Breaking News

Uncategorized

ಸುಮಾರು 50 ಲಕ್ಷ ರೂಪಾಯಿಗಳಲ್ಲಿ 60 ಬೆಡ್ ಗಳ ಉಚಿತ ಕೋವಿಡ್ ಕೇರ್ ಸೆಂಟರ್

ಬೆಳಗಾವಿ: ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ  ತಿಳಿಸಿದರು. ಕೊರೊನಾ ಮಹಾಮಾರಿಯಿಂದ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ …

Read More »

ಚೋಪ್ರಾ ರಚಿಸಿದ ಟೀಮ್‌ ಇಂಡಿಯಾ ತಂಡಕ್ಕೆ ಶಿಖರ್‌ ಧವನ್‌ ನಾಯಕ

ಹೊಸದಿಲ್ಲಿ: ಟೀಮ್‌ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿರುವಾಗಲೇ ಭಾರತದ ಮತ್ತೂಂದು ತಂಡ ಶ್ರೀಲಂಕಾಕ್ಕೆ ತೆರಳಿ ಸೀಮಿತ ಓವರ್‌ಗಳ ಸರಣಿಯನ್ನಾಡುವ ಸುದ್ದಿ ಭಾರೀ ಸಂಚಲನ ಮೂಡಿಸಿದೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ 17 ಸದಸ್ಯರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆಂದು ರಚಿಸಿದ್ದಾರೆ. ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರನ್ನು ನಾಯಕನನ್ನಾಗಿ ಆರಿಸಿದ್ದಾರೆ. ಹಾರ್ದಿಕ್‌ ಪಾಂಡ್ಯ ಉಪನಾಯಕರಾಗಿದ್ದಾರೆ. ಚೋಪ್ರಾ ತಂಡ: ಶಿಖರ್‌ ಧವನ್‌ (ನಾಯಕ), ಪೃಥ್ವಿ ಶಾ, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ …

Read More »

She for Society: ಕೊರೋನಾ ವಾರಿಯರ್ಸ್ ಆದ ಬೆಂಗಳೂರಿನ ಮಹಿಳಾ ಬೈಕರ್ಸ್; ಸೋಂಕಿತರಿಗೆ ಉಚಿತ ಆಂಬುಲೆನ್ಸ್ ಸೇವೆ…

ಕೊರೋನಾ ವಿರುದ್ಧದ ಹೋರಾಟಕ್ಕೆ ಹಲವಾರು ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಅವುಗಳಲ್ಲಿ ಬೆಂಗಳೂರಿನ ಮಹಿಳಾ ಬೈಕರ್‌ಗಳ ತಂಡ ಕೂಡ ಒಂದು. ಹೌದು, ಕಳೆದ ಒಂದು ವಾರದಿಂದ ಉಚಿತ ಆಂಬುಲೆನ್ಸ್ ಸೇವೆ ನೀಡುತ್ತಿರುವ ಈ ಲೇಡಿ ಬೈಕರ್ಸ್ ಗ್ಯಾಂಗ್ ಎಲ್ಲರಿಗೂ ಮಾದರಿಯಾಗಿದೆ. ‘ಶೀ ಫಾರ್ ಸೊಸೈಟಿ’ ಸೈನಿಕರ ಹಾಗೂ ಸೈನಿಕರ ಕುಟುಂಬಗಳಿಗೆ ನೆರವಾಗಲು ಕೆಲ ವರ್ಷಗಳ ಹಿಂದೆ ಪ್ರಾರಂಭವಾದ ತಂಡ. ಹರ್ಷಿಣಿ ವೆಂಕಟೇಶ್ ಸಾರಥ್ಯದಲ್ಲಿ ಹತ್ತು ಜನರ ಮಹಿಳಾ ಬೈಕರ್‌ಗಳು ಸೇರಿ …

Read More »

ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟ ಸ್ಥಗಿತ

ಪಣಜಿ, : ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.ಗೋವಾದಲ್ಲಿರುವ ಏಕಮಾತ್ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಾಬೊಲಿಮ್‌ನಲ್ಲಿ ಸೆಪ್ಟೆಂಬರ್ ವರೆಗೆ ರಾತ್ರಿ ಹೊತ್ತು ವಿಮಾನ ಸಂಚಾರ ನಿಷೇಧಿಸಲಾಗಿದೆ. ಟಾಟಾ ಪವರ್ ಎಸ್‌ಡಿ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ, ಸಂಜೆಯ ಸಮಯದಲ್ಲಿ ಕಾಮಗಾರಿಯನ್ನು ನಡೆಸುತ್ತಿದೆ. ರಾತ್ರಿ ಹೊತ್ತು ವಿಮಾನ ಹಾರಾಟ ನಿಷೇಧಿಸುವುದರಿಂದ ನಾಗರಿಕ ವಿಮಾನ ಕಾರ್ಯಾಚರಣೆಗೆ ಅಷ್ಟೊಂದು ತೊಂದರೆಯಾಗುವುದಿಲ್ಲ ಎಂದು ಗೋವಾ ಏರ್‌ಪೋರ್ಟ್ ನಿರ್ದೇಶಕ ಗಗನ್ ಮಲಿಕ್ ಹೇಳಿದ್ದಾರೆ. ನವೀಕರಣ ನಡೆಯುತ್ತಿರುವ …

Read More »

ಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಎಂ.ಬಿ. ಪಾಟೀಲ್ ಪ್ರಶ್ನೆ

ವಿಜಯಪುರ: ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿಯವರು ಈ ಹಿಂದೆ ಯಾವ ಮಹಾರಾಜರು ಮಾಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ‌. …

Read More »

ಇಂದಿರಾ ಕ್ಯಾಂಟೀನ್’ನಲ್ಲಿ ‘ಉಚಿತ ಊಟ’ ಕೊಡ್ತಾರೆ ಅಂತ ಹೋದವರಿಗೆ ಕಾದಿತ್ತು ಶಾಕ್ : ‘ಕಟ್ಟಿಕೊಟ್ಟ ಪೊಟ್ಟಣ’ದಲ್ಲಿ ಇದ್ದ ಊಟ ಎಷ್ಟು ಗೊತ್ತಾ.?

ಬೆಂಗಳೂರು : ಇಂದಿನಿಂದ ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಉಚಿತ ಊಟದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಬೆಳಿಗ್ಗೆ ತಿಂಡಿಗಾಗಿ ಇಂದಿರಾ ಕ್ಯಾಂಟೀನ್ ಮುಂದೆ ನೂರಾರು ಜನರು ಕ್ಯೂ ಕೂಡ ನಿಂತು ಇಂದಿರಾ ಕ್ಯಾಂಟೀನ್ ನೀಡುವಂತ ಆಹಾರದ ಪೊಟ್ಟಣವನ್ನು ಪಡೆದು, ಖುಷಿಯಿಂದ ತೆರಳಿ, ಓಪನ್ ಮಾಡಿದ ಅನೇಕರಿಗೆ, ಶಾಕ್ ಕಾದಿತ್ತು. ಅದೇನ್ ಅಂತ ಮುಂದೆ ಓದಿ.. ನಗರದಾಧ್ಯಂತ …

Read More »

ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ

ಮಂಗಳೂರು: ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಹಬ್ಬ ಆಚರಿಸುವಂತೆ ಉಳ್ಳಾಲ ಖಾಜಿ ಸೈಯದ್​ ಕೂರತ್ ತಂಗಲ್ ಘೋಷಿಸಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ದುಬೈನಲ್ಲಿ ಗುರುವಾರದಂದು ರಂಜಾನ್ ಹಬ್ಬ ಆಚರಿಸಲಾಗುತ್ತದೆ. ಈ ಬಾರಿ ಕೊವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕಾರಣ ಈದುಲ್ ಫಿತ್ರ್ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸಬೇಕು. ಅತ್ಯಂತ ಸರಳವಾಗಿ ಆಚರಿಸಬೇಕು. ಬಡವರಿಗೆ ಹೆಚ್ಚಿನ ದಾನ ನೀಡಬೇಕು …

