Breaking News

Uncategorized

ಬೆಳ್ಳಂಬೆಳಗ್ಗೆ ರಸ್ತೆ ಬದಿ ತಿರುಗಾಡುತ್ತಿದ್ದ ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ದಾಂಡೇಲಿ : ಮನೆಯಿಂದ ತಪ್ಪಿಸಿಕೊಂಡಿದ್ದ ಬುದ್ದಿಮಾಂದ್ಯ 7 ವರ್ಷದ ಮಗುವಿನ ಪಾಲಕರನ್ನು ಗಂಟೆಯೊಳಗಡೆ ಪತ್ತೆ ಹಚ್ಚಿ, ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಘಟನೆ ಶನಿವಾರ ಬೆಳ್ಳಂ ಬೆಳಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸ್ಥಳೀಯ ಗಾಂಧಿನಗರದಲ್ಲಿ ಮಗುವೊಂದು ರಸ್ತೆಯಲ್ಲಿ ತಿರುಗಾಡುತ್ತಿದೆ, ಮಗು ಯಾರದ್ದೆಂದು ಗೊತ್ತಿಲ್ಲ ಎಂದು ಬೀಟ್ ಪೊಲೀಸ್ ಬೀಮಣ್ಣನವರಿಗೆ ಗಾಂಧಿನಗರದಿಂದ ಮೊಬೈಲ್ ಕರೆ ಬಂದಿದ್ದು, ಈ ವೇಳೆ ತಕ್ಷಣ ಕಾರ್ಯಪ್ರವೃತ್ತರಾದ ಭೀಮಣ್ಣ ಬೈಕನ್ನೇರಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ನೋಡಿದ ಭೀಮಣ್ಣನವರು ಸುತ್ತಮುತ್ತಲಿನವರಲ್ಲಿ …

Read More »

ಮಾರಾಟಕ್ಕಿವೆ ಈ 13 ವಿಮಾನ ನಿಲ್ದಾಣಗಳು : ದುಡ್ಡಿದ್ರೆ, ನೀವು ಖರೀದಿಸ್ಬೋದು ನೋಡಿ.!!

ದೇಶದ ವಿಮಾನಯಾನ ವಲಯದಲ್ಲಿನ ನಷ್ಟವನ್ನ ಸರಿದೂಗಿಸಲು ಭಾರತ ಸರ್ಕಾರವು ವಿಮಾನ ನಿಲ್ದಾಣಗಳನ್ನ ಮಾರಾಟಕ್ಕೆ ಇರಿಸಿದೆ. ಕ್ರಮೇಣವಾಗಿ ಆಯ್ದ ವಿಮಾನ ನಿಲ್ದಾಣಗಳನ್ನ ಖಾಸಗಿ ವ್ಯಕ್ತಿಗಳ ಕೈಗೆ ನೀಡಲು ಸಿದ್ಧತೆ ನಡೆಸಿದೆ. ಬೃಹತ್ ಹಣ ಸಂಗ್ರಹಣೆಯ ಭಾಗವಾಗಿ ಕೇಂದ್ರ ಸರ್ಕಾರವು ಇತ್ತೀಚೆಗೆ ಹಣಗಳಿಕೆಯ ಯೋಜನೆಯನ್ನು ಘೋಷಿಸಿತು. ಇದರ ಭಾಗವಾಗಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (AAI) ಮುಂದಿನ ವರ್ಷದೊಳಗೆ 13 ವಿಮಾನ ನಿಲ್ದಾಣಗಳನ್ನ ಖಾಸಗೀಕರಣಗೊಳಿಸಲು ಒಪ್ಪಿಕೊಂಡಿದೆ. ಅಂದ್ಹಾಗೆ, ಇದು ಆರು ಪ್ರಮುಖ ವಿಮಾನ …

Read More »

ಸಚಿವ ಗೋವಿಂದ ಕಾರಜೋಳ ಮತ್ತು ಅವರ ಕಾರು ಚಾಲಕ ಸೇರಿ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಮೋಸ ಮಾಡಿದ್ದಾರೆ. : ಆರ್‌.ಬಿ. ತಿಮ್ಮಾಪುರ

