Breaking News

Uncategorized

ಬೆಡ್‌, ಆಕ್ಸಿಜನ್‌ ಕೊರತೆಗೆ ಕಾಂಗ್ರೆಸ್‌ ಕಾರಣ :ಕಟೀಲ್‌”

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ಆಡಳಿತ ಪಕ್ಷವಾಗಿ ಕೋವಿಡ್ ನಿಯಂತ್ರಿಸಲು ಮಾಡುತ್ತಿರುವ ಕೆಲಸ, ಜಿಂದಾಲ್‌ ಸಂಸ್ಥೆಗೆ ಸರ್ಕಾರ ಜಮೀನುನೀಡಲು ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರ ವಿರೋಧ, ನಾಯಕತ್ವ ಬದಲಾವಣೆ ಈ ಎಲ್ಲ ವಿಚಾರಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷನಳಿನ್‌ ಕುಮಾರ್‌ ಕಟೀಲ್‌” ಮುಕ್ತವಾಗಿ ಮಾತನಾಡಿದ್ದಾರೆ. ಕೋವಿಡ್ ನಿಯಂತ್ರಿಸಲು ಬಿಜೆಪಿ ಏನು ಮಾಡುತ್ತಿದೆ? ನಾವು ಕೋವಿಡ್ ಮೊದಲು ಬಂದಾಗಲೂ ಸೇವಾ ಹಿ ಸಂಘಟನೆ ಮಾಡಿದ್ದೆವು. ಈಗಲೂ ಪಕ್ಷದ 37 ಜಿಲ್ಲಾ ಘಟಕಗಳಲ್ಲಿ …

Read More »

ಚಿತ್ರರಂಗದ 3 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್‌ ವಿತರಣೆಗೆ ಮುಂದಾದ ನಟ ಉಪೇಂದ್ರ

ಬೆಂಗಳೂರು: ಕೋವಿಡ್ ಹೊಡೆತಕ್ಕೆ ಎಲ್ಲಾ ಕ್ಷೇತ್ರಗಳಂತೆ ಸಿನಿಮಾ ಕ್ಷೇತ್ರವೂ ತತ್ತರಿಸಿದೆ. ಸಿನಿಮಾವನ್ನೇ ನಂಬಿಕೊಂಡಿದ್ದ ಸಾವಿ ರಾರು ಕಾರ್ಮಿಕರು ಇವತ್ತು ಕಷ್ಟದ ಸ್ಥಿತಿಯಲ್ಲಿದ್ದಾರೆ. ಇವರ ಕಷ್ಟಕ್ಕೆ ಅನೇಕ ನಟ-ನಟಿಯರು ಸಹಾಯ ಮಾಡುತ್ತಿದ್ದು, ಈಗ ನಟ ಉಪೇಂದ್ರ ಸಹಾಯ ಹಸ್ತ ಚಾಚಲು ಮುಂದಾಗಿದ್ದಾರೆ. ಒಕ್ಕೂಟದ ಮೂರು ಸಾವಿರ ಕುಟುಂಬಗಳಿಗೆ ದಿನಸಿ ಕಿಟ್‌ ನೀಡಲು ಉಪೇಂದ್ರ ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಉಪೇಂದ್ರ, “ಕನ್ನಡ ಚಲನ ಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ …

Read More »

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಸಂಬಂಧ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಮೇ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೋನ್‌-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿಡಿಪಿಐ ಕೃಷ್ಣಮೂರ್ತಿ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಫೋನ್‌-ಇನ್ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಗೊಂದಲಗಳನ್ನು ಆಯಾ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಪ್ರಥಮ ಭಾಷೆ ಕನ್ನಡ-ಕ್ಕೆ ಸಂಬಂಧಪಟ್ಟಂತೆ ಮಾಹಿತಿ ಪಡೆಯಲು …

Read More »

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ಪಂಚಾಯಿತಿಗಳಿಗೆ 475 ಕೋಟಿ ರೂ. ನೆರವು

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 25 ರಾಜ್ಯಗಳಿಗೆ 8,923 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 475 ಕೋಟಿ ರೂ. ಲಭಿಸಿದೆ. ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಆಗಲಿದೆ. ಗ್ರಾಮೀಣಾ ಭಾಗದ ಸ್ಥಳೀಯ ಸಂಸ್ಥೆಗಳು ಕೊರೊನಾ ಸಾಂಕ್ರಮಿಕ ನಿಯಂತ್ರಣಕ್ಕೆ …