Read More »

ಕೊವಿಶೀಲ್ಡ್‌ನ ಒಂದು ಡೋಸ್‌ನಿಂದ 80% ರಕ್ಷಣೆ : ಪಬ್ಲಿಕ್‌ ಹೆಲ್ತ್‌ ಇಂಗ್ಲೆಂಡ್‌ ವರದಿ

ಲಂಡನ್‌/ವಾಷಿಂಗ್ಟನ್‌: ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆಯ ಒಂದು ಡೋಸ್‌ ಪಡೆದರೂ ಸೋಂಕಿನಿಂದ ಮರಣಹೊಂದುವ ಅಪಾಯ ಶೇ.80ರಷ್ಟು ತಗ್ಗುತ್ತದೆ ಎಂದು ಪಬ್ಲಿಕ್‌ ಹೆಲ್ತ್‌ ಇಂಗ್ಲೆಂಡ್‌ ಬಹಿರಂಗಪಡಿಸಿದ ಹೊಸ ದತ್ತಾಂಶ ತಿಳಿಸಿದೆ. ಅಂದರೆ, ಒಬ್ಬ ವ್ಯಕ್ತಿಯು ಕೊವಿಶೀಲ್ಡ್‌ ಲಸಿಕೆಯ ಮೊದಲ ಡೋಸ್‌ ಪಡೆದರೂ, ಸೋಂಕಿನಿಂದ ಆತ ಸಾಯುವ ಸಾಧ್ಯತೆ ಶೇ.80ರಷ್ಟು ಕಡಿಮೆ. ಅದೇ ರೀತಿ, ಫೈಜರ್‌-ಬಯಾನ್‌ ಟೆಕ್‌ ಲಸಿಕೆಯ ಒಂದು ಡೋಸ್‌ ನಲ್ಲಿ ಮರಣದ ಅಪಾಯ ಶೇ.80ರಷ್ಟು ಹಾಗೂ ಎರಡನೇ ಡೋಸ್‌ ಬಳಿಕ ಇದು ಶೇ.97ರಷ್ಟು …

Read More »

ವಾಹನ ಬಳಕೆ ನಿರ್ಬಂಧ: ಪೊಲೀಸರ ದಬ್ಬಾಳಿಕೆ: ದಲಿತ ಸಂಘರ್ಷ ಸಮಿತಿ ಆರೋಪ

ಬೆಂಗಳೂರು: ಕೋವಿಡ್ ಲಾಕ್‌ಡೌನ್ ನೆಪದಲ್ಲಿ ನಾಗರಿಕರ ವಾಹನ ಬಳಕೆಗೆ ಪೊಲೀಸರು ನಿರ್ಬಂಧಿಸುತ್ತಿದ್ದು, ನಾಗರಿಕರ ಮೇಲೆ ಪೊಲೀಸರು ನಡೆಸುತ್ತಿರುವ ದಬ್ಬಾಳಿಕೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಆರೋಪಿಸಿದ್ದಾರೆ. ವಾಹನ ಬಳಸದೆ ನಡೆದುಕೊಂಡೇ ಅಗತ್ಯ ವಸ್ತುಗಳ ಖರೀದಿಗೆ ಹೋಗುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಕೃಷಿ ಚಟುವಟಿಕೆ ಅವಕಾಶ ಇದ್ದರೂ, ಜಮೀನಿಗೆ ತೆರಳಲು ರೈತರು ಪರದಾಡಬೇಕಾಗಿದೆ. ಕೃಷಿ ಇಲಾಖೆಯಿಂದ ಪಾಸ್ ಪಡೆದುಕೊಂಡಿದ್ದರೂ ವಾಹನದಲ್ಲಿ ಹೋಗಲು ಅವಕಾಶ …

Read More »

ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ

ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ …

Read More »