Home / Uncategorized (page 49)

Uncategorized

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

ಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಹಾಗೂ ಬೆಂಗಳೂರು ಗ್ರಾಮಾಂತರ ಒಟ್ಟು 5 ಲೋಕಸಭಾ …

Read More »

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

ಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿಗಳು ಸಧ್ಯ ಹಿಂಡಲಗಾ ಕಾರಾಗೃಹದಿಂದ ಬಿಡುಗಡೆ ಆಗಿದ್ದು ಇವರಿಗೆ ಹೂ ಹಾರ ಹಾಕಿ ಅದ್ದೂರಿ ಸ್ವಾಗತ ನೀಡಿರುವ ವೀಡಿಯೋ ವೈರಲ್ ಆಗಿವೆ. ನಾಲ್ಕು ತಿಂಗಳ ನಂತರ ನಂತರ ಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ. 14 ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಇಡಲಾಗಿತ್ತು. ಬೇಲ್ ಸಿಗುತ್ತಿದ್ದಂತೆ ಕಾರಾಗೃಹದಿಂದ ಹೊರಬಂದ …

Read More »

ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ?

ಬೆಳಗಾವಿ : ರಾಜ್ಯದಲ್ಲಿ ಸಧ್ಯ ಚುನಾವಣಾ ಕಾವು ಜೋರಾಗಿದ್ದು ಈ ಹಂತದಲ್ಲೇ ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ಆಗಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಅಶ್ಲೀಲ ಪೋಟೋ ಹರಿದಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ್ ಮಠಂದೂರು ಅವರು ಮಹಿಳೆ ಜೊತೆ ಇದ್ದ ಅಸಭ್ಯ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದಕ್ಕೆ ಶಾಸಕರು ಪೊಲೀಸ್ ಠಾಣೆಯಲ್ಲಿ …

Read More »

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಗಳವಾರ ರಾಜಸ್ಥಾನ ಪ್ರವಾಸಕ್ಕೆ ಆಗಮಿಸಿದ್ದಾರೆ. ರಾಜಸ್ಥಾನದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರ ಏಪ್ರಿಲ್ 24 ರ ಬುಧವಾರ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಈ ಕಾರಣಕ್ಕಾಗಿ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರ ತಲುಪಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ …

Read More »

ನಾಲ್ವರ ಹತ್ಯೆ: ಮಗನಿಂದ ಸುಪಾರಿ

ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಯಲ್ಲೇ ಅವರ ಪುತ್ರ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಸ್ತಿ ಮಾರಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಸಿಟ್ಟಿಗೆದ್ದು ಸ್ವಂತ ಮಗನೇ ತಂದೆ, ಮಲತಾಯಿ ಮತ್ತು ಮಲತಮ್ಮನ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಅಂಶ ಬಹಿರಂಗಗೊಂಡಿದೆ. ಏಪ್ರಿಲ್ 19ರಂದು ಮಧ್ಯರಾತ್ರಿ ನಗರದ ದಾಸರಓಣಿಯಲ್ಲಿ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್‌ …

Read More »

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ ಹುಬ್ಬಳ್ಳಿ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ನಗರದ ಕೇಶ್ವಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ …

Read More »

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ‘ವಿದ್ಯಾರ್ಥಿನಿ …

Read More »

ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

ಚನ್ನಮ್ಮನ ಕಿತ್ತೂರು: ಗ್ರಾಮ ಪಂಚಾಯ್ತಿ ವಾರ್ಡಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯನೊಬ್ಬ ಕೊರೆಸಿದ ಕೊಳವೆ ಬಾವಿ ಬಿಲ್ ಮಂಜೂರು ಮಾಡುವಂತೆ ನಡೆದ ಮಾತಿನ ನಡುವೆ ನಡೆದ ಚಕಮಕಿಯು ಪಂಚಾಯ್ತಿ ಅಧ್ಯಕ್ಷ ಮತ್ತು ಸದಸ್ಯನ ನಡುವೆ ಹೊಡೆದಾಟದೊಂದಿಗೆ ಮುಕ್ತಾಯ ಕಂಡಿದೆ. ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವಾರ್ಡಿನಲ್ಲಿ ಸದಸ್ಯ ನಿಂಗರಾಜ ಅಂಬಡಗಟ್ಟಿ ಎಂಬುವರು ಕೊಳವೆ ಬಾವಿ ಕೊರೆಸಿದ್ದರು. ಅದರ ಬಿಲ್ ಮಂಜೂರು ಮಾಡುವಂತೆ ಒತ್ತಾಯಿಸುತ್ತಿದ್ದರು. ಪಿಡಿಪ ಎಲ್ಲರ ಸದಸ್ಯರ ಸಭೆ …

Read More »

ಹೃದಯಾಘಾತ: ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತರು. ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆದಿತ್ತು. ಎಂದಿನಂತೆ ಸೋಮವಾರ ಕೂಡ ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಜತೆಯಲ್ಲಿದ್ದ ಕಾರ್ಮಿಕರು ಅವರ ಎದೆ ತಿಕ್ಕಿ, ಗಾಳಿಬೀಸಿ, ನೀರು ಕುಡಿಸಿ ಉಪಚರಿಸಲು ಯತ್ನಿಸಿದರು. ಅಷ್ಟರೊಳಗೆ ಅವರು ಉಸಿರು ನಿಲ್ಲಿಸಿದ್ದರು. ವೈದ್ಯರು ಸ್ಥಳಕ್ಕೆ ಬಂದು …

Read More »

ಬೆಳಗಾವಿ | ನೇಹಾ ಕೊಲೆ ಖಂಡಿಸಿ ಪ್ರತಿಭಟನೆ, ಲವ್ ಜಿಹಾದ್‌ ನಿಷೇಧ ಕಾನೂನಿಗೆ ಆಗ್ರಹ

ಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ಜಾಗ್ರತ ಮಹಿಳಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು. ನೇತೃತ್ವ ವಹಿಸಿದ್ದ ಮಹಿಳಾ ಹೋರಾಟಗಾರರು, ಮಠಾಧೀಶರು ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು, ಲವ್‌ ಜಿಹಾದ್‌ ಪ್ರತಿಬಂಧಕ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು. ಇಲ್ಲಿನ ಮಾರುತಿ ಗಲ್ಲಿಯ ಮಾರುತಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ರಾಮದೇವ ಗಲ್ಲಿ, ಶನಿವಾರ ಕೂಟ್‌ನಿಂದ ಕಾಕತಿವೇಸ್‌ನಲ್ಲಿ ಸಾಗಿದ ಪ್ರತಿಭಟನಾಕಾರರು, ರಾಣಿ ಚನ್ನಮ್ಮ ವೃತ್ತದಲ್ಲಿ …

Read More »