Breaking News

Uncategorized

ಕೊರೊನಾ ವಾರಿಯರ್ಸ್ ಅಂತ ಖಾಸಗಿ ಶಿಕ್ಷಕರ ಕಿವಿಗೆ ಹೂವು ಇಟ್ಟ “ಸಿಎಂ”

ಬೆಂಗಳೂರು, : ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಅಂತ ಪರಿಗಣಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಘೋಷಣೆ ಮಾಡಿದ ವಿಶೇಷ ಪ್ಯಾಕೇಜ್ ನಲ್ಲಿ ಖಾಸಗಿ ಶಾಲಾ ಶಿಕ್ಷಕರು ಶಿಕ್ಷಕೇತರರನ್ನು ಪರಿಗಣಿಸಿಲ್ಲ. ಇಡೀ ಶಿಕ್ಷಣ ವ್ಯವಸ್ಥೆ ನಿರ್ನಾಮಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಾಂದಿ ಹಾಡಿದ್ದಾರೆ ಎಂದು ಆರೋಪಿಸಿರುವ ಖಾಸಗಿ ಶಾಲೆಗಳ ಶಿಕ್ಷಣ ಸಂಸ್ಥೆ ಪ್ರತಿನಿಧಿಗಳು ಅವರ ರಾಜೀನಾಮೆಗೆ ಆಗ್ರಹಿಸಿವೆ. ರಾಜ್ಯದಲ್ಲಿ 3.5 ಲಕ್ಷ ಮಂದಿ ಶಿಕ್ಷಕರು ಇದ್ದಾರೆ. ಕೊರೊನಾ ಲಾಕ್ ಡೌನ್ ನಿಂದ …

Read More »

ಹಿಂದಿನ ಬಾರಿಯ ಪ್ಯಾಕೇಜ್ ಇನ್ನೂ ತಲುಪಿಲ್ಲವೆಂಬ ವಿಪಕ್ಷಗಳ ಆರೋಪಕ್ಕೆ ಡಿಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶೇಷ ಪ್ಯಾಕೇಜ್​ ಘೋಷಣೆಯಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ನಾಯಕರ ಆರ್ಭಟ ಜೋರಾಗಿದೆ. ಕಳೆದ ಬಾರಿಯ ಪ್ಯಾಕೇಜ್​ ಇನ್ನೂ ಫಲಾನುಭವಿಗಳ ಕೈ ತಲುಪಿಲ್ಲ ಅಂತಾ ಆರೋಪಗಳು ಕೇಳಿ ಬರ್ತಿದೆ. ವಿಪಕ್ಷಗಳ ಈ ಆರೋಪವನ್ನ ಡಿಸಿಎಂ ಅಶ್ವತ್ಥ ನಾರಾಯಣ್​ ತಳ್ಳಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಈ ಆರ್ಥಿಕ ಪ್ಯಾಕೇಜ್​ನಲ್ಲಿ ಕೆಲವು ವಲಯಗಳಿಗೆ ಆದ್ಯತೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ವಲಯಗಳಿಗೆ ಆದ್ಯತೆ ನೀಡುವ ಪ್ಯಾಕೇಜ್​ ಕೂಡ …

Read More »

ಕೋವಿಡ್ ನಿರ್ವಹಣೆಗೆ ಗ್ರಾ.ಪಂ ಗಳಿಗೆ ಹಣ : ಸಿಎಂ

ಬೆಂಗಳೂರು : ಕೊರೊನಾ ವೈರಸ್ ಇದೀಗ ಗ್ರಾಮೀಣ ಪ್ರದೇಶಗಳಲ್ಲೂ ತನ್ನ ಕಬಂದ ಬಾಹುಗಳನ್ನು ಚಾಚಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಹಣ ನೀಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಅವರು, ಕೋವಿಡ್ ನಿರ್ವಹಣೆಗೆ ಗ್ರಾ.ಪಂ ಗಳಿಗೆ ಹಣ ನೀಡುವುದಾಗಿ ತಿಳಿಸಿದರು. ಗ್ರಾಮ ಪಂಚಾಯಿತಿಗಳಿವೆ 50,000 ಮುಂಗಡ ಹಣ ಪಾವತಿ ಮಾಡಲಾಗುವುದು. ಇದರಿಂದ 6 ಸಾವಿರ ಗ್ರಾ.ಪಂ ಗಳಿಗೆ ಲಾಭವಾಗಲಿದೆ ಎಂದು …

Read More »

ಕಾಟಾಚಾರಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ; ಸತೀಶ್ ಜಾರಕಿಹೊಳಿ

ಬೆಳಗಾವಿ: ವಿರೋಧ ಪಕ್ಷದವರ ಒತ್ತಡದಿಂದ ಮತ್ತು ಜನರಿಗೆ ಪ್ಯಾಕೇಜ್ ಕೊಟ್ಟಿದ್ದೇವೆ ಎಂದು ಬಿಂಬಿಸಿಕೊಳ್ಳುವುದಕ್ಕಾಗಿ ಮಾತ್ರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿರುವ ಕೋವಿಡ್ ಪ್ಯಾಕೇಜ್ ನಲ್ಲಿ ಜನರಿಗೆ ಅನುಕೂಲವಾಗುವ ಯೋಜನೆಗಳು ಇಲ್ಲ. ಕೇವಲ ಕಾಟಾಚಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ 4,000 ರೂ. ಘೋಷಣೆ …

Read More »

ವೈದ್ಯರಿಗೆ ನಟ ಸೋನು ಸೂದ್ ಕೇಳಿದ ಪ್ರಶ್ನೆಗೆ ಭೇಷ್ ಎನ್ನಲೇಬೇಕು

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ನಟ ಸೋನು ಸೂದ್ ಕೆಲಸ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಕೊರೊನಾ ಮೊದಲ ಅಲೆ ಹಾಗೂ ಎರಡನೇ ಅಲೆ ಎರಡರಲ್ಲೂ ಸೋನು ಸೂದ್ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ನೆರವು ಕೇಳಿದ ಜನರಿಗೆ ಸೋನು ಸಹಾಯ ಮಾಡಿದ್ದಾರೆ. ಜನರ ನೆರವಿಗೆ ಹಗಲು-ರಾತ್ರಿ ಕೆಲಸ ಮಾಡಿದ ಸೋನು ಸೂದ್ ವೈದ್ಯರಿಗೆ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ಸೋನು ಸೂದ್ ಅವರ ಇತ್ತೀಚಿನ ಟ್ವೀಟ್, ಸಾಮಾಜಿಕ ಜಾಲತಾಣದಲ್ಲಿ ಸಂವೇದನೆ ಸೃಷ್ಟಿಸಿದೆ. ಒಂದು …

Read More »

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ರಿಲೀಸ್

ಡೇಶ್ ಕುಮಾರ್ ಹಂಪಿ ನಿರ್ದೇಶನದ ಶರಣ್ ಅಭಿನಯದ ‘ಗುರು ಶಿಷ್ಯರು’ ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸುತ್ತಿದ್ದು, ಇಂದು ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಉಡುಗೊರೆಯಾಗಿ ನೀಡಿದ್ದಾರೆ. ಈ ಪೋಸ್ಟರ್ ನಲ್ಲಿ ನಿಶ್ವಿಕಾ ನಾಯ್ಡು ಲಂಗ ದಾವಣಿಯನ್ನುಟ್ಟುಕೊಂಡಿದ್ದು ಸೈಕಲ್ ಸವಾರಿ ಮಾಡುತ್ತಿದ್ದಾರೆ. ಈ ಹಿಂದೆ ಮಾಡಿದ ಎಲ್ಲಾ ಸಿನಿಮಾಗಳಿಗಿಂತ ನಿಶ್ವಿಕಾ ನಾಯ್ಡು ಹೊಸ ಲುಕ್ …

Read More »

ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಕಷ್ಟದಲ್ಲಿರುವವವರಿಗೆ ಹೆಗಲು ಕೊಡ್ತಿರೋ ಕಿಚ್ಚ & ಟೀಂ

ಸ್ಯಾಂಡಲ್​ವುಡ್​ ಬಾದ್ಶಾ ಕಿಚ್ಚ ಸುದೀಪ್​ ಕಡೆಯಿಂದ ನಿರಂತರವಾಗಿ ಸಾಮಾಜಿಕ ಕಾರ್ಯಗಳು ನಡೀತಾನೇ ಇದೆ. ಈ ಕೊರೊನ ಸಂಕಷ್ಟದಲ್ಲಂತೂ ಕೈ ಮೀರಿ ಸಹಾಯ ಮಾಡುತ್ತಿದ್ದಾರೆ ಕಿಚ್ಚ ಅಂಡ್​ ಟೀಂ. ಇದೀಗ ಮಹಿಳಾ ಅಭಿಮಾನಿಯೊಬ್ಬರ ಕಷ್ಟಕ್ಕೆ ಹೆಗಲು ಕೊಟ್ಟಿದೆ ಕಿಚ್ಚ ಚಾರಿಟೇಬಲ್​ ಟ್ರಸ್ಟ್. ಕಿಚ್ಚನ ಸಹಾಯ ನೆನೆದು ಅಭಿಮಾನಿ ಕಣ್ಣೀರಿಟ್ಟಿದ್ದಾರೆ. ಬಾದ್ಶಾ ಕಿಚ್ಚ ಸುದೀಪ್​ ನಿರಂತರವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ..ಕೊರೊನಾ ಸಂಧರ್ಭ ಮಾತ್ರವಲ್ದೆ ಬಹಳ ಹಿಂದಿನಿಂದಲೂ ತಮ್ಮ ಚಾರಿಟೇಬಲ್​ ಟ್ರಸ್ಟ್ ವತಿಯಿಂದ ನಿಸ್ವಾರ್ಥ …

Read More »

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಲಕ್ಷ್ಮಿ ರೈ ಇದೀಗ ತಮ್ಮ ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ. ಕರ್ನಾಟಕದ …

Read More »