Breaking News

Uncategorized

ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ”

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಸುವರ್ಣಸೌಧದ ಎದುರು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ ವೀರವನಿತೆಯ ವೇಷಭೂಷಣದಲ್ಲಿ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದರು. ಸಂಸದೆ ಮಂಗಲ ಅಂಗಡಿ, ಸಚಿವ ಶಶಿಕಲಾ …

Read More »

ಸೈಕ್ಲಿಂಗ್‍: ಲಾಯಪ್ಪ, ಪ್ರೀತಿ ಪ್ರಥಮ

ಚನ್ನಮ್ಮನ ಕಿತ್ತೂರು: ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ನಡೆದ ರಾಜ್ಯಮಟ್ಟದ ಸೈಕ್ಲಿಂಗ್‍ನ ಪುರುಷರ ವಿಭಾಗ(24 ಕಿ.ಮೀ.)ದಲ್ಲಿ ಲಾಯಪ್ಪ ಮುಧೋಳ ಪ್ರಥಮ ಸ್ಥಾನ ಗಳಿಸಿದರು. ಪ್ರಭು ಕಾಲತಿಪ್ಪಿ, ಯಲ್ಲೇಶ ಹುಡೇದ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದ(14 ಕಿ.ಮೀ.) ಸ್ಪರ್ಧೆಯಲ್ಲಿ ಪ್ರೀತಿ ಹಳಬರ ಮೊದಲ ಸ್ಥಾನ ಗಳಿಸಿದರೆ, ಅಮೂಲ್ಯ ಪೂಜೇರಿ ದ್ವಿತೀಯ, ಕಾವೇರಿ ಕಾರದಗಿ ತೃತೀಯ ಸ್ಥಾನ ಪಡೆದುಕೊಂಡರು. ಪುರುಷರ ಇಂಡಿಯನ್ ಮೇಡ್ ಸೈಕ್ಲಿಂಗ್(24 ಕಿ.ಮೀ.) ಸ್ಪರ್ಧೆಯಲ್ಲಿ …

Read More »

ಸ್ತಗಿತ ಹೊಂದಿದ್ದ ವಾಟ್ಸ್ ಆ್ಯಪ್ ಪುನರ್ ಆರಂಭ ಗ್ರಹಣ ಹಿಡಿದಿತ್ತು ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳ ಸುರಿಮಳೆ

lಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ …

Read More »

ಬಸ್‌ ಪ್ರಯಾಣ ದರ ದುಬಾರಿ: ಒಂದು ಸಾವಿರ ಪ್ರಕರಣ ದಾಖಲು

  ಬೆಂಗಳೂರು: ಬಸ್‌ ಪ್ರಯಾಣ ದರ ದುಬಾರಿ ಆಗಿರುವುದರಿಂದ ಕಾರ್ಯಾಚರಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ರಾಜ್ಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.   ‘ಬೆಂಗಳೂರಿನಲ್ಲೇ 450 ಪ್ರಕರಣಗಳನ್ನು ದಾಖಲಿಸಲಾಗಿದ್ದು, ರಾಜ್ಯದ ವಿವಿಧೆಡೆಯೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಟ್ಟಾರೆ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಪ್ರಯಾಣ ದರ ಹೆಚ್ಚಳವಷ್ಟೇ ಅಲ್ಲದೇ, ದಾಖಲೆಗಳು ಸಮರ್ಪಕವಾಗಿ ಇಲ್ಲದ ಪ್ರಕರಣಗಳೂ ಇದರಲ್ಲಿ ಸೇರಿವೆ’ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ವಿವರಿಸಿದರು. ‘ದಸರಾ …

Read More »

ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ

ಚಿತ್ರದುರ್ಗ : ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಿವೇಶನದ ಸಮಸ್ಯೆ ಹಿನ್ನೆಲೆ‌ ಸಹಾಯ ಮಾಡುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೋದರ ಮಾವನ ಮಗನಾದ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧವೇ ಯುವತಿ ಠಾಣೆಯಲ್ಲಿ ದೂರು ನೀಡಿದ್ದಾರೆ, ಘಟನೆ ವಿವರ : ದೂರುದಾರ ಯುವತಿಗೆ ಉಮೇಶ್ ಸೋದರ ಮಾವನ ಮಗನಾಗಬೇಕು, ಉಮೇಶ್ ಕಳೆದ ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು …

Read More »

ಪಟಾಕಿ ಸಿಡಿಸುವ ವೇಳೆ ಮುನ್ನೆಚ್ಚರಿಕೆ ಅಗತ್ಯ

ಬೆಂಗಳೂರು: ಇಂದಿನಿಂದ ಮೂರು ದಿನ ಎಲ್ಲೆಡೆ ಬೆಳಕಿನ ಹಬ್ಬದ ಸಡಗರ. ಕಳೆದ ಎರಡು ವರ್ಷಗಳಿಂದ ಕಾಣಿಸದ ಸಂಭ್ರಮ ಈ ವರ್ಷ ಎಲ್ಲೆಡೆ ಕಾಣಿಸಲಾರಂಭಿಸಿದೆ. ಮಕ್ಕಳು-ಹಿರಿಯರೆನ್ನದೆ ಎಲ್ಲ ವಯೋಮಾನದವರೂ ಮನೆಯ ಅಂಗಳ, ತಾರಸಿ ಏರಿ ಪಟಾಕಿ ಸುಡುವ ಮೂಲಕ ಹಬ್ಬವನ್ನು ಭಾರಿ ಸದ್ದು ಗದ್ದಲದೊಂದಿಗೆ ದೀಪಾವಳಿ ಆಚರಿಸಿ ಸಂಭ್ರಮಿಸುತ್ತಾರೆ. ಪಟಾಕಿ ಸಿಡಿಸುವ ವೇಳೆ ಆಗುವ ಅನನುಕೂಲ ಮತ್ತು ದುರಂತದ ಬಗ್ಗೆ ಹಿಂದಿ ನಿಂದಲೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಲೇ ಬರಲಾಗಿದೆ. ಅಜಾಗ ರೂಕತೆಯಿಂದ …

Read More »

ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರಕಾರ ಜಾಗ ಕಲ್ಪಿಸಿಕೊಡಬೇಕು : ಜೋಶಿ

ಪಣಜಿ: ಗೋವಾದಲ್ಲಿ ಕನ್ನಡಿಗರ ಬಹು ವರ್ಷಗಳ ಕನಸು ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ದೊಡ್ಡ ಕನಸು. ಗೋವಾ ಸರ್ಕಾರದ ಬಳಿ ನಮ್ಮದು ಮನವಿಯಿದೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಈಗಾಗಲೇ ನಿಧಿಯನ್ನು ಕೂಡ ಮಂಜೂರು ಮಾಡಿದೆ. ಆದರೆ ಇಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗದ ಅಗತ್ಯವಿದೆ. ಗೋವಾ ಸರ್ಕಾರವು ಕನ್ನಡ ಭವನ ನಿರ್ಮಾಣಕ್ಕೆ ಜಾಗ ಕಲ್ಪಿಸಿಕೊಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ …

Read More »

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

    ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ …

Read More »

ನಮ್ಮನ್ನು ತುಳಿಯುತ್ತಿದಾರೆ, ಎಲ್ಲಾ ಗೊತ್ತಾಗ್ತಿದೆ ಎಂದು ಆಕ್ರೋಶಗೊಂಡ ಡಾಲಿ, ಯೋಗಿ!

ನಟನಾಗಿ ಚಿತ್ರರಂಗ ಪ್ರವೇಶಿಸಿ ಟಗರು ಚಿತ್ರದ ವಿಲನ್ ರೋಲ್ ಮೂಲಕ ದೊಡ್ಡ ತಿರುವು ಪಡೆದುಕೊಂಡ ಧನಂಜಯ್ ನಂತರ ಬ್ಯಾಕ್ ಟು ಬ್ಯಾಕ್ ಸಕ್ಸಸ್ ಕಂಡರು. ಕನ್ನಡದ ನಂತರ ಟಾಲಿವುಡ್ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ ಧನಂಜಯ ಅಲ್ಲು ಅರ್ಜುನ್ ಅಭಿನಯದ ಪುಷ್ಪದಂತಹ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡರು. ಹೀಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಧನಂಜಯ್ ನಿರ್ಮಾಪಕನಾಗಿಯೂ ಬಡ್ತಿ ಪಡೆದಿದ್ದಾರೆ. ಶಂಕರ್ ಗುರು ನಿರ್ದೇಶನದ …

Read More »

ಪುನೀತ್ ನೆನಪಲ್ಲಿ ವೇದಿಕೆ ಮೇಲೆ ಒಂದಾದ ದೊಡ್ಮನೆ ಕುಟುಂಬ

ಮೈಸೂರು ಅರಸರ ಕುಟುಂಬದ ಬಳಿಕ ಕರ್ನಾಟಕದ ಜನ ಅತಿ ಹೆಚ್ಚು ಪ್ರೀತಿಸಿದ, ಗೌರವಿಸಿದ ಕುಟುಂಬವೆಂದರೆ ಅದು ದೊಡ್ಮನೆ ಕುಟುಂಬ. ದೊಡ್ಮನೆ ಕುಟುಂಬದ ಬಹುತೇಕ ಸದಸ್ಯರು ಇಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಒಟ್ಟಿಗೆ ವೇದಿಕೆ ಏರಿ ಅಪ್ಪುವನ್ನು ಭಾವುಕವಾಗಿ ನೆನಪು ಮಾಡಿಕೊಂಡರು.   ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ವಿಜಯಪ್ರಕಾಶ್ ಅವರು ಅಪ್ಪು ‘ಗೊಂಬೆ ಹೇಳುತೈತೆ’ ಹಾಡು ಹಾಡಿದರು. ಹಾಡು ಮುಗಿವ ವೇಳೆಗೆ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, …

Read More »