Breaking News

Uncategorized

ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’!

ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವಿನ ಮುಷ್ಕರ ಸಮರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ 6ನೇ ವೇತನ ಆಯೋಗದಂತೆ ವೇತನ ಜಾರಿಗೆ ಬಿಲ್ ಕುಲ್ ಇಲ್ಲ ಅಂದಿದೆ. ಅಲ್ಲದೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವಂತ ಬೇಡಿಕೆಗೂ ಯಾವುದೇ ಸ್ಪಷ್ಟವಾದಂತ ಉತ್ತರವನ್ನು ನೀಡಿಲ್ಲ. ಇದರ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ 2016ರ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಂತ ಬಿಎಸ್ ಯಡಿಯೂರಪ್ಪ ಹೇಳಿದ ಮಾತು, 2021ರ ಈಗ ಮುಖ್ಯಮಂತ್ರಿಯಾಗಿದ್ದಂತ …

Read More »

ತಪ್ಪು ಸಾಬೀತಾಗದಿದ್ದರೂ ಅಮಾನತು ಶಿಕ್ಷೆ ! ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯ ಅವಸ್ಥೆ

ಉಡುಪಿ: ಇಲಾಖೆ ವಿಚಾರಣಾ ವರದಿಯಲ್ಲಿ ಆರೋಪ ನಿರಾಧಾರ ಎಂದು ಸಾಬೀತಾಗಿದ್ದರೂ ಹಾಗೂ ಅನಾಮಧೇಯ ದೂರು ಪತ್ರ ಅನೂರ್ಜಿತಗೊಂಡಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ ಪ್ರಸಂಗ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ. ಎರಡು ವರ್ಷಗಳಿಂದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆಗಿರುವ ಮಂಜುಳಾ ಕೆ. ಅವರು ಈಗ ಅಮಾನತು ಶಿಕ್ಷೆ ಎದುರಿಸುತ್ತಿರುವವರು. ಇಲಾಖೆಯಲ್ಲಿ 22 ವರ್ಷ ಸೇವೆ ಸಲ್ಲಿಸಿರುವ ಮಂಜುಳಾ ಅವರು 2 ವರ್ಷ 2 ತಿಂಗಳ ಕಾಲ ಉಡುಪಿ ಬಿಇಒ …

Read More »

ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು

ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ …

Read More »

‘ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ’: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು …

Read More »

ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಿಸ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

ಚೆನ್ನೈ (ತಮಿಳುನಾಡು) : ದ್ವಿಚಕ್ರ ವಾಹನದಲ್ಲಿ ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (ಇವಿಎಂ) ಸಾಗಿಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಚೆನ್ನೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಘಟನೆ ವೇಲಚೇರಿ ಏರಿಯಾದಲ್ಲಿ ನಡೆದಿದೆ. ಇವಿಎಂ ಬದಲಾಯಿಸಲಿಸಲು ಬೈಕ್​ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ ಇಬ್ಬರನ್ನು ಇವಿಎಂ ಸಮೇತ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ವೈರಲ್​ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ಇವಿಎಂ ಬಗ್ಗೆ ಮಾತನಾಡಿರುವ ತಮಿಳುನಾಡು …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ‘ನಿರುಪಮ’ (ಚೆನ್ನಮ್ಮ) ಎನ್ನುವ ಹೆಸರಿಟ್ಟು ಸಿಂಹಿಣಿಯನ್ನು ದತ್ತಕ ತೆಗೆದುಕೊಳ್ಳಲಾಯಿತು.

ಬೆಳಗಾವಿ: ಭಾರತೀಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ( 75ನೆಯ ವರ್ಷಾಚರಣೆಯ) ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿ ಪ್ರಾಣಾರ್ಪಣೆ ಮಾಡಿದ ಹುತಾತ್ಮರ ಸ್ಮರಣೆಗಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ‘ನಿರುಪಮ’ (ಚೆನ್ನಮ್ಮ) ಎನ್ನುವ ಹೆಸರಿಟ್ಟು ಸಿಂಹಿಣಿಯನ್ನು ದತ್ತಕ ತೆಗೆದುಕೊಳ್ಳಲಾಯಿತು. ಈ ಕುರಿತು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ ಎಂ ರಾಮಚಂದ್ರಗೌಡ, ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವರು ಮೌಲ್ಯಮಾಪನ ರಾದ ಪ್ರೊ. ಎಸ್. ಎಂ ಹೂರಕಡ್ಲಿ ಹಣಕಾಸು ಅಧಿಕಾರಿಗಳಾದ ಪ್ರೊ. …

Read More »

ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ : ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ​ಅತವಾಡ, ಗೋಜಗಾ, ಬೆಕ್ಕಿನಕೇರಿ, ಗಣೇಶಪುರದ ಜ್ಯೋತಿ ನಗರದಲ್ಲಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ  ಸತೀಶ್ ಜಾರಕಿಹೊಳಿಯವರ ಪರ ಮತ ಯಾಚಿಸಿ ಅವರು ಮಾತನಾಡುತ್ತಿದ್ದರು. ​ ​ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರಕ್ಕೆ ಬಡ ಜನರ ಬಗೆಗೆ …

Read More »

14 ಚಿನ್ನದ ಪದಕಕ್ಕೆ ಕೊರಳೊಡ್ಡಿದ ರೈತನ ಮಗ

ಬಾಗಲಕೋಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಇತ್ತ ಮಗ ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡುತ್ತಿದ್ದ. ಈ ಅದ್ಭುತ ಘಳಿಗೆಯನ್ನು ಕಣ್ತುಂಬಿಕೊಳ್ಳುತ್ತಿದ್ದ ತಾಯಿ-ಅಜ್ಜ ಆನಂದಬಾಷ್ಪ ಸುರಿಸಿದರು. ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕುನೂರ ಎಂಬ ಪುಟ್ಟ ಹಳ್ಳಿಯ ರೈತ ವೆಂಕಟೇಶ ಮತ್ತು …

Read More »

ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ

ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು.   ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ,   ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …

Read More »

ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು

ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …

Read More »