ಬಾಗಲಕೋಟೆ: ಸಚಿವ ಗೋವಿಂದ ಕಾರಜೋಳ ಮತ್ತು ಅವರ ಕಾರು ಚಾಲಕ ಸೇರಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಂದು ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ ಆರೋಪಿಸಿದರು. ಗುರುವಾರ ನವನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರು ಚಾಲಕ ಮತ್ತು ಸಚಿವರು ಸೇರಿ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಮೋಸ ಮಾಡಿದ್ದಾರೆ. ತಮ್ಮ ವಾಹನ ಚಾಲಕನಿಗೆ ಕಳೆದ 17 ವರ್ಷಗಳ ಕಾಲ ಕಾರ್ಖಾನೆಯಿಂದ ತೆಗೆದುಕೊಂಡು ವೇತನ ಹಾಗೂ ಸರಕಾರಿ ವತಿಯಿಂದ ವೇತನ …

Read More »

ಪ್ರತಿಭಟನಾಕಾರರ ಆಕ್ರೋಶಕ್ಕೆ ‘ಮಣಿದ’ ಬಿಬಿಎಂಪಿ: ಬೆಂಗಳೂರಿನಲ್ಲಿ ವಾರ್ಡ್ ಗೆ 1 ಕ್ಕಿಂತ ಹೆಚ್ಚು ಗಣೇಶ ಪ್ರತಿಷ್ಠಾಪನೆಗೆ ಅನುಮತಿ

ಬೆಂಗಳೂರು : ನಾಳೆ ಗಣೇಶ ಚತುರ್ಥಿಗೆ ನಾಡು ಸಜ್ಜಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಬಿಬಿಎಂಪಿ ಸಡಿಲಗೊಳಿಸಿದೆ. ಬೇಡಿಕೆ ಬಂದರೆ ವಾರ್ಡ್ ಗೆ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ.   ಪ್ರತಿಭಟನಾಕಾರರ ಪ್ರತಿಭಟನೆಗೆ ಮಣಿದ ಬಿಬಿಎಂಪಿ ವಾರ್ಡ್ ಗೆ ಒಂದಕ್ಕಿಂತ ಹೆಚ್ಚು ಗಣೇಶ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದೆ. ಈ ಕುರಿತಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ …

Read More »

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು,ಸೆ.8- ಜನಸಾಮಾನ್ಯರಿಗೆ ಹೊರೆಯಾಗುವಂತಹ ಬೆಲೆ ಏರಿಕೆ ಹಾಗೂ ಇತರ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಬೆಂಗಳೂರು ದಕ್ಷಿಣ, ಉತ್ತರ ಮತ್ತು ಕೇಂದ್ರ ಕಾಂಗ್ರೆಸ್ ಜಿಲ್ಲೆಗಳಿಂದ ನಗರದ ಆನಂದರಾವ್ ವೃತ್ತದಿಂದ ರಾಜಭವನ ಚಲೋ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ಶಾಸಕಿ ಸೌಮ್ಯಾರೆಡ್ಡಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್‍ನಾಥ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅಡುಗೆ …

Read More »

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ, ಅನುಶ್ರೀಯವರ ನಾಟಕ ಬಯಲಾಗಿದೆ. ಜೈಲಿಗೆ ಹೋಗುವುದು ಫಿಕ್ಸ್…?

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ ವಿಚಾರವಾಗಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ, ಅನುಶ್ರೀಯವರ ನಾಟಕ ಬಯಲಾಗಿದೆ. ಜೈಲಿಗೆ ಹೋಗುವುದು ಫಿಕ್ಸ್ ಆಗಿದೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020 ಸೆಪ್ಟೆಂಬರ್ ನಲ್ಲಿ ನಾನು ಶುಗರ್ ಡ್ಯಾಡಿ ಎಂದು ಟ್ವೀಟ್ ಮಾಡಿದ್ದೆ. ಆಗ ಮಾಜಿ ಸಿಎಂ ಒಬ್ಬರು ಊಹಾಪೋಹಕ್ಕೆ ನಾಂದಿ ಹಾಡಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರು ಸರಿಯಾಗಿ …

Read More »

ತೆರಿಗೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ದಾರಿ ತಪ್ಪಿಸ್ತಿದ್ದಾರೆ – ಸಾರ್ವಜನಿಕರ ಆಕ್ರೋಶ

