ಬೆಳಗಾವಿ- ಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಸಿಐಡಿ ಪೋಲೀಸರು,ತಂದೆ,ಮತ್ತು ಮಗ,ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಕೋಟ್ಯಾಂತರ ರೂ ವಂಚಿಸಿದ ಆರೋಪದ ಮೇಲೆ ಆಝಂ ನಗರದ ನಿವಾಸಿಗಳಾದ ತಂದೆ ಮತ್ತು ಮಗನ ಮೇಲೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರು ಸಿಐಡಿ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಝಂ ನಗರದ ತಂದೆ ಮಹ್ಮದ ಅಬ್ಬಾಸ್ ಹುಸೇನ್ …
Read More »ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ
ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …
Read More »ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …
Read More »ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು
ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ
Read More »ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಮಂಡ್ಯ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಧು(30) ಹತ್ಯೆಯಾದ ವ್ಯಕ್ತಿ. ಮಧು ನಿನ್ನೆ (ಬುಧವಾರ ಮಾ .31 ) ರಾತ್ರಿ ಗುಂಡಾಪುರದ ಕೊಂಡೋತ್ಸವ ಕಾರ್ಯಕ್ರಮಕ್ಕೆ ತೆರಳಲು ಗ್ರಾಮದ ತನ್ನ ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಬಳಿಕ ಆತನ ಕತ್ತಲ್ಲಿದ್ದ …
Read More »ಈಶ್ವರಪ್ಪ ರಾಜ್ಯಪಾಲರ ಅಂಗಳಕ್ಕೆ ಹೋಗಿದ್ದು ಸರಿಯಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರ ಅಂಗಳಕ್ಕೆ ಒಯ್ಯವುದು ಸರಿಯಲ್ಲ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಮಾತನಾಡಿ, ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಶಿಸ್ತಿನ ಉಲ್ಲಂಘನೆಯಾಗಬಾರದು ಎಂದು ತಿಳಿಸಿದರು. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಿದೆ. ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಯಾವುದೇ …
Read More »CD ಕೇಸ್: ನನ್ನ ಸೋದರಿ ಮೇಲೆ ಡಿ.ಕೆ. ಶಿವಕುಮಾರ್ ಒತ್ತಡ ಇದೆ, ನಮ್ಮ ಬಳಿ 9 ಸಾಕ್ಷಿಗಳಿವೆ- ಸಂತ್ರಸ್ತೆಯ ಸಹೋದರ
ವಿಜಯಪುರ: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಸಹೋದರ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ನನ್ನ ಸಹೋದರಿ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಒತ್ತಡ ಇದೆ ಎಂದು ಅವರು ಆರೋಪಿಸಿದ್ದಾರೆ. ಇಂದು ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಪ್ರೂಫ್ ಸಮೇತ ಹೇಳ್ತಿದ್ದೇನೆ.. ಪ್ರಕರಣದ ತನಿಖೆಯಾಗಲಿ, ಎಲ್ಲವೂ ಹೊರ ಬರುತ್ತೆ. ಸತ್ಯ ಮುಚ್ಚಲು ಆಗಲ್ಲ. ಇಂದಿಲ್ಲ ನಾಳೆ ಡಿ.ಕೆ. ಶಿವಕುಮಾರ್ ಹೆಸರು ಹೊರಗೆ ಬಂದೇ ಬರುತ್ತೆ. ನಾವು ಎಲ್ಲ ಸಾಕ್ಷಿಗಳನ್ನ …
Read More »ಹೋಟೆಲ್ ಉದ್ಯಮದಲ್ಲಿ ನಷ್ಟ ; ಆತ್ಮಹತ್ಯೆಗೆ ಶರಣಾದ ಮಾಲೀಕ
ವಿಜಯಪುರ: ಹೋಟೆಲ್ ಉದ್ಯಮದಲ್ಲಿ ನಷ್ಟ ಅನುಭವಿಸಿದ ಕಾರಣಕ್ಕೆ ಹೋಟೆಲ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಗಣೇಶ್ (೪೦) ಎಂದು ಗುರುತಿಸಲಾಗಿದ್ದು ಮಂಗಳೂರು ಮೂಲದವರಾಗಿರುವ ಇವರು ಇಂಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. 30 ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದ ಇವರು ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ಮತ್ತು ಲಾಡ್ಜಿಂಗ್ ಆರಂಭಿಸಿದ್ದರು. ಕೋವಿಡ್ ಕಾರಣದಿಂದ ಹೋಟೆಲ್ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದರಿಂದ ಗಣೇಶ್ ಆರ್ಥಿಕ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ. ಹೋಟೆಲ್ ನಡೆಸಲು ಪಡೆದ …
Read More »ಮುನಿಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್..!
ಬೆಳಗಾವಿ/ರಾಯಚೂರು: ಲೋಕಸಭಾ ಚುನಾವಣೆಗೆ ಬೆಳಗಾವಿ ಕಾಂಗ್ರೆಸ್ಸಿನಲ್ಲಿ ಈಗ ಒಗ್ಗಟ್ಟಿನ ಪ್ರದರ್ಶನ ಆಗ್ತಿದೆ. ಕಳೆದ ಬಾರಿ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ವೈಮನಸ್ಸು ಹೊಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಈಗ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ಹೊತ್ತು ಸಮಾಲೋಚನೆ ಮಾಡಿದ್ದಾರೆ. ಬಳಿಕ ಸತೀಶ್ ಜಾರಕಿಹೊಳಿ ಪರ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ರು. ಪ್ರಚಾರ ಭಾಷಣದ ವೇಳೆಯೂ ಸತೀಶ್ ಜಾರಕಿಹೊಳಿಯರನ್ನೂ …
Read More »HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್
ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …
Read More »