ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಾಗಲಿದೆ. ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಬಗ್ಗೆ ಆದೇಶ ಮಾಡಿದ್ದಾರೆ. ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಮೇ 29ರಿಂದ ಜೂನ್ 7ರ ಬೆಳಗ್ಗೆ 6 …
Read More »ಪತ್ನಿಯನ್ನ ಕೆಎಎಸ್ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ
ಶಿವಮೊಗ್ಗ: ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ. ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ. ಹೀಗಾಗಿ …
Read More »ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ; ಬಾಲಕಿ ರಕ್ಷಣೆ
ಬಾಗಲಕೋಟೆ: ಕೊರೊನಾ ಲಾಕ್ ಡೌನ್ ನಡುವೆ ಗ್ರಾಮಗಳಲ್ಲಿ ಮತ್ತೆ ಬಾಲ್ಯವಿವಾಹ ಪದ್ಧತಿಗಳು ಹೆಚ್ಚುತ್ತಿವೆ. ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ ಮಾಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಬಾಲ್ಯವಿವಾಹ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾಮಾರಿಸಿದ ಪೋಷಕರು ನಮ್ಮ ಮನೆಯಲ್ಲಿ ಸಾವಾಗಿದೆ. ನಾವೇಕೆ ಈಗ ವಿವಾಹ ಮಾಡಿಸಲಿ ಎಂದು ಹೇಳಿದ್ದರು. ಪೋಷಕರ …
Read More »ಮುಖ್ಯಮಂತ್ರಿ ಬದಲಾವಣೆ ವಿಚಾರ ಶೇ.100 ರಷ್ಟು ನಿಜ,: ಆರ್ ಅಶೋಕ್
ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ. ಆದ್ರೆ, ಅವಧಿಗೂ ಮುನ್ನ ಅವರನ್ನ ಬದಲಿಸಿ ಬೇರೆಯವರಿಗೆ ಸಿಎಂ ಪಟ್ಟಕಟ್ಟುವ ಕಸರತ್ತು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕರು, ಸಚಿವರುಗಳು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ. ಇವೆಲ್ಲಾ ಬೆಳಗವಣಿಗೆಗಳು ನಡೆಯುತ್ತಿರುವುದು ನಿಜ ಎಂದು ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಇದರೊಂದಿಗೆ …
Read More »ಸಾವಿನಲ್ಲೂ ಒಂದಾದ ದಂಪತಿ
ಬಳ್ಳಾರಿ: ಪತಿ ಸಾವನ್ನಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಪಂ ವ್ಯಾಪ್ತಿಯಾ ಅಪ್ಪೇನಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರ, ಅಂಗಡಿ ವಾಮದೇವಮ್ಮ(60) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ವರ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಅಂಗಡಿ ವಾಮದೇವಮ್ಮ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಕಳೆದ ಒಂದು ವಾರದ ಹಿಂದ ಪರಮೇಶ್ವರಗೆ ಕೊರೊನಾ ಸೋಂಕು ತಗುಲಿರುವುದು …
Read More »ನಕಲಿ ನೆಗೆಟಿವ್ ರಿಪೋರ್ಟ್ ತಯಾರಿಸಿ ಕೊಡುತಿದ್ದ ಪತ್ರಕರ್ತನ ಬಂಧನ.
ಮಡಿಕೇರಿ ಕೊರೋನ ಮಹಾಮಾರಿ ರಣಕೇಕೆ ಹಾಕುತ್ತಿರಬೇಕಾದರೆ ರೋಗ ಹರಡದ ರೀತಿಯಲ್ಲಿ ಸಮಾಜಮುಖಿ ಕೆಲಸ ಮಾಡಬೇಕಾದ ಸಮಾಜವನ್ನು ತಿದ್ದಬೇಕಾದ ಪತ್ರಕರ್ತನೊಬ್ಬ ವೃತ್ತಿಗೇ ಅವಮಾನಕಾರಿ ವರ್ತನೆ ತೋರಿದ್ದಾರೆ. ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿರಬೇಕಾದ ಪತ್ರಕರ್ತ ನಕಲಿ ನೆಗೆಟಿವ್ ವರದಿ ತಯಾರಿಸಿ ಮಾರಾಟ ಮಾಡಿ ಸಿಕ್ಕು ಬಿದ್ದಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು, ವೀರಾಜಪೇಟೆ ತಾಳಳೂಕು ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ ಗಿಡ …
Read More »“ಪ್ರತಿ ಮನೆಗೂ ಬರಲಿದೆ ಕೊರೊನಾ ಪರೀಕ್ಷಾ ವಿಶೇಷ ತಂಡ”
ಬೆಂಗಳೂರು, ಮೇ 24: ರಾಜ್ಯದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿನ ಲಕ್ಷಣವಿರುವವರನ್ನು ಪ್ರತಿ ಮನೆ-ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಅಶೋಕ ತಿಳಿಸಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದರೂ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು …
Read More »ಡೀಸೆಲ್ ಟ್ಯಾಂಕ್ನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಟ್ಯಾಂಕ್ನಲ್ಲಿ ಡೀಸೆಲ್ ಅನ್ಲೋಡ್ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ
ಬ್ಯಾಡಗಿ: ಡೀಸೆಲ್ ಟ್ಯಾಂಕ್ನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಟ್ಯಾಂಕ್ನಲ್ಲಿ ಡೀಸೆಲ್ ಅನ್ಲೋಡ್ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ ಪಟ್ಟಣದ ಹೊರವಲಯ(ಮೋಟೆಬೆನ್ನೂರ ರಸ್ತೆಯಲ್ಲಿ)ದಲ್ಲಿರುವ ನೇತ್ರಾವತಿ ಬಂಕ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದಷ್ಟೇ ತಮ್ಮದೇ ಸ್ವಂತ ಟ್ಯಾಂಕರ್ನ ಎರಡು ಕಂಪಾರ್ಟ್ಮೆಂಟ್ ನಲ್ಲಿ ಪೆಟ್ರೋಲ್, ಇನ್ನೆರಡು ಕಂಪಾರ್ಟ್ಮೆಂಟ್ ಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ತುಂಬಿಕೊಂಡು ಬರಲಾಗಿತ್ತು. ಆದರೆ, ರಾತ್ರಿ ವೇಳೆ ಅನ್ಲೋಡ್ ಮಾಡುವ ಸಂದರ್ಭದಲ್ಲಿ ಡೀಸೆಲ್ …
Read More »ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ?: ಉಪೇಂದ್ರ
ಬೆಂಗಳೂರು: ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ? ಎಂದು ಸ್ಯಾಂಡಲ್ವುಡ್ ನಟ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ನಾನು ಉಪೇಂದ್ರ ಈ ರಾಜ್ಯದ ಮುಖ್ಯಮಂತ್ರಿ (CM ) ಆಗ್ಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನೀವು ನನ್ನನ್ನ ಗೆಲ್ಲಿಸ್ತೀರಾ? ಎಂಬ ಪ್ರಶ್ನೆಯೊಂದಿಗೆ ಅವರು ಮಾತು ಆರಂಭಿಸಿದ್ದಾರೆ. ಈ ಕುರಿತಾಗಿ ಅಭಿಮಾನಿಗಳು ಸಕಾರಾತ್ಮಕ ಪ್ರತಿಕ್ರೀಯೆಯನ್ನು ಕೊಟ್ಟಿದ್ದಾರೆ. ನೀವು ನನ್ನನ್ನ …
Read More »ಗಂಡು ಮಗುವಿಗೆ ಜನ್ಮ ನೀಡಿದ ಶ್ರೇಯ ಗೋಶಲ್
ಮುಂಬೈ : ತಮ್ಮ ಹಾಡಿನ ಮೂಲಕ ಹಲವಾರು ಮಂದಿಯ ಮನಸ್ಸಿನ್ನು ಗೆದ್ದಿರುವ ಹಾಗೂ ಸಂಗೀತ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿರುವ ಗಾಯಕಿ ಶ್ರೇಯಾ ಘೋಷಾಲ್ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಈ ಕುರಿತು ಶ್ರೇಯ ಗೋಶಲ್ ಅವರ ಪತಿ ಶೀಲಾದಿತ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಡು ಮಗುವಿಗೆ ಶ್ರೇಯ ಗೋಶಲ್ ನೀಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ್ ನಲ್ಲಿ ತಮ್ಮ ಮಗುವಿನ ಆಗಮನದ ಬಗ್ಗೆ ಶ್ರೇಯಾ ಖುಷಿ ಹಂಚಿಕೊಂಡಿದ್ದರು .
Read More »
Laxmi News 24×7