Breaking News

Uncategorized

ಕುರ್ಚಿಯಲ್ಲಿ ಅವಳೇ ಕೂರಬೇಕಿದೆ: ಗ್ರಾಮ ಪಂಚಾಯ್ತಿ ಸದಸ್ಯೆ ಸವಿತಾ ಪಾತ್ರೋಟಿ ಮಾತು

ಅವಳ (ಮಹಿಳೆ) ಕುರ್ಚಿಯಲ್ಲಿ ಇನ್ನಾರೋ ಬಂದು ಕೂರುವ ಸಂಪ್ರದಾಯ ಬಹುತೇಕ ಪಂಚಾಯ್ತಿಗಳಲ್ಲಿದೆ. ಆದರೆ ನಮ್ಮೂರ ಪಂಚಾಯ್ತಿಯಲ್ಲಿ ಮಾತ್ರ ಆ ಜಾಗದಲ್ಲಿ ಅವಳೇ ಕೂತು ಅಧಿಕಾರ ನಡೆಸಬೇಕು. ಮತ್ತೊಬ್ಬರಿಗೆ ಅವಕಾಶ ನೀಡೊಲ್ಲ. ಊರ ಜನರ ಸಮಸ್ಯೆಗೆ ಆಕೆಯೇ ಮುಕ್ತವಾಗಿ ಸ್ಪಂದಿಸಬೇಕು. ಇದು ಇಂದು ನಮ್ಮೆದುರಿಗೆ ಇರುವ ದೊಡ್ಡ ಸವಾಲು ಹೌದು. ಅದನ್ನು ನಿಭಾಯಿಸಿಯೇ ತೀರುತ್ತೇವೆ. ಹೆಣ್ಣು ಮಕ್ಕಳು ಮನೆಯಲ್ಲಿ ಇರಲು ಲಾಯಕ್ಕು, ಅಡುಗೆ ಮನೆಗೆ ಮಾತ್ರ ಸೀಮಿತ ಎಂಬುದು ಈಗ ಸವಕಲು …

Read More »

ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …

Read More »

ವರವರ ರಾವ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣ, ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರು ನಾನಾವತಿ ಆಸ್ಪತ್ರೆಯಿಂದ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ. 82 ವರ್ಷದ ರಾವ್ ಅವರಿಗೆ ಫೆಬ್ರುವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೂ ನಗದು ಜಾಮೀನು ನೀಡಲು ಅವಕಾಶ ನೀಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಕಳೆದ ಸೋಮವಾರ ನ್ಯಾಯಾಲಯ ಅನುಮತಿ …

Read More »

ಮೂವರು ಖತರ್ನಾಕ್ ಕಳ್ಳರ ಬಂಧನ: 28 ಬೈಕ್ ಜಪ್ತಿ

ಕಲಬುರಗಿ:  ನಗರದ ವಿವಿಧ ಕಾಲೋನಿಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಸ್ಟೇಷನ್​ ಬಜಾರ್​​ ಠಾಣೆಯ ಪೊಲೀಸರು   ಬಂಧಿಸಿದ್ದಾರೆ. ವಿಶ್ವನಾಥ್​ ಹಂಗರಗಿ (19), ಮಲ್ಲಿಕಾರ್ಜುನ್​ ಮಲಬುದ್ದಿ (23) ಹಾಗು ಭಗವಂತ ಪೂಜಾರಿ(22) ಬಂಧಿತರು. ಆರೋಪಿ ಕಲಬುರಗಿ ನಗರದ ನಿವಾಸಿಗಳಾಗಿದ್ದು ಇಬ್ಬರು ಮೊಬೈಲ್​ ರಿಪೇರಿ ಕೆಲಸ ಮಾಡುತ್ತಿದ್ದರೆ, ಇನ್ನೋರ್ವ ವಿದ್ಯಾರ್ಥಿಯಾಗಿದ್ದ. ಕಳೆದ ಕೆಲ ದಿನಗಳಿಂದ ಮೂವರು ಸೇರಿ ಕಲಬುರಗಿ ನಗರದ ಖೂಬಾ ಪ್ಲಾಟ್​, ಸಿಐಬಿ ಕಾಲೋನಿ, ಗೊದುತಾಯಿ ನಗರ, ಸಾಯಿ ಮುಂದಿರ, ಸಂತೋಷ್​ ಕಾಲೋನಿ, …

Read More »

ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್:

ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ …

Read More »

ಬೆಳಗಾವಿ – ಧಾರವಾಡ ರೈಲ್ವೆ: ಸಚಿವರ ಉತ್ತರ ಅಸಮರ್ಪಕ ಎಂದ ಕವಟಗಿಮಠ

ಧಾರವಾಡ -ಬೆಳಗಾವಿ ನಡುವೆ ಹೊಸ ರೈಲು ಮಾರ್ಗ ನಿರ್ಮಾಣ ಮಾಡುವ ಸಂಬಂಧ ಘೋಷಣೆಯಾದ ಯೋಜನೆಯು ಯಾವ ಹಂತದಲ್ಲಿದೆ ಎನ್ನುವ ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯನ್ನು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸದನದಲ್ಲಿ ಪ್ರಶ್ನೋತ್ತರ ವೇಳೆ ಮೂಲಭೂತ ಸೌಕರ್ಯ ಸಚಿವರಿಗೆ ಕೇಳಿದ್ದರು. ಆದರೆ ಸಚಿವರು ಒದಗಿಸಿದ ಉತ್ತರ ಅಸಮರ್ಪಕವಾಗಿದೆಯೆಂದು ಕವಟಗಿಮಠ ಆಕ್ಷೇಪಿಸಿ, ತುರ್ತಾಗಿ ರಾಜ್ಯ ಸರಕಾರಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಧಾರವಾಡ -ಬೆಳಗಾವಿ ನಡುವೆ ಹೊಸ ರೈಲು ಮಾರ್ಗ …

Read More »

ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್​ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …

Read More »

ಪಕ್ಷದ್ರೋಹಿಗಳ ಮೇಲೆ ಅನುಕಂಪ ಬರಲು ಸಾಧ್ಯವೇ: ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ‘ಮೈತ್ರಿ ಸರ್ಕಾರವನ್ನು ಬೀಳಿಸಿ ಹೋದವರ ಮೇಲೆ ಮತ್ತು ಪಕ್ಷ ದ್ರೋಹ ಮಾಡಿದವರ ಮೇಲೆ ಅನುಕಂಪ ಬರಲು ಸಾಧ್ಯವಾ?’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ರಮೇಶ್ ಜಾರಕಿಹೊಳಿ ವಿರುದ್ಧದ ಸಿ.ಡಿ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಬೇಕೆಂದು ಕೋರಿ ಆರು ಸಚಿವರು ಕೋರ್ಟ್ ಮೊರೆ ಹೋಗಿರುವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ‘ಕೋರ್ಟ್ ಮೆಟ್ಟಿಲು ಹತ್ತುತ್ತಿದ್ದಾರೆ ಎಂದರೆ ಅವರಿಗೆ …

Read More »

ಮಂಗಳೂರಿನಲ್ಲಿ ಮಗು ಮಾರಾಟ ಜಾಲ ಪತ್ತೆ; ಓರ್ವ ಆರೋಪಿ ಬಂಧನ

ಮಂಗಳೂರು (ಮಾ. 6): ಮಂಗಳೂರಿನಲ್ಲಿ ಹಸುಗೂಸು ಮಾರಾಟದ ಜಾಲ ಪತ್ತೆಯಾಗಿದೆ. ಮಕ್ಕಳಿಲ್ಲದವರಿಗೆ ಮಗುವನ್ನು ಮಾರಾಟ ಮಾಡುವ ಹೈಟೆಕ್ ದಂಧೆ ಇದಾಗಿದ್ದು, ಮಗುವನ್ನು ಮಾರಾಟ ಮಾಡುತ್ತಿದ್ದ ಪಾಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ತಾಯಿಯ ಹಾಲಿಗಾಗಿ ಅಳುತ್ತಿರುವ ಹಾಲುಗೆನ್ನೆಯ ಪುಟ್ಟ ಕಂದಮ್ಮನನ್ನು ಒಮ್ಮೆ ನೋಡಿದರೆ ಕರುಳು ಕಿತ್ತು ಬಂದಂತಾಗುತ್ತದೆ. ಈ ಮುದ್ದಾದ ಮಗುವನ್ನು ಮಾರಾಟ ಮಾಡಲು ಯತ್ನಿಸಿದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರಿನಲ್ಲಿ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಹೈಟೆಕ್ ದಂಧೆ ಬಯಲಾಗಿದೆ. …

Read More »

ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.

ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …

Read More »