Breaking News

Uncategorized

ಸ್ವಯಂಪ್ರೇರಣೆಯಿಂದ ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಹೊರಗಡೆಯಿಂದ ಬಂದು ವಾರಕ್ಕಿಂತ ಹೆಚ್ಚು ಕಾಲ ಇಲ್ಲಿಯೇ ವಾಸಿಸುವ ನಾಗರಿಕರು ಅಥವಾ ಕುಟುಂಬಗಳು ಸ್ವಯಂಪ್ರೇರಣೆಯಿಂದ ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್ ಸೋಂಕು ಕೆಲವೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ತಮ್ಮ ಕುಟುಂಬ ಹಾಗೂ ಸಮಾಜದ ಆರೋಗ್ಯದ ದೃಷ್ಟಿಯಿಂದ ನಾಗರಿಕರು ಸ್ವಯಂಪ್ರೇರಣೆಯಿಂದ ತಪಾಸಣೆ ಮಾಡಿಕೊಳ್ಳಬೇಕು. ಒಂದು ವೇಳೆ ಸೋಂಕು ಕಂಡುಬಂದರೆ ಸಕಾಲಕ್ಕೆ‌ ಸೂಕ್ತ ಚಿಕಿತ್ಸೆ ಪಡೆಯಲು …

Read More »

ಇಂದಿನಿಂದ ಮೇ 3 ರವರೆಗೆ ರಾಜಸ್ಥಾನ ಲಾಕ್

ಜೈಪುರ್: ರಾಜಸ್ಥಾನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿಯ ರಾಜ್ಯ ಸರ್ಕಾರ, ಇವತ್ತಿಂದ ಮೇ. 3 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಲಾಕ್ ಡೌನ್ ಅವಧಿಯನ್ನು ‘ಜನ ಅನುಷನ್ ಪಖ್ವಾರ’ (ಸಾರ್ವಜನಿಕ ಶಿಸ್ತಿನ ಹದಿನೈದು ದಿನಗಳ) ಎಂದು ಹೇಳಲಾಗಿದ್ದು, ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು ಮತ್ತು ಮಾರುಕಟ್ಟೆಗಳು ಮುಚ್ಚಿರುತ್ತವೆ. ಆದರೆ ಅಗತ್ಯ ಸೇವೆಗಳಿಗೆ ಲಾಕ್ ಡೌನ್ ನಿಂದ ರಿಯಾಯಿತಿ ನೀಡಲಾಗಿದೆ. ಬ್ಯಾಂಕುಗಳು, …

Read More »

ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ

ಕೊರೊನಾ ವೈರಸ್​ ಕಾಟಕ್ಕೆ ಲಕ್ಷಾಂತರ ಜನರು ತೊಂದರೆ ಅನುಭವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಪರಿಸ್ಥಿತಿ ಚಿಂತಾಜನಕ ಆಗಿದೆ. ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಸಾವಿರಾರು ಜನರು ಪರದಾಡುತ್ತಿದ್ದಾರೆ. ದಿನ ಕಳೆದಂತೆಲ್ಲ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ನಟ ಸಾಧುಕೋಕಿಲ ಹೇಳಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಾಧುಕೋಕಿಲ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರ ಅಣ್ಣ …

Read More »

ಜೀವ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ರೈಲ್ವೆ ನೌಕರ: ಮೈ ನವಿರೇಳಿಸುವ ವಿಡಿಯೋ

ಮುಂಬೈ, ಏಪ್ರಿಲ್ 19: ರೈಲಿನಡಿ ಸಿಕ್ಕಿ ಛಿದ್ರವಾಗುವಂತಿದ್ದ ಮಗುವನ್ನು ಕಣ್ರೆಪ್ಪೆ ಮಿಟುಕಿಸುವುದರೊಳಗೆ ರಕ್ಷಿಸಿದ ಕೇಂದ್ರ ರೈಲ್ವೆಯ (ಮುಂಬೈ ವಿಭಾಗ) ಪಾಯಿಂಟ್ಸ್‌ಮ್ಯಾನ್ ಮಯೂರ್ ಶೆಲ್ಖೆ ಅವರು ‘ಹೀರೋ’ ಆಗಿ ಹೊರಹೊಮ್ಮಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಪುಟಾಣಿಯ ಜೀವ ಉಳಿಸಿದ ಮಯೂರ್ ಅವರ ಶೌರ್ಯವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ವಾಂಗಾನಿ ಉಪನಗರ ರೈಲ್ವೆ ನಿಲ್ದಾಣದಲ್ಲಿ ನಡೆದ ಈ ರೋಮಾಂಚನಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ …

Read More »

ರಾಜಸ್ಥಾನದಲ್ಲಿ ಲಾಕ್ ಡೌನ್ ತರಹದ ನಿರ್ಬಂಧ:ಇಲ್ಲಿದೆ ನೋಡಿ ಮಾರ್ಗಸೂಚಿ

ಜೈಪುರ : ಕೊರೊನಾ ಎರಡನೇ ಅಲೆ ಆತಂಕದ ಹಿನ್ನೆಲೆ ಮೇ 3 ರ ವರೆಗೆ ಶಾಲೆಗಳನ್ನು ಬಂದ್​ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಾರ್ಗಸೂಚಿಯ ಪ್ರಕಾರ, ಮನೆಯಿಂದ ಕೆಲಸ ಮಾಡಲು ಶಿಕ್ಷಕರಿಗೆ ಸೂಚಿಸಲಾಗಿದ್ದು, ವರ್ಕ್​ ಫ್ರಮ್​ ಹೋಮ್​ ನೀಡಲಾಗಿದೆ. ಇದರ ಜತೆ ಶಿಕ್ಷಕರು ಕೊರೊನಾ ವಾರಿಯರ್ಸ್​ ಆಗಿಯೂ ಕಾರ್ಯ ನಿರ್ವಹಿಸಬೇಕಿದೆ. ಶಿಕ್ಷಣ ಇಲಾಖೆ ನಿರ್ದೇಶಕ ಸೌರಭ್ ಸ್ವಾಮಿ ಈ ಆದೇಶ ಹೊರಡಿಸಿದ್ದಾರೆ. ಕೊರೊನಾ ವೈರಸ್‌ ಪ್ರಕರಣಗಳ ಬಗ್ಗೆ ಆತಂಕಗೊಂಡ …

Read More »

ಸಾರಿಗೆ ನೌಕರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಎಂಟಿಸಿ

ಬೆಂಗಳೂರು, ಏ.19-ಮುಷ್ಕರದಲ್ಲಿ ಭಾಗಿಯಾಗಿರುವ ಕೆಲವು ಉದ್ಯೋಗಿಗಳ ಅಮಾನತು ಆದೇಶಗಳನ್ನು ಹಿಂತೆಗೆದುಕೊಳ್ಳುವ ಮತ್ತು ಭವಿಷ್ಯದಲ್ಲಿ ವಜಾಗೊಳಿಸಿದ ಆದೇಶಗಳನ್ನು ರದ್ದುಗೊಳಿಸುವಂತಹ ಯಾವುದೇ ನಿಬಂಧನೆ ಅಥವಾ ಆಲೋಚನೆ ಸರ್ಕಾರದ ಮಟ್ಟದಲ್ಲಿ ಇಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ. ಮುಷ್ಕರವನ್ನು ಪ್ರೋತ್ಸಾಹಿಸುವ ಮತ್ತು ಕರ್ತವ್ಯಕ್ಕೆ ಗೈರುಹಾಜರಾದವರ ವಿರುದ್ಧ ಬಿಎಂಟಿಸಿ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಮಾನತು ಅಥವಾ ವಜಾಗೊಳಿಸಿದ ನಂತರ ಅನೇಕ ಉದ್ಯೋಗಿಗಳು ಯೂನಿಯನ್ ಭಯದಿಂದಾಗಿ ಕೆಲಸಕ್ಕೆ ಬರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕೆಲಸಕ್ಕೆ ಮರಳುವ …

Read More »

ಮಹಾರಾಷ್ಟ್ರದಲ್ಲಿ ಒಂದೇ ದಿನ 68,000ಕ್ಕೂ ಹೆಚ್ಚು ಕೊರೊನಾ ಕೇಸ್!

ಮುಂಬೈ, ಏಪ್ರಿಲ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಇಡೀ ದೇಶದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗುತ್ತಿವೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 68631 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 503 ಮಂದಿ ಪ್ರಾಣ ಬಿಟ್ಟಿದ್ದು, 45,654 ಸೋಂಕಿತರು ಗುಣಮುಖರಾಗಿದ್ದಾರೆ.   ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 31,06,828 ಕೊರೊನಾವೈರಸ್ ಸೋಂಕಿತರು …

Read More »

ಕೊರೋನದಿಂದ ಮಿತಿಮೀರಿದ ಸಾವು; ಸುಟ್ಟು ಭಸ್ಮವಾಯಿತು ವಿದ್ಯುತ್ ಚಿತಾಗಾರ ಮಷಿನ್

ಸೊಲ್ಲಾಪುರ: ಮಹಾಮಾರಿ ಕೊರೋನಾದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಸಮಯದಲ್ಲಿ ಸತ್ತವರ ಶವ ಸುಡಲು ಇದ್ದ ವಿದ್ಯುತ್ ಚಿತಾಗಾರದ ಮಷಿನ್‌ ಸುಟ್ಟುಹೋದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ನಗರದಲ್ಲಿ ಇಂದು ನಡೆದಿದೆ. ಹೀಗಾಗಿ ಶವಗಳನ್ನ ಸುಡೋದಕ್ಕೂ ಸೊಲ್ಲಾಪುರ ಮಹಾನಗರ ಪಾಲಿಕೆ ಅಧಿಕಾರಿಗಳು ಪರದಾಟ ನಡೆಸುತ್ತಿದ್ದಾರೆ. ಸೊಲ್ಲಾಪುರ ನಗರದಲ್ಲಿ ಡೆಡ್ಲಿ ಕೊರೋನಾದಿಂದ ಪ್ರತಿನಿತ್ಯ 30ಕ್ಕೂ ಅಧಿಕ ಜನರ ಸಾವನ್ನಪ್ಪುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಗರದಲ್ಲಿದ್ದ ವಿದ್ಯುತ್ ಚಿತಾಗಾರದ ಮಷಿನ್‌ ಸುಟ್ಟುಹೋದ ಪರಿಣಾಮ ಗ್ಯಾಸ್ …

Read More »

ವೀಕೆಂಡ್​ ಮೋಜಿಗೆ ಬಂದಿದ್ದ ಯುವಕ-ಯುವತಿ ಜಲಪಾತದಿಂದ ಕೆಳಗೆ ಬಿದ್ದು ದಾರುಣ ಸಾವು

ಮಡಿಕೇರಿ ; ಇಲ್ಲಿಗೆ ಸಮೀಪದ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಶಶಿಕುಮಾರ್​ (32) ಮತ್ತು ದಿವ್ಯ (20) ಎಂದು ಗುರುತಿಸಲಾಗಿದೆ. ಮೃತ ಶಶಿ ಕುಮಾರ್‌ ಸುಂಟಿಕೊಪ್ಪದ ಗುತ್ತಿಗೆದಾರ ರಾಮ ಎಂಬುವವರ ಪುತ್ರನಾಗಿದ್ದು ಅನೇಕ ವರ್ಷಗಳಿಂದ ಬೆಂಗಳೂರಿನ ಕಂಪೆನಿಯಲ್ಲಿ ಕೆಲಸ ಮಾಡುತಿದ್ದ. ಯುವತಿ ದಿವ್ಯಾ ಕೂಡ ಸುಂಟಿಕೊಪ್ಪದವಳೇ ಆಗಿದ್ದಾಳೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಲಿ ಜಲಪಾತದಲ್ಲಿ ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. …

Read More »

ಕೊರೊನಾ ಗೈಡ್ ಲೈನ್ ಉಲ್ಲಂಘಿಸಿ ಪರೀಕ್ಷೆ: ರ್ಯಾಂಕ್ ಬಂದವರಿಗೆ ಬಹುಮಾನದ ಆಮಿಷ – ಕರಿಯರ್ ಅಕಾಡೆಮಿ ಮೇಲೆ ಪೊಲೀಸರ ದಾಳಿ

ಧಾರವಾಡ: ಕೊರೊನಾ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸುತ್ತಿದ್ದ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಮೇಲೆ ಪೊಲೀಸರು ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದೂ ಅಲ್ಲದೇ ರ್ಯಾಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿ, ಸಂಸ್ಥೆ ಪರೀಕ್ಷೆ ನಡೆಸುತ್ತಿತ್ತು. ಬಹುಮಾನದ ಆಸೆಗಾಗಿ ನೂರಾರು ವಿದ್ಯಾರ್ಥಿಗಳು ಕೊರೊನಾ ಭೀಕರತೆ ನಡುವೆಯೂ ಜೀವದ ಹಂಗುತೊರೆದು ಪರೀಕ್ಷೆ ಬರೆಯಲು ಬಂದಿದ್ದಾರೆ. ಸ್ಪರ್ಧಾತ್ಮಕ ಮಾದರಿ ಪರೀಕ್ಷೆ ಇದಾಗಿದ್ದು, ಪ್ರಥಮ ಬಹುಮಾನವಾಗಿ 75,000 …

Read More »