ಬೆಂಗಳೂರು : ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು …
Read More »ತಮಿಳುನಾಡಿನಲ್ಲಿ ಡಿಎಂಕೆಗೆ ಜಯ : ಹರಕೆ ಈಡೇರಿಸಲು ತನ್ನ ನಾಲಿಗೆ ಕತ್ತರಿಸಿ ದೇವಿಗೆ ಅರ್ಪಿಸಿದ ಮಹಿಳೆ
ಚೆನ್ನೈ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ತಮಿಳುನಾಡಿನ ಮಹಿಳೆಯೊಬ್ಬಳು ದೇವಾಲಯ ದೇವತೆಗೆ ನೀಡಿದ ಹರಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ತನ್ನ ನಾಲಿಗೆಯನ್ನು ಕತ್ತರಿಸಿ ನೀಡಿದ್ದಾಳೆ. ೨೦೨೧ ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಗೆದ್ದರೆ ದೇವರಿಗೆ ಹರಕೆಯಾಗಿ ತನ್ನ ನಾಲಿಗೆಯನ್ನು ಕತ್ತರಿಸಿ ನೀಡುವುದಾಗಿ ಮೂವತ್ತೆರಡು ವರ್ಷದ ವನಿತಾ ಈ ಹಿಂದೆ ಮಹಿಳೆ ಹರಕೆ ಹೊತ್ತಿದ್ದರು ಎನ್ನಲಾಗಿದೆ. ಡಿಎಂಕೆ ಜನಾದೇಶ ವನ್ನು ಗೆದ್ದ ನಂತರ, ವನಿತಾ …
Read More »ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ
ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಾವಿಗೆ ಯಾರು ಹೊಣೆ. ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಕ್ಸಿಜನ್ ಪೂರೈಸಲೂ ಸರ್ಕಾರಕ್ಕೆ ಸಾಧ್ಯವಾಗದ ಸ್ಥಿತಿಬಂದಿದೆ ಇದೆಂತಹ ಸರ್ಕಾರ? ಬಿಜೆಪಿ ನಾಯಕರಿಗೆ ಪ್ರಚಾರ ಮುಖ್ಯವೇ ಹೊರತು ಜನರ ಜೀವಗಳು ಮುಖ್ಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ
ಕನಕಪುರ:ಲಾಕ್ಡೌನ್ನಿಂದ ಊಟಸಿಗದೆ ಹವಿನಿಂದ ಬಳಲುತ್ತಿದ್ದ ಬಡವರಿಗೆ ಭಿಕ್ಷುಕರಿಗೆ ನಿರ್ಗತಿಕರಿಗೆ ವೃತ್ತ ನಿರೀಕ್ಷಕ ಟಿ.ಟಿ.ಕೃಷ್ಣ ಆಹಾರ ನೀರು ನೀಡಿಮಾನವೀಯತೆ ಮೇರೆದಿದ್ದಾರೆ.ಸರ್ಕಾರದ ಕರ್ಫ್ಯೂ ಜಾರಿ ಬಿಕ್ಷುಕರು ನಿರ್ಗತಿಕರಿಗೆ ತೊಡಕಾಗಿ ಪರಿಣಮಿಸಿದೆ. ಅನೇಕ ಕಾರಣದಿಂದ ಜನರುಭಿಕ್ಷುಕರಾಗಿ ಬೀದಿ ಬದಿಗಳಲ್ಲಿ ಬಸ್ನಿಲ್ದಾಣದಲ್ಲಿ ದೇವಸ್ಥಾನಗಳ ಬಳಿಸಾರ್ವಜನಿಕರು ಕೊಡುವ ಸಹಾಯದಿಂದ ಹೊಟ್ಟೆ ತುಂಬಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ, ಕೊರೊನಾದಿಂದ ಬಿಕ್ಷುಕರನ್ನು ಹಸಿವಿನಿಂದಬಳಲುವಂತೆ ಮಾಡಿದೆ. ಇಂಥ ಸ್ಥಿತಿಯಲ್ಲಿ ಕೊರೊನಾ ತಡೆಗೆ ವಾರಿಯರ್ಗಳಾಗಿ ಸೇವೆ ಸಲ್ಲಿಸುತ್ತಿರುವ ಆರಕ್ಷಕವೃತ್ತನಿರೀಕ್ಷಕ ಟಿ.ಟಿ.ಕೃಷ್ಣ ತಾಲೂಕಾದ್ಯಂತಗಸ್ತುತಿರುಗುವಾಗ ಬೀದಿ ಬದಿಯಲ್ಲಿಊಟ …
Read More »RCB Blue Jersey: ಒಂದು ವರ್ಷದಿಂದ ನಮಗಾಗಿ ಹೋರಾಡಿದ್ದೀರಿ! ನೀಲಿ ಜೆರ್ಸಿ ತೊಟ್ಟು ಕೊರೊನಾ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಲಿದೆ ಆರ್ಸಿಬಿ
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಆವೃತ್ತಿಯಲ್ಲೂ ಎರಡು ವಿಭಿನ್ನ ಜರ್ಸಿಗಳಲ್ಲಿ ಕಣಕ್ಕೆ ಇಳಿಯುತ್ತದೆ. ವಿರಾಟ್ ಕೊಹ್ಲಿ ತಂಡವು ಪ್ರತಿ ಐಪಿಎಲ್ನಲ್ಲಿ ಹಸಿರು ವಿಶೇಷ ಜರ್ಸಿ ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಈ ಮೂಲಕ ಪರಿಸರದ ಸುರಕ್ಷತೆಯ ಕುರಿತು ಅರಿವು ಮೂಡಿಸುತ್ತದೆ. ಈ ಬಾರಿ, ದೇಶದಲ್ಲಿ ಕೊರೊನಾದಿಂದ ಉಂಟಾದ ಬಿಕ್ಕಟ್ಟನ್ನು ಮನದಲ್ಲಿಟ್ಟುಕೊಂಡು ಆರ್ಸಿಬಿ ಮತ್ತೊಮ್ಮೆ ಸಾರ್ವಜನಿಕರಲ್ಲಿ ಜಾಗೃತಗೊಳಿಸಲು ತಮ್ಮ ಜರ್ಸಿಯಿಂದ ಜನರಿಗೆ ಸಹಾಯ ಮಾಡಲು ನಿರ್ಧರಿಸಿದೆ. ಈ ಸಮಯದಲ್ಲಿ, …
Read More »ಮತ ಎಣಿಕೆ ಸಮಯದಲ್ಲಿ ಗಲಾಟೆ : ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಪೊಲೀಸರ ವಶ!
