ರಾಯಚೂರು: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದುಗಲ್ ಹೊರವಲಯದ ಜನತಾ ಕಾಲೋನಿ ಬಳಿ ಇಂದು ಸಂಭವಿಸಿದೆ. ಉಮಲೂಟಿ ಗ್ರಾಮದ ಕನಕಪ್ಪ ಮತ್ತು ಕುಷ್ಟಗಿ ತಾಲೂಕಿನ ವಿಠ್ಠಲಾಪುರದ ಜಗದೀಶ್ ಮೃತ ದುರ್ದೈವಿಗಳು. ಮುದುಗಲ್ ಕಡೆಯಿಂದ ತಾವರಗೆರೆ ಕಡೆ ರಸ್ತೆ ಮಾರ್ಗವಾಗಿ ತೆರಳುವ ವೇಳೆ ಈ ದುರ್ಘಟನೆ ಜರುಗಿದೆ. ಮುದುಗಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜನತಾ ಕಾಲೋನಿ ಬಳಿ ಸಂಭವಿಸಿದ ರಸ್ತೆ …
Read More »ಮಲ್ಪೆ ಬೀಚ್ನಲ್ಲಿ ಜನವೋ ಜನ
ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಇತ್ತೀಚೆಗೆ ನಾಲ್ವರು ವಿದ್ಯಾರ್ಥಿನಿಯರು ಬಲಿಯಾದ ಬಳಿಕ ಬೀಚ್ಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಾಗಿ ಶಾಲಾ ಪ್ರವಾಸಕ್ಕೆಂದು ಬರುವವರು ಮಲ್ಪೆ ಬೀಚ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬೀಚ್ನಲ್ಲಿ ಆಟ ಆಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನೀರಿಗಿಳಿಯುವ ಮಕ್ಕಳನ್ನು ತಡೆಯುವುದೇ ಒಂದು ಸವಾಲಾಗಿದೆ. ಮಲ್ಪೆ ಬೀಚ್ನಲ್ಲಿ ಶಾಲಾ ಮಕ್ಕಳ ಮೇಲೆ ಶಿಕ್ಷಕರು ನಿಗಾ ವಹಿಸುವ ಜೊತೆಗೆ ಜಿಲ್ಲಾಡಳಿತ ಮತ್ತಷ್ಟು ಎಚ್ಚರ ವಹಿಸಬೇಕಿದೆ. ಮಾತು ಕೇಳದ ವಿದ್ಯಾರ್ಥಿಗಳು, ಪ್ರವಾಸಿಗರು: “ಸಮುದ್ರ ಅಲೆಗಳನ್ನು …
Read More »ಬೆಳಗಾವಿಯ ಅಧಿವೇಶನಕ್ಕೆ ಇಂದು ತೆರೆ ಬಿತ್ತು. ಸುಮಾರು 64 ಗಂಟೆ ಕಲಾಪ ನಡೆಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಬೆಳಗಾವಿ: ಎಂಟು ದಿನಗಳ ಕಾಲ ನಡೆದ ಬೆಳಗಾವಿ ಅಧಿವೇಶನದಲ್ಲಿ ಸುಮಾರು 64 ಗಂಟೆಗಳ ಕಾಲ ಕಾರ್ಯಕಲಾಪ ನಡೆಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 16 ವಿಧೇಯಕಗಳನ್ನು ಮಂಡಿಸಿ, ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕಗಳನ್ನು ಹಿಂಪಡೆಯಲಾಗಿದೆ ಎಂದರು. ಭಾರತದ ಲೆಕ್ಕನಿಯಂತ್ರಕರು ಮತ್ತು …
Read More »ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ”
ಬೆಳಗಾವಿ: “ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ ವಾಗ್ದಾಳಿ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಅವರು ಕಟುವಾದ ಪದಗಳಲ್ಲಿ ಟೀಕಿಸಿದರು. “ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲೂ ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ …
Read More »ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಕೆ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾಗಿದ್ದಳೆನ್ನಲಾದ ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್ ಸಡಿಲಿಸಿದೆ. ಮೈಸೂರು ಮತ್ತು ಹಾಸನ ಪ್ರವಾಸ ಮಾಡುವುದಕ್ಕಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ಸಡಿಲ ಮಾಡಿ ಆದೇಶಿಸಿದೆ. ಭವಾನಿ …
Read More »ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ
ಬೆಳಗಾವಿ: ”ನಾನು ಕೊಟ್ಟ ದೂರನ್ನು ಸ್ವೀಕಾರ ಮಾಡದೇ, ನನ್ನನ್ನು ಬೇರೆ ಕಡೆ ಕರೆದೊಯ್ಯಲು ಯತ್ನಿಸಲಾಗುತ್ತಿದೆ. ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಖಾನಾಪುರ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಸಿ.ಟಿ.ರವಿ ವಿಡಿಯೋ ಮೂಲಕ …
Read More »ಅಂಬೇಡ್ಕರ್ ಕುರಿತು ಶಾ ಹೇಳಿಕೆ; ಸಂಸತ್ ಭವನದಲ್ಲಿ ಕಾಂಗ್ರೆಸ್ – ಬಿಜೆಪಿ ಪರಸ್ಪರ ಪ್ರತಿಭಟನೆ
ನವದೆಹಲಿ: ಅಂಬೇಡ್ಕರ್ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಹೇಳಿಕೆ ವಿರೋಧಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಇಂಡಿಯಾ ಒಕ್ಕೂಟದ ಸದಸ್ಯರು, ನೀಲಿ ಬಟ್ಟೆ ಧರಿಸಿ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ಸಂಸತ್ತಿನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಸಂಸತ್ ಭವನದವರೆಗೆ ಅಂಬೇಡ್ಕರ್ ಭಾವಚಿತ್ರ ಹಿಡಿದು ‘ಜೈ ಭೀಮ್’ ಘೋಷಣೆ ಕೂಗುತ್ತಾ ಮೆರವಣಿಗೆ ಕೈಗೊಂಡರು. …
Read More »ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ, ಜ.26ರಂದು ಸಿಗೋಣ’;ಶಿವಣ್ಣ
ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಚಿಕಿತ್ಸೆ ಹಿನ್ನೆಲೆ, ಕಳೆದ ರಾತ್ರಿ ಅಮೆರಿಕ ಫ್ಲೈಟ್ ಹತ್ತಿದರು. ವೈದ್ಯಕೀಯ ಪ್ರಕ್ರಿಯೆ ನಿಟ್ಟಿನಲ್ಲಿ ಅಮೆರಿಕಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನಮಾನ ಗಳಿಸಿರುವ ಶಿವಣ್ಣ ಫ್ಲೋರಿಡಾದ ಮಿಯಾಮಿಯಲ್ಲಿ ಡಿಸೆಂಬರ್ 24 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹೊರಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಜನಪ್ರಿಯ ನಟ, ”ಇಂಥ ಸಂದರ್ಭ ನಾವೇ ಕೊಂಚ ಭಾವುಕರಾಗುತ್ತೇವೆ. ಆದ್ರೆ ಹೆದರಬೇಡಿ. ಪ್ಯಾರಾಮೀಟರ್ಸ್ ಎಲ್ಲವೂ ಚೆನ್ನಾಗಿದೆ. ಚೆಕ್ …
Read More »ಬೋಳು ತಲೆಯಲ್ಲಿ ಕೂದಲು ತರಿಸುವ ‘ವಿಶೇಷ ತೈಲ’ಕ್ಕಾಗಿ ಮುಗಿಬಿದ್ದ ಜನರು: ಮುಂದೇನಾಯ್ತು ಗೊತ್ತಾ?
2024ನೇ ವರ್ಷಕ್ಕೆ ವಿದಾಯ ಹೇಳುವುದರೊಂದಿಗೆ 2025ರ ಹೊಸ ವರ್ಷಕ್ಕೆ ಇಡೀ ವಿಶ್ವವೇ ಸ್ವಾಗತಿಸಲು ಸಜ್ಜಾಗಿದೆ. 2024ರ ಕೊನೆಯ ದಿನಗಳು ಸಮೀಪಿಸುತ್ತಿರುವ ಈ ವರ್ಷ ಆರೋಗ್ಯ ಕ್ಷೇತ್ರದಲ್ಲಿ ಏನೆಲ್ಲಾ ಘಟನೆಗಳು ನಡೆದವು ಎಂಬುದನ್ನು ನೋಡೋಣ. 2024ರಲ್ಲಿ ಜಗತ್ತು ಹಲವು ಗಂಭೀರ ಕಾಯಿಲೆಗಳನ್ನು ಎದುರಿಸಿದೆ. ಈ ರೋಗಗಳು ಲಕ್ಷಾಂತರ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಜಾಗತಿಕ ಆರೋಗ್ಯ ವ್ಯವಸ್ಥೆಯ ಮೇಲೆ ಭಾರಿ ಒತ್ತಡವನ್ನು ಉಂಟುಮಾಡಿದ್ದವು. 2024 ವರ್ಷದಲ್ಲಿ ಹೆಚ್ಚು ಭಯದ …
Read More »15 ತಾಸು ಕಲಾಪ ನಡೆಸಿದ ಸ್ಪೀಕರ್ ಖಾದರ್
ಬೆಳಗಾವಿ: ಸ್ಪೀಕರ್ ಯು.ಟಿ.ಖಾದರ್ ಬುಧವಾರವೂ ಎರಡನೇ ಬಾರಿಗೆ ಮಧ್ಯರಾತ್ರಿವರೆಗೆ ಕಲಾಪ ನಡೆಸಿದರು. ಆ ಮೂಲಕ 15 ತಾಸು ಕಲಾಪ ನಡೆಸಿದ್ದಾರೆ. ಬುಧವಾರ ಬೆಳಗ್ಗೆ 9.40 ರಿಂದ ಮಧ್ಯರಾತ್ರಿ 12.40ರ ವರೆಗೆ ಕಲಾಪ ನಡೆಯಿತು. ಸತತ 15 ಗಂಟೆಗಳ ಕಾಲ ನಿರಂತರವಾಗಿ ಸದನ ನಡೆಸಿದ ಸ್ಪೀಕರ್ ಎಂಬ ಖ್ಯಾತಿಗೆ ಅವರು ಭಾಜನರಾಗಿದ್ದಾರೆ. ಮೊನ್ನೆ ಸೋಮವಾರ 14 ಗಂಟೆ ಕಾಲ ಕಲಾಪ ನಡೆಸಿದ್ದರು. ಇದೀಗ 15 ಗಂಟೆ ಕಾಲ ಸದನ ನಡೆಸಿ ದಾಖಲೆ ಮಾಡಿದ್ದಾರೆ. …
Read More »