Breaking News

Uncategorized

ಆದಿತ್ಯ ಬಿಸ್ವಾಸ್ ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿ ತಕ್ಷಣದಿಂದಲೇ ಅಧಿಕಾರ: B.S.Y.

ಬೆಳಗಾವಿ : ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿಯನ್ನಾಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.             ಆದಿತ್ಯ ಬಿಸ್ವಾಸ್ ತಕ್ಷಣ ಅಧಿಕಾರ ವಹಿಸಿಕೊಳ್ಳಲಿದ್ದು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಸಿಎಂ …

Read More »

ಮುಂಗಾರು ಹಂಗಾಮು-ಗರಿಗೆದರಿದ ಕೃಷಿ ಚಟುವಟಿಕೆ : ಬಿತ್ತನೆ ಬೀಜ-ರಸಗೊಬ್ಬರಕ್ಕಿಲ್ಲ ಕೊರತೆ

ಗದಗ: ಸತತ ಐದು ವರ್ಷಗಳಿಂದ ಅನಾವೃಷ್ಟಿ, ಅತಿವೃಷ್ಟಿಯಿಂದ ರೈತಾಪಿ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಈ ಬಾರಿ ಮುಂಗಾರು ಪೂರ್ವದಲ್ಲೇ ಮಳೆ ಚುರುಕುಗೊಂಡಿದೆ. ಹೊಸ ಭರವಸೆಯೊಂದಿಗೆ ರೈತರು ಮತ್ತೆ ಜಮೀನುಗಳತ್ತ ಮುಖ ಮಾಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಬಿತ್ತನೆಗೆ ಸಜ್ಜುಗೊಳ್ಳುತ್ತಿದ್ದಾರೆ. ಸತತ 5 ವರ್ಷಗಳಿಂದ ಜಿಲ್ಲೆಯ ರೈತರು ಒಂದಿಲ್ಲೊಂದು ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ. 2018ರ ವರೆಗೂ ಜಿಲ್ಲೆಯನ್ನು ಬರಗಾಲ ಆವರಿಸಿದ್ದರೆ, 2019 ಮತ್ತು 2020 ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ …

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್ ಘೋಷಣೆ: ಶಶಿಕಲಾ ಜೊಲ್ಲೆಯವರಿಂದ ಸಿಎಂಗೆ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಇಲಾಖೆ ಸಚಿವೆಯಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು …

Read More »

ರಮೇಶ ಜಾರಕಿಹೊಳಿಗೆ ಪರಬಾಲಚಂದ್ರ ಜಾರಕಿಹೊಳಿಭರ್ಜರಿ ಬ್ಯಾಟಿಂಗ್ ಮತ್ತೆ B.S.Y. ಸಂಪುಟ ಸರ್ತಾರಾ ರಮೇಶ್ ಜಾರಕಿಹೊಳಿ…?

ಬೆಳಗಾವಿ; ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜತೆಗೆ ಸಿಡಿ ಪ್ರಕರಣ ಬಹಿರಂಗದಿಂದ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ತಂದಿಟ್ಟಿದ್ದರು. ಸಿಡಿ ಪ್ರಕರಣ ತನಿಖೆಯನ್ನು ಎಸ್ ಐಟಿ ತಂಡ ನಡೆಸುತ್ತಿದೆ. ಇತ್ತೀಚೆಗೆ ಪೊಲೀಸರ ವಿಚಾರಣೆ ವೇಳೆ ಸಿಡಿಯಲ್ಲಿ ಕಾಣಿಸಿಕೊಂಡಿ ರುವುದು ನಾನೇ, ಅದು ತಮ್ಮತಿ ಸೆಕ್ಸ್​ ಎಂದು ಒಪ್ಪಿಕೊಂಡಿದ್ದ ರಮೇಶ್ ಜಾರಕಿಹೊಳಿ, ಇದೀಗ ಮತ್ತೆ ಸಿಎಂ ಬಿ …

Read More »

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …

Read More »