ರಾಯಚೂರು: ಮತ ಎಣಿಕೆ ಮಾಹಿತಿ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದು ಕೋಣೆಯಲ್ಲಿ ಕೂರಿಸಿರುವ ಘನಟೆ ನಡೆದಿದೆ. ಬಸನಗೌಡ ತುರ್ವಿಹಾಳ ಸಹೋದರ ಸಿದ್ದನಗೌಡ ತುರ್ವಿಹಾಳ ಕರ್ತವ್ಯನಿರತ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಡಿಸಿ ಆರ್.ವೆಂಕಟೇಶಕುಮಾರ್ ಮಧ್ಯಪ್ರವೇಶಿಸಿ ಅವರನ್ನು ವಶಕ್ಕೆ ಪಡೆಯಿರಿ ಎಂದು ಸೂಚಿಸಿದರು. ಬಳಿಕ ಪೊಲೀಸರು ಅವರನ್ನು ನ್ಯೂಸ್ ರೂಂ ಕರೆದಯೊಯ್ದು ಕೂಡಿಸಿದರು. …
Read More »Karnataka By Election 2021 : ’21ನೇ ಸುತ್ತಿ’ನಲ್ಲೂ ‘ಬೆಳಗಾವಿ ಲೋಕಸಭಾ ಉಪ ಚುನಾವಣೆ’ಯಲ್ಲಿ ಬಿಜೆಪಿಯ ‘ಮಂಗಳಾ ಅಂಗಡಿ’ ಮುನ್ನೆಡೆ
ಬೆಳಗಾವಿ : ಲೋಕಸಭಾ ಉಪ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಚುನಾವಣೋತ್ತರ ಸಮೀಕ್ಷೆಯಂತೆ, ಬೆಳಗಾವಿಯಲ್ಲಿ, 21ನೇ ಸುತ್ತಿನವರೆಗೆ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ 2245 ಮತಗಳ ಅಂತರದಿಂದ ಮುನ್ನಡೆ ಹೊಂದಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ 21ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡಿದ್ದು, 2245 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂದಹಾಗೇ …
Read More »ಮಸ್ಕಿ ಫಲಿತಾಂಶಕ್ಕೆ ಮೊದಲೇ ಸೋಲು ಒಪ್ಪಿಕೊಂಡ ಪ್ರತಾಪ್ ಗೌಡ
ಮಸ್ಕಿ: ಚುನಾವಣಾ ಮತ ಎಣಿಕೆಯ ಹಲಲು ಸುತ್ತುಗಳು ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದಾರೆ. ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ. ಕ್ಷೇತ್ರದಲ್ಲಿ ನನ್ನ ಮೇಲೆ ವಿರೋಧಿ ಅಲೆ ಸೃಷ್ಟಿಯಾಗಿದೆ ಎಂದು ಪ್ರತಾಪ್ ಗೌಡ ಪಾಟೀಲ್ ದೂರಿದ್ದಾರೆ. 9ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 10,311 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಸನಗೌಡ ಪಾಟೀಲ್ …
Read More »ಸರ್ಕಾರದಿಂದ ಮತ್ತೆ ಮಾರ್ಗಸೂಚಿ ಪರಿಷ್ಕರಣೆ – ನಾಳೆಯಿಂದ ರಾಜ್ಯಾದ್ಯಂತ ಮಾರುಕಟ್ಟೆಗಳು ಸ್ತಬ್ಧ
ಬೆಂಗಳೂರು: ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ತನ್ನ ಮಾರ್ಗಸೂಚಿಯನ್ನ ಪರಿಷ್ಕರಣೆ ಮಾಡಿದೆ. ನಾಳೆಯಿಂದ ಎಲ್ಲಾ ರೀತಿಯ ಸಂತೆಗಳು, ವಾರದ ಸಂತೆಗಳ ಬಂದ್ ಆಗಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ನೀಡಲಾಗಿದೆ. ಈ ಮೊದಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿತ್ತು. ಜನಸಂದಣಿ ತಡೆಯುವ ಹಿನ್ನೆಲೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಮಾರುಕಟ್ಟೆ ಬಂದ್ ಆದ್ರೂ ಬೆಳಗ್ಗೆ …
Read More »ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
Read More »