ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಮತದಾರರು ಸಹ ಬಿಜೆಪಿ ಜನೋಪಯೋಗಿ …
Read More »ಮೂರು ಕ್ಷೇತ್ರಗಳ ಉಪಚುನಾವಣೆ, ಶಾಂತಿಯುತ ಮತದಾನ
ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಇನ್ನು ಕಳೆದ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ …
Read More »ಮಹಾರಾಷ್ಟ್ರದಲ್ಲಿ ಕರ್ಫ್ಯೂ: ವಲಸಿಗರಿಗೆ, ನಿರುದ್ಯೋಗಿಗಳಿಗೆ ಆಹಾರ ವಿತರಿಸಿದ ಅರ್ಥ್ ಕೆಫೆ
ದೇಶಾದ್ಯಂತ ಕೋವಿಡ್-19 ಎರಡನೇ ಅಲೆ ಶುರುವಾಗಿದ್ದು ಅದರಲ್ಲೂ ಮಹಾರಾಷ್ಟ್ರ, ಮುಂಬೈನಲ್ಲಿ ಮಿತಿ ಮೀರುತ್ತಿದೆ. ಈ ಹಿನ್ನೆಲೆ ಅಲ್ಲಿನ ರಾಜ್ಯ ಸರ್ಕಾರ ಕಳೆದ ಬುಧವಾರದಿಂದ ಮೇ 1ರವರೆಗೆ ಜನತಾ ಕರ್ಫ್ಯೂ ಜಾರಿ ಮಾಡಿ ಎಲ್ಲೆಂದರಲ್ಲಿ ನಾಲ್ಕು ಮಂದಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಜನತಾ ಕರ್ಫ್ಯೂ ಕಾರಣ ಅಲ್ಲಿನ ವಲಸೆ ಕಾರ್ಮಿಕರ, ಬಡವರ, ನಿರುದ್ಯೋಗಿಗಳ ಬದುಕು ಶೋಚನೀಯವಾಗಲಿದೆ. ಇದನ್ನರಿಂದ ಕೆಲವು ಮುಂಬೈ ಮೂಲದ ರೆಸ್ಟೊರೆಂಟ್ಗಳು, ಕೆಫೆಗಳು ಉಚಿತವಾಗಿ ಆಹಾರ …
Read More »ಉಪ ಚುನಾವಣೆ: ಬೆಳಗಾವಿಯಲ್ಲಿಶೇ.12.29, ಮಸ್ಕಿಯಲ್ಲಿ ಶೇ.19.30, ಬಸವಕಲ್ಯಾಣದಲ್ಲಿ ಶೇ.19.40ರಷ್ಟು ಮತದಾನ
ಬಸವಕಲ್ಯಾಣ/ಬೆಳಗಾವಿ/ಮಸ್ಕಿ: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಮುಂದುವರಿದಿದೆ. ಬೆಳಗ್ಗೆ 11 ಗಂಟೆಯ ಹೊತ್ತಿಗೆ ಬಸವಕಲ್ಯಾಣ ಕ್ಷೇತ್ರದಲ್ಲಿ ಶೇಕಡಾ 19.40ರಷ್ಟು ಮತದಾನವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಇಲ್ಲಿಯವರೆಗೆ ಮತದಾರರ ಪ್ರತಿಕ್ರಿಯೆ ನೀರಸವಾಗಿದೆ. ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇಕಡಾ 12.29ರಷ್ಟು ಮಾತ್ರ ಮತದಾನ ನಡೆದಿದೆ. ಬೆಳಗಾವಿ, ರಾಮದುರ್ಗ, ಸೌಂದತ್ತಿಯಲ್ಲಿ ಮತದಾರರ ನೀರಸ ಪ್ರತಿಕ್ರಿಯೆಯಿದ್ದರೆ, ಸೂಕ್ಷ್ಮ …
Read More »ಸಾರಿಗೆ ಮುಷ್ಕರ- ಕಿಡಿಗೇಡಿಗಳಿಂದ ಕಲ್ಲು ತೂರಾಟ, ಬಸ್ ಚಾಲಕ ದುರ್ಮರಣ
ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರ 10ನೇ ದಿನವೂ ಮುಂದುವರೆದಿದ್ದು, ಕುಟುಂಬಕ್ಕೆ ಆಧಾರವಾಗಿದ್ದ ಚಾಲಕ ಹಿರಿಯ ಅಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಪ್ರಮಾಣ ಪತ್ರ ಸಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದಾಗಿ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಜಮಖಂಡಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 55 ವರ್ಷದ ಎನ್.ಕೆ.ಅವಟಿ ಕಲ್ಲೇಟಿಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕರ್ತವ್ಯಕ್ಕೆ ಹಾಜರಾಗಿ …
