶ್ ಇಬ್ಬರೂ ಚಿಂದಿ ಆಯುವವರಾಗಿದ್ದು, ಗುಲ್ಬರ್ಗಾ ಮೂಲದ ವ್ಯಕ್ತಿ ಅಶೋಕ್ ಮೊದಲಿನಿಂದಲೂ ಬಾಬುಸಪಾಳ್ಯದ ಪಾರ್ಕ್ ನಲ್ಲಿ ಮಲಗುತ್ತಿದ್ದ. …

Read More »

ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಬೀಜ, ಗೊಬ್ಬರ ಉಚಿತವಾಗಿ ವಿತರಿಸಿ: ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ‘ಸರ್ಕಾರದ ನೀತಿಗಳು ಮತ್ತು ಕೋವಿಡ್ ಮತ್ತಿತರ ಕಾರಣಗಳಿಂದ ರೈತರ ಬಳಿ ಬಿತ್ತನೆ ಚಟುವಟಿಕೆಗೆ ಹಣ ಇಲ್ಲದಂತಾಗಿದೆ. ಹೀಗಾಗಿ ರೈತರಿಗೆ ಬೀಜ, ಗೊಬ್ಬರ ಉಚಿತವಾಗಿ ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ‘ಸಾಲ ವಿತರಣೆ ತಕ್ಷಣ ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, ತೊಗರಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಸೋಯಾ, ಶೇಂಗಾ ಮುಂತಾದ ಎಣ್ಣೆ ಬೀಜಗಳನ್ನು ಸಂಗ್ರಹಿಸಿ, …

Read More »

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ. ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು …

Read More »

ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ

  ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.     ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

Read More »

ರಾಜ್ಯದಲ್ಲಿ KSRTC ಟ್ರೇಡ್​ ಮಾರ್ಕ್​​ ನಿಷೇಧ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ”ಕೆಎಸ್​​ಆರ್​​ಟಿಸಿ” ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧ ಬಂದಿಲ್ಲ ಅಂತಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿ ಕೆಎಸ್​ಆರ್​​ಟಿಸಿ ಸ್ಪಷ್ಟನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ”ಕೆಎಸ್‌ಆರ್‌ಟಿಸಿ” ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ಸ್​ ರಿಜಿಸ್ಟರಿ ಅವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ …

Read More »

ಡಿಕೆಶಿ ಹೆಲಿಕಾಪ್ಟರ್ ನೆಲಮಂಗಲದಲ್ಲಿ ಲ್ಯಾಂಡಿಂಗ್..!

ನೆಲಮಂಗಲ: ಮಳೆ ಕಾರಣದಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಾರ್ ಇದ್ದ ಹೆಲಿಕಾಪ್ಟರ್ ಅನ್ನು ನೆಲಮಂಗಲದಲ್ಲಿ ಲ್ಯಾಂಡ್ ಮಾಡಲಾಗಿದೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.ಕೆ ಶಿವಕುಮಾರ್ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ದಾವಣೆಗೆರೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಿದ್ದರು. ಹೀಗೆ ಕಾರ್ಯಕ್ರಮ ಮುಗಿಸಿ ದಾವಣಗೆರೆಯಿಂದ ಬೆಂಗಳೂರಿಗೆ ವಾಪಾಸ್ ಆಗುವ ಸಂದರ್ಭದಲ್ಲಿ ಮಳೆ ಆರಂಭವಾಗಿದೆ. ಮಳೆ ಕಾರಣಕ್ಕೆ ಲ್ಯಾಂಡಿಂಗ್ ಗೆ ಹೆಚ್ ಎಎಲ್ ನಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ನೆಲಮಂಗಲದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ …

Read More »