ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …
Read More »ಕುವೈತ್ ನಿಂದ ಧಾರವಾಡಕ್ಕೆ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ: ಸಚಿವ ಪ್ರಹ್ಲಾದ್ ಜೋಶಿ
ಧಾರವಾಡ: ಭಾರತ ಸರ್ಕಾರದ ವಿದೇಶಾಂಗ ಮಂತ್ರಾಲಯ ಮತ್ತು ವಾಣಿಜ್ಯ ಮಂತ್ರಾಲಯದಿಂದ ಬೇರೆ ಬೇರೆ ರಾಷ್ಟ್ರಗಳ ಜೊತೆ ಭಾರತದ ಉತ್ತಮ ಸಂಬಂಧ ಹೊಂದಿರುವದರಿಂದ ಮತ್ತು ಜಾಗತಿಕ ಟೆಂಡರ್ ಮೂಲಕ ಆಕ್ಸಿಜನ್ ಆಮದು ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸೋಮವಾರ ಬೆಳಿಗ್ಗೆ, ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಪ್ರಾಕ್ಸಿಯರ್ ಆಕ್ಸಿಜನ್ ಮರುಪೂರ್ಣ (ರೀಫಿಲ್ಲಿಂಗ್) ಘಟಕಕ್ಕೆ ಭೇಟಿ ನೀಡಿ, ಘಟಕದಿಂದ ಟ್ಯಾಂಕರ್ ಗೆ ಆಕ್ಸಿಜನ್ ತುಂಬುವ ಕಾರ್ಯ ಪರೀಶಿಲಿಸಿದ ನಂತರ …
Read More »ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…
ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …
Read More »ತಾಯಿನಾಡ ಜನರ ಸಂಕಷ್ಟಕ್ಕೆ ಮಿಡಿದ ಸಾಗರದಾಚೆ ಕನ್ನಡಿಗರು; ದುಬೈನಿಂದ ಕರ್ನಾಟಕಕ್ಕೆ ಹರಿದು ಬಂತು ಸಹಾಯ ಹಸ್ತ
ಬೆಂಗಳೂರು: ಕೊರೊನಾ ಎರಡನೇ ಅಲೆ ಭಾರತದಲ್ಲಿ ಬಹಳ ವೇಗದಲ್ಲಿ ಮತ್ತು ಬಹಳ ಅಪಾಯಕಾರಿಯಾಗಿ ಹರಡುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಕೊವಿಡ್ ಕಾರಣ ಸಾವು-ನೋವುಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಕಳೆದ ಹಲವು ದಿನಗಳಿಂದ ಕರ್ನಾಟಕವನ್ನು ಲಾಕ್ಡೌನ್ ಮಾಡಲಾಗಿದೆ. ಇದರಿಂದಾಗಿ ದಿನಗೂಲಿ ಜನರು ಮತ್ತು ನಿರ್ಗದಿಕರು ಸೇರಿ ಹಲವು ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಕೆಲವರಿಗೆ ಒಂದೊತ್ತಿನ ಊಟಕ್ಕೆ ಸಹ ಇಲ್ಲದ ಪರಿಸ್ಥಿತಿ ಇದ್ದು, ಇಂತಹರವರ ನೆರವಿಗೆ ಈಗ ದುಬೈನ ಕನ್ನಡಿಗರು ನಿಂತಿದ್ದಾರೆ. ದುಬೈನಲ್ಲಿ ಕಾರ್ಯಾಚರಿಸುತ್ತಿರುವ …
Read More »ಮಾಸ್ಕ್ ಹಾಕದೆ ರೋಗಿಗಳಿಗೆ ಚಿಕಿತ್ಸೆ! ಧೈರ್ಯ ತುಂಬುವ ಯತ್ನ ಎಂದ ಡಾ. ರಾಜು
ಬೆಂಗಳೂರು: ನಗರದ ಮೂಡಲಪಾಳ್ಯ ವೃತ್ತದಲ್ಲಿರುವ ಸಾಗರ್ ಕ್ಲಿನಿಕ್ನಲ್ಲಿ ವೈದ್ಯರು, ಶುಶ್ರೂಷಕರು ಸೇರಿದಂತೆ ಯಾವುದೇ ವೈದ್ಯಕೀಯ ಸಿಬ್ಬಂದಿ ಮಾಸ್ಕ್ ಹಾಕದೆ, ಸ್ಯಾನಿಟೈಸರ್ ಬಳಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ನಾಗರಿಕರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ‘ರೋಗಿಗಳಿಗೆ ಧೈರ್ಯ ತುಂಬಬೇಕು ಎಂದು ಸಾಗರ್ ಕ್ಲಿನಿಕ್ನ ಡಾ. ರಾಜು ಕೃಷ್ಣಮೂರ್ತಿ ಮತ್ತು ಅವರ ಸಿಬ್ಬಂದಿ ಮಾಸ್ಕ್ ಹಾಕದೆ, ಪಿಪಿಇ ಕಿಟ್ ಧರಿಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. …
Read More »ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ
ಚಿತ್ರನಟ ಉಪೇಂದ್ರ ಅವರು ಕೋವಿಡ್ ಸೋಂಕಿನಿಂದ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ್ದಾರೆ. ಈ ಬಗ್ಗೆ ಟ್ವಿಟರಿನಲ್ಲಿ ಬರೆದುಕೊಂಡಿರುವ ‘ ನಿಮ್ಮೆಲ್ಲರರೈತರ ಗಮನಕ್ಕೆ, ನಿಮ್ಮೆಲ್ಲರ ಅದ್ಭುತ ಪ್ರತಿಕ್ರಿಯೆಗೆ ಧನ್ಯವಾದಗಳು. ಬೆಳೆದ ಬೆಳೆ ವ್ಯಾಪಾರವಾಗದೇ ನಾಶವಾಗುವ ಬೆಳೆಯನ್ನು ನಾವು ಕೊಂಡು ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಹಂಚುತ್ತಿದ್ದೇವೆ. ಇದು ವ್ಯಾಪಾರ ಎಂದು ದಯವಿಟ್ಟು ತಿಳಿಯಬೇಡಿ. ಅಂತಹ ಸಂಕಷ್ಟದಲ್ಲಿರುವ ರೈತರು ಮಾತ್ರ ಈ …
Read More »ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ
ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ …
Read More »ಬೆಳಗಾವಿ ಜಿಲ್ಲೆಯಲ್ಲಿ 36 ಪೊಲೀಸರಿಗೆ ಕೊರೋನಾ ಬಂದಿದೆ. ಎಲ್ಲರೂ 2ನೇ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದು, ಯಾರಿಗೂ ಜೀವಾಪಾಯವಿಲ್ಲ
ಜೀವದ ಹಂಗು ತೊರೆದು ಜನರ ರಕ್ಷಣೆಗಾಗಿ ಬೀದಿಯಲ್ಲಿ ನಿಂತು ಹೋರಾಡುತ್ತಿರುವ ಕೊರೋನಾ ಫ್ರಂಟೈ ಲೈನ್ ವಾರಿಯರ್ಸ್ ಪೊಲೀಸರು ಎಷ್ಟು ಸುರಕ್ಷಿತರಾಗಿದ್ದಾರೆ? ಬೆಳಗಾವಿ ನಗರ ಒಂದರಲ್ಲೇ 66 ಪೊಲೀಸರು ಕೊರೋನಾದಿಂದಾಗಿ ಬಳಲುತ್ತಿದ್ದಾರೆ. ಆದರೆ ಅವರೆಲ್ಲ ಜೀವಾಪಾಯದಿಂದ ಪಾರಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ 2 ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೇ ಆಗಿದ್ದಾರೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 36 ಪೊಲೀಸರಿಗೆ ಕೊರೋನಾ ಬಂದಿದೆ. ಎಲ್ಲರೂ 2ನೇ ಡೋಸ್ ವ್ಯಾಕ್ಸಿನ್ …
Read More »ಒಳಿತು ಮಾಡು ಮನುಷ್ಯಾ.. ನೀ ಇರೋದು ಮೂರು ದಿವಸಾ: ಹಿಂಗೆ ನಡೆದುಕೊಳ್ಳುತ್ತಿದ್ದಾರೆ ಹುಬ್ಬಳ್ಳಿ ಪೊಲೀಸರು…!
ಹುಬ್ಬಳ್ಳಿ: ಕೊರೋನಾ ಎಂಬ ಮಹಾಮಾರಿ ಪ್ರತಿಯೊಬ್ಬರ ನೆಮ್ಮದಿಯನ್ನ ಹಾಳು ಮಾಡುವುದಲ್ಲದೇ, ಬದುಕನ್ನ ನಿರ್ಜೀವಿಯನ್ನಾಗಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತೆಯಿದೆ. ತಾನೂ ಇರುವುದೆಷ್ಟು ದಿನ ಎಂಬುದು ಗೊತ್ತೆಯಿಲ್ಲದಿದ್ದರೂ, ಮನುಷ್ಯ ಮಾತ್ರ ಮಾನವೀಯ ಇನ್ನೂ ಮೈಗೂಡಿಸಿಕೊಳ್ಳುತ್ತಿಲ್ಲ. ಆದರೆ, ಸದಾಕಾಲ ಸಾರ್ವಜನಿಕರಿಂದ ವಿನಾಕಾರಣ ಬೈಸಿಕೊಳ್ಳುವ ಪೊಲೀಸರು ಮಾತ್ರ, ತಾವೂ ಎಷ್ಟು ಮಾನವೀಯತೆ ಹೊಂದಿದ್ದೇವ ಎಂಬುದನ್ನ ಸದ್ದಿಲ್ಲದೇ ತೋರಿಸಿಕೊಂಡು ಹೋಗುತ್ತಿದ್ದಾರೆ.. ಹುಬ್ಬಳ್ಳಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಬಂದ ನಂತರ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆಗಳು …
Read More »ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!
ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ. ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ. ಜ್ವರ, ಕೆಮ್ಮು …
Read More »
Laxmi News 24×7