ಚಿಕ್ಕೋಡಿ: ರಣ ಭೀಕರ ಪ್ರವಾಹ ಬಂದು ಎರಡು ತಿಂಗಳು ಕಳೆದರೂ ನದಿ ತೀರದ ಸಂತ್ರಸ್ತರ ಸಂಕಷ್ಟ ಮುಂದುವರೆದಿದೆ. ರೈತರು ನಾಶವಾದ ಬೆಳೆ ತೆಗೆದು ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ. ಭೀಕರ ಪ್ರವಾಹದಿಂದ ಕಷ್ಟ ಪಟ್ಟು ಬೆಳೆದ ಬೆಳೆಗಳು ಕೊಚ್ಚಿ ಹೋಗಿ ನದಿ ತೀರದ ರೈತರು ಕಂಗಾಲಾಗಿದ್ದಾರೆ. ಈ ಪ್ರವಾಹಕ್ಕೆ ಕಬ್ಬು, ಸೊಯಾಬೀನ್, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ, ಆದರೂ ಸಹ ಸರ್ಕಾರ ಮಾತ್ರ …

Read More »

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …

Read More »

‘ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ಮೇಯರ್‌, ಉಪಮೇಯರ್‌ ಚುನಾವಣೆ ಶೀಘ್ರದಲ್ಲಿ ನಡೆಸಬೇಕು’ : . ಉಗ್ರಪ್ಪ

ಹೊಸಪೇಟೆ (ವಿಜಯನಗರ): ‘ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ಮೇಯರ್‌, ಉಪಮೇಯರ್‌ ಚುನಾವಣೆ ಶೀಘ್ರದಲ್ಲಿ ನಡೆಸಬೇಕು’ ಎಂದು ಮಾಜಿ ಸಂಸದ, ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆಗ್ರಹಿಸಿದರು. ‘ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆ ಮುಗಿದು ನಾಲ್ಕು ತಿಂಗಳಾಗಿದೆ. ಅಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ಕಾಂಗ್ರೆಸ್‌ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಇದುವರೆಗೆ ಅಲ್ಲಿ ಮೇಯರ್‌, ಉಪಮೇಯರ್‌ ಚುನಾವಣೆ ನಡೆಸಿಲ್ಲ. ಕೆಲ ದಿನಗಳ ಹಿಂದೆ ಮೈಸೂರು ಪಾಲಿಕೆಯ ಮೇಯರ್‌ ಚುನಾವಣೆ ನಡೆಸಿ, ಬಿಜೆಪಿ …

Read More »

ಬೆಳಗಾವಿಯ ಅಭಿವೃದ್ಧಿ ಗಾಗಿ ಬಿಜೆಪಿಗೆ ಪ್ರಚಂಡ ಬೆಂಬಲ ವನ್ನು ನೀಡಿ ಆಶೀರ್ವದಿಸಿದ್ದಾರೆ:

ಬೆಳಗಾವಿ:  ಜನರು ಪ್ರಧಾನಿ ಮೋದಿಯವರ ಕಾರ್ಯತತ್ಪರತೆಗೆ ಹಾಗೂ ಬೆಳಗಾವಿಯ ಅಭಿವೃದ್ಧಿ ಗಾಗಿ ಬಿಜೆಪಿಗೆ ಪ್ರಚಂಡ ಬೆಂಬಲ ವನ್ನು ನೀಡಿ ಆಶೀರ್ವದಿಸಿದ್ದಾರೆ ಎಂದು ಬೆಳಗಾವಿ ಮಹಾನಗರ ಚುನಾವಣಾ ಉಸ್ತುವಾರಿ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ  ಹೇಳಿದ್ದಾರೆ. ನಾವು ಪ್ರಗತಿ ಬಗ್ಗೆ ಮಾತಾಡಿದೆವು. ಬೆಳಗಾವಿ ಮಹಾನಗರವನ್ನು ಸರ್ವಾಂಗ ಸುಂದರವಾಗಿ ರೂಪಿಸಲು ಜನರು ಆಶಿರ್ವದಿಸಿದ್ದಾರೆ.  ನಾವು ಎಲ್ಲ ಸಮುದಾಯದವರನ್ನು ನಮ್ಮ ಜೊತೆಗೆ ಸೇರಿಸಿ ಅವರ ಹಿತದ ಬಗ್ಗೆ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ಕಾಂಗ್ರೆಸ್ ದಲಿತರನ್ನು …

Read More »