Breaking News

Uncategorized

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಿಂದ ರಿಯಾಯಿತಿ ಆರೋಗ್ಯ ಕಾರ್ಡ್​ನ ಆಮಿಷ!

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಸಂದರ್ಭದಲ್ಲಿಯೇ ಮತದಾರರ ಮನ ಗೆಲ್ಲಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ದೇಶದ ವಿವಿಧ ಚುನಾವಣೆಗಳಲ್ಲಿ ಮತದಾರರ ಮನಗೆಲ್ಲಲು ಅನೇಕರು, ಸೀರೆ, ಕುಕ್ಕರ್, ಹಣದ ಆಮಿಷ ಒಡ್ಡಿದ ಸುದ್ದಿಗಳನ್ನು ಈಗಾಗಲೇ ಓದಿದ್ದೇವೆ. ಆದರೆ ಇದು ಅದಕ್ಕಿಂತ ವಿಭಿನ್ನ ಆಮಿಷ, ವಿಭಿನ್ನ ಸುದ್ದಿ. ಅಭ್ಯರ್ಥಿಯೋರ್ವರು ಮತದಾರರಿಗೆ ತಮ್ಮ ಆಸ್ಪತ್ರೆಯಲ್ಲಿ ಬಾರಿ ಡಿಸ್ಕೌಂಟ್ ಘೋಷಿಸಿ ಸುದ್ದಿಯಲ್ಲಿದ್ದಾರೆ. ಕಲಬುರಗಿ …

Read More »

ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಕೃತ್ಯ? : ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ತಿರುವು 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ

ಮೈಸೂರು : ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ನಗರದ ಖಾಸಗಿ ಕಾಲೇಜೊಂದರ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯ ಸಂಬಂಧ ಮೈಸೂರು- ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಲಭಿಸಿದ್ದು, ನಗರದ ಕಾಲೇಜೊಂದರಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಕೇರಳದ ಮೂವರು ಮತ್ತು ತಮಿಳುನಾಡಿನ ಒಬ್ಬ ವಿದ್ಯಾರ್ಥಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಅತ್ಯಾಚಾರ ಘಟನೆಯ ಬಳಿಕ …

Read More »

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ; ನಾಲ್ವರ ಬಂಧನ

ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ …

Read More »

ಪೊಲೀಸ್​ ಇಲಾಖೆಯ ಕಣ್ಣು ಕೆಂಪಾಗಿಸಿದ ಬಚ್ಚನ್​ ಬಾಡಿಗಾರ್ಡ್​ ವಾರ್ಷಿಕ ಆದಾಯ: ದಿಢೀರ್​ ವರ್ಗಾವಣೆ..!

ಮುಂಬೈ: ವಾರ್ಷಿಕ ಆದಾಯ ಬರೋಬ್ಬರಿ ಒಂದೂವರೆ ಕೋಟಿ ರೂ. ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಬಾಲಿವುಡ್​ ಹಿರಿಯ ನಟ ಅಮಿತಾಭ್​​ ಬಚ್ಚನ್​ ಅವರ ಪೊಲೀಸ್​ ಬಾಡಿಗಾರ್ಡ್​ ಜೀತೇಂದ್ರ ಶಿಂಧೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವಿಭಾಗೀಯ ತನಿಖೆಗೂ ಸಹ ಆದೇಶಿಸಲಾಗಿದೆ. ಕಾನ್ಸ್​ಟೇಬಲ್​ ಆಗಿರುವ ಶಿಂಧೆ ಅವರನ್ನು ಮುಂಬೈ ಪೊಲೀಸ್​ ಇಲಾಖೆ ಬಚ್ಚನ್​ ಅವರ ಬಾಡಿಗಾರ್ಡ್​ ಆಗಿ ನೇಮಿಸಿತ್ತು. ಅನೇಕ ವರ್ಷಗಳಿಂದ ಬಿಗ್​ಬಿ ಅವರ ಅಂಗರಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಂಧೆ ವಿರುದ್ಧ …

Read More »

ಗ್ಯಾಂಗ್ ರೇಪ್: ಸಭೆ ನಡೆಸದೇ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದ ಗೃಹ ಸಚಿವ

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ …

Read More »

ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ

ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್‌ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …

Read More »

ಗ್ಯಾಂಗ್‌ ರೇಪ್‌ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …

Read More »

ಬೆಳಗಾವಿ: ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.   58 ವಾರ್ಡ್‌ಗಳ ಪೈಕಿ ಬಹುತೇಕ ಕಡೆಗಳಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಕೆಲವೆಡೆ ತ್ರಿಕೋನ ಪೈಪೋಟಿ ಕಂಡುಬಂದಿದೆ. ಶುಕ್ರವಾರದಿಂದ ಪ್ರಚಾರ ಕಣ ರಂಗೇರಲಿದೆ.       ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ 468 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಉಮೇದುವಾರಿಕೆ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಒಟ್ಟು 83 ಮಂದಿ …

Read More »

ಯೋಗಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ – ಉದ್ದವ್ ವಿರುದ್ಧ ದೂರು

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಈಗ ಬಿಜೆಪಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ. ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವಾ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ. ಮೂರು ದೂರುಗಳು ನಾಸಿಕ್‌ನಲ್ಲಿ ದಾಖಲಾಗಿದ್ದು, ಪೊಲೀಸರು ದೂರು ದಾಖಲಾಗಿದ್ದನ್ನು ಖಚಿತಪಡಿಸಿದ್ದಾರೆ. 2018ರಲ್ಲಿ ಶಿವಾಜಿ …

Read More »

ಆಸ್ತಿ ತೆರಿಗೆ, ಅಡುಗೆ ಅನಿಲ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‍ನಿಂದ ಬಿಬಿಎಂಪಿಗೆ ಮುತ್ತಿಗೆ

ಬೆಂಗಳೂರು, ಆ.26- ಬಿಜೆಪಿ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಬಿಬಿಎಂಪಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಜನವಿರೋಧಿ ಕೇಂದ್ರ, ರಾಜ್ಯ ಹಾಗೂ ಬಿಬಿಎಂಪಿ ನೀತಿಗಳ ವಿರುದ್ಧ ಕೈ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು. ಬೆಂಗಳೂರು ಕೇಂದ್ರ, ದಕ್ಷಿಣ, ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಲೀಂ ಅಹಮ್ಮದ್, ರಿಜ್ವಾನ್ ಅರ್ಷದ್, ರಾಮಲಿಂಗಾರೆಡ್ಡಿ ಮತ್ತಿತರ ನಾಯಕರ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಿ ಬಿಬಿಎಂಪಿ ಚಲೋ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ …

Read More »