ಬೆಂಗಳೂರು, ಮಾರ್ಚ್ 14; ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಬೆಂಗಳೂರು ನಗರದಿಂದ ಸಂಚಾರ ಆರಂಭಿಸಿದೆ. ಐಆರ್ಸಿಟಿಸಿ ರೈಲು ನಿರ್ವಹಣೆ ಮಾಡುವ ಜವಾಬ್ದಾರಿ ಹೊತ್ತಿದ್ದು, ಮೊದಲ ಬಾರಿಗೆ ಸಂಚಾರವನ್ನು ಪ್ರಾರಂಭಿಸಲಾಗಿದೆ. ಭಾನುವಾರ ಯಶವಂತಪುರ ರೈಲು ನಿಲ್ದಾಣದಿಂದ ಗೋಲ್ಡನ್ ಚಾರಿಯಟ್ ರೈಲು ಸಂಚಾರ ಆರಂಭವಾಯಿತು. ‘ಪ್ರೈಡ್ ಆಫ್ ಕರ್ನಾಟಕ’ ಪ್ಯಾಕೇಜ್ ಪ್ರವಾಸಕ್ಕೆ ಇಂದು ಚಾಲನೆ ನೀಡಲಾಗಿದೆ. ರೈಲು ನಿಲ್ದಾಣದಲ್ಲಿ ಗೋಲ್ಡನ್ ಚಾರಿಯಟ್ ರೈಲು ಸಿಬ್ಬಂದಿಗಳು ಪ್ರವಾಸಿಗರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬೇಸಿಗೆ …
Read More »ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ
ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …
Read More »ವಿದ್ಯುತ್ ಸಮಸ್ಯೆ ಖಂಡಿಸಿ 15ರಂದು 20 ಕಿ.ಮೀ. ಪಾದಯಾತ್ರೆ
ಹೊಸನಗರ: ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಮಾರ್ಚ್ 15ರಂದು 20 ಕಿ.ಮೀ. ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯುತ್ ಬಳಕೆದಾರರ ಹೋರಾಟ ಸಮಿತಿಯ ವಾಟಗೋಡು ಸುರೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ತಾಲ್ಲೂಕಿನ ಬಟ್ಟೆಮಲ್ಲಪ್ಪದಿಂದ ಪಾದಯಾತ್ರೆ ಆರಂಭವಾಗಲಿದ್ದು, ಮಾರುತಿಪುರ, ಕಚ್ಚಿಗೆಬೈಲು, ಬ್ರಹ್ಮೇಶ್ವರ, ಮಾವಿನಕೊಪ್ಪ ವೃತ್ತ ಮಾರ್ಗವಾಗಿ ತಹಶೀಲ್ದಾರ್ ಕಚೇರಿಯ ತನಕ ನಡೆಯಲಿದೆ ಎಂದರು. ಈ ಪಾದಯಾತ್ರೆಯಲ್ಲಿ ರೈತರು, ರೈತ ಕಾರ್ಮಿಕರು, ಸ್ವ-ಸಹಾಯ ಸಂಘದ ಸದಸ್ಯರು, ವಿದ್ಯುತ್ …
Read More »ಪೊಲೀಸ್ ದೌರ್ಜನ್ಯ ಮುಂದುವರಿದರೆ ಎಲ್ಲ ಠಾಣೆಗಳಿಗೆ ಮುತ್ತಿಗೆ: ಸಿದ್ದರಾಮಯ್ಯ
ಶಿವಮೊಗ್ಗ: ರಾಜ್ಯದ ಕಾರ್ಯಕರ್ತರು ಮುಖಂಡರ ಮೇಲೆ ಭದ್ರಾವತಿಯಲ್ಲಿ ನಡೆದಂತಹ ಪೊಲೀಸ್ ದೌರ್ಜನ್ಯ ಮುಂದುವರಿದರೆ ರಾಜ್ಯದ ಎಲ್ಲ ಠಾಣೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು. ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ಚಲೋ-ಜನಾಕ್ರೋಶ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋಟಿಗಟ್ಟಲೆ ದುಡ್ಡು ಕೊಟ್ಟು ಶಾಸಕರನ್ನು ಖರೀದಿಸಿದರು. ಲೂಟಿ ಹೊಡೆದು ಆಸ್ತಿ ಮಾಡಿದರು. ಹಾಗಂತ ಅವರೇ ಪೊಲೀಸರಿಗೆ ಸಂಬಳ ಕೊಡುತ್ತಾರಾ? …
Read More »ಮನುಷ್ಯನ ವಾಸನೆ ಹಿಡಿದು ಪರಾರಿಯಾಯ್ತಾ ಪೊನ್ನಂಪೇಟೆ ವ್ಯಾಘ್ರ?
ಕೊಡಗು: ಪೊನ್ನಂಪೇಟೆಯ ನರಭಕ್ಷಕನಿಗಾಗಿ ಇಂದೂ ಕೂಡ ಹುಡುಕಾಟ ಮುಂದುವರಿದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯ ಶಾರ್ಪ್ ಶೂಟರ್ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಾರ ಕಳೆದರೂ ಹುಲಿ ಕೈಗೆ ಸಿಗದಿರುವುದನ್ನು ನೋಡಿದರೆ ಹುಲಿಗೆ ಮನುಷ್ಯರ ವಾಸನೆ ಗೊತ್ತಾಗಿ ಸುತ್ತಮುತ್ತ ಸುಳಿಯುತ್ತಿಲ್ಲವೇನೋ ಎನ್ನುವ ಅನುಮಾನ ಕಾಡುತ್ತಿದೆ. ಹುಲಿ ಕಾರ್ಯಾಚರಣೆಗೆ ಇನ್ನಷ್ಟು ಸಿಬ್ಬಂದಿ ಅಗತ್ಯವಿದ್ದ ಕಾರಣ ಶಾರ್ಪ್ಶೂಟರ್ಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಮಧ್ಯೆ ಹುಲಿ ಕಾರ್ಯಾಚರಣೆಗೆ ಬಳಸಲಾಗುತ್ತಿದ್ದ ಆನೆಗಳನ್ನು ತಕ್ಷಣದಿಂದಲೇ ನಿಲ್ಲಿಸಲಾಗಿದೆ. ಆನೆಗಳು ಕಾಫಿ ತೋಟದ …
Read More »ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳು ನಿನ್ನೆ ನಡೆಸಿದ ಸಭೆಯಲ್ಲಿ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ಎಫ್ಐಆರ್ ಹಾಕುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಿದ್ದು, ಎಫ್ಐಆರ್ ದಾಖಲಿಸದಿದ್ದರೆ ಸಮಗ್ರ ತನಿಖೆ ಸಾಧ್ಯವಿಲ್ಲ ಹೀಗಾಗಿ ತನಿಖೆಗೆ ಸಹಕಾರಿಯಾಗಲು ಈ ಮಾರ್ಗವನ್ನು ಅನುಸರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾಗಿ ತಿಳಿದುಬಂದಿದೆ. ರಾಜಕಾರಣಿಯ ವಿರುದ್ಧ ಸಿಡಿ ಷಡ್ಯಂತ್ರ …
Read More »ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.
ಬೆಳಗಾವಿ-ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ,ಎಸ್ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …
Read More »ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ
ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Read More »‘ಜೀವದ ಮೇಲೆ’ ನಿಮಗೆ ಪ್ರೀತಿ ಇದ್ದರೇ.. ಇಂಥ ‘ದುಸ್ಸಾಹಸ’ಕ್ಕೆ ಕೈ ಹಾಕಬೇಡಿ.!
ಪಣಜಿ : ಸಂಚರಿಸುವಂತ ರೈಲು ಹತ್ತಲು ಹೋಗಿ ಅನೇಕರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿದ್ದೂ ಇಂತಹ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂಬುದಾಗಿ ಎಚ್ಚರಿಸಿದ್ರೂ.. ಪ್ರಯಾಣಿಕರು ಮಾತ್ರ ಡೋಂಟ್ ಕೇರ್. ಹೀಗೆ ಚಲಿಸುತ್ತಿದ್ದಂತ ರೈಲು ಹತ್ತಿದ್ದರಿಂದ ಏನ್ ಆಯ್ತು ಅಂತ, ಈ ಸುದ್ದಿ ಓದಿ.. ‘ ಗೋವಾದ ವಾಸ್ಕೋಡಿಗಾಮಾ ರೈಲು ನಿಲ್ದಾಣದಲ್ಲಿ, ರೈಲು ನಿಂತಿದ್ದರೂ, ಹತ್ತದಿದ್ದಂತ ಪ್ರಯಾಣಿಕನೊಬ್ಬ, ಚಲಿಸಲು ಆರಂಭಿಸಿದಂತ ರೈಲು ಹತ್ತೋದಕ್ಕೆ ಪ್ರಯತ್ನ ಪಟ್ಟಿದ್ದಾನೆ. ಓಡಿ ಹೋಗಿ ಹತ್ತೋದಕ್ಕೆ ಪ್ರಯತ್ನಿಸಿದಾಗ ನಿಯಂತ್ರಣ …
Read More »ರಾಜ್ಯದಲ್ಲಿ ಇಂದು 833 ಹೊಸ ಪ್ರಕರಣಗಳು ದಾಖಲು
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 833 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,58,417 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 12,386ಕ್ಕೆ ತಲುಪಿದೆ. ಶುಕ್ರವಾರ ಗುಣಮುಖರಾದ 545 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 9,37,898 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,114 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ …
Read More »