ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಬಿಡುಗಡೆ ಮಾಡಿದ ವೀಡಿಯೋದಲ್ಲಿ ದೀಪ್ಕೆ, ದೆಹಲಿಯಲ್ಲಿ ನಡೆಯಲಿರುವ ತಮ್ಮ ಪ್ರತಿಭಟನೆಯಲ್ಲಿ …
Read More »3,000 ರೂ.ಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3,000 ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಬಡತನವನ್ನು ಮೆಟ್ಟಿ ನಿಂತು ಶಾಸಕಿಯಾಗಿ ಆಯ್ಕೆಯಾಗಿ, ಇದೀಗ ಸುವೇಂದು ಅಧಿಕಾರಿ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಿಂಗಳಿಗೆ ಕೇವಲ 3,000 ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿ ಇದೀಗ ಸುವೇಂದು ಸರ್ಕಾರದಲ್ಲಿ ಸಚಿವೆಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ …
Read More »ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ?
ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಅಣ್ಣಾಮಲೈ ಶೀಘ್ರದಲ್ಲೇ ಹೊಸ ರಾಜಕೀಯ ಪಕ್ಷ ಸ್ಥಾಪಿಸಬಹುದು ಎಂಬ ಊಹಾಪೋಹಗಳು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. ಅಣ್ಣಾಮಲೈ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ಅವರನ್ನು ಭೇಟಿಯಾಗಲು ಸಮಯ ಕೇಳಿದ್ದು, ಜೂನ್ 3ರಂದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು …
Read More »ಜಮೀರ್ ಅಹ್ಮದ್ ಭವಿಷ್ಯ ರಾಹುಲ್ ಗಾಂಧಿ ಕೈಯಲ್ಲಿ?
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಇದೇ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಸಂಪುಟ ರಚನೆ ಕಸರತ್ತು ನಡೆಯುತ್ತಿದೆ. ಡಿಕೆಶಿ ಸಂಪುಟದಲ್ಲಿ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆ ಮೂಡಿದೆ. ಹಂಗಾಮಿ ಸಿದ್ದರಾಮಯ್ಯ ಪಟ್ಟಿಯಲ್ಲಿ ಜಮೀರ್ ಹೆಸರಿದೆ. ಆದರೆ, ಡಿಕೆ ಶಿವಕುಮಾರ್ ಪಟ್ಟಿಯಲ್ಲಿ ಜಮೀರ್ ಹೆಸರಿಲ್ಲ. ಜಮೀರ್ ಬದಲಿಗೆ 3 ಹೆಸರು ಪಿಕ್ ಮಾಡಿ ಡಿಕೆಶಿ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಯು.ಟಿ.ಖಾದರ್, ಹ್ಯಾರಿಸ್, ತನ್ವೀರ್ ಸೇಠ್ ಹೆಸರು …
Read More »ಬುದ್ದಿಮಾತು ಹೇಳಿದ್ದಕ್ಕೆ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ತಿವಿದು ಹತ್ಯೆ
ಮಂಗಳೂರು: ಬುದ್ಧಿಮಾತು ಹೇಳಿದ್ದಕ್ಕೆ ಅಣ್ಣನ ಮಗ ತನ್ನ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ತಿವಿದು ಹತ್ಯೆಗೈದಿರುವ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ. 37 ವರ್ಷದ ಮಧುಸೂದನ್ ಕೊಲೆಯಾದ ದುರ್ದೈವಿ. ರಾಹುಲ್ ಕೊಲೆಗೈದ ಆರೋಪಿ. ಮೇ 31ರ ರಾತ್ರಿ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಕೆಲಸದ ವಿಚಾರವಾಗಿ ಮಧುಸೂದನ್ ಅವರು ಆರೋಪಿ ರಾಹುಲ್ಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ರಾಹುಲ್ ಕಾರ್ಯಕ್ರಮದಿಂದ ಹೊರ …
Read More »ಮಹಾರಾಷ್ಟ್ರದಲ್ಲಿ ಲಡ್ಕಿ ಬಹೀನ್ ಯೋಜನೆ ಪರಿಷ್ಕರಣೆ – 80 ಲಕ್ಷ ನಕಲಿ ಫಲಾನುಭವಿಗಳಿಗೆ ಕೊಕ್
ಮುಂಬೈ: ಮಹಾರಾಷ್ಟ್ರದಲ್ಲಿ ಲಡ್ಕಿ ಬಹೀನ್ ಯೋಜನೆಯಲ್ಲಿ 80 ಲಕ್ಷ ಮಹಿಳೆಯರನ್ನು ಫಡ್ನವೀಸ್ ಸರ್ಕಾರ ಕೈಬಿಟ್ಟಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಮಹಿಳಾ ಮತ ಸೆಳೆಯಲು ಮೈತ್ರಿಕೂಟ ಪ್ರತಿಮಹಿಳೆಗೆ ಮಾಸಿಕ 1500 ರೂ. ಕೊಡೋದಾಗಿ ಘೋಷಿಸಿತ್ತು. ಇದೀಗ ನಕಲಿ ಫಲಾನುಭವಿಗಳ ಪತ್ತೆಗೆ ಇ-ಕೆವೈಸಿ ಕಡ್ಡಾಯಗೊಳಿಸಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸದ 80 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಡಲಾಗಿದೆ. ಯೋಜನೆಯಲ್ಲಿ ಈ ಮೊದಲಿದ್ದ 2.5 ಕೋಟಿ ಫಲಾನುಭವಿಗಳ ಸಂಖ್ಯೆ ಈಗ 1.7 ಕೋಟಿಗೆ ಇಳಿದಿದೆ. ಸುಮಾರು …
Read More »ಪತಿ ಮೇಲೆ ಪತ್ನಿ ಆಸಿಡ್ ಅಟ್ಯಾಕ್ – ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಲಕ್ನೋ: ಗಂಡನ ಮೇಲೆ ಆಸಿಡ್ ಎರಚಿದ ಮಹಿಳೆಗೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 1.75 ಲಕ್ಷ ದಂಡ ವಿಧಿಸಿದೆ. ಕಹಕಂಶಾ (30) ಶಿಕ್ಷೆಗೆ ಗುರಿಯಾದ ಮಹಿಳೆ. ಈಕೆ 2025ರ ಮಾ. 7 ರಂದು ಪತಿ ಮುಜಾಫರ್ (35) ಮಲಗಿದ್ದ ವೇಳೆ ಹತ್ಯೆ ಮಾಡುವ ಉದ್ದೇಶದಿಂದ ಮುಖಕ್ಕೆ ಆಸಿಡ್ ಸುರಿದಿದ್ದಳು. ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆದರೂ ಮತ್ತೆ ಮತ್ತೆ ಆತನ ಮೇಲೆ ಆಸಿಡ್ …
Read More »ಪಕ್ಷ ವಿರೋಧಿ ಚಟುವಟಿಕೆ – ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ನಕಲಿ ಸಹಿ ಆರೋಪ ಭಾರಿ ಸಂಚಲನ ಸೃಷ್ಟಿಸಿದೆ. ಈ ವಿವಾದದ ನಡುವೆಯೇ ತೃಣಮೂಲ ಕಾಂಗ್ರೆಸ್ ತನ್ನ ಇಬ್ಬರು ಶಾಸಕರಾದ ಸಂದೀಪನ್ ಸಹಾ ಮತ್ತು ಋತಬ್ರತ ಬ್ಯಾನರ್ಜಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಎಂಸಿ ತಿಳಿಸಿದೆ. ಈ ಬೆಳವಣಿಗೆಗೂ ಮುನ್ನ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೋಭಾಂದೇಬ್ ಚಟ್ಟೋಪಾಧ್ಯಾಯ …
Read More »ದೇಶದ ಜನರಿಗೆ ಬೆಳ್ಳಂಬೆಳಗ್ಗೆ ಶಾಕ್ – ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ 42 ರೂ. ಏರಿಕೆ!
ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಎನ್ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರ 42 ರೂ. ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ …
Read More »ಮೌಲ್ಯ ವೃದ್ಧಿಗೆ ಉಪನ್ಯಾಸ ಸಹಕಾರಿ
ಇಟಗಿ: ಯುವಕರಲ್ಲಿ ಇತಿಹಾಸ ಪ್ರಜ್ಞೆ ಮತ್ತು ಸಾಂಸ್ಕೃತಿಕ ಮೌಲ್ಯ ವೃದ್ಧಿಸುವಲ್ಲಿ ಕವಿಗೋಷ್ಠಿ ಮತ್ತು ಉಪನ್ಯಾಸ ಕಾರ್ಯಕ್ರಮ ಅವಶ್ಯ ಎಂದು ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಹಲಸಿ ಗ್ರಾಮದ ಐತಿಹಾಸಿಕ ಭೂವರಾಹ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಹಾಗೂ ಕದಂಬ ಯುವ ಸೇನೆ, ಅಂಬೇಡ್ಕರ ಯುವಕ ಮಂಡಳ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕವಿಗೋಷ್ಠಿ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ …
Read More »
Laxmi News 24×7