Read More »

ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …

Read More »

ತಮಿಳುನಾಡು ಮಾದರಿ ಪರಿಹಾರ ನೀಡಲಿ:   ಸತೀಶ ಜಾರಕಿಹೊಳಿ

ಬೆಳಗಾವಿ –  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದರು. ಸತೀಶ ಅವರೊಂದಿಗೆ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಅವರು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳು, ಸದ್ಯದ ಸ್ಥಿತಿಗತಿ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದರು. …

Read More »

ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು

ಮುಂಡರಗಿ (ಗದಗ): ಜಿಲ್ಲೆಯಲ್ಲಿ ವೆಂಟಿಲೇಟರ್ ಸಮಸ್ಯೆ ಉಲ್ಭಣಿಸಿದೆ. ವೆಂಟಿಲೇಟರ್ ಸಿಗದೇ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಪಟ್ಟಣದ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಬೂದಿಹಾಳ ಗ್ರಾಮದ ಕನಕಪ್ಪ ತಳವಾರ (87 ವ), ಬಿದರಹಳ್ಳಿಯ ಕಸ್ತೂರೆವ್ವ ವಿ.ಪುತ್ತೂರು ಹಾಗೂ ಕೊಪ್ಪಳ ಜಿಲ್ಲೆಯ ಭೈರಾಪುರ ಗ್ರಾಮದ ನೀಲಮ್ಮ ಮೇಟಿ (48 ವ) ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತರು ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿತರಿಗೆ ರವಿವಾರ ಸಂಜೆಯಿಂದ ಉಸಿರಾಟದಲ್ಲಿ …

Read More »

ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ

ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ನವದೆಹಲಿ ಮತ್ತು ತಿರುವನಂತಪುರಂಗೆ …

Read More »

ಸ್ಮಶಾನದಿಂದ ಮೃತದೇಹದ ಬಟ್ಟೆಗಳನ್ನು ಕದ್ದುಮಾರುತ್ತಿದ್ದ ಏಳು ಜನರ ಬಂಧನ

ಬಾಗಪತ್: ಪಶ್ಚಿಮ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಶವಸಂಸ್ಕಾರ ಹಾಗೂ ಸ್ಮಶಾನ ಸ್ಥಳಗಳಿಂದ ಸತ್ತವರ ಬಟ್ಟೆಗಳನ್ನು ಕದಿಯುತ್ತಿದ್ದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. “ಏಳು ಜನರನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಬಂಧಿತರು ಸತ್ತವರ ಬೆಡ್‌ಶೀಟ್‌ಗಳು, ಸೀರೆಗಳು, ಬಟ್ಟೆಗಳನ್ನು ಕದಿಯುತ್ತಿದ್ದರು ಎಂದು ತಿಳಿದುಬಂದಿದೆ. 520 ಬೆಡ್‌ಶೀಟ್‌ಗಳು, 127 ಕುರ್ತಾಗಳು, 52 ಬಿಳಿ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ವೃತ್ತ ಅಧಿಕಾರಿ ಅಲೋಕ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಕದ್ದ ವಸ್ತುಗಳನ್ನು ಚೆನ್ನಾಗಿ …

Read More »

ಇಂದಿನಿಂದ ಕಟ್ಟುನಿಟ್ಟಿನ ಲಾಕ್‍ಡೌನ್

ಕೊರೊನಾ ಸೋಂಕು ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಮೇ 10ರಿಂದ 24ರ ವರೆಗೆ ಘೋಷಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾ ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ದಂಡಾಧಿಕಾರಿ ರಾಮಚಂದ್ರನ್ ಆರ್ ಅವರು ಈಗಾಗಲೇ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಉಲ್ಲಂಘಿಸಿ ರಸ್ತೆಗಿಳಿಸಿದರೆ ವಾಹನಗಳನ್ನೂ ವಶಕ್ಕೆ ತೆಗೆದುಕೊಳ್ಳಲಿದ್ದಾರೆ. ಅನಗತ್ಯ ಸಂಚರಿಸುವಂತಿಲ್ಲ: …

Read More »