ಬೆಂಗಳೂರು, ಮಾರ್ಚ್ 27: ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ (Mysuru-Kushalnagar highway) ಸಂಬಂಧ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ. ಮೈಸೂರು ಕುಶಾಲನಗರ ಹೈವೇಗೆ 2023ರ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ …
Read More »ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್
ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ವತಿಯಿಂದ ಮಹಿಳಾ ದಿನ ನಗರದ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ, ಮಹಿಳಾ ಸಂಗೀತ ವಿದೂಷಕಿ ಪ್ರಶಸ್ಥಿ, …
Read More »ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು.
ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು. . ಕಾಗವಾಡ ತಾಲೂಕಿನ ಉಗಾರ ಪುರಸಭೆಯ ಸನ 2025-26 ಸಾಲಿನ 35 ಲಕ್ಷ 57 ಸಾವಿರ ರೂಪಾಯದ ಉಳಿತಾಯ ಬಜೆಟ ಪುರಸಭೆ ಮುಖ್ಯ ಅಧಿಕಾರಿ ಎಂ ಆರ ನದಾಫ ಮಂಡನೆ ಮಾಡಿದರು. ಸೋಮವಾರ ರಂದು ಉಗಾರ ಪುರಸಭೆಯಲ್ಲಿ ಬಜೆಟ್ ಮಂಡನೆ. ಪುರಸಭೆ ಅಧ್ಯಕ್ಷೆ ಶ್ರೀಮತಿ ಫಾತಿಮಾ ನದಾಫ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಿಗಿತು. ಮುಖ್ಯ ಅಧಿಕಾರಿಗಳಾದ …
Read More »ಬಿ ಕೆ ಹರಿಪ್ರಸಾದ್ ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ : ಬಿ ವೈ ವಿಜಯೇಂದ್ರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ನೀವು ಅನ್ನೋದು ಜನರಿಗೆ ಗೊತ್ತಿದೆ ಎಂದು ಬಿ ಕೆ ಹರಿಪ್ರಸಾದ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹರಿಹಾಯ್ದಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ”ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ನೀಡುವ ಬಿ. ಕೆ. ಹರಿಪ್ರಸಾದ್ರವರೇ, ಸ್ವಾತಂತ್ರ್ಯ ನಂತರ ಭಾರತದಲ್ಲಿ ಕಾಂಗ್ರೆಸ್ ಆಳ್ವಿಕೆಯ ಕೊಳಕುಗಳನ್ನು ಸ್ವಚ್ಛ ಮಾಡಿದ್ದು, ಮಹಾತ್ಮ …
Read More »ನೇಜಾರಿನ ತಾಯಿ, ಮೂವರು ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಅರ್ಜಿ ತಿರಸ್ಕರಿಸಿದ ಕೋರ್ಟ್
ಉಡುಪಿ: ಜಿಲ್ಲೆಯ ಹಂಪನಕಟ್ಟೆ ಸಮೀಪದ ನೇಜಾರಿನಲ್ಲಿ 2023ರಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಕೋರಿ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ …
Read More »ಸ್ಪೀಕರ್ ತೀರ್ಮಾನ ಕಾನೂನಾತ್ಮಕ, ಬದಲಾವಣೆ ಮಾಡಬಾರದು: ಮಧು ಬಂಗಾರಪ್ಪ
ಶಿವಮೊಗ್ಗ: “ಸದನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಕಾನೂನಾತ್ಮಕವಾಗಿ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಅವರು ತಮ್ಮ ತೀರ್ಮಾನದಿಂದ ಹಿಂದೆ ಸರಿಯಬಾರದು” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಮತ್ತು ಹಾಯ್ಹೊಳೆ ಕರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು. ಪುರದಾಳು ಗ್ರಾಮದ ಬಾರೆಹಳ್ಳ ಡ್ಯಾಂ ನಿರ್ಮಾಣವಾಗಿ 45 ವರ್ಷವಾಗಿದೆ. ಹಿಂದೆ ನೋಡಿದಾಗ ನೀರು ಸಾಕಷ್ಟು ಪೋಲಾಗಿ ಹೋಗುತ್ತಿತ್ತು. ಇದರ ರಿಪೇರಿ …
Read More »ಬೆಳಗಾವಿಯ ಅರಿಹಂತ್ ಆಸ್ಪತ್ರೆ ಯಶಸ್ವಿ ಮೂತ್ರಪಿಂಡ ಬದಲಾವಣೆಯೊಂದಿಗೆ ಮತ್ತೊಂದು ಅತ್ಯುತ್ತಮ ಮೈಲಿಗಲ್ಲನ್ನು ಸಾಧಿಸಿದೆ
ಬೆಳಗಾವಿಯ ಅರಿಹಂತ್ ಆಸ್ಪತ್ರೆಯು ಮತ್ತೊಂದು ಯಶಸ್ವಿ ಮೂತ್ರಪಿಂಡ ಬದಲಾವಣೆಯೊಂದಿಗೆ ಮಹತ್ವದ ಸಾಧನೆಯನ್ನು ಮಾಡಿದೆ. ಇದರಲ್ಲಿ ಲ್ಯಾಪರೋಸ್ಕೋಪಿ ವಿಧಾನದಲ್ಲಿ ದಾನಿ ಮೂತ್ರಪಿಂಡವನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸೆ (ಲ್ಯಾಪರೋಸ್ಕೋಪಿಕ್ ಡೋನರ್ ನೆಫ್ರೆಕ್ಟಮಿ) ನಡೆಸಲಾಗಿದೆ. ಈ ವಿಶಿಷ್ಟ ಪ್ರಕ್ರಿಯೆಯಲ್ಲಿ 47 ವರ್ಷದ ಅಕ್ಕ ತಮ್ಮ 45 ವರ್ಷದ ತಂಗಿಗೆ ಮೂತ್ರಪಿಂಡ ದಾನ ಮಾಡಿದ್ದು, ಆಕೆ ಹೊಸ ಜೀವನವನ್ನು ಪಡೆದಿದ್ದಾಳೆ. ರೋಗಿಗೆ ಕಳೆದ ಎರಡು ವರ್ಷಗಳಿಂದ ಡಯಾಲಿಸಿಸ್ ನಡೆಸಲಾಗುತ್ತಿತ್ತು ಮತ್ತು ಆಕೆ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು.ರಕ್ತನಾಳಗಳ …
Read More »ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ
ಬೆಂಗಳೂರು : ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್ಗಳು ರಸ್ತೆಗಿಳಿದಿವೆ. ಬಂದ್ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಎಂದಿನಂತೆಯೇ ಸಾರ್ವಜನಿಕರು, ಸಾರಿಗೆ ವಾಹನಗಳ ಸಂಚಾರ …
Read More »ಬಜೆಟ್’ನಲ್ಲಿ ಒಂದು ಕಣ್ಣಿಗೆ ಬೆಣ್ಣೆ-ಇನ್ನೊಂದು ಕಣ್ಣಿಗೆ ಸುಣ್ಣ…:ಶಶಿಕಲಾ ಜೊಲ್ಲೆ…
ವಿಧಾನ ಮಂಡಲದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ… ರಾಜ್ಯ ಸರ್ಕಾರವು ತನ್ನ ಬಜೆಟ್’ನಲ್ಲಿ ಹಲವಾರು ಮಹತ್ವದ ಕ್ಷೇತ್ರಗಳನ್ನು ಕಡೆಗಣಿಸಿ ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ಯೋಜನೆಗಳನ್ನು ಜಾರಿ ಮಾಡಿದೆ. ಆದ್ದರಿಂದ ಮಹತ್ವದ ಕ್ಷೇತ್ರಗಳಿಗೆ ಅನುದಾನವನ್ನು ನೀಡಬೇಕೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ನವಲಗುಂದ ಶಾಸಕ ಎನ್.ಎಚ್ ಕೊನರೆಡ್ಡಿ ಹೇಳಿದರು. ಇಂದು ವಿಧಾನ ಮಂಡಲದ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರು ಸರ್ಕಾರ ತನ್ನ ಬಜೆಟಿನಲ್ಲಿ …
Read More »ಯುದ್ಧಕಾಂಡವಾದ ಸಾಮಾನ್ಯ ಸಭೆ, ರೊಚ್ಚಿಗೆದ್ದ ಮಹಿಳಾ ಸದಸ್ಯೆ ಸಭೆಯಿಂದ ಪಲಾಯಣ.
ರಾಯಬಾಗ : ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆಯಲ್ಲಿ ದಿನಾಂಕ 20 ರಂದು ಕರೆದಿದ್ದ ಸಾಮಾನ್ಯ ಸಭೆ ಯುದ್ಧಕಾಂಡವಾಗಿ ಪರಿಣಮಿಸಿದೆ. ಗುರುವಾರ ಮುಂಜಾನೆ 11 ಗಂಟೆಗೆ ಪುರಸಭೆ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಪುರಸಭೆಯ ಕಚೇರಿಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. 2025-26ನೇ ಸಾಲಿನ ಸಂತೆ ಕರ ಬಹಿರಂಗ ಹರಾಜು ಮಾಡುವ ವಿಷಯವು ಅಜೆಂಡದಲ್ಲಿ ಇತ್ತು. ಇಲಾಖೆಯ ನಿಯಮದಂತೆ 4 ಜನರು ಹರಾಜಿನಲ್ಲಿ ಭಾಗವಹಿಸಬೇಕೆನ್ನುವುದು ಅಧಿಕಾರಿಗಳ ಹಾಗು ಸರ್ವ ಸದಸ್ಯರ …
Read More »
Laxmi News 24×7