ಶಿವಮೊಗ್ಗ: ಶಾಸಕ ಬಸನಗೌಡ ಯತ್ನಾಳ್ ಮತ್ತೆ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ. ಸಿಎಂ ಮಾತನಾಡುವುದು ಬೇಡ ಎಂದು ಹೇಳಿದರೂ ಕೇಳುತ್ತಿಲ್ಲ. ಆದರೆ ರಾಜ್ಯ ಬಿಜೆಪಿ ಸಮಿತಿಗೆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಗಳು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಗಮನಕ್ಕೂ ಬಂದಿದೆ. ಅವರು ಕೇಂದ್ರ ಶಿಸ್ತು ಸಮಿತಿಯ ಗಮನಕ್ಕೆ ಈ …
Read More »ಏಯ್.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್ ಇಲ್ದೇ ಇರೋದು ಕೊಡಬೇಡ: ಸಿದ್ದರಾಮಯ್ಯ
ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase ಶಾಪಿಂಗ್ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್ ಇರೋ ಪಂಚೆ …
Read More »ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದ ರಾಜ್ಯ ಸರ್ಕಾರ ವಿಜಯ ನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿತ್ತು. ಇದೀಗ ಅಧಿಕೃತ ಆದೇಶ ಹೊರಡಿಸಿದ್ದು, ವಿಜಯನಗರಕ್ಕೆ ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು …
Read More »ಬಿಜೆಪಿಗೆ ದಿಟ್ಟ ಸವಾಲು ಹಾಕಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಫೆಬ್ರುವರಿ 08: ಪಶ್ಚಿಮ ಬಂಗಾಳದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಫೆಬ್ರುವರಿ 5ರಂದು ಬಜೆಟ್ ಮಂಡಿಸಿ, ರಾಜ್ಯ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂದು ಕರೆಸಿಕೊಂಡಿದ್ದಾರೆ. ಬಜೆಟ್ ನಲ್ಲಿ ಪಶ್ಚಿಮ ಬಂಗಾಳ ಜನರಿಗೆ ಹಲವು ಕೊಡುಗೆಗಳನ್ನೂ ನೀಡಿದ್ದಾರೆ. ಆದರೆ ರಾಜ್ಯ ಬಜೆಟ್ ಕುರಿತು ಟೀಕೆ ಮಾಡಿರುವ ಬಿಜೆಪಿ, “ಮಮತಾ ಬ್ಯಾನರ್ಜಿ ಮಂಡಿಸಿರುವ ಈ ರಾಜ್ಯ ಬಜೆಟ್ ವಾಸ್ತವಕ್ಕೆ ದೂರವಾದವು. ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು …
Read More »LPG ಸಿಲಿಂಡರ್ ಪಡೆಯಲು ಸರ್ಕಾರ ನೀಡುತ್ತೆ 1600 ರೂಪಾಯಿ
ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಒಂದು ಕೋಟಿ ಹೊಸ ಸಿಲಿಂಡರ್ ಸಂಪರ್ಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಉಜ್ವಲಾ ಯೋಜನೆಯಡಿ ಅನಿಲ ಸಂಪರ್ಕ ನೀಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಸಿಲಿಂಡರ್ ಸಂಪರ್ಕ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪಿಎಂ ಉಜ್ವಾಲಾ ಯೋಜನೆಯಡಿ ಬಡ ಕುಟುಂಬಗಳಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಇದರಲ್ಲಿ 1600 ರೂಪಾಯಿಗಳನ್ನು ಸರ್ಕಾರ ನೀಡುತ್ತಿದೆ. ಎಲ್ಪಿಜಿ ಗ್ಯಾಸ್ ಸಂಪರ್ಕವನ್ನು ಖರೀದಿಸಲು …
Read More »ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭ ಹಾಗೂ ಸರಳ ಅನುಮೋದನೆ:
ಬೆಂಗಳೂರು- ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂತಹ ‘ಏಕಗವಾಕ್ಷಿ ‘ಪದ್ದತಿಯನ್ನು ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರೇಶ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.ಆ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ದತಿಯನ್ನು ಜಾರಿ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಇತ್ತೀಚಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ …
Read More »ಪರಿಷತ್ನ ಸಭಾಪತಿ ಚುನಾವಣೆಗೆ ಹೊರಟ್ಟಿ- ನಜೀರ್ ಅಹಮ್ಮದ್ ನಾಮಪತ್ರ ಸಲ್ಲಿಕೆ
ಬೆಂಗಳೂರು,ಫೆ.8- ನಾಳೆ ನಡೆಯಲಿರುವ ವಿಧಾನಪರಿಷತ್ನ ಸಭಾಪತಿ ಚುನಾವಣೆಗೆ ಮಾಜಿ ಸಚಿವರಾದ ಬಸವರಾಜ್ ಹೊರಟ್ಟಿ ಹಾಗೂ ನಜೀರ್ ಅಹಮ್ಮದ್ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಹಾಗೂ ಕಾಂಗ್ರೆಸ್ನಿಂದ ನಜೀರ್ ಅಹಮ್ಮದ್ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಾಳೆ ನಡೆಯಲಿದೆ. ಪರಿಷತ್ನ ಸಭಾಪತಿಯಾಗಿದ್ದ ಪ್ರತಾಪ್ಚಂದ್ರ ಶೆಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ.ಈಗಿನ ಪರಿಷತ್ ಬಲಾಬಲದ ಪ್ರಕಾರ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ …
Read More »“ದೇವೇಗೌಡರಿಗೆ ನಾನು ಅಭಾರಿಯಾಗಿದ್ದೇನೆ” : ರಾಜ್ಯಸಭೆಯಲ್ಲಿ ಮೋದಿ ಭಾಷಣದ ಹೈಲೈಟ್ಸ್
ನವದೆಹಲಿ, ಫೆ.8 (ರಾಜ್ಯಸಭೆ)- ಕೃಷಿ ಕಾಯ್ದೆಯ ಬಗ್ಗೆ ಕೆಲವರು ರಾಜಕೀಯ ಮಾಡಿ ದೇಶದ ಜನರ ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಕೃಷಿ ಬದಲಾವಣೆ ಅಗತ್ಯವಾಗಿದ್ದು , ಅನ್ನದಾತರಿಗೆ ಎಲ್ಲಾ ರೀತಿಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಅಭಯ ನೀಡಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಮಾಡಿದ ವಂದನಾರ್ಪಣೆ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ …
Read More »ಚಹಾ, ಯೋಗದ ಮೇಲೂ ಸಂಚು: ನರೇಂದ್ರ ಮೋದಿ ಟೀಕೆ
ಸೋನಿತ್ಪುರ : ಭಾರತದ ಹೆಸರಿಗೆ ಮಸಿ ಬಳಿಯುವುದಕ್ಕಾಗಿ ಹೊಂಚು ಹಾಕುತ್ತಿರುವ ಜಾಗತಿಕ ಸಂಚುಕೋರರು ನಮ್ಮ ಚಹಾ, ಯೋಗವನ್ನೂ ಬಿಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ. ಈ ಮೂಲಕ ಸ್ವೀಡಿಶ್ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಟ್ವೀಟ್ ಮಾಡಿದ್ದ ವಿವಾದಿತ ಟೂಲ್ಕಿಟ್ ಬಗ್ಗೆ ಪ್ರಧಾನಿ ಇದೇ ಮೊದಲ ಬಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸ್ಸಾಂನ ಸೋನಿತ್ಪುರದಲ್ಲಿ ಮಾತನಾಡಿ, ವಿವಾದಿತ ಟೂಲ್ಕಿಟ್ನಲ್ಲಿ ನಮ್ಮ ಚಹಾ, ಯೋಗಾ ವಿರುದ್ಧವೂ ಅಪಪ್ರಚಾರ ಮಾಡುವ ಸಂಚಿತ್ತು ಎನ್ನುವುದನ್ನು …
Read More »ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ
ಬೆಂಗಳೂರು: ಜೈಲು ವಾಸ ಮುಗಿಸಿರುವ ತಮಿಳರ ಚಿನ್ನಮ್ಮ, ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ಹೊರಟಿದ್ದಾರೆ. ಇದರೊಂದಿಗೆ ಚಿನ್ನಮ್ಮನ ಕೆಲವು ವರ್ಷಗಳ ಬೆಂಗಳೂರು ವಾಸ ಇಂದಿಗೆ ಅಂತ್ಯವಾಗಿದೆ. ಕಳೆದೊಂದು ವಾರದಿಂದ ನಗರದ ಪ್ರೆಸ್ಟಿಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ. ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು …
Read More »