ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು ಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಆಕೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ 19 ವರ್ಷದ …
Read More »ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ;
ಮುಂಬೈ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಚಿತ್ರಮಂದಿರಗಳು, ಆಡಿಟೋರಿಯಂ ಹಾಗೂ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಜನಸಂಖ್ಯೆಗೆ ಸೀಮಿತಗೊಳಿಸಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮಾರ್ಚ್ 31) ಆದೇಶ ಹೊರಡಿಸಿದೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 25,833 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ನಂತರ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾದ ಪ್ರಕರಣವಾಗಿದೆ. ಒಂದು ವೇಳೆ ಮಾಸ್ಕ್ ಧರಿಸದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಜನರು …
Read More »ವರ್ಕ್ ಫ್ರಮ್ ಹೋಂ ಓಕೆ ..! ಸಂಬಳ ಕಡಿತ ಯಾಕೆ..? : ವರದಿ
ನವ ದೆಹಲಿ : ಕೋವಿಡ್ 19 ಭಾರತದ ಮೇಲೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರಿದೆ. ಆರ್ಥಿಕ ಸ್ಥಿತಿ, ಉದ್ಯಮ ಕ್ಷೇತ್ರಗಳ ಮೇಲಂತೂ ಬಾರಿ ಪ್ರಹಾರ ಮಾಡಿರುವುದು ಸುಳ್ಳಲ್ಲ. ಪರಿಸ್ಥಿತಿ ಚೇತರಿಕೆಯಾಗುವತ್ತ ಮುಖ ಮಾಡುತ್ತಿದೆ ಎನ್ನುವಷ್ಟರಲ್ಲೆ ರೂಪಾಂತರಿ ಕೋವಿಡ್ ಮತ್ತೆ ಅಲೆ ಎಬ್ಬಿಸಿದೆ. ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದರೂ ಕೂಡ ಜನರಲ್ಲಿ ಮತ್ತೆ ಲಾಕ್ ಡೌನ್ ಆಗಬಹುದು ಎಂಬ ಭೀತಿ ಆರಂಭವಾಗಿದೆ. ಕೋವಿಡ್ …
Read More »ಬಾಲಚಂದ್ರ ಜಾರಕಿಹೊಳಿಗೆ ಉಸ್ತುವಾರಿ ನೀಡುವಂತೆ ಕೆಲ ಮೂಲ ಬಿಜೆಪಿ ಮುಖಂಡರು ಸಲಹೆ
ಬೆಳಗಾವಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಬೈ ಎಲೆಕಗಷನ್ ಘೋಷಣೆಯಾಗಿದೆ. ಬೆಳಗಾವಿಯಲ್ಲಿ ಸಂಸದೀಯ ಕ್ಷೇತ್ರವೊಂದಕ್ಕೆ ಉಪಚುನಾವಣೆ ನಡೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ಅಂದರೆ ರಮೇಶ್ ಜಾರಕಿಹೊಳಿ ಹೆಗಲಿಗೆ ಜವಾಬ್ದಾರಿ ವಹಿಸುತ್ತಿತ್ತು ಆಡಳಿತಾರೂಢ ಬಿಜೆಪಿ ಪಕ್ಷ. ರಮೇಶ್ ಸಹ ತಣ್ಣಗೆ ತಮ್ಮ ಕಾರ್ಯಭಾರವನ್ನು ನಿರ್ವಹಿಸುತ್ತಿದ್ದರು. ಆದರೆ ಈ ಚಿತ್ರಣ ಬದಲಾಗಿದೆ. ರಾಜಕೀಯವಾಗಿ ಜಾರಕಿಹೊಳಿ ವರ್ಜ್ಯ, ಅಪಥ್ಯ ಅನ್ನುವಂತಾಗಿದೆ ಬಿಜೆಪಿಗೆ. ಇದಕ್ಕೆ ಕಾರಣ ಏನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅದುವೇ ರಮೇಶ್ ಜಾರಕಿಹೊಳಿ ಸಿಡಿ …
Read More »ಸಿಡಿ ಸ್ಫೋಟ ಹಿಂದಿನ ಸತ್ಯಾಂಶ,,?ದೊಡ್ಡ ರಾಜಕಾರಣಿಗಳ ನೆರಳು ಇರುವುದು ಕಾಣುತ್ತಿದೆ?.
ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಸ್ಫೋಟ ಹಿಂದಿನ ಸತ್ಯಾಂಶ ಕುರಿತು ವಿಶೇಷ ತನಿಖಾ ತಂಡ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. ಎರಡು ರಾಜಕೀಯ ಪಕ್ಷಗಳ ನಡುವಿನ ಸಮರವೂ ಮುಂದುವರೆದಿದೆ. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಇಬ್ಬರು ವ್ಯಕ್ತಿಗಳು ವಿಡಿಯೋ ಬಿಡುಗಡೆ ಮಾಡುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಯಾರು ಸತ್ಯ ? …
Read More »ಕೆಪಿಎಸ್ಸಿ ಮುಚ್ಚಿಬಿಡಿ: ಪ್ರದೀಪ್ ಶೆಟ್ಟರ್
ವಿಧಾನಪರಿಷತ್ತು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಾಯಕಲ್ಪ ನೀಡಲು ಸರ್ಕಾರ ಸಿದ್ಧವಿದ್ದು, ವಿವಿಧ ನೇಮಕಾತಿಗಳ ಪರೀಕ್ಷಾ ಪದ್ದತಿಗಳಲ್ಲಿ ಬದಲಾವಣೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸ್ವಾಯತ್ತ ಸಂಸ್ಥೆ, ಇದರ ಸ್ಥಾಪನೆಯ ಉದ್ದೇಶ ಒಳ್ಳೆಯದು. ಆದರೆ, ಕಾರ್ಯವಿಧಾನ ಸರಿಯಿಲ್ಲ. ಈ ಸಂಸ್ಥೆ ಹಲವಾರು ವರ್ಷಗಳಿಂದ ತಪ್ಪು …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ
ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ …
Read More »ಬಸವ ಕಲ್ಯಾಣ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್
ಬೆಂಗಳೂರು: ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಅಭ್ಯರ್ಥಿ ಘೋಷಣೆ ಮಾಡಿದ್ದು, ಸೈಯ್ಯದ್ ಯಸ್ರಬ್ ಅಲಿ ಖಾದ್ರಿ ಅವರು ಬಸವಕಲ್ಯಾಣದಲ್ಲಿ ಜೆಡಿಎಸ್ ಚಿಹ್ನೆಯಡಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನು ಶೀಘ್ರವೇ ಘೋಷಿಸಲಾಗುವುದು. ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸ್ಪರ್ಧೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು. …
Read More »ಟ್ರಕ್ ಚಲಾಯಿಸುವಾಗ ಹೆಲ್ ಮೆಟ್ ಧರಿಸದ ಕಾರಣ 1000 ರೂ. ದಂಡ ವಿಧಿಸಿದ RTO
ಹೆಲ್ ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಟ್ರಕ್ ಚಾಲಕನೋರ್ವನಿಗೆ 1,000 ರೂ. ದಂಡ ವಿಧಿಸಿದ ವಿಚಿತ್ರ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ನಡೆದಿದೆ. ದಂಡಕ್ಕೆ ಒಳಗಾದ ವ್ಯಕ್ತಿಯನ್ನು ಪ್ರಮೋದ್ ಕುಮಾರ್ ಸ್ವೈನ್ ಎನ್ನಲಾಗಿದ್ದು, ಆತ ತನ್ನ ಟ್ರಕ್ ನ ನೊಂದಣಿ ಸಂಖ್ಯೆಗೆ ಸಂಬಂಧಿಸಿದಂತೆ ಹೆಲ್ ಮೆಟ್ ಧರಿಸಿಲ್ಲದ ಕಾರಣಕ್ಕೆ ಚಲನ್ ಒಂದನ್ನು ಪಡೆದಾಗ ವಿಷಯ ಬೆಳಕಿಗೆ ಬಂದಿದ್ದು, ಈತ 1,000 ರೂ ದಂಡವನ್ನು ಕಟ್ಟಿದ ಬಳಿಕ ಟ್ರಕ್ ಚಾಲಕನೆಗೆ ಪರವಾನಿಗೆ …
Read More »ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ: ವಿಮಾ ನೌಕರರ ಪ್ರತಿಭಟನೆ
ಮೈಸೂರು: ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಈಗಿರುವ ಶೇ.೪೯ ರಿಂದ ಶೇ.೭೪ಕ್ಕೆ ಹೆಚ್ಚಿಸುವ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡನೆ ವೇಳೆ ಪ್ರಸ್ತಾಪವಾಗಿರುವ ವಿದೇಶಿ ನೇರ ಹೂಡಿಕೆ ಮಾರಕವಾದುದು ಎಂದು ಆರೋಪಿಸಿ ಮೈಸೂರು ವಿಭಾಗದ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಮುಖಂಡರು ಖಂಡಿಸಿದ್ದಲ್ಲದೆ, ಬನ್ನಿಮಂಟಪದ ಬಳಿ …
Read More »