Read More »ಕೊರೊನಾ ಬೆಡ್ ಬಗ್ಗೆ ಸಚಿವರೇ ಲೆಕ್ಕ ಕೇಳಿದ್ರೂ ನೋ ಯೂಸ್ – ಖಾಸಗಿ ಆಸ್ಪತ್ರೆ ಸಿಬ್ಬಂದಿ ಡೋಂಟ್ ಕೇರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಾರ್ಭಟ ಮುಂದುವರಿದ್ದು, ಖಾಸಗಿ ಆಸ್ಪತ್ರೆಗಳು ಇದರ ಲಾಭ ಪಡೆಯಲು ಮುಂದಾದ್ವಾ ಎಂಬ ಪ್ರಶ್ನೆಯೊಂದು ಮೂಡಿದೆ. ಹೌದು. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಸೋಂಕಿತರಿಂದ ಫುಲ್ ಆಗಿವೆಯಾ..? ಡಿಮ್ಯಾಂಡ್ ಸೃಷ್ಟಿ ಮಾಡಲು ಬೆಡ್ ಕೊರತೆಯ ನಾಟಕ ಆಡ್ತಿವೆಯಾ..?, ಜನರಲ್ಲಿ ಸೋಂಕು ಭೀತಿ ಹುಟ್ಟಿಸಲು ಬೆಡ್ ಫುಲ್ ಅಂತಾ ಕಥೆ ಕಟ್ಟುತ್ತಿವೆಯಾ ಎಂಬ ಪ್ರಶ್ನೆ ಮೂಡಿದ್ದು, ಖಾಸಗಿ ಆಸ್ಪತ್ರೆಗಳ ದರ್ಬಾರ್ ಸ್ಟೋರಿಯನ್ನು ಪಬ್ಲಿಕ್ ಟಿವಿ ಬಯಲು ಮಾಡಿದೆ. ಬೆಂಗಳೂರು ಬೆಡ್ …
Read More »ಸರಕಾರಿ ಶಾಲೆಗಳಿಗೆ ಬಣ್ಣ , ಚಿತ್ತಾರ : ಕ್ಯಾಂಪಸ್ ಟು ಕಮ್ಯೂನಿಟಿ ಬಳಗದ ಯುವಕರ ಸಾಧನೆ
ಬೆಂಗಳೂರು: ಸರಕಾರಿ ಶಾಲೆಯ ಸೌಂದರ್ಯ ಹೆಚ್ಚಿಸುವ ಜತೆಗೆ ಗುಣಾತ್ಮಕ ಕಲಿಕೆಗೂ ಯೋಗದಾನ ನೀಡುತ್ತಿರುವ ಯುವಕರ ದಂಡು. “ಕ್ಯಾಂಪಸ್ ಟು ಕಮ್ಯೂನಿಟಿ’ ಬಳಗದ ಸದಸ್ಯರು “ಸ್ಕೂಲ್ ಬೆಲ್’ ಹೆಸರಿನಲ್ಲಿ ಈ ಕಾರ್ಯ ನಡೆಸುತ್ತಿದ್ದಾರೆ. ಈ ಬಳಗದಲ್ಲಿ ಬಹುತೇಕ ಮಂದಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು. ಇವರು ವಾರಾಂತ್ಯದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಸ್ಥಳೀಯರು, ಎಸ್ಡಿಎಂಸಿಗಳ ಸಹಕಾರ ಪಡೆದು ಬಣ್ಣ ಬಳಿದು, ಧನಾತ್ಮಕ ಚಿಂತನೆಯ ಕಲಾಕೃತಿಗಳನ್ನು ಚಿತ್ರಿಸುತ್ತಾರೆ. ಗ್ರಾಮೀಣ ಶಾಲೆಗಳನ್ನು ಆಯ್ದುಕೊಂಡು …
Read More »ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.
ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*
Read More »ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್ಡೌನ್ ಬೇಡ. ಲಾಕ್ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ.:B.S.Y.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗಿರುವುದರಿಂದ ಲಾಕ್ಡೌನ್ ಮಾಡಿ ಏನು ಪ್ರಯೋಜನ ಇಲ್ಲ. ಇದರ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್ಡೌನ್ ಬೇಡ. ಲಾಕ್ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ. ಸರ್ಕಾರ ಅವರದೇನೋ ಮುಚ್ಚಿಕೊಳ್ಳೋಕೆ ಲಾಕ್ಡೌನ್ ಮತ್ತೊಂದು ಎಂಬ ಸುದ್ದಿ ಹಬ್ಬಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಮಗಿನ್ನು ಸರ್ವ ಪಕ್ಷಗಳ ಸಭೆಯ …
Read More »CBSE Board Exams 2021: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ
ದೆಹಲಿ: ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್ಇ ಬೋರ್ಡ್ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. …
Read More »