ಮನುಷ್ಯ ಚಿರಂಜೀವಿ ಆಗಲಾರ. ಆದರೆ ಆತನ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತದೆ. ಒಂದು ಗಿಡಕ್ಕೆ ನೀರು ಎಷ್ಟು ಅವಶ್ಯಕವೋ ಹಾಗೆಯೇ ಒಂದು ಚಿಂತನೆ ಪ್ರಸರಣವಾಗುವುದು ಅಷ್ಟೇ ಅಗತ. ಇಲ್ಲವಾದರೆ ಎರಡು ಸಾಯುತ್ತವೆ’ ಇದು ಡಾ|ಬಿ.ಆರ್. ಅಂಬೇಡ್ಕರ್ ಅವರ ಮಾತು. ಎಪ್ರಿಲ್ 14ರಂದು ಭಾರತ, ವಿಶ್ವದೆಲ್ಲೆಡೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅದರಲ್ಲೂ ಇತ್ತೋ ಚಿನ ದಿನಗಳಲ್ಲಿ ಭೀಮ್ ರಾವ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಡಾ| …
Read More »ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
ಅದ್ಧೂರಿತನಕ್ಕೆ ಮತ್ತೊಂದು ಹೆಸರು ನಟ ವಿ.ರವಿಚಂದ್ರನ್. ಕನ್ನಡ ಸಿನಿಮಾಕ್ಕೆ ಅದ್ಧೂರಿತನ ಪರಿಚಯಿಸಿದ್ದೆ ಅವರು. ರವಿಚಂದ್ರನ್ ಏನೇ ಮಾಡಿದರು ಭಿನ್ನವಾಗಿ ಮಾಡಲು ಪ್ರಯತ್ನಿಸುತ್ತಾರೆ. ಕನ್ನಡದ ಹಲವಾರು ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ, ತಮ್ಮ ಅಭಿಪ್ರಾಯಗಳನ್ನು ಫೇಸ್ಬುಕ್, ಟ್ವಿಟ್ಟರ್ ಮೂಲಕ ಹಂಚಿಕೊಳ್ಳುತ್ತಾರೆ, ಅಭಿಮಾನಿಗಳೊಂದಿಗೆ ಸಂವಾದ ಮಾಡುತ್ತಾರೆ. ಆದರೆ ರವಿಚಂದ್ರನ್ ಅವರು ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದರು. ಈಗ ಅವರೂ ಸಹ ಸಾಮಾಜಿಕ ಜಾಲತಾಣದ ಸೇರಿಕೊಂಡಿದ್ದಾರೆ. ಅದೂ ಬಹಳ ಭಿನ್ನವಾಗಿ ತಮ್ಮ ಸಿನಿಮಾದ ಹಾಡುಗಳಂತೆಯೇ …
Read More »ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಭೀತಿಗೆ ಗುಳೆ ಹೋಗುತ್ತಿರುವ ಕಾರ್ಮಿಕರು!
ಲಕ್ನೋ : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲದೇ, ಪ್ರತಿ ದಿನ 50 ಸಾವಿರದ ಗಡಿಯ ಆಸುಪಾಸಿನಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಅಲ್ಲಿ ಲಾಕ್ ಡೌನ್ ಘೋಷಣೆಯಾಗಬಹುದು ಎಂಬ ಭಯ ಜನರನ್ನು ಕಾಡುತ್ತಿದೆ. ಮುಂಬಯಿ ನಗರ ಸೇರಿದಂತೆ ವಿವಿಧ ನಗರದಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರು ಲಾಕ್ ಡೌನ್ ಘೋಷಣೆಯಾಗಬಹುದೆಂಬ ಆತಂಕದಿಂದ ಉತ್ತರ ಪ್ರದೇಶದ ರೈಲುಗಳನ್ನು ಹಿಡಿದು ಮರಳಿ ಹೋಗುತ್ತಿದ್ದಾರೆ. ಗೋರಖ್ ಪುರ, ವಾರಣಾಸಿ, ಪ್ರಯಾಗ್ …
Read More »ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಯುಗಾದಿ ಹಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ಯುಗಾದಿ ಪ್ರಯುಕ್ತ ನಗರದ ಕೆ.ಆರ್. ಮಾರ್ಕೆಟ್, ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ಗ್ರಾಹಕರು ಹೂ, ಹಣ್ಣು ಖರೀದಿಯಲ್ಲಿ ಬ್ಯುಸಿಯಾಗಿದ್ರು, ಹಬ್ಬಕ್ಕೆ ತಳಿರು-ತೋರಣ ಸೇರಿದಂತೆ ಬೇವು ಬೆಲ್ಲ ಖರೀದಿಸಿದ್ದಾರೆ. ಈ ಬಾರಿ ಹೂವು, ಹಣ್ಣಿನ ಬೆಲೆ ಭಾರೀ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕನಕಾಂಬರ ಹೂವು …
Read More »ಬೆಂಗಳೂರು : ಕುಡುಕ ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಂದ ಪತ್ನಿ..!
ಬೆಂಗಳೂರು, ಏ.12- ಪತ್ನಿಯೇ ಪತಿಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿರುವ ಘಟನೆ ಜೆ.ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಿಬಿಎಂಪಿ ಕಸದ ಆಟೋ ಚಾಲಕ ಮೋಹನ್ (41) ಕೊಲೆಯಾದವರು. ಘಟನೆ ಸಂಬಂಧ ಪತ್ನಿ ಪದ್ಮಾ (36) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರಾಗಿ ಪದ್ಮಾ ಕೆಲಸ ಮಾಡುತ್ತಿದ್ದು , 16 ವರ್ಷದ ಹಿಂದೆ ಮೋಹನ್ ಅವರನ್ನು ವಿವಾಹವಾಗಿದ್ದು, …
Read More »6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಯುಗಾದಿ ಹಬ್ಬಕ್ಕ ಹೋಗೋರಿಗೆ ಬಸ್ ಸಿಗೋದು ಡೌಟ್.!
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗದ ಶಿಫಾರಸ್ಸಿಗೆ ಒತ್ತಾಯಿಸಿ ನಡೆಸುತ್ತಿರುವಂತ ಮುಷ್ಕರ ಇಂದು ತಾರಕ್ಕಕ್ಕೂ ಏರವಿದೆ. ಇಂದಿನಿಂದ ಸಾರಿಗೆ ನೌಕರರು ಬೀದಿಗೆ ಇಳಿಯಲಿದ್ದು, ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗಳ ಮುಂದೆ ತಟ್ಟೆ, ಜಾಗಟೆ ಬಾರಿಸುವ ಮೂಲಕ, ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಿದ್ದಾರೆ. ಇದರ ನಡುವೆ ಇಂದು ಯುಗಾದಿ ಹಬ್ಬದ ಮುನ್ನಾದಿನವಾದ್ದರಿಂದ ಸಾರಿಗೆ ನೌಕರರ ಮುಷ್ಕರದ ಬಿಸಿ, ಊರಿಗೆ ಹೋಗೋ …
Read More »ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ: ಎಂದು ಹೇಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಪ್ರಚಾರ ನಡೆಸಿದರು. ದೇಶದ ಈಗಿನ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತೂ ಕಾಳಜಿ ಇಲ್ಲ. ಪ್ರತಿಯೊಬ್ಬರೂ ಮತದ ಮೂಲಕ ಈ ಸರಕಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ. ಈ ಸರ್ಕಾರಗಳು ಅಚ್ಛೇ ದಿನ್ ಎನ್ನುತ್ತ ತಮ್ಮ ಬೇಳೆ ಬೇಯಿಸಿಕೊಳ್ಳುವುದರಲ್ಲಿ ನಿರತವಾಗಿವೆ. ಅಗತ್ಯ …
Read More »ಬಾಲಚಂದ್ರ ಜಾರಕಿಹೊಳಿ ಅವರು ತಮ್ಮೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಕೆಲವೊಂದು ಕಾರಣಾಂತರಗಳಿಂದ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ: ಕಟೀಲ
ಮೂಡಲಗಿ: ಕಾಂಗ್ರೇಸ್ ಪಕ್ಷ ಮೂರು ಹೋಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ಬೆಳೆಸಿಕೊಳ್ಳುವಗೋಸ್ಕರ ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಸತೀಶ ಅವರ ರಾಜಕೀಯ ಮುಗಿಸಲು ಇದೊಂದು ಡಿಕೆಶಿ ಹೂಡಿರುವ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ರವಿವಾರ ಸಂಜೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ …
Read More »ಜೈ ಭೀಮ.. ಜೈ ತುರಮರಿ.. ಜೈ ಸತೀಶಣ್ಣಾ..ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ
ಬೆಳಗಾವಿ ಗ್ರಾಮೀಣ ಕ್ಷೇತ್ರದ #ತುರಮರಿ ಗ್ರಾಮದ ದಲಿತ ಪರ ಇರುವ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುಣಾವಣೆಯ ಪ್ರಯುಕ್ತ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ ಜರುಗಿತು. ಈಗಿನ ದೇಶದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತು ಕಾಳಜಿ ಇಲ್ಲದೇ ಇರುವುದು ಪ್ರತಿಯೊಬ್ಬ ಮತ ಮಹಾಪ್ರಭುವಿನ ಉತ್ತರವಾಗಿದೆ, ಈ ಸರ್ಕಾರಗಳು ಅಚ್ಛೇ ದಿನಗಳು ಬರ್ತಾವೆ ಅಂತಾ ಹೇಳ್ತಾ ಹೇಳ್ತಾ ತಮ್ಮ ಬೇಳೆಕಾಳುಗಳನ್ನು ಬೇಯಿಸಿಕೊಳ್ಳುವುದರಲ್ಲಿ …
Read More »ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಡಿ.ಕೆ. ಶಿ.
ಧಾರವಾಡ: ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಂಚಮಸಾಲಿ ಶ್ರೀಗಳನ್ನು ಭೇಟಿಯಾಗಿದ್ದಾರೆ. ಧಾರವಾಡಕ್ಕೆ ಆಗಮಿಸಿರುವ ಡಿ.ಕೆ.ಶಿವಕುಮಾರ್, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಶಾಸಕ ಗಣೇಶ್ ಹುಕ್ಕೇರಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತಿತರರು ಉಪಸ್ಥಿತರಿದ್ದರು.
Read More »
Laxmi News 24×7