ನವದೆಹಲಿ: ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಂದೆ-ತಾಯಿ ಇರಲಾರರು ಎಂಬ ಮಾತೊಂದಿದೆ. ಈ ಮಾತು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದುಡ್ಡಿಗಾಗಿ ಹೆತ್ತವರೇ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ನೀಚ ಕೃತ್ಯ ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ. ತನಗೆ ಗೌರವದಿಂದ ಬದುಕಲು ಬಿಡಿ ಎಂದು ಬೇಡಿಕೊಂಡರೂ ಕೇಳದ ಅವರು ಆಕೆಗೆ ಹೊಡೆದು, ಈ …
Read More »2 ರಿಂದ 18 ವರ್ಷದೊಳಗಿನ ಮಕ್ಕಳು ಈ ವರ್ಷದ ಸೆಪ್ಟೆಂಬರ್ ವೇಳೆಗೆ ಕೊವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಬಹುದು
ಲಸಿಕೆಗಳಿಗಾಗಿ ಹಂತ 2-3 ಕ್ಲಿನಿಕಲ್ ಪ್ರಯೋಗಗಳು ಪ್ರಸ್ತುತ ಮಕ್ಕಳ ಮೇಲೆ ನಡೆಯುತ್ತಿವೆ. ಭಾರತದಲ್ಲಿ ಮಕ್ಕಳಲ್ಲಿ ಎರಡು ಲಸಿಕೆಗಳನ್ನು ಪರೀಕ್ಷಿಸಲಾಗಿದೆ. ಅವುಗಳೆಂದರೆ ಭಾರತ್ ಬಯೋಟೆಕ್ನ ಕೊವಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾದ ಜೈಕೋವ್-ಡಿ. ಕೊವಾಕ್ಸಿನ್ ಪ್ರಯೋಗವು 525 ಸ್ವಯಂಸೇವಕರನ್ನು ಒಳಗೊಂಡಿದೆ ಆದರೆ ಜೈಕೋವ್-ಡಿ ಯ ಪ್ರಯೋಗಗಳು-ಹಂತ II/III ಕ್ಲಿನಿಕಲ್ ಅಧ್ಯಯನದ ಭಾಗವಾಗಿ-12-18 ವಯಸ್ಸಿನ ಗುಂಪಿನಲ್ಲಿ 1,000 ಸ್ವಯಂಸೇವಕರನ್ನು ಒಳಗೊಂಡಿದೆ. ಈ ಹಿಂದೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ದೇಶಕ …
Read More »ವರಮಹಾಲಕ್ಷ್ಮೀ ವ್ರತ : ಆಚರಣೆ, ಹುಟ್ಟಿನ ಕಥೆ ನಿಮಗೆ ಗೊತ್ತಾ..?
ಈ ವರಮಹಾಲಕ್ಷ್ಮೀ ವ್ರತವನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಅಂದರೆ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸುವುದು ರೂಢಿಯಾದರೂ ಹಿಂದೂಗಳ ಮನೆಯಲ್ಲಿ ಪ್ರತಿ ದಿನವೂ ಹೊಸ್ತಿಲು ಪೂಜೆಯನ್ನು ಮಾಡುವ ಮೂಲಕ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಮಹಾಲಕ್ಷ್ಮೀ ಅಂದರೆ ಶ್ರೀಮನ್ನಾರಾಯಣನ ಮಡದಿ. ತನ್ನನ್ನು ಪೂಜಿಸಿದವರಿಗೆ ಬೇಕಾದ ವರಗಳನ್ನು ನೀಡುವವಳೇ ವರಮಹಾಲಕ್ಷ್ಮೀ ಎಂದುಕೊಳ್ಳಬಹುದು. ‘ವರ’ ಅಂದರೆ ಶ್ರೇಷ್ಠ ಅಂತಲೂ ಅರ್ಥವಿದೆ. ಆದ್ದರಿಂದ ವರಮಹಾಲಕ್ಷ್ಮೀ ಅಂದರೆ ಶ್ರೇಷ್ಠಳಾದ ಮಹಲಾಕ್ಷ್ಮೀ ಎಂದೂ ಅರ್ಥವಾಗುತ್ತದೆ. ಇಂತಹ ಮಹಾಲಕ್ಷ್ಮಿಯು …
Read More »ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ, ಕ್ಷಮೆ ಕೇಳಿದ್ದೇನೆ – ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ
ಬೆಂಗಳೂರು: ಹಿಂದೂ ದೇವತೆಗಳಿಗೆ ಆಕ್ಷೇಪರ್ಹ ಪದ ಬಳಕೆ ಮಾಡಿರುವ ಆರೋಪದ ಕುರಿತಾಗಿ ತಮ್ಮ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವ ಕಾರಣ, ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ತಮ್ಮ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯವು ತನಿಖೆ ನಡೆಸಲು ಕೊಡಿಗೆಹಳ್ಳಿ ಪೊಲೀಸರಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ …
Read More »ಅಗತ್ಯಬಿದ್ದರೆ ರಾಜ್ಯಸಭೆಯಲ್ಲಿ ನಡೆದ ಘಟನೆಗೆ ಸೂಕ್ತ ಕ್ರಮ : ಉಪ ರಾಷ್ಟಪತಿ ವೆಂಕಯ್ಯ ನಾಯ್ಡು
ಬೆಂಗಳೂರು: ರಾಜ್ಯಸಭೆ ಈಚೆಗೆ ನಡೆದ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಉಪ ರಾಷ್ಟಪತಿ ವೆಂಕಯ್ಯ ನಾಯ್ಡು, ಘಟನೆಗೆ ಸಂಬಂಧಿಸಿದಂತೆ ಅಗತ್ಯಬಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸಲು ಅವಕಾಶ ಇದೆ. ಆದರೆ, ಅದು ದೈಹಿಕ ಶಕ್ತಿ ಬಳಸಿಕೊಂಡು ಮಾಡುವಂತಹದ್ದಲ್ಲ. ಜನಪ್ರತಿನಿಧಿಗಳು ಇತರರಿಗೆ ಮಾದರಿ ಆಗಿರಬೇಕು. ನಮ್ಮ ನಡವಳಿಕೆಗಳು …
Read More »ಸುಸೈಡ್ ನೋಟ್ ಬರೆದು ನಾಪತ್ತೆ ಆದ ಕುಟುಂಬ
ಬೆಂಗಳೂರು ;ಕೋವಿಡ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಬಲು ಕಷ್ಟವಾಗಿದೆ. ಇದರ ಜೊತೆ ಅವಮಾನಗಳು ಇನ್ನಷ್ಟು ಬರೆ ಎಳೆದಿದ್ದು, ಬದುಕಲು ಆಗದು ಎಂದು ಕುಟುಂಬವೊಂದು ಸೂಸೈಡ್ ನೋಟ್ ಬರೆದು ನಾಪತ್ತೆಯಾಗಿರುವ ಪ್ರಕರಣ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬದ ಹುಡುಕಾಟಕ್ಕೆ ಮುಂದಾಗಿದ್ದಾರೆ. ಗಾಂಧಿ ಎಂಬ 43 ವರ್ಷದ ವ್ಯಕ್ತಿ ಟಿ ದಾಸರಹಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಹೆಂಡತಿ …
Read More »ಹೊಸಪೇಟೆ : ಹಂಪಿ ನದಿ ತಟದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ
ಹೊಸಪೇಟೆ : ದಕ್ಷಿಣಕಾಶಿ ಖ್ಯಾತಿಯ ಹಂಪಿಯ ತುಂಗಭದ್ರಾ ನದಿಯಲ್ಲಿ ಬೃಹತ್ ಮೊಸಳೆಯೊಂದು ಬುಧವಾರ ಪ್ರತ್ಯಕ್ಷವಾಗಿದೆ. ಐತಿಹಾಸಿಕ ವಿರೂಪಾಕ್ಷ ದೇವಾಲಯದ ಬಳಿ ಹಾದು ಹೋಗಿರುವ ತುಂಗಭದ್ರಾ ನದಿಯ ಸ್ನಾನಘಟ್ಟದ ಸಮೀಪದ ನದಿ ನಡುವಿನ ಬಂಡೆಗಲ್ಲಿನ ಮೇಲೆ ಮೊಸಳೆ ಪ್ರತ್ಯಕ್ಷವಾಗಿದೆ. ಸುಮಾರು ಅರ್ಧ ತಾಸಿಗೂ ಆಧಿಕ ಕಾಲ ಮೊಸಳೆ ಬಂಡೆ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಸ್ಥಿತಿಯಲ್ಲಿ ಕಂಡು ಬಂದಿತು. ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಮೊಸಳೆ …
Read More »ಗೃಹ ಖಾತೆಯ ಕಿರಿಕಿರಿ ನನಗೆ ಮಾತ್ರ ಗೊತ್ತಿದೆ. ಸರಿಯಾಗಿ ನಿದ್ರೆ ಮಾಡಲೂ ಆಗದ ಸ್ಥಿತಿ ನನ್ನದು: ಅರಗ ಜ್ಞಾನೇಂದ್ರ
ಶಿವಮೊಗ್ಗ: ಗೃಹ ಖಾತೆಯ ಕಿರಿಕಿರಿ ನನಗೆ ಮಾತ್ರ ಗೊತ್ತಿದೆ. ಸರಿಯಾಗಿ ನಿದ್ರೆ ಮಾಡಲೂ ಆಗದ ಸ್ಥಿತಿ ನನ್ನದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅಳಲು ತೋಡಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮೊದಲು ಆರಾಮವಾಗಿದ್ದೆ. ಈಗ ಗೃಹ ಸಚಿವ ಸ್ಥಾನ ಅಲಂಕರಿಸಿದ ಮೇಲೆ ನಿದ್ರೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ರಾತ್ರಿಯೆಲ್ಲ ಪೊಲೀಸರು ಮಾಹಿತಿ ನೀಡಲು ಫೋನ್ ಮಾಡುತ್ತಾರೆ. ಹಾಗಂತ ಪಲಾಯನ ಮಾಡುವುದಿಲ್ಲ. ಕೊಟ್ಟ ಕುದುರೆಯನ್ನು ಇಳಿದರೆ ಶೂರನಾಗುವುದಿಲ್ಲ ಎಂಬ ಕಾರಣಕ್ಕೆ …
Read More »ರಾಜಧಾನಿಯಲ್ಲಿ ಮುಂದಿನ ಆಗಸ್ಟ್ 3೦ ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ
ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ …
Read More »ಅಪ್ಪನ ಆಸೆ ಬೆನ್ನೆಲುಬಾಗಿ ನಿಂತ ಪುನೀತ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು : ಜೀವನದಲ್ಲಿ ಶಿಕ್ಷಣಕ್ಕಿಂತಲೂ ಜ್ಙಾನ ಮುಖ್ಯ, ಪುನೀತ್ ರಾಜಕುಮಾರ ವಿದ್ಯಾಭ್ಯಾಸ ಕಡಿಮೆ ಇದ್ದರೂ ಅವರ ಜ್ಞಾನ ಸಂಪತ್ತು ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜಕುಮಾರ ಅಕಾಡಮಿಯ ಎಜುಕೇಶನ್ ಆಪ್ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು ಮನುಷ್ಯ ಕೇವಲ ಭೌಧಿಕ ವಿದ್ಯಾಭ್ಯಾಸ ಪಡೆಯುವುದು ಮುಖ್ಯವಲ್ಲ ಅದರ ಜೊತೆಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ತಿಳಿಸಿದರು. ಪುನೀತ್ ಶಾಲಾಭ್ಯಾಸದಲ್ಲಿ ಕಡಿಮೆ ಕಲೆತರೂ , ಲೋಕಜ್ಞಾನವನ್ನು ಪಡೆದುಕೊಂಡಿದ್ದಾರೆ. …
Read More »
Laxmi News 24×7