Breaking News

Uncategorized

ಎಲೆಕ್ಷನ್ ಡ್ಯೂಟಿಗೆ ಹಾಜರಾಗಿದ್ದ 2 ಸಾವಿರ ಜನರು ಕೊರೊನಾಗೆ ಬಲಿ – 700ಕ್ಕೂ ಹೆಚ್ಚು ಶಿಕ್ಷಕರು

ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …

Read More »

ಸಂಪೂರ್ಣ ಲಾಕ್ ಡೌನ್ ಅನಿವಾರ್ಯ; ಶೋಭಾ ಕರಂದ್ಲಾಜೆ

ಉಡುಪಿ, ಮೇ 06; “ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಉಡುಪಿ ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನತಾ ಲಾಕ್ ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತಿದೆ. ಕಳೆದ ಬಾರಿಯಂತೆ ಸಂಪೂರ್ಣ ಲಾಕ್ ಡೌನ್ ಮಾಡಬೇಕು” ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, “ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡಬೇಕು. ಜನ ಈಗಿನಂತೆ …

Read More »

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ

ಬೆಂಗಳೂರು, ಮೇ 6: ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೋನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು. ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿ ಜೆ ಪಿ ಶಾಸಕ ಸತೀಶ್ ರೆಡ್ಡಿರನ್ನೇ ಜತೆಯಲ್ಲಿಟ್ಟುಕೊಂಡು ಇಂಥ ಈ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು. ಆದರೆ ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ …

Read More »

ಬೆಳಗಾವಿಯ ಆರೋಗ್ಯ ಇಲಾಖೆಯ ನಿನ್ನೆಯ ಕೊರೊನಾ ಬುಲೆಟಿನ್‍ನಲ್ಲಿ ಸುಳ್ಳು ಲೆಕ್ಕ

ಬೆಳಗಾವಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ಮಹಾಮಾರಿಗೆ ಬರೋಬ್ಬರಿ 42 ಜನ ಸಾವನ್ನಪ್ಪಿದ್ದು, ಹೆಲ್ತ್ ಬುಲೆಟಿನ್ ನಲ್ಲಿ ಕೇವಲ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತೋರಿಸಲಾಗಿದೆ. ಈ ಮೂಲಕ ಸರ್ಕಾರ ಸಾವಿನಲ್ಲೂ ಸುಳ್ಳು ಲೆಕ್ಕ ನೀಡುತ್ತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 42 ಜನ ಸೋಂಕಿತರ ಶವಗಳನ್ನು ಮಣ್ಣು ಮಾಡಲಾಗಿದ್ದು, ಸಾವಿನ ಸುದ್ದಿಗಳನ್ನು ಕೇಳಿದ ಸಂಬಂಧಿಕರು ಆಘಾತಕ್ಕೋಳಗಿದ್ದಾರೆ. ಕೋರ್ಟ್ ಆವರಣದ ಮುಂದಿರುವ ಅಂಜುಮನ್ ಸ್ಮಶಾನದಲ್ಲಿ 28 ಶವಗಳನ್ನು …

Read More »

ಸಮಯಪ್ರಜ್ಞೆ ಮೆರೆದು 300 ಜನರ ಜೀವ ಉಳಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತಪಟ್ಟ ಘಟನೆ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಉಪ ವಿಭಾಗದ ಪೊಲೀಸರು ಸಾಹಸ ಮಾಡಿ 300 ಜನರ ಜೀವ ಕಾಪಾಡಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ 300 ಮಂದಿ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಮಂಗಳವಾರ ರಾತ್ರಿ ಆಕ್ಸಿಜನ್ ಕಡಿಮೆಯಾಗಿ ಪಡೆಯಲು ಆಸ್ಪತ್ರೆ ವಾಹನ ಹೊಸಕೋಟೆ ಪಿಲ್ಲಗುಂಪೆಗೆ ತೆರಳಿದ್ದು, ಕೇರಳದಿಂದ …

Read More »

ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳ ಬಂಧನ

ದುಬೈ: ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ದುಬೈ ಪೊಲೀಸರ ಒಳನುಸುಳುವಿಕೆ ವಿಭಾಗದ ನಿರ್ದೇಶಕ ಕರ್ನಲ್ ಅಲಿ ಸೇಲಂ, ಓಡಿಹೋದ ಕೆಲಸಗಾರರನ್ನು ನೇಮಕ ಮಾಡುವುದರ ವಿರುದ್ಧ ಸಮಾಜಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ಎಚ್ಚರಿಸಿದರು. ಅಭಿಯಾನದ ಭಾಗವಾಗಿ ರಂಜಾನ್ ಆರಂಭದಿಂದಲೂ ವಿವಿಧ ರಾಷ್ಟ್ರೀಯತೆಗಳಿಂದ ಓಡಿಹೋದ 54 ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ಈ ಸಮಯದಲ್ಲಿ ಗೃಹ ಕಾರ್ಮಿಕರು ಕಾನೂನು ಉಲ್ಲಂಘಿಸುವ ಹೆಚ್ಚಳವಿದೆ, …

Read More »

ಆಯಂಬುಲೆನ್ಸ್ ಕಾದು ಕಾದು ರಸ್ತೆಯಲ್ಲೇ ಕುಸಿದು ಮೃತಪಟ್ಟ ಯುವಕ;

ಕೊಡಗು: ಎರಡು ದಿನಗಳಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ತೆರಳಲು ಆಯಂಬುಲೆನ್ಸ್ಗಾಗಿ ಕಾದು ಕಾದು ಕೊನೆಗೆ ರಸ್ತೆಯಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆ ಬಜಗುಂಡಿಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿಯ ಯುವಕ ಮನು ಮೃತ ಯುವಕ. ಎರಡು ದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಯುವಕ ಮನು ಮೊನ್ನೆಯಷ್ಟೇ ಸೋಮವಾರಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದನಂತೆ. ಆದರೆ ಯುವಕನಿಗೆ ತೀವ್ರವಾಗಿ ಜ್ವರ ಮತ್ತು ಕೆಮ್ಮು ಇದ್ದಿದ್ದರಿಂದ ಆತನನ್ನು ಮಡಿಕೇರಿ …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ನಾನು ಸತ್ತಿಲ್ಲ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ; ನಟ ದೊಡ್ಡಣ್ಣ

ನಾನು ಆರೋಗ್ಯವಾಗಿ, ಆರಾಮಾಗಿ ಮನೆಯಲ್ಲಿ ಇದ್ದೀನಿ ಎಂದು ವಿಡಿಯೋ ಮೂಲಕ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೊಡ್ಡಣ್ಣ ಫೋಟೋ ಹಾಕಿ RIP ಅಂತ ಬರೆದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಪೋಸ್ಟ್ ನೋಡಿ ಆತಂಕಗೊಂಡ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಸಾಕಷ್ಟು ಫೋನ್ ಕರೆಗಳು ಬರುತ್ತಿದ್ದಂತೆ ನಟ ದೊಡ್ಡ ವಿಡಿಯೋ …

Read More »

ಬೆಂಗಳೂರು: ಶೇ.55ಕ್ಕೆ ತಲುಪಿದ ಕೊರೊನಾ ಪಾಸಿಟಿವಿಟಿ ದರ, 3 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪಾಸಿಟಿವಿಟಿ ದರ ಶೇ.55ಕ್ಕೆ ತಳುಪಿದ್ದು, 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿರುವುದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸುತ್ತಿದ್ದು, ಪಾಸಿಟಿವಿಟಿ ದರ ಹೆಚ್ಚಾಗಿದೆ. ಸೋಮವಾರ ಪಾಸಿಟಿವಿಟಿ ಪ್ರಮಾಣ ಶೇ.55ಕ್ಕೆ ತಲುಪಿದೆ. ಮಂಗಳವಾರ ಕರ್ನಾಟಕದಲ್ಲಿ ಒಟ್ಟು 44,632 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿ 20,850 ಕೊರೊನಾ ಸೋಂಕಿತರಿದ್ದಾರೆ ಎಂಬುದು ತಿಳಿದುಬಂದಿದೆ.   ಕಳೆದ 24 ಗಂಟೆಯಲ್ಲಿ ಗಂಟೆಯಲ್ಲಿ ಒಟ್ಟು 292 …

Read More »