Breaking News

Uncategorized

ಸಂಸದ ತೇಜಸ್ವಿಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂಸದ ತೇಜಸ್ವಿಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕ್ ದಂಧೆಯನ್ನು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ಡಿಕೆಶಿ ಈ ಅಭಿನಂದನೆಯನ್ನು ತಿಳಿಸಿದ್ದಾರೆ. I congratulate MP Tejasvi Surya, MLAs Satish Reddy, Ravi Subramanya & Uday Garudachar for EXPOSING CORRUPTION in bed allocation by their party govt …

Read More »

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …

Read More »

ನೀವೂ ಮನೆಯಲ್ಲಿದ್ರೂ ನಿಮ್ಮ ಹೆಸರಲ್ಲಿ ಬುಕ್ ಆಗುತ್ತೆ ಬೆಡ್ –ಬೆಂಗಳೂರಿನಲ್ಲಿ ಬೆಡ್‍ಗಾಗಿ ರಾತ್ರೋ ರಾತ್ರಿ ಡೀಲ್

ಬೆಂಗಳೂರು: ಹೋಂ ಐಸೋಲೇಟ್ ಆಗುವ ವ್ಯಕ್ತಿಗಳಿಗೆ ತಿಳಿಯದಂತೆ ಅವರ ಹೆಸರಿನಲ್ಲಿ ಬೆಡ್ ಮೀಸಲಿರಿಸುವ ಮಹಾದಂಧೆ ಬಯಲಾಗಿದೆ. ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿಯ ಕಳ್ಳಾಟವನ್ನ ಬಯಲು ಮಾಡಿದ್ದು, ಸೋಂಕಿತರ ಜೊತೆ ಮಾತನಾಡಿ ಸೀಟ್ ಸಿಕ್ಕಿದೆಯಾ ಅಥವಾ ಇಲ್ಲವಾ ಅನ್ನೋದನ್ನ ಖಚಿತಪಡಿಸಿಕೊಂಡಿದ್ದಾರೆ. ಸೋಂಕಿತರ ಕುಟುಂಬಸ್ಥರ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋಗಳು ಲಭ್ಯವಾಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಬಿಎಂಪಿಯ ವಾರ್ ರೂಂ ಅಧಿಕಾರಿಗಳೇ ಕೃತಕ ಬೆಡ್ ಅಭಾವ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. …

Read More »

ಚಾಮರಾಜನಗರ ದುರಂತ: ಜಿಲ್ಲಾಸ್ಪತ್ರೆ, ಆಕ್ಸಿಜನ್ ಪ್ಲಾಂಟ್​ನಲ್ಲಿ ತನಿಖಾಧಿಕಾರಿ ಕಳಸದ್ ಪರಿಶೀಲನೆ

ಚಾಮರಾಜನಗರ: ನಿನ್ನೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದ ಬಗ್ಗೆ ಹಾಗೂ 20ಕ್ಕೂ ಅಧಿಕ ಕೊರೊನಾ ರೋಗಿಗಳು ಮೃತಪಟ್ಟ ಹಿನ್ನೆಲೆ ವಿಚಾರಣಾಧಿಕಾರಿ ಶಿವಯೋಗಿ ಕಳಸದ್​ ಇಂದಿನಿಂದ ತನಿಖೆ ಆರಂಭಿಸಿದ್ದಾರೆ. ಇಂದು ಕಳಸದ್​ ಜಿಲ್ಲಾಸ್ಪತ್ರೆಗೆ ಹಾಗೂ ಆಕ್ಸಿಜನ್ ಪ್ಲಾಂಟ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೊತೆಗೆ ಕೋವಿಡ್​ ಕೇರ್​ ಸೆಂಟರ್​​​​ಗೆ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದರು. ಆಕ್ಸಿಜನ್ ಪ್ಲಾಂಟ್ ಸಾಮರ್ಥ್ಯ ಹಾಗೂ ಆಕ್ಸಿಜನ್ ಪೂರೈಕೆ ಬಗ್ಗೆ ಜಿಲ್ಲಾಸ್ಪತ್ರೆ ಡೀನ್​ರಿಂದ ಮಾಹಿತಿ ಕೇಳಿದ್ರು. …

Read More »

ದ್ವಿತೀಯ PUC ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ತೇರ್ಗಡೆ, ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ – ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು : ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು …

Read More »

ತಮಿಳುನಾಡಿನಲ್ಲಿ ಡಿಎಂಕೆಗೆ ಜಯ : ಹರಕೆ ಈಡೇರಿಸಲು ತನ್ನ ನಾಲಿಗೆ ಕತ್ತರಿಸಿ ದೇವಿಗೆ ಅರ್ಪಿಸಿದ ಮಹಿಳೆ

ಚೆನ್ನೈ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ತಮಿಳುನಾಡಿನ ಮಹಿಳೆಯೊಬ್ಬಳು ದೇವಾಲಯ ದೇವತೆಗೆ ನೀಡಿದ ಹರಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ತನ್ನ ನಾಲಿಗೆಯನ್ನು ಕತ್ತರಿಸಿ ನೀಡಿದ್ದಾಳೆ. ೨೦೨೧ ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಗೆದ್ದರೆ ದೇವರಿಗೆ ಹರಕೆಯಾಗಿ ತನ್ನ ನಾಲಿಗೆಯನ್ನು ಕತ್ತರಿಸಿ ನೀಡುವುದಾಗಿ ಮೂವತ್ತೆರಡು ವರ್ಷದ ವನಿತಾ ಈ ಹಿಂದೆ ಮಹಿಳೆ ಹರಕೆ ಹೊತ್ತಿದ್ದರು ಎನ್ನಲಾಗಿದೆ. ಡಿಎಂಕೆ ಜನಾದೇಶ ವನ್ನು ಗೆದ್ದ ನಂತರ, ವನಿತಾ …

Read More »

ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಾವಿಗೆ ಯಾರು ಹೊಣೆ. ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಕ್ಸಿಜನ್ ಪೂರೈಸಲೂ ಸರ್ಕಾರಕ್ಕೆ ಸಾಧ್ಯವಾಗದ ಸ್ಥಿತಿಬಂದಿದೆ ಇದೆಂತಹ ಸರ್ಕಾರ? ಬಿಜೆಪಿ ನಾಯಕರಿಗೆ ಪ್ರಚಾರ ಮುಖ್ಯವೇ ಹೊರತು ಜನರ ಜೀವಗಳು ಮುಖ್ಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ

ಕನಕಪುರ:ಲಾಕ್‌ಡೌನ್‌ನಿಂದ ಊಟಸಿಗದೆ ಹವಿನಿಂದ ಬಳಲುತ್ತಿದ್ದ ಬಡವರಿಗೆ ಭಿಕ್ಷುಕರಿಗೆ ನಿರ್ಗತಿಕರಿಗೆ ವೃತ್ತ ನಿರೀಕ್ಷಕ ಟಿ.ಟಿ.ಕೃಷ್ಣ ಆಹಾರ ನೀರು ನೀಡಿಮಾನವೀಯತೆ ಮೇರೆದಿದ್ದಾರೆ.ಸರ್ಕಾರದ ಕರ್ಫ್ಯೂ ಜಾರಿ ಬಿಕ್ಷುಕರು ನಿರ್ಗತಿಕರಿಗೆ ತೊಡಕಾಗಿ ಪರಿಣಮಿಸಿದೆ. ಅನೇಕ ಕಾರಣದಿಂದ ಜನರುಭಿಕ್ಷುಕರಾಗಿ ಬೀದಿ ಬದಿಗಳಲ್ಲಿ ಬಸ್‌ನಿಲ್ದಾಣದಲ್ಲಿ ದೇವಸ್ಥಾನಗಳ ಬಳಿಸಾರ್ವಜನಿಕರು ಕೊಡುವ ಸಹಾಯದಿಂದ ಹೊಟ್ಟೆ ತುಂಬಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ, ಕೊರೊನಾದಿಂದ ಬಿಕ್ಷುಕರನ್ನು ಹಸಿವಿನಿಂದಬಳಲುವಂತೆ ಮಾಡಿದೆ. ಇಂಥ ಸ್ಥಿತಿಯಲ್ಲಿ ಕೊರೊನಾ ತಡೆಗೆ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಆರಕ್ಷಕವೃತ್ತನಿರೀಕ್ಷಕ ಟಿ.ಟಿ.ಕೃಷ್ಣ ತಾಲೂಕಾದ್ಯಂತಗಸ್ತುತಿರುಗುವಾಗ ಬೀದಿ ಬದಿಯಲ್ಲಿಊಟ …

Read More »

RCB Blue Jersey: ಒಂದು ವರ್ಷದಿಂದ ನಮಗಾಗಿ ಹೋರಾಡಿದ್ದೀರಿ! ನೀಲಿ ಜೆರ್ಸಿ ತೊಟ್ಟು ಕೊರೊನಾ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಲಿದೆ ಆರ್‌ಸಿಬಿ

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಆವೃತ್ತಿಯಲ್ಲೂ ಎರಡು ವಿಭಿನ್ನ ಜರ್ಸಿಗಳಲ್ಲಿ ಕಣಕ್ಕೆ ಇಳಿಯುತ್ತದೆ. ವಿರಾಟ್ ಕೊಹ್ಲಿ ತಂಡವು ಪ್ರತಿ ಐಪಿಎಲ್‌ನಲ್ಲಿ ಹಸಿರು ವಿಶೇಷ ಜರ್ಸಿ ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಈ ಮೂಲಕ ಪರಿಸರದ ಸುರಕ್ಷತೆಯ ಕುರಿತು ಅರಿವು ಮೂಡಿಸುತ್ತದೆ. ಈ ಬಾರಿ, ದೇಶದಲ್ಲಿ ಕೊರೊನಾದಿಂದ ಉಂಟಾದ ಬಿಕ್ಕಟ್ಟನ್ನು ಮನದಲ್ಲಿಟ್ಟುಕೊಂಡು ಆರ್‌ಸಿಬಿ ಮತ್ತೊಮ್ಮೆ ಸಾರ್ವಜನಿಕರಲ್ಲಿ ಜಾಗೃತಗೊಳಿಸಲು ತಮ್ಮ ಜರ್ಸಿಯಿಂದ ಜನರಿಗೆ ಸಹಾಯ ಮಾಡಲು ನಿರ್ಧರಿಸಿದೆ. ಈ ಸಮಯದಲ್ಲಿ, …

Read More »

ಮತ ಎಣಿಕೆ ಸಮಯದಲ್ಲಿ ಗಲಾಟೆ : ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಪೊಲೀಸರ ವಶ!

ರಾಯಚೂರು: ಮತ ಎಣಿಕೆ ಮಾಹಿತಿ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದು ಕೋಣೆಯಲ್ಲಿ ಕೂರಿಸಿರುವ ಘನಟೆ ನಡೆದಿದೆ. ಬಸನಗೌಡ ತುರ್ವಿಹಾಳ ಸಹೋದರ ಸಿದ್ದನಗೌಡ ತುರ್ವಿಹಾಳ ಕರ್ತವ್ಯನಿರತ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಡಿಸಿ ಆರ್.ವೆಂಕಟೇಶಕುಮಾರ್ ಮಧ್ಯಪ್ರವೇಶಿಸಿ ಅವರನ್ನು ವಶಕ್ಕೆ ಪಡೆಯಿರಿ ಎಂದು ಸೂಚಿಸಿದರು. ಬಳಿಕ ಪೊಲೀಸರು ಅವರನ್ನು ನ್ಯೂಸ್ ರೂಂ ಕರೆದಯೊಯ್ದು ಕೂಡಿಸಿದರು. …

Read More »