Breaking News

Uncategorized

ಯಡಿಯೂರಪ್ಪರನ್ನು ಕುರ್ಚಿಯಿಂದ ಇಳಿಸಲು ಸದ್ದಿಲ್ಲದೇ ನಡೆಯುತ್ತಿದೆಯೇ ತಂತ್ರ ?!

ಬೆಂಗಳೂರು:ವಿನಾಶಕಾರಿ ಕೋವಿಡ್ -19 ಎರಡನೇ ತರಂಗದೊಂದಿಗೆ ಕರ್ನಾಟಕವು ಹಿಡಿತ ಸಾಧಿಸುತ್ತಿದ್ದಂತೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲಿಸುವಲ್ಲಿ ಬಿಜೆಪಿ ದಾಳ ಉರುಳಿಸಿದೆ ಎಂಬ ಊಹಾಪೋಹಗಳು ಶುಕ್ರವಾರ ಹೆಚ್ಚಾಗಿದ್ದವು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ಪುತ್ರ ಬಿಜೆ ವಿಜಯೇಂದ್ರ ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ನವದೆಹಲಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ …

Read More »

ಬಿಗ್ ಬಾಸ್ ನಾಳೆಗೆ ಕ್ಲೋಸ್! – ಇದು ಕೊರೊನಾ ಲಾಕ್‍ಡೌನ್ ಎಫೆಕ್ಟ್

ಬೆಂಗಳೂರು: ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪರಮೇಶ್ವರ್ ಗುಂಡ್ಕಲ್ ಹೇಳಿದ್ದೇನು..? ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು …

Read More »

ಬೆಳಗಾವಿಗೆ ರೆಮಿಡಿಸಿವರ್ ಹಂಚಿಕೆಯಲ್ಲಿ ತಾರತಮ್ಯ: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ: ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಶುಕ್ರವಾರ ರಾಜ್ಯಕ್ಕೆ ಒಟ್ಟು 40 ಸಾವಿರ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಾಗಿದ್ದರೂ ಬೆಳಗಾವಿ ಜಿಲ್ಲೆಗೆ ಕಳೆದ 3 ದಿನಕ್ಕೆ ಕೇವಲ 400 ನೀಡಲಾಗಿದೆ. ಜಿಲ್ಲೆಯಲ್ಲಿ ಈಗ ಬರುತ್ತಿರುವ ಕೋವಿಡ್ ಸೋಂಕು ಪ್ರಕರಣದ ಪ್ರಮಾಣ ನೋಡಿದರೆ ದಿನಕ್ಕೆ ಕನಿಷ್ಠ …

Read More »

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಭಾಗವಹಿಸಿದ್ದ ಮದುವೆಗೆ ಬಂದಿದ್ದ 32 ಜನರಿಗೆ ಕೊರೊನಾ

ಶಿರಸಿ: ವಿಧಾನಸಭಾ ಸ್ಪೀಕರ್​​ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಉಪಸ್ಥಿತರಿದ್ದರು ಎನ್ನಲಾದ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು. ತದನಂತರ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆದರೆ ಕಳೆದ 2 ದಿನದಿಂದ ಅದೇ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಆದರೆ …

Read More »

ಅಂತರ್‌ ರಾಜ್ಯ ಪ್ರಯಾಣಕ್ಕೆ ಕೋವಿಡ್ ಪರೀಕ್ಷೆ ಪ್ರಮಾಣಪತ್ರ ಅಗತ್ಯವಿಲ್ಲ: ಐಸಿಎಂಆರ್

ಹೊಸದಿಲ್ಲಿ, ಮೇ 7: ಆರೋಗ್ಯವಂತ ನಾಗರಿಕರು ರಾಜ್ಯದೊಳಗೆ ಪ್ರಯಾಣಿಸಬೇಕಿದ್ದರೆ ಆರ್‌ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಸಲ್ಲಿಸಬೇಕು ಎಂಬ ಸೂಚನೆಯನ್ನು ಸಂಪೂರ್ಣ ರದ್ದುಗೊಳಿಸಬಹುದಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಹೇಳಿದೆ. ದೇಶದಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ತೀವ್ರಗತಿಯಲ್ಲಿ ಹೆಚ್ಚಿರುವುದರಿಂದ ಪ್ರಯೋಗಾಲಯದಲ್ಲಿ ಹೆಚ್ಚಿನ ಒತ್ತಡ ನಿವಾರಿಸುವ ದೃಷ್ಟಿಯಿಂದ ಹೀಗೆ ಮಾಡಬಹುದು ಎಂದು ಐಸಿಎಂಆರ್ ಸಲಹೆ ನೀಡಿದೆ. ಇದರಿಂದ ಅಗತ್ಯದ ಕೆಲಸಗಳಿಗಾಗಿ ರಾಜ್ಯದೊಳಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ. ಈ ಮಧ್ಯೆ, ಲಾಕ್‌ಡೌನ್ ಜಾರಿಗೊಳಿಸಿದ …

Read More »

ಬಳ್ಳಾರಿ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ, ವ್ಯಕ್ತಿ ಬಂಧನ

ಬಳ್ಳಾರಿ: ನಗರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮ್‌ಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು. ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿ, ರೆಮ್‌ಡಿಸಿವಿರ್ ದಂಧೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿ ಅನ್ವಯ ದಾಳಿ ಕಾರ್ಯಾಚರಣೆ ನಡೆಸಿ ಆರು ಡೋಸ್ ರೆಮ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ.‌ ರೆಮ್ ಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು. ₹3 …

Read More »

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್

ಬೆಂಗಳೂರು: ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ. ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ …

Read More »

ಬೆಡ್ ಬ್ಲಾಕ್ – 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ? ಹೊಸ ಬದಲಾವಣೆ ಏನು? ಗೌರವ್ ಗುಪ್ತಾ ಹೇಳೋದು ಏನು?

ಬೆಂಗಳೂರು:  ದಕ್ಷಿಣ ವಿಭಾಗದ ಕೋವಿಡ್ ವಾರ್ ರೂಂನಲ್ಲಿ ಒಂದೇ ಸಮುದಾಯದ 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ ಎಂಬುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವಿವರಣೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿಗಳ ಪ್ರಕಾರ ಇವರನ್ನು ಕೆಲವು ದಿನದ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಇವರು ಒಂದು ಸಂಸ್ಥೆಯ ಮೂಲಕ ಬಂದಿರುವ ವ್ಯಕ್ತಿಗಳು. ಕೋವಿಡ್ 19 ವಾರ್ ರೂಂನಲ್ಲಿರುವವರು ಎಲ್ಲ ತಾತ್ಕಾಲಿಕ ಗುತ್ತಿಗೆ ಸಿಬ್ಬಂದಿ …

Read More »

ಚಿಂಚೋಳಿ ಆಸ್ಪತ್ರೆಗೆ ಸಚಿವ ‌ಮುರುಗೇಶ ನಿರಾಣಿ ದಿಢೀರ್ ಭೇಟಿ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಶುಕ್ರವಾರ ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಪೀಡಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ಸೋಂಕಿತರು ಸವಲತ್ತುಗಳಿಂದ ವಂಚಿತರಾಗಬಾರದು. ಅಗತ್ಯವಿರುವುದನ್ನು ಮೊದಲೇ ಸಂಗ್ರಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಸ್ಪತ್ರಗೆ ದಾಖಲಾದವರು ಮತ್ತು ಬಿಡುಗಡೆಯಾದವರ ಸಂಖ್ಯೆ, ಲಭ್ಯವಿರುವ ಔಷಧಿ, ಎಷ್ಟು ಪ್ರಮಾಣದಲ್ಲಿ …

Read More »

ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ

ರಾಂಚಿ: ಕೊರೊನಾದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿದೆ. ಆಟಗಾರರೆಲ್ಲ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ತಂಡದ ಆಟಗಾರೆಲ್ಲ ಮನೆಗೆ ಸೇರಿದ ಬಳಿಕ ಕೊನೆಯವರಾಗಿ ಮನೆಗೆ ತೆರಳಿದ್ದಾರೆ. ಸಿಎಸ್‍ಕೆ ತಂಡದ ಆಟಗಾರರೆಲ್ಲರನ್ನು ಕೂಡ ಸುರಕ್ಷಿತವಾಗಿ ಮನೆಗೆ ತಲುಪಿಸುವ ಹೊಣೆ ಹೊತ್ತಿದ್ದ ಚೆನ್ನೈ ಫ್ರಾಂಚೈಸಿ, ಆಟಗಾರರನ್ನು ಮನೆಗೆ ತಲುಪಿಸಲು ವಿಮಾನದ ವ್ಯವಸ್ಥೆ ಮಾಡಿತ್ತು. ಈ ವಿಮಾನದಲ್ಲಿ ಮೊದಲು …

Read More »