Breaking News

Uncategorized

ಮುಂದಿನ ಸಿಎಂ – ಸಿದ್ದರಾಮಯ್ಯ ಹೇಳಿದ್ದೇನು..?

ಕೊಪ್ಪಳ: ರಾಜು ಬಿಜೆಪಿಲ್ಲಿ ಆಗುತ್ತಿರುವ ಭಾರೀ ಬೆಳವಣಿಗೆಗಳ ಮಧ್ಯೆಯೇ ಇತ್ತ ಕಾಂಗ್ರೆಸ್ಸಿನಲ್ಲಿ ಮುಂದಿನ ಸಿಎಂ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಏರ್ಪೋರ್ಟ್ ನಲ್ಲಿ ಮಾತನಾಡಿದ ಮಾಜಿ ಸಿಎಂ, ಮುಂದಿನ ಸಿಎಂ, ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆಯಾಗುತ್ತಿಲ್ಲ. ಒಂದಿಷ್ಟು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಹೊರತು ಪಕ್ಷದ ಅಭಿಪ್ರಾಯವಲ್ಲ …

Read More »

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮೂವರು ಉಗ್ರರು ಎನ್ ಕೌಂಟರ್

 ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್, ಇಬ್ಬರು ನಾಗರಿಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರ ಮುದಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯಲಾಗಿದೆ. ಸೋಪೋರ್ ಜಿಲ್ಲೆಯ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಮುದಸಿರ್ ಹಾಗೂ ಪಾಕಿಸ್ತಾನ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ …

Read More »

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …

Read More »

3 ವರ್ಷಗಳ ಹಿಂದಿನ ಖೋಟಾನೋಟು ಪ್ರಕರಣಕ್ಕೆ ಟ್ವಿಸ್ಟ್: ಪ್ರಮುಖ ಬಾಂಗ್ಲಾದ ಆರೋಪಿ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ‌ ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಶರೀಫುಲ್ಲಾ ಇಸ್ಲಾಂ ಎಂಬಾತನನ್ನ ಎನ್​ಐಎ ಬಂಧಿಸಿದೆ. ಈತನನ್ನ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬಾಪುರದಲ್ಲಿ ಬಂಧಿಸಲಾಗಿದೆ.. ಬಾಂಗ್ಲಾ ಮೂಲದ ವ್ಯಕ್ತಿಗಳಿಂದ ಈತ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಹಾಗೂ ಕರ್ನಾಟಕದಲ್ಲಿ ಆ ಖೋಟಾನೋಟುಗಳನ್ನ ಚಲಾವಣೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದ ಎನ್ನಲಾಗಿದೆ. ಏನಿದು ಪ್ರಕರಣ..? 2018 ರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಖೋಟಾನೋಟು ಚಲಾವಣೆ ಪ್ರಕರಣ ದಾಖಲಾಗಿತ್ತು. …

Read More »

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ನೇರ ತರಗತಿ ಆರಂಭವಿಲ್ಲ. ಆನ್ ಲೈನ್ ಹಾಗೂ ದೂರದರ್ಶನದ ಮೂಲಕ ಶಿಕ್ಷಣ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರಿ …

Read More »

ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ

ಗೋಕಾಕ  ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ.   • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »

ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ …

Read More »

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ಮಾಹಿತಿ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎರಡು ದಿನದಲ್ಲಿ ಆರು ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ಪ್ರಥಮ ಭಾಷೆ ವಿಷಯಗಳ ಗರಿಷ್ಠ ಅಂಕಗಳನ್ನು 125 ಅಂಕಗಳಿಗೆ(25 ಆಂತರಿಕ ಅಂಕಗಳು ಸೇರಿ) ನಿಗದಿ ಮಾಡಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪ್ರತಿ ವಿಷಯಕ್ಕೆ 40 ಅಂಕಗಳು ಮುಂದುವರೆಯಲಿದೆ. ಮೊದಲು ಎಲ್ಲ ವಿಷಯಗಳಿಗೆ 40 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದ್ದು, ಪ್ರಥಮ …

Read More »

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ ಈ ಚಿತ್ರದಲ್ಲಿ ರಸ್ತೆ ಬದಿಯಲ್ಲಿ ಮಗಳು ಕುಳಿತು ಕ್ಲಾಸ್ ಅಟೆಂಡ್ ಮಾಡುತ್ತಿದ್ದರೆ, ಅಪ್ಪ ಆಕೆಗಾಗಿ ಛತ್ರಿ ಹಿಡಿದಿದ್ದಾರೆ.   ಸುಳ್ಯ ತಾಲ್ಲೂಕಿನ ಬಾಳಕ್ಕ ಗ್ರಾಮದಲ್ಲಿ ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದೇ ಇರುವ ಕಾರಣ ವಿದ್ಯಾರ್ಥಿಗಳು ಆಗಾಗ ತಂತಮ್ಮ ಮನೆಗಳಿಂದ ಹೊರಗೆ …

Read More »