Breaking News

Uncategorized

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

ಬೆಳಗಾವಿಯ ಜಲಾಶಯ ನೀರಿನ ಮಟ್ಟ….

ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …

Read More »

ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.

ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …

Read More »

ಬಿಎಸ್​ವೈ ಇಳಿದರೆ ನಮ್ಮಲ್ಲೇ ಪರ್ಯಾಯ ನಾಯಕರಿದ್ದಾರೆ-ಪಂಚಮಸಾಲಿ ಶ್ರೀ

ಬೆಂಗಳೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂಬುದು ಅವಮಾನ ಮಾಡುವ ಸಂಗತಿ. ಲಿಂಗಾಯತರಲ್ಲಿ ಅನೇಕ ಸಮರ್ಥ ನಾಯಕರಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದರೆ ಉತ್ತರ ಕರ್ನಾಟಕದ ನೆಲದಲ್ಲಿ ಪರ್ಯಾಯ ನಾಯಕರು ಇದ್ದಾರೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅರುಣ್​ ಸಿಂಗ್​ ಭೇಟಿ ಬಳಿಕ ಮಾತನಾಡಿದ ಅವರು, ನಮ್ಮ ಸಮುದಾಯದಲ್ಲಿ ಸಿಎಂ ಸ್ಥಾನಕ್ಕೆ ಪರ್ಯಾಯ ನಾಯಕರು ಅನೇಕರಿದ್ದಾರೆ. ನಿಜಲಿಂಗಪ್ಪ ಬಿಟ್ಟರೆ ಯಾರಾಗುತ್ತಾರೆ ಎಂದು ಪ್ರಶ್ನೆ ಬಂದಿತ್ತು. ನಂತರ ಎಸ್.ಆರ್.ಕಂಠಿ, ವೀರೇಂದ್ರ ಪಾಟೀಲ್, …

Read More »

ಗಂಡ ಹೆಂಡತಿ ಸೇರಿ ಅಮಾಯಕ ಯುವತಿಯರ ಹನಿ ಟ್ರ್ಯಾಪ್‌

ಬೆಂಗಳೂರು: ಗಂಡನ ಅಣತಿಯಂತೆ ಫೇಸ್​ಬುಕ್​ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಬರ್ಬಾದ್‌ ಆಗುತ್ತೆ. ಚಂದ್ರಾಲೇಔಟ್​ನಲ್ಲಿ ವಾಸವಿರುವ ಖತರ್ನಾಕ್​ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್​ ಆಗ್ತೀರಿ. ಸ್ನೇಹಿತರ ಮನೆಗೆ ಹೋಗುವ ಮುನ್ನ …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …

Read More »

ಸೋಂಕಿತರ ಸಂಖ್ಯೆ ಇಳಿಕೆ: ಸಾವಿರ ಬೆಡ್​ಗಳ ಜಿಂದಾಲ್ ಕೋವಿಡ್ ಆಸ್ಪತ್ರೆ ಸೇವೆ ಸ್ಥಗಿತ

ಬಳ್ಳಾರಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಮೈದಾನದಲ್ಲಿ ಆರಂಭಿಸಲಾಗಿದ್ದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಸೇವೆ ಸ್ಥಗಿತಗೊಳಿಸಲಾಗಿದೆ. ಕೊರೊನಾ ಎರಡನೇ ಅಲೆ ವ್ಯಾಪಕವಾಗಿದ್ದ ಹಿನ್ನೆಲೆ ಸಾವಿರ ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯುಳ್ಳ ಈ ತಾತ್ಕಾಲಿಕ ಕೋವಿಡ್​​ ಕೇರ್​ ಸೆಂಟರ್​ ಸ್ಥಾಪನೆ ಮಾಡಲಾಗಿತ್ತು. ಈಗ ರೋಗಿಗಳು ಇಲ್ಲದೆ ಬೆಡ್ ಖಾಲಿಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲಾಡಾಳಿತ ಆಸ್ಪತ್ರೆ ಸೇವೆಯನ್ನ ಸ್ಥಗಿತಗೊಳಿಸಿದೆ. ಈ ಕುರಿತು ನ್ಯೂಸ್​ಫಸ್ಟ್‌ಗೆ ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. …

Read More »

ತಾವೊಬ್ಬ ದುರ್ಬಲ ನಾಯಕರೆಂದು ಮೋದಿ ಸಾಬೀತುಪಡಿಸಿದ್ದಾರೆ : ಸಿದ್ದು ವ್ಯಂಗ್ಯ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿಗೆ ಬಂದು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲವೆಂದು ಸ್ಪಷ್ಟಪಡಿಸಿದರೂ ಕೂಡ ರಾಜ್ಯ ಬಿಜೆಪಿಯ ಸ್ಥಿತಿ ಬೂದಿಯೊಳಗಿನ ಕೆಂಡದಂತಾಗಿದೆ. ನಾಯಕತ್ವ ಬದಲಾವಣೆಯ ವಿಚಾರವಾಗಿ ಶಾಸಕರ ಹಾಗೂ ಸಚಿವರುಗಳ ಭಿನ್ನಾಭಿಪ್ರಾಯದ ಹೇಳಿಕೆಗಳು ಇಂದು ಕೂಡ ಮುಂದುವರಿದಿದ್ದು, ರಾಜ್ಯ ಬಿಜೆಪಿಯ ಆಡಳಿತ ಚುಕ್ಕಾಣಿಯ ಭವಿಷ್ಯ ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.   ಪರಸ್ಪರ ಕಚ್ಚಾಡುತ್ತಿರುವ @BJP4Karnataka …

Read More »

ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?

ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್‌ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ! ಈ ಬಗ್ಗೆ ಸ್ವತಃ ಶಾಸಕ …

Read More »