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಆನಂದಯ್ಯರ ಆಯುರ್ವೇದಿಕ್ ಔಷಧ ನೀಡಲು ಕೋರ್ಟ್ ಅಸ್ತು, ನಾಳೆಯಿಂದ ಕೊವಿಡ್‌ಗೆ ಔಷಧ ವಿತರಣೆ ಶುರು

ಆಂಧ್ರ ಪ್ರದೇಶ: ದೇಶದಲ್ಲಿ ಮಹಾಮಾರಿ ಕೊರೊನಾ ಜನರಲ್ಲಿ ತಲ್ಲಣ ಉಂಟು ಮಾಡಿದೆ. ಈಗಾಗಲೇ ಕೊರೊನಾಗೆ ವ್ಯಾಕ್ಸಿನ್ ಬಂದಿದ್ರೂ ದೇಶದ ಎಲ್ಲರಿಗೂ ಈಗಲೇ ತಲುಪಿಸಲು ಆಗ್ತಿಲ್ಲ. ಇದರ ನಡುವೆ ಅಲ್ಲಲ್ಲಿ ಕೆಲವರು ಆಯುರ್ವೇದಿಕ್ ಔಷಧಿಗಳನ್ನ ನೀಡ್ತಿದ್ದಾರೆ. ಕೊರೊನಾಗೆ ಆಯುರ್ವೇದಿಕ್ ಔಷಧ ನೀಡಿದ್ರೆ ಗುಣವಾಗುತ್ತೆ ಅಂತಾ ಹೇಳಿಕೊಂಡಿದ್ದಾರೆ. ಇಂತಹವರಲ್ಲಿ ಒಬ್ಬರು ಅಂದ್ರೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ನಂ ನಿವಾಸಿ ಆನಂದಯ್ಯ ಕೂಡ ಒಬ್ಬರು. ಆನಂದಯ್ಯನವರ ಆಯುರ್ವೇದಿಕ್ ಔಷಧಿಯಿಂದ ಕೊರೊನಾ ಗುಣಮುಖವಾಗುತ್ತೆ ಅಂತಾ ಸಾವಿರಾರು …

Read More »

ಗುತ್ತಿಗೆ ನೌಕರರಿಗೆ ಸರ್ಕಾರದಿಂದ ರಿಸ್ಕ್ ಭತ್ಯೆ ಘೋಷಣೆ; ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿರುವ ಗುತ್ತಿಗೆ ನೌಕರರಿಗೆ ಮಾಸಿಕ ರಿಸ್ಕ್ ಭತ್ಯೆ ಘೋಷಿಸಲಾಗಿದೆ. ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಲ್ಲಿನ 922 ಗುತ್ತಿಗೆ ನೌಕರರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮಾಸಿಕ ಅಪಾಯ ಭತ್ಯೆಯನ್ನು ಘೋಷಿಸಿದೆ. ಸಂಶೋಧನಾ ವಿಜ್ಞಾನಿ, ಸಂಶೋಧನಾ ಸಹಾಯಕರು, ಲ್ಯಾಬ್ ತಂತ್ರಜ್ಞರು, ಡೇಟಾ ಎಂಟ್ರಿ ಆಪರೇಟರುಗಳಿಗೆ 5,000 ರೂ., ದಾದಿಯರಿಗೆ 8,000 ರೂ. ಮತ್ತು ಡಿ ಗ್ರೂಪ್ ನೌಕರರಿಗೆ 10,000 ರೂ. ಅಪಾಯ …

Read More »

ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕ ಸಾವು: ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಕುಟುಂಬಸ್ಥರು

ಚಿಕ್ಕಮಗಲೂರು: ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕನ ಸಾವಿನ ಪ್ರಕರಣದಲ್ಲಿ ವೈದ್ಯರನ್ನು ಕೊಲೆ ಯತ್ನದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಡಾ.ದೀಪಕ್ (50) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ತಾರಿಕೆರೆ ಪಟ್ಟಣದಲ್ಲಿ ಸೋಮವಾರ ಡೆಂಗ್ಯೂ ಪೀಡಿತ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಹದಗೆಟ್ಟಾಗ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಸಾವಿನ …

Read More »