ಚಿಕ್ಕೋಡಿ: ಕರ್ನಾಟಕದ ಸಚಿವೆಯಾಗಿದ್ದರೂ, ತಮ್ಮ ಕ್ಷೇತ್ರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರು ಮರಾಠಿ ಪ್ರೇಮವನ್ನು ಮತ್ತೆ ಮುಂದುವರೆಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಸೌಂದಲಗಾ ಗ್ರಾಮದಲ್ಲಿ ಏತ ನೀರಾವರಿ ಉದ್ಘಾಟನೆ ಸಂದರ್ಭದಲ್ಲಿ ಸಂಪೂರ್ಣವಾಗಿ ಮರಾಠಿ ಭಾಷೆಯಲ್ಲಿ ಬ್ಯಾನರ್ ಅಳವಡಿಸಿದ್ದ ಸಮಾರಂಭದಲ್ಲಿ ಶಶಿಕಲಾ ಜೊಲ್ಲೆ ಅವರು ಭಾಗಿಯಾಗುವುದರ ಜೊತೆಗೆ ಮರಾಠಿ ಭಾಷೆಯ ಪ್ರೇಮವನ್ನು ಎತ್ತಿ ತೋರಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಮತಕ್ಷೇತ್ರದ ಸೌಂದಲಗಾ ಗ್ರಾಮದಲ್ಲಿ ಮಂಜೂರಾದ 1 ಕೋಟಿ 49 ಲಕ್ಷ ರೂ. ಮೊತ್ತದಲ್ಲಿ …
Read More »ಕತ್ತಿಯವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ: ರಾಜೂಗೌಡ
ಯಾದಗಿರಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿದ ಸಚಿವ ಉಮೇಶ್ ಕತ್ತಿ ಅವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ ಎಂದು ಸುರಪುರ ಶಾಸಕ ರಾಜೂಗೌಡ ಸ್ವಪಕ್ಷದ ಸಚಿವರಿಗೆ ಟಾಂಗ್ ನೀಡಿದ್ದಾರೆ. ಈ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನಮ್ಮದೇ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಆಗಿದೆ ಎಂದು ಸ್ವಪಕ್ಷದ ಸಚಿವರಾದ ಉಮೇಶ್ ಕತ್ತಿಯವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜೂಗೌಡ, ಬೆಳಗಾವಿಗೆ ಇನ್ನೂ ಏನು ಕೊಡಬೇಕು, ಅನ್ಯಾಯ …
Read More »ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …
Read More »ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:
ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …
Read More »ಮಕ್ಕಳಿಬ್ಬರಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಮಾಟ-ಮಂತ್ರಕ್ಕೆ ಬಲಿಯಾದವ ಮುಗ್ಧ ಹೆಣ್ಣು ಮಕ್ಕಳು?
ಬೆಳಗಾವಿ: ಹೆಣ್ಣು ಮಕ್ಕಳಿಬ್ಬರಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಹೆಚ್ ಗ್ರಾಮದಲ್ಲಿ ನಡೆದಿದೆ. ಆದರೆ ಈ ದುರಂತ ಘಟನೆಗೆ ಅಪರಿಚಿತರು ಮಾಡಿಸಿದ ಮಾಟ-ಮಂತ್ರವೇ ಕಾರಣ ಎಂಬ ಹೇಳಿಕೆಗಳು ಕೇಳಿ ಬಂದಿವೆ. ನಾಲ್ಕು ದಿನಗಳ ಹಿಂದೆ ಮನೆಯ ಮುಂದೆ ಮಾಟ-ಮಂತ್ರ ಮಾಡಿಸಿದ್ದ ವಸ್ತುಗಳು ಸಿಕ್ಕಿದ್ದವು. ಇದಾದ ಬಳಿಕ ಅನಿಲ್ ಖಿನ್ನತೆಗೆ ಒಳಗಾಗಿದ್ದ. ಒಂದು ದಿನ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ತನ್ನ ಇಬ್ಬರು …
Read More »ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ : ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕು
ಬೆಂಗಳೂರು : ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿರುವುದರಿಂದ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕುಗೊಳ್ಳಲಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಫಲಿತಾಂಶಗಳನ್ನು ಸಿದ್ಧಪಡಿಸುವ ಕಾರ್ಯವೂ ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕ ಪರಿಶೀಲಿಸಿ, ತಿದ್ದುಪಡಿಯಿದ್ದಲ್ಲಿ, ಇಲಾಖೆಗೆ …
Read More »ದಕ್ಷ ಅಧಿಕಾರಿ ಅಣ್ಣಾಮಲೈ ಹಾದಿಯಲ್ಲಿ ರವಿ.ಡಿ.ಚನ್ನಣ್ಣನವರ್ ?
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಮಾಣಿಕ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ ನಡೆ ತೀವ್ರ ಕೂತುಹಲ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಚೆನ್ನಣ್ಣನವರನ್ನು ಈಚೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಿದೆ. ಪ್ರಸ್ತುತ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮಠಯಾತ್ರೆ ಕೈಗೊಂಡಿರುವ ಅವರು, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ, ಕಾಗಿನೆಲೆ ಪೀಠಕ್ಕೆ …
Read More »ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ
ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. …
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ
ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು. ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು. …
Read More »ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ
ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರ್ಯಾಕ್ಟರ್ ಮಾಲೀಕರು ಹಾಗೂ …
Read More »
Laxmi News 24×7