Breaking News

Uncategorized

ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್

ಧಾರವಾಡ/ಗದಗ: ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಧಾರವಾಡ ಮಹಾನಗರ ಪಾಲಿಕೆ ಧಾರವಾಡ ತರಕಾರಿ ಮಾರುಕಟ್ಟೆಯನ್ನು ನಗರದ ಕೆಇ ಬೊರ್ಡ್ ಶಾಲೆಯ ಆವರಣಕ್ಕೆ ಸ್ಥಳಾಂತರಿಸಿದೆ. ಆದರೆ ಅಲ್ಲಿ ಕೊಳ್ಳವವರೂ ಬರುತ್ತಿಲ್ಲ, ಮಾರುವವರೂ ಬರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ. ವ್ಯಾಪಾರಕ್ಕೆ ಬರುವವರಿಗೆ ಇಗಾಗಲೇ ಪಾಲಿಕೆ ಮಾರ್ಕಿಂಗ್ ಮಾಡಿ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೆಲವೇ ಕೆಲವು ತರಕಾರಿ ವ್ಯಾಪಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ವ್ಯಾಪಾರ ಇಲ್ಲದ ಕಾರಣ ಮೊದಲಿನ …

Read More »

ಕೊರೋನಾ ಸೋಂಕಿನ ಹೆಚ್ಚಳ’ದ ಈ ಸಂದರ್ಭದಲ್ಲಿ, ನಿಮ್ಮ ಬಳಿ ಇರಲಿ, ಈ ‘ಸಹಾಯವಾಣಿ’ ಸಂಖ್ಯೆಗಳು.!

ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನವೊಂದಕ್ಕೆ 10 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿನ ತುರ್ತು ಸಂದರ್ಭದ ಸಹಾಯಕ್ಕಾಗಿ ಸಹಾಯವಾಣಿ ಕೂಡ ಆರಂಭಿಸಲಾಗಿದೆ. ನಿಮಗೆ ಬೇಕಾದ ಮಾಹಿತಿಯನ್ನು ನೀವು ಕುಳಿತಲ್ಲೇ ಒಂದು ಕರೆ ಮಾಡುವ ಮೂಲಕ ಪಡೆಯಬಹುದಾಗಿದೆ. ಹೌದು.. ರಾಜ್ಯ ಆರೋಗ್ಯ ಇಲಾಖೆಯೂ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ, ರಾಜ್ಯದ ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ಸಹಾಯವಾಣಿ ಸಂಖ್ಯೆ …

Read More »

ಬೆಂಗಳೂರಲ್ಲಿ ಇಂದು 15,244 ಹೊಸ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಗುರುವಾರ ಒಟ್ಟು 25,795 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 123 ಮಂದಿ ಮೃತರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಕಾಣಿಸಿಕೊಂಡ ನಂತರ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣ ಇದಾಗಿದೆ. ರಾಜ್ಯದ ವಿವಿಧೆಡೆ ಕೋವಿಡ್‌ ತೀವ್ರಗತಿಯಲ್ಲಿ ಏರುತ್ತಿದೆ. ಹೀಗಾಗಿ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಗುರುವಾರ ಒಟ್ಟು 1.62 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 15.87ಕ್ಕೆ ಏರಿಕೆಯಾಗಿದೆ. …

Read More »

ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ : ಗೋಕಾಕ ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ

ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ  ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ.  ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ  ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …

Read More »

ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ – ಕೊರೊನಾ ಚೈನ್‍ಬ್ರೇಕ್‍ಗೆ ರಾಜ್ಯದೆಲ್ಲೆಡೆ 144 ಸೆಕ್ಷನ್

ಬೆಂಗಳೂರು: ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ ಬಿದ್ದಿದೆ. ಇಂದಿನಿಂದ ಹೊರಹೋಗುವ ಮುನ್ನ ಬೀ ಅಲರ್ಟ್ ಆಗಿರಬೇಕಾಗಿದೆ. ಯಾಕಂದರೆ ರಾಜ್ಯದಲ್ಲಿ ಇವತ್ತಿಂದ ಟಫ್‍ರೂಲ್ಸ್ ಜಾರಿಗೆ ಬರಲಿದೆ. ಲಾಕ್‍ಡೌನ್ ಇಲ್ಲದಿದ್ದರೂ ಎಲ್ಲಾ ಕಡೆ ಹಾಫ್ ಲಾಕ್‍ಡೌನ್ ಮಾಡಲಾಗುತ್ತದೆ. ಹೌದು. ಕೊರೊನಾ ಕಂಟ್ರೋಲ್‍ಗೆ ಕರ್ನಾಟಕದಲ್ಲಿ ಟಫ್‍ರೂಲ್ಸ್ ಜಾರಿಗೆ ತರಲಾಗಿದೆ. ಕೊರೊನಾ ಚೈನ್ ಬ್ರೇಕ್‍ಗೆ ಈ ಟಫ್‍ರೂಲ್ಸ್ ಜಾರಿ ಮಾಡಿದ್ದು, ಇಂದಿನಿಂದ ಮೇ 4ರವರೆಗೆ ಕಠಿಣ ನಿಯಮ ಅನ್ವಯವಾಗುತ್ತದೆ. ರಾಜ್ಯಾದ್ಯಂತ ನೈಟ್ ಕಫ್ರ್ಯೂ, ವೀಕೆಂಡ್ ಕಫ್ರ್ಯೂ, …

Read More »

ಬೆಡ್ ಸಿಗದೆ ಆಸ್ಪತ್ರೆಗಳ ಮುಂದೆ ಅಂಬುಲೆನ್ಸ್ ಕ್ಯೂ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದೆ. ಎಲ್ಲಿ ನೋಡಿದರು ಕೂಡ ಕೊರೊನಾ ರೋಗಿಗಳ ನರಳಾಟ ಕಂಡುಬರುತ್ತಿದೆ. ಈ ನಡುವೆ ಜನ ಆಸ್ಪತ್ರೆ, ಚಿತಾಗಾರ, ಪಿಎಚ್‍ಸಿ ಸೆಂಟರ್‍ ಗಳಲ್ಲಿ ಕ್ಯೂ ನಿಂತು ಪರದಾಡುವಂತ ಪರಿಸ್ಥಿತಿ ಬಂದಿದೆ. ಕೊರೊನಾ ಸೋಂಕಿತರನ್ನು ಹೊತ್ತು ತರುವ ಅಂಬುಲೆನ್ಸ್ ಬೆಡ್ ಸಿಗದೆ ಆಸ್ಪತ್ರೆಗಳ ಮುಂದೆ ಕ್ಯೂ ನಿಂತರೆ, ಅಂತ್ಯಕ್ರಿಯೆಗಾಗಿ ಮೃತದೇಹಗಳನ್ನ ಹೊತ್ತು ಚಿತಾಗಾರಗಳ ಬಳಿ ಅಂಬುಲೆನ್ಸ್ ಸರದಿಯಲ್ಲಿ ನಿಲ್ಲುವಂತಹ ಪರಿಸ್ಥಿತಿ ಬಂದೊದಗಿದೆ. ಅಂಬುಲೆನ್ಸ್ ಕಥೆ ಈ ರೀತಿಯಾದರೆ …

Read More »

ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು

ಬೆಳಗಾವಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಗಂಣದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಹೆಚ್ಚಾಗಿರುವುದರಿಂದ ಏ.20 ರಂದು ಸರ್ಕಾರ ಹೊರಡಿಸಿದ ಆದೇಶ ಸಂ. ಆರ್ ಡಿ 158 ಟಿಎನ್ ಆರ್ 2020 ಅನ್ವಯ ಹಾಗೂ ಕೋವಿಡ್-19ರ ರಾಜ್ಯ ಮಾರ್ಗಸೂಚಿ ನಿಯಮಗಳ ಪ್ರಕಾರ …

Read More »

ಬೀದರ್ ತಾಲೂಕಿನ ಬಾವಗಿ ಗ್ರಾಮಸ್ಥರು ಸ್ವಯಂ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ.

ಬೀದರ್, ಏಪ್ರಿಲ್ 21: ಕಳೆದ ಕೆಲವು ದಿನಗಳಿಂದ ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳಿಂದ ಜನರು ಆತಂಕಕ್ಕೊಳಗಾಗಿದ್ದು, ಬೀದರ್ ತಾಲೂಕಿನ ಬಾವಗಿ ಗ್ರಾಮಸ್ಥರು ಸ್ವಯಂ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ. ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡಲು ಮೀನಮೇಷ ಏಣಿಸುತ್ತಿರುವಾಗಲೇ ಬಾವಗಿ ಗ್ರಾಮಸ್ಥರ ನಿರ್ಣಯ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಸರ್ಕಾರ ಈ ಹಿಂದೆ ಮಾಡಿದ ಲಾಕ್‌ಡೌನ್ ಮಾದರಿಯಲ್ಲೇ ಬಾವಗಿಯಲ್ಲಿ ಕಳೆದ ಏ.೧೯ರಿಂದ ಸ್ವಯಂ ದಿಗ್ಭಂಧನ ವಿಧಿಸಲಾಗಿದೆ. ಗ್ರಾಮದಲ್ಲಿ ಡಂಗೂರ ಸಾರಿ ಗ್ರಾಮಸ್ಥರಿಗೆ ಲಾಕ್‌ಡೌನ್ …

Read More »

ಚೆನ್ನೈ ಸೂಪರ್​ ಕಿಂಗ್ಸ್​ಗೆ ರಾಜಸ್ಥಾನ್​​ ಸವಾಲ್​; ಗೆದ್ದವರ ಹೋರಾಟದಲ್ಲಿ ಯಾರಿಗೆ ಗೆಲುವು..?

ದಿನೇ ದಿನೇ ಕಲರ್​​​​​​​​​​​​​​​​​​​​​​​​​​​​​​ಫುಲ್​ ಲೀಗ್​ನ​​ ರೋಚಕತೆ ಹೆಚ್ಚಾಗ್ತಿದೆ. ಇಂದು ಮತ್ತೊಂದು ಹೈವೋಲ್ಟೇಜ್​​​ ಮ್ಯಾಚ್​​ಗೆ ವಾಖೆಂಡೆ ಸಜ್ಜಾಗಿದ್ದು, ಇಂದಿನ ಕದನದಲ್ಲಿ ರಾಜಸ್ಥಾನ್​ ರಾಯಲ್ಸ್​, ಚೆನ್ನೈ ಸೂಪರ್​ ಕಿಂಗ್ಸ್​​ ಮುಖಾಮುಖಿಯಾಗಲಿವೆ. ಕಳೆದ ಪಂದ್ಯದಲ್ಲಿ ಗೆದ್ದಿರುವ ಉಭಯ ತಂಡಗಳು, ಗೆಲುವಿನ ಓಟ ಮುಂದುವರಿಸುವ ಲೆಕ್ಕಚಾರದಲ್ಲಿವೆ. ಡೆಲ್ಲಿ ವಿರುದ್ಧ ಹೀನಾಯ ಸೋಲು ಕಂಡಿದ್ದ ಚೆನ್ನೈ ಪಂಜಾಬ್​​ ಕಿಂಗ್ಸ್​​ ವಿರುದ್ಧ ಗೆದ್ದು ಬೀಗಿದೆ. ಇದೀಗ ರಾಜಸ್ಥಾನ್​​ ರಾಯಲ್ಸ್​​​ ವಿರುದ್ಧವೂ ಅದೇ ಗೆಲುವಿನ ಲಯ ಮುಂದುವರಿಸುವ ವಿಶ್ವಾಸದಲ್ಲಿದೆ. ಪಂಜಾಬ್​ …

Read More »

ಮತಗಳ ಲೆಕ್ಕದ ಜತೆ ಸೋಲು-ಗೆಲುವಿನ ಲೆಕ್ಕಾಚಾರ

ಬೆಳಗಾವಿ: ಕಳೆದ ನಾಲ್ಕು ಚುನಾವಣೆಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಮರಳಿ ತನ್ನ ವಶ ಮಾಡಿಕೊಳ್ಳಲಿದೆಯೇ? ಜಾತಿ ಲೆಕ್ಕಾಚಾರ, ಅನುಭವದ ರಾಜಕಾರಣ ಮತ್ತು ಅನುಕಂಪದ ಅಲೆಯಲ್ಲಿ ಯಾವುದಕ್ಕೆ ಮತದಾರ ಮಣೆ ಹಾಕಿದ್ದಾನೆ? ಅನುಭವ ಮತ್ತು ಅನುಕಂಪದ ನಡುವೆ ಯಾವುದು ಮಂಕಾಗಲಿದೆ? – ಇದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅದೂ ವಿಶೇಷವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳ ಜೋರಾಗಿ ನಡೆದಿರುವ ಲೆಕ್ಕಾಚಾರ. ಕೊರೊನಾ ಎರಡನೇ ಅಲೆಯ ಭೀತಿಯ …

Read More »