ರಾಜಸ್ಥಾನ : ರಾಜ್ಯದಲ್ಲಿ 30 ವರ್ಷದ ಮಹಿಳೆ ಮೇಲೆ ಆಕೆಯ ಪತಿಯ ಕಣ್ಣೆದುರೇ, ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ, ಬರಾನ್ ಎಂಬಲ್ಲಿ ನಡೆದಿದೆ. ಮಹಿಳೆಯ ಮಾಜಿ ಪತಿ ಮತ್ತು ಆತನ ಸಹಾಯಕರು ಸೇರಿದಂತೆ ಐವರು ಪುರುಷರು ಶನಿವಾರ ರಾತ್ರಿ ಬರಾನ್ ಅತ್ರು ರಾಜ್ಯ ಹೆದ್ದಾರಿಯಲ್ಲಿ ದಂಪತಿಗಳನ್ನು ತಡೆದು, ಅತ್ಯಾಚಾರ ಎಸಗಿರುವುದಾಗಿ ಎಸ್ ಪಿ ವಿನೀತ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ದಂಪತಿ …
Read More »ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …
Read More »ಸಿಡಿ ಪ್ರಕರಣ ತನಿಖೆಯಾದರೆ ಪ್ರೊಡ್ಯೂಸರ್, ಡೈರೆಕ್ಟರ್ ಯಾರೆಂದು ಗೊತ್ತಾಗುತ್ತದೆ: ಸಿಟಿ ರವಿ
ಚಿಕ್ಕಮಗಳೂರು: ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಯಾಕೆ ತಳುಕು ಹಾಕಲಾಗಿದೆ ಎನ್ನುವುದು ನನಗೆ ತಿಳಿದಿಲ್ಲ. ಪ್ರಕರಣದ ತನಿಖೆಯಾದರೆ ಪ್ರೊಡ್ಯೂಸರ್, ಡೈರೆಕ್ಟರ್ ಯಾರೆಂದು ಗೊತ್ತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಟಿ ರವಿ “ಹಿಂದೆಲ್ಲಾ ಮೌಲ್ಯಾಧಾರಿತ ರಾಜಕೀಯದ ಚರ್ಚೆಯಾಗುತ್ತಿತ್ತು. ಈಗ ಸಿಡಿ ಆಧಾರಿತ ರಾಜಕೀಯದ ಚರ್ಚೆ ಆಗುತ್ತಿದೆ.” ಎಂದರು. “ಮೌಲ್ಯಾಧಾರಿತ ರಾಜಕೀಯವೋ, ಸಿಡಿ ಆಧಾರಿತ ರಾಜಕೀಯವೋ …
Read More »‘ಮಹಾನಾಯಕ’ ಎಂದಾಕ್ಷಣ ತನಗೇ ಹೇಳಿದ್ದು ಎಂದುಕೊಳ್ಳುವುದೇಕೆ?; ಡಿಕೆಶಿಗೆ ಹೆಚ್.ಡಿ.ಕೆ. ಟಾಂಗ್
ಮೈಸೂರು: ರಾಸಲೀಲೆ ಸಿಡಿ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಾನಾಯಕ ಎಂದಾಕ್ಷಣ ತಾನೇ ಎಂದುಕೊಂಡು ಡಿ.ಕೆ.ಶಿವಕುಮಾರ್ ಹೇಳಿಕೆಗಳನ್ನು ನೀಡುತ್ತಿರುವುದೇಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರನ್ನು ಯಾರಾದರೂ ಹೇಳಿದ್ದಾರಾ? ರಮೇಶ್ ಜಾರಕಿಹೊಳಿ ಮಹಾನಾಯಕರೊಬ್ಬರ ಪಿತೂರಿ ಇದೆ ಎಂದಾಕ್ಷಣ ಇವರು ತನಗೇ ಹೇಳಿದ್ದು ಎಂದುಕೊಳ್ಳುವುದೇಕೇ? ಈ ರಾಜ್ಯದಲ್ಲಿ ಮಹಾನಾಯಕರು ಬಹಳ ಜನರಿದ್ದಾರೆ. ಆ ಮಹಾನಾಯಕ ಯಾರೆಂದು ಗೊತ್ತಿಲ್ಲ. …
Read More »ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪ ಮಾಡಲು ಸರ್ವ ಸ್ವತಂತ್ರರಿದ್ದಾರೆ.: B.S.Y.
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪ ಮಾಡಲು ಸರ್ವ ಸ್ವತಂತ್ರರಿದ್ದಾರೆ. ಅವರು ಸಿಡಿ ಬಗ್ಗೆ ಚರ್ಚೆ ಮಾಡಿದರೂ ಸ್ವಾಗತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರು ಯಾವುದೇ ವಿಷಯದ ಮೇಲೆ ಸರಿಯಾದ ರೀತಿಯಲ್ಲಿ ಬೆಳಕು ಚೆಲ್ಲಿದರೆ ಅವರ ಸಲಹೆ ಮೇಲೆ ನಾವು ನಮ್ಮ ಸಚಿವರನ್ನು ಬಿಗಿಗೊಳಿಸಲು ಅನುಕೂವಾಗುತ್ತದೆ. ವಿರೋಧ ಪಕ್ಷದ ನಾಯಕರು ಯಾವುದೇ ವಿಷಯ ಪ್ರಸ್ತಾಪ ಮಾಡುವುದು ಅಪರಾಧವಲ್ಲ. …
Read More »ಹೈದರಾಬಾದ್ನಲ್ಲಿ ಸಿ.ಡಿ. ಸಂತ್ರಸ್ತೆ ವಶಕ್ಕೆ?
ಬೆಂಗಳೂರು/ವಿಜಯಪುರ: ಅಶ್ಲೀಲ ಸಿ.ಡಿ. ಪ್ರಕರಣದ ಕೇಂದ್ರಬಿಂದು ಯುವತಿಯನ್ನು ಎಸ್ಐಟಿ ತಂಡ ಹೈದರಾಬಾದ್ನಲ್ಲಿ ರವಿವಾರ ವಶಕ್ಕೆ ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಕೆಲವು ದಿನಗಳಿಂದ ಹೈದರಾಬಾದ್ನ ಪರಿ ಚಯಸ್ಥರ ಮನೆಯಲ್ಲಿ ವಾಸವಿದ್ದ ಯುವತಿ ಶನಿವಾರ ವೀಡಿಯೋ ಬಿಡುಗಡೆ ಮಾಡಿದ್ದಳು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಎಸ್ಐಟಿ ಅಧಿಕಾರಿಗಳು ರವಿವಾರ ಮಹಿಳಾ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೂಂದು ತಂಡ ಪ್ರಕರಣದ ಕಿಂಗ್ಪಿನ್ ಪತ್ರಕರ್ತ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದೆ. ರವಿವಾರ ರಾತ್ರಿಯೇ …
Read More »ಬೆಂಗಳೂರಿನಿಂದ ಹೊರಟ ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು
ಬೆಂಗಳೂರು, ಮಾರ್ಚ್ 14; ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಬೆಂಗಳೂರು ನಗರದಿಂದ ಸಂಚಾರ ಆರಂಭಿಸಿದೆ. ಐಆರ್ಸಿಟಿಸಿ ರೈಲು ನಿರ್ವಹಣೆ ಮಾಡುವ ಜವಾಬ್ದಾರಿ ಹೊತ್ತಿದ್ದು, ಮೊದಲ ಬಾರಿಗೆ ಸಂಚಾರವನ್ನು ಪ್ರಾರಂಭಿಸಲಾಗಿದೆ. ಭಾನುವಾರ ಯಶವಂತಪುರ ರೈಲು ನಿಲ್ದಾಣದಿಂದ ಗೋಲ್ಡನ್ ಚಾರಿಯಟ್ ರೈಲು ಸಂಚಾರ ಆರಂಭವಾಯಿತು. ‘ಪ್ರೈಡ್ ಆಫ್ ಕರ್ನಾಟಕ’ ಪ್ಯಾಕೇಜ್ ಪ್ರವಾಸಕ್ಕೆ ಇಂದು ಚಾಲನೆ ನೀಡಲಾಗಿದೆ. ರೈಲು ನಿಲ್ದಾಣದಲ್ಲಿ ಗೋಲ್ಡನ್ ಚಾರಿಯಟ್ ರೈಲು ಸಿಬ್ಬಂದಿಗಳು ಪ್ರವಾಸಿಗರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬೇಸಿಗೆ …
Read More »ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ
ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …
Read More »ವಿದ್ಯುತ್ ಸಮಸ್ಯೆ ಖಂಡಿಸಿ 15ರಂದು 20 ಕಿ.ಮೀ. ಪಾದಯಾತ್ರೆ
ಹೊಸನಗರ: ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಮಾರ್ಚ್ 15ರಂದು 20 ಕಿ.ಮೀ. ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯುತ್ ಬಳಕೆದಾರರ ಹೋರಾಟ ಸಮಿತಿಯ ವಾಟಗೋಡು ಸುರೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ತಾಲ್ಲೂಕಿನ ಬಟ್ಟೆಮಲ್ಲಪ್ಪದಿಂದ ಪಾದಯಾತ್ರೆ ಆರಂಭವಾಗಲಿದ್ದು, ಮಾರುತಿಪುರ, ಕಚ್ಚಿಗೆಬೈಲು, ಬ್ರಹ್ಮೇಶ್ವರ, ಮಾವಿನಕೊಪ್ಪ ವೃತ್ತ ಮಾರ್ಗವಾಗಿ ತಹಶೀಲ್ದಾರ್ ಕಚೇರಿಯ ತನಕ ನಡೆಯಲಿದೆ ಎಂದರು. ಈ ಪಾದಯಾತ್ರೆಯಲ್ಲಿ ರೈತರು, ರೈತ ಕಾರ್ಮಿಕರು, ಸ್ವ-ಸಹಾಯ ಸಂಘದ ಸದಸ್ಯರು, ವಿದ್ಯುತ್ …
Read More »ಪೊಲೀಸ್ ದೌರ್ಜನ್ಯ ಮುಂದುವರಿದರೆ ಎಲ್ಲ ಠಾಣೆಗಳಿಗೆ ಮುತ್ತಿಗೆ: ಸಿದ್ದರಾಮಯ್ಯ
ಶಿವಮೊಗ್ಗ: ರಾಜ್ಯದ ಕಾರ್ಯಕರ್ತರು ಮುಖಂಡರ ಮೇಲೆ ಭದ್ರಾವತಿಯಲ್ಲಿ ನಡೆದಂತಹ ಪೊಲೀಸ್ ದೌರ್ಜನ್ಯ ಮುಂದುವರಿದರೆ ರಾಜ್ಯದ ಎಲ್ಲ ಠಾಣೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು. ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ಚಲೋ-ಜನಾಕ್ರೋಶ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋಟಿಗಟ್ಟಲೆ ದುಡ್ಡು ಕೊಟ್ಟು ಶಾಸಕರನ್ನು ಖರೀದಿಸಿದರು. ಲೂಟಿ ಹೊಡೆದು ಆಸ್ತಿ ಮಾಡಿದರು. ಹಾಗಂತ ಅವರೇ ಪೊಲೀಸರಿಗೆ ಸಂಬಳ ಕೊಡುತ್ತಾರಾ? …
Read More »
Laxmi News 24×7