Breaking News

Uncategorized

Pro Kabaddi | ಕಬಡ್ಡಿ: ಯೋಧಾಸ್‌ಗೆ ಗೆಲುವು

ಪುಣೆ : ಪ್ರದೀಪ್‌ ನರ್ವಾಲ್‌ (22 ಪಾಯಿಂಟ್ಸ್‌) ಅವರ ಮಿಂಚಿನ ಆಟದ ನೆರವಿನಿಂದ ಯು.ಪಿ.ಯೋಧಾಸ್ ತಂಡ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸುಲಭ ಗೆಲುವು ಪಡೆಯಿತು. ಬಾಳೇವಾಡಿಯ ಶಿವಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಯೋಧಾಸ್‌ 50-31 ರಲ್ಲಿ ದಬಾಂಗ್‌ ಡೆಲ್ಲಿ ತಂಡವನ್ನು ಮಣಿಸಿತು.   ವಿಜಯಿ ತಂಡ ವಿರಾಮದ ವೇಳೆಗೆ 29-14 ರಲ್ಲಿ ಮುನ್ನಡೆಯಲ್ಲಿತ್ತು.   ಪೈರೇಟ್ಸ್‌- ತಲೈವಾಸ್‌ ಪಂದ್ಯ ಟೈ: ಪಟ್ನಾ ಪೈರೇಟ್ಸ್‌ ಮತ್ತು ತಮಿಳ್ ತಲೈವಾಸ್‌ …

Read More »

ದೆಹಲಿ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮವಿತ್ತ ಹುಬ್ಬಳ್ಳಿ ಮಹಿಳೆ

ನವದೆಹಲಿ: ಕರ್ನಾಟಕದ ಹುಬ್ಬಳ್ಳಿಗೆ ತೆರಳಬೇಕಾಗಿದ್ದ ಮಹಿಳೆ ರಾಷ್ಟ್ರ ರಾಜಧಾನಿ ನವದೆಹಲಿ ವಿಮಾನ ನಿಲ್ದಾಣದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಂಗಳವಾರ ವಿಮಾನ ನಿಲ್ದಾಣದ ಟರ್ಮಿನಲ್‌ 3ರಲ್ಲಿ ಈ ಘಟನೆ ನಡೆದಿದೆ. ಈ ಮೂಲಕ ನವದೆಹಲಿ ವಿಮಾನ ನಿಲ್ದಾಣಕ್ಕೆ ಅತ್ಯಂತ ಯುವ ಪ್ರಯಾಣಿಕರೊಬ್ಬರು ಆಗಮಿಸಿದಂತೆ ಆಗಿದೆ. ವಿಮಾನಕ್ಕಾಗಿ ಮಹಿಳೆ ಪತಿಯ ಜತೆಗೆ ಕಾಯುತ್ತಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರು ಶೌಚಾಲಯಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಸಮೀಪದಲ್ಲಿಯೇ …

Read More »

ದಿನಕ್ಕೆ 10 ಲೀ. ಹಾಲು, ಪ್ರತಿ ಊಟಕ್ಕೆ 1200 ರೂ. ಮೌಲ್ಯದ ತರಕಾರಿ; 72 ಸದಸ್ಯರನ್ನು ಹೊಂದಿರುವ ಅವಿಭಕ್ತ ಕುಟುಂಬ

ಇಡೀ ಜಗತ್ತೇ ವಿಭಕ್ತ ಕುಟುಂಬ ಮಾರ್ಗದತ್ತ ಸಾಗುತ್ತಿರುವಾಗ ಮಹಾರಾಷ್ಟ್ರದ ಸೊಲ್ಲಾಪುರದ ಅಪರೂಪದ ಕುಟುಂಬವೊಂದು ಒಂದೇ ಸೂರಿನಡಿ 72 ಸದಸ್ಯರನ್ನು ಹೊಂದಿದ್ದು ಕಣ್ಮನ ಸೆಳೆಯುತ್ತಿದೆ. ಹಿರಿಯರು, ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಹಾರಾಷ್ಟ್ರದ ಕುಟುಂಬದ ನಾಲ್ಕು ತಲೆಮಾರುಗಳು ಒಂದೇ ಸೂರಿನಡಿ ವಾಸಿಸುತ್ತಿವೆ. ಇದು ಸುಂದರವಾದ ಭಾರತೀಯ ಅವಿಭಕ್ತ ಕುಟುಂಬದ ಉದಾಹರಣೆಯಾಗಿದೆ. ವ್ಯಾಪಾರ ವಹಿವಾಟು ನಡೆಸುತ್ತಿರುವ ಡೊಯಿಜೋಡೆ ಕುಟುಂಬದಲ್ಲಿ 72 ಜನರಿಗೆ ಪ್ರತಿದಿನ 10 ಲೀಟರ್ ಹಾಲು ಬೇಕಾಗುತ್ತದೆ. ಪ್ರತಿ ಊಟಕ್ಕೆ …

Read More »

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …

Read More »

‘ಮುಂಬೈ ವಿರುದ್ಧ ಆಡಲಾರೆ.’: ಐಪಿಎಲ್ ತೊರೆದ ಕೈರನ್ ಪೊಲಾರ್ಡ್

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಶ್ರೇಷ್ಠ ವಿದೇಶಿ ಆಟಗಾರರಲ್ಲಿ ಒಬ್ಬರಾದ ಕೈರನ್ ಪೊಲಾರ್ಡ್ ಅವರು ಐಪಿಎಲ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್‌ ನಲ್ಲಿ ಇದುವರೆಗೆ ಕೇವಲ ಮುಂಬೈ ಇಂಡಿಯನ್ಸ್‌ ಗೆ ಆಡಿರುವ ಪೊಲಾರ್ಡ್ ಕಳೆದ 13 ಸೀಸನ್‌ ಗಳಲ್ಲಿ ಮುಂಬೈ ತಂಡದ ಆಧಾರ ಸ್ಥಂಭವಾಗಿದ್ದಾರೆ. ಕಳೆದ ಸೀಸನ್ ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಪೊಲಾರ್ಡ್ ಅವರನ್ನು ಈ ಬಾರಿ ಫ್ರಾಂಚೈಸಿ ಉಳಿಸಿಕೊಳ್ಳುವುದಿಲ್ಲ ಎಂಬ ವದಂತಿಗಳ ನಡುವೆ …

Read More »

ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡಿ ಹುಕ್ಕೇರಿ ಹಿರೇಮಠ ಶ್ರೀ ಗೋವಾ ಸಿಎಂಗೆ ಮನವಿ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕಳೆದ ಬಾರಿ ಇದೇ ವೇದಿಕೆಯಲ್ಲಿ ಭರವಸೆ ನೀಡಿದ್ದರು. ಆದರೆ ಅದು ಈಡೇರಿಲ್ಲ ಎಂದು ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.   ಗೋವಾದ ಬಿಚೋಲಿಯ ಹೀರಾಬಾಯಿ ಸಭಾಗೃಹದಲ್ಲಿ ಕರ್ಮಭೂಮಿ ಕನ್ನಡ ಸಂಘ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಕನ್ನಡಿಗರ 14 …

Read More »

ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ., ಕೋಲಾರದಿಂದ ಸ್ಪರ್ಧೆ ಮಾಡಿದರೂ ಸೋಲು ಖಚಿತ.: ಕಾರಜೋಳ

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ಕ್ಷೇತ್ರ ಸಿಗುವುದಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ನಡೆಸಿದರೂ ಸೋಲುವುದು ಖಚಿತ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ ಸೋಲು ಖಚಿತ. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಪರಿಸ್ಥಿತಿ ಯಾವ ರೀತಿ ಬಂದಿದೆ …

Read More »

ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ರನ್ನು ಹೈದ್ರಾಬಾದ್​ನಲ್ಲಿ ಕಲಬುರಗಿಯ ಬ್ರಹ್ಮಪುರ ಪೊಲೀಸರು ಬಂಧಿಸಿದ್ದು, ನಿನ್ನೆ(ಭಾನುವಾರ) ತಡ ರಾತ್ರಿಯೇ ಕಲಬುರಗಿಗೆ ಕರೆತಂದಿದ್ದಾರೆ. ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್​ ಹೇಳಿಕೆ ನೀಡಿದ್ದರು. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ಮುಖಂಡನ ಬಂಧನಕ್ಕೆ‌ ಆಗ್ರಹಿಸಿ ಕಲಬುರಗಿ ಎಸ್​ಪಿ ಕಚೇರಿ ಮುಂಭಾಗ ಕಾಂಗ್ರೆಸ್​ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಇಂದು(ಸೋಮವಾರ) ಕಲಬುರಗಿಗೆ …

Read More »

ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರು ಫೋನ್ ಇನ್ ಕಾರ್ಯಕ್ರಮ ಇದೇ ನವೆಂಬರ್ 12ರಂದು 0831-2405204. ಎಸ್‍ಪಿ ರವರಿಗೆ ಕರೆ ಮಾಡಿ ಮಾತನಾಡಿ,

ಬೆಳಗಾವಿ ಜಿಲ್ಲಾ ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರು ಫೋನ್ ಇನ್ ಕಾರ್ಯಕ್ರಮವನ್ನು ಇದೇ ನವೆಂಬರ್ 12ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸುತ್ತಿದ್ದಾರೆ. ನಿಮ್ಮ ಸಮಸ್ಯೆಗಳ ಪರಿಹಾರ ಈಗ ಕೇವಲ ಒಂದು ಫೋನ್ ಕರೆಯ ದೂರದಲ್ಲಿ. ನೀವು ಇದ್ದಲ್ಲಿಂದ ಬೆಳಗಾವಿ ಎಸ್‍ಪಿ ರವರಿಗೆ ಕರೆ ಮಾಡಿ ಮಾತನಾಡಿ, ಈ ಕೆಳಕಂಡ ವಿಷಯಗಳ ಬಗ್ಗೆ ಮತ್ತು ಇನ್ನಿತರ ಯಾವುದೇ ವಿಷಯಗಳ ಕುರಿತಂತೆ ಕರೆ ಮಾಡಬಹುದು. …

Read More »

ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ”

ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ” ಬೆಂಗಳೂರು : ಪಕ್ಷದೊಳಗೆ ಯಾರನ್ನು ಬೈಯದಂತೆ ಬಿಜೆಪಿ ಪಕ್ಷದ ಹೈ ಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ಪಕ್ಷದವರನ್ನ ಮಾತ್ರ ಬೈತೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇದು ಪಕ್ಷದ ಬೆಳವಣಿಗೆ ಹಾಗೂ ವೈಯಕ್ತಿಕ ಬೆಳವಣಿಗೆಗೂ ಒಳ್ಳೆಯದು. ಯಡಿಯೂರಪ್ಪ ಅವರು ರಾಜಕೀಯದಿಂದ ದೂರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೆ ಸಂದರ್ಭದಲ್ಲಿ ಹೇಳಿದರು. …